ಇಲ್ಲಿನ ಕಥೆಗಳಲ್ಲಿ ಟರ್ಕಿಯ ಒಟ್ಟೋಮನ್ ಸುಲ್ತಾನರ ಅಂತಃಪುರದ ಬೇಗುದಿಯ ಸುಡುಶಾಖವಿದೆ, ನಮ್ಮದೇ ಕೆಂಪೇಗೌಡರ ಕಾಲದ ಹೆಣ್ಣುಮಗಳೊಬ್ಬಳ ಬಲಿದಾನದ ಮೇಲೆ ಇದೆ, ರಾಷ್ಟ್ರಕೂಟರ ಅರಸರ ಆಸ್ಥಾನದಲ್ಲಿನ ಪ್ರಜೆಗಳ ಒಕ್ಕೊರಲ ಸದ್ದು ಇದೆ, ಪಾಳೇಗಾರರ ಶೌರ್ಯ ಇದೆ. ಮಹಾನ್ ರಾಜರ ಆಡಳಿತದಲ್ಲಿ ಆಗಿಹೋದ ಸಾಮಾನ್ಯರ ಅಸಾಮಾನ್ಯ ಕಥೆಗಳೂ ಇವೆ. ವಿಜಯನಗರ ಅರಸರು, ಕೆಳದಿಯ ರಾಜರು, ಆದಿಲ್ ಶಾಹಿಗಳು, ಸುಲ್ತಾನರು, ಹೈದರಾಲಿಯಂಥವರೆಲ್ಲ ಇಲ್ಲಿ ತಂತಮ್ಮ ಆಸ್ಥಾನಗಳಲ್ಲಿದ್ದಾರೆ, ಸಾಮಂತ ರಾಜರು ಸಿರಿವಂತಿಕೆ ಮೆರೆಯುತ್ತಿದ್ದಾರೆ, ನಾಡು-ನುಡಿಯ ವೈಭವವಂತೂ ಕಳೆಗಟ್ಟಿದೆ. ಚರಿತ್ರೆಯ ಬಗೆಬಗೆ ಪುಟಗಳು ಕುತೂಹಲಕರ ಕಥೆಗಳಾಗಿ ತೆರೆದುಕೊಂಡಿರುವ ರೀತಿ ಇದು. ವಿಜಯ ಕರ್ನಾಟಕ-ವೀರಲೋಕ ಜಂಟಿಯಾಗಿ ಆಯೋಜಿಸಿದ್ದ 2025ರ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅಗ್ರ 25 ಸ್ಥಾನ ಗಳಿಸಿದ ಕಥೆಗಳ ಗುಚ್ಛ ಇದು. ಐತಿಹಾಸಿಕ ಕಥೆಗಳ ಕೃಷಿ ಕನ್ನಡದಲ್ಲಿ ಆಗಿರುವುದು ಕಡಿಮೆ. ಇಂಥ ಸಂದರ್ಭದಲ್ಲಿ ಕನ್ನಡದ ಕಥೆಗಾರರನ್ನು ಐತಿಹಾಸಿಕ ಕಥೆ ಬರೆಯಲು ಪ್ರೇರೇಪಿಸಿರುವ ಈ ಸ್ಪರ್ಧೆ ಬಲು ಆಪೂರ್ವ ನಡೆ. ಈ ಸವಾಲಿಗೆ ತೆರೆದುಕೊಂಡ ನೂರಾರು ಕಥೆಗಾರರ ಕಥೆಗಳಲ್ಲಿ ಗಮನ ಸೆಳೆದ ಕಥೆಗಳು ಇಲ್ಲಿವೆ. ಇದು ಇಂದಿನವರು ಬರೆದ ಅಂದಿನವರ ಕಥಾಜಗತ್ತು.
| Category: | ವೀರಲೋಕ ಪುಸ್ತಕಗಳು |
| Sub Category: | ಕಥಾ ಸಂಕಲನ |
| Author: | Veerakaputra srinivasa | Sudarshan Chenniganahalli |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | 2025 |
| Weight | 500 |
| ISBN | 9789348 355256 |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
Veerakaputra srinivasa | Sudarshan Chenniganahalli |
0 average based on 0 reviews.