nil
ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ…
ಕಳೆದ 30 ವರ್ಷದಿಂದ ಬರೆವಣಿಗೆಯಲ್ಲಿ ತೊಡಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಅರಸ್ತಾನ ಎಂಬಲ್ಲಿನ ಹಂಝ ಮಲಾರ್ ವೃತ್ತಿಯಲ್ಲಿ ಪತ್ರಕರ್ತ. ತನ್ನ ವೃತ್ತಿಯ ಸಂದರ್ಭ ನಾನಾ ವಿಧದ ಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಮೂಲಕ ಜೀವನಾನುಭವ ಪಡೆಯುತ್ತಿರುವ ಹಂಝ ಮಲಾರ್ ಅವುಗಳನ್ನೆಲ್ಲಾ ಕಥೆಗಳಿಗೆ ಬಳಸಿಕೊಳ್ಳುತ್ತಿರುವುದು ವಿಶೇಷ. ಕಥನ ಕಲೆಯಲ್ಲಿ ಸಾಕಷ್ಟು ಹಿಡಿತ ಸಾಧಿಸಿರುವ ಹಂಝ ಮಲಾರ್ ಈವರೆಗೆ 230 ಕಥೆಗಳನ್ನು ಬರೆದಿದ್ದಾರೆ. ಈ ಸಂಕಲನದಲ್ಲಿ ಕಳೆದ ಐದು ವರ್ಷದ ಅವಧಿಯಲ್ಲಿ ಬರೆದ 10 ಕಥೆಗಳಿವೆ. "ಅರ್ಧ ಹಿಂದೂ-ಅರ್ಧ ಮುಸ್ಲಿಂ" ಜಾತ್ಯತೀತ ವ್ಯಕ್ತಿಯ ಒಳನೋಟದ ಬಗ್ಗೆ ಬೆಳಕು ಚೆಲ್ಲಿದೆ. ಪ್ರೇಮಿಗಳು ಹುಟ್ಟೂರು ಬಿಟ್ಟು ಬೇರೊಂದು ಊರಲ್ಲಿ ನೆಲೆ ನಿಲ್ಲಲು ಪ್ರಯತ್ನಿಸುವಾಗ ಪ್ರಿಯತಮೆಯನ್ನು ಮಾತ್ರ ಕೇಂದ್ರೀಕರಿಸುವುದರ ಬಗ್ಗೆ "ಓಡಿ ಬಂದವಳು" ಕಥೆಯಲ್ಲಿ ಚಿತ್ರಿಸಲಾಗಿದೆ. "ಉಮ್ಮಾ..." ಕಥೆಯು ಪ್ರತಿಷ್ಠಿತ ಕುಟುಂಬದ ಹಿರಿಯ ಮಹಿಳೆಯೊಬ್ಬರು ಆಧುನಿಕ ಬದುಕಿಗೆ ಒಗ್ಗಿಕೊಳ್ಳುವುದರ ಬಗ್ಗೆ ತಿಳಿಸುತ್ತದೆ. ಉಳಿದಂತೆ ಎಲ್ಲಾ ಕಥೆಗಳು ಒಂದನ್ನೊಂದು ಬಿಟ್ಟುಕೊಡದಷ್ಟು ವಸ್ತುವಿನಲ್ಲಿ ಪೈಪೋಟಿ ಮಾಡುತ್ತದೆ.
Peggy Ramesar Mohan, Romila Thapar ಅಲೆಮಾರಿಗಳು ಅರಸರು ವರ್ತಕರು / Alemarigalu Arasaru Vartakaru ಬಹುಪಾಲು ಭಾರತೀಯರು ಇರ್ನುಡಿಗರು;
#
ಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ. ಯು.ಆರ್.ಅನಂತಮೂರ್ತಿ
Showing 301 to 330 of 5207 results