ಕಾದಂಬರಿಯಲ್ಲಿ ಆದರ್ಶ ಶಿಕ್ಷಕನಾಗಿರುವ ತಂದೆಯ ಮೌಲ್ಯಗಳು ಒಂದೆಡೆಯಾದರೆ, ಅದೇ ದಾರಿಯಲ್ಲಿ ನಡೆದುಬಂದ ಮಗನ ವ್ಯಾಪಾರಿಕ ಆಲೋಚನೆಗಳು ಬೇರೆಯಾಗಿರುತ್ತವೆ. ಇಬ್ಬರು ಬದುಕಿನಲ್ಲಿ ಆರಿಸಿಕೊಂಡ ದಾರಿ ಒಂದೇಯಾದರೂ.. ನೋಡುವ ದೃಷ್ಟಿಕೋನಗಳು ಬೇರೆ ಬೇರೆ. ಇದು ಬರಿ ಅಪ್ಪ ಮಗನ ಕತೆ ಅಲ್ಲ, ಎರಡು ತಲೆಮಾರುಗಳ ನಡುವೆ ಬದಲಾದ ಮನಸ್ಥಿತಿಗಳ ಅಂತರದ ಕತೆ.
nil
#
ಕನ್ನಡ ನಟ, ನಿರ್ದೇಶಕ ಇದೀಗ ತಮ್ಮದೊಂದು ಪುಸ್ತಕ ಪ್ರಕಟಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಆರ್ಟ್ ಆಫ್ ಸಕ್ಸಸ್ ಎಂಬುದು ಅವರ ಕೃತಿ. ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಲೇ ಬಂದ ನಟ ರಮೇಶ್ ಇಂಥದೊಂದು ಯಶಸ್ಸಿನ ಬಗ್ಗೆ ಹೇಳಲು, ಮಾರ್ಗದರ್ಶಿಯಾಗಲು ತುಂಬ ಅರ್ಹರು. ಅವರ ಈ ಕೃತಿ ಯಶಸ್ಸಿನ ಕಲೆಯ ಬಗ್ಗೆ ಹೇಳುತ್ತದೆ. ರಮೇಶ್ ಅವರದೇ ಆದ ಶೈಲಿಯೊಂದು ಈ ಕೃತಿಯ ಮುಖ್ಯ ಆಕರ್ಷಣೆ.
"ಅಯ್ಯಾ ಹುಡುಗ ನಿನಗೇನು ಗೊತ್ತು ನಮ್ಮ ಸಂಕಟ ಮಕ್ಕಳನ್ನು ಮಂಚದ ಕೆಳಗೆ ಮಲಗಿಸಿ ನಾವು ಮಂಚದ ಮೇಲೆ ಗಿರಾಕಿಗಳೊಂದಿಗೆ ಚಿಕ್ಕಂದ ಆಡುತ್ತೇವೆ. ಹೊಟ್ಟೆಯಲ್ಲಿ ಸಂಕಟ ಹೊಗೆಯಾಡುತ್ತಿದ್ದರೂ ನಾವು ನಗುತ್ತಿರುತ್ತೇವೆ ಗಿರಾಕಿಗಳ ಖಷಿಪಡಿಸಲು, ಗಿರಾಕಿಗಳೇ ನಮಗೆ ದೇವರು. ಇದೆಲ್ಲಾ ಹೊಟ್ಟೆ ತುಂಬಿಸಿಕೊಳ್ಳಲು ನಾವಾಡುತ್ತಿರುವ ನಾಟಕವೆಂದು ನಮ್ಮ ಪುಟ್ಟ ಕಂದಮ್ಮಗಳಿಗೂ ತಿಳಿದ ಸತ್ಯ." -ಕಾಮಾಟಿಪುರದ ವೇಶ್ಯ
Showing 481 to 510 of 5203 results