nil
ಅಕ್ಷರಸ್ಥರಲ್ಲದ ನಮ್ಮ ಹಳ್ಳಿಯ ಜನ, ಅದರಲ್ಲೂ ಹೆಣ್ಮಕ್ಕಳು ತಮ್ಮ ಬದುಕಿನ, ಕಷ್ಟಗಳ ಮಾತಾಡುವಾಗ "ಅಯ್ಯೋ ಕುಸ್ಮಾ, ನನ್ ಕತೆ ಬೆಳಗಾನ ಯೋಳುದ್ರೂ ಮುಗಿಯಲ್ಲ, ನೀ ಒಂದ್. ಬುಕ್ಕೇ ಬರ್ದ್ ಬುಡಬೋದು" ಅಂತಿರ್ತಾರೆ. ಅವರ ಪಾಲಿಗೆ ಕತೆಗಳೆಂದರೆ ಕಷ್ಟಗಳು. ಅಲ್ಲವೆನ್ನಲಾಗದು. ಅವರೊಳಗೆಲ್ಲಾ ಕತೆ ಇದೆ. ಕತೆ ಎಂಬುದು ಒಳಲೋಕ ಬಗೆದಾಗ ಕಾಣುವ ನೋಟ ಬದುಕು ಕೊಡುವ ಆಘಾತಗಳಿಂದ ಕಾಣುವ ಬೆಳಕನ್ನೂ, ಕಾಣೆಯನ್ನೂ ದೀಪವಾಗಿಸಿ ದಾಟಿಸಲು ಕಂಡುಕೊಂಡ ದಾರಿ. ಕತೆ, ನಮ್ಮನ್ನು ಈ ಜಗತ್ತಿನಲ್ಲಿರುತ್ತಲೇ, ಈ ಜಗತ್ತಿನಿಂದ ಕೆಲಹೊತ್ತಾದರೂ ಬೇರೆಡೆಗೆ ಒಯ್ಯುವ ಮಾಯಾಚಾಪೆ. ಒಂದು ದಿವೌಷಧ. ಕಲೆ ಮತ್ತು ಅಧ್ಯಾತ್ಮ ಎರಡೂ, ಮನುಷ್ಯರ ವೈಯಕ್ತಿಕ ಸಂಕಟಗಳನ್ನು ಲೋಕದ ಪ್ರಶ್ನೆಗಳಾಗಿಸುವ, ಉತ್ತರ ಹುಡುಕುವ, ಸಂಕಟಗಳನ್ನು ಸಾಂತ್ವನವಾಗಿಸುವ ಪ್ರಕ್ರಿಯೆಗಳು. ಅಂತಹ ಕತೆಗಳು ಎಲ್ಲರೊಳಗೂ ಇರುತ್ತವೆ. ಕೆಲವರು ಬರೆಯುತ್ತಾರಷ್ಟೇ!
NA
ಜೆ ರಂಜಾನ್ , ವಿ ಸಿ ರುದ್ರಾಣಿ
#
ಹಿರಿಯ ಸಾಹಿತಿ ನಾ. ದಾಮೋದರ ಶೆಟ್ಟಿಯವರ 'ಕರಿಮಾಯಿ ಗುಡ್ಡ' ಕಾದಂಬರಿ ಸಂಶೋಧನಾತ್ಮಕ ಹಾಗೂ ಪತ್ತೇದಾರಿಯ ಗುಣಗಳನ್ನು ಹೊಂದಿದೆ. ಆಧುನಿಕ ಬದುಕಿಗೆ ಸಮೀಪವಾದ ಕಥಾವಸ್ತುವನ್ನೊಳಗೊಂಡಿದ್ದು ರೋಚಕ ತಿರುವುಗಳಿಂದ ಕೂಡಿ. ಕುತೂಹಲ ಕೆರಳಿಸುತ್ತ ಸಾಗುವ ಕಾದಂಬರಿ ಚೇತೋಹಾರಿ ಶೈಲಿಯಿಂದ ಕೂಡಿದೆ. ఇంగ్లీష్ ಸಾಹಿತ್ಯದಲ್ಲಿ ಇರಬಹುದಾದ ಇಂಥ ಕಥಾನಕಗಳು ಕನ್ನಡದಲ್ಲಿ ಅಪರೂಪ. ಎಸ್ಟೇಟ್ ಮಧ್ಯದ ಸಿರಿವಂತರ ಬದುಕಿನ ನಿಗೂಢ ಘಟನೆಯೊಂದನ್ನು ನಾದಾ ಅವರು ರೋಚಕವಾಗಿ ಹೆಣೆದಿದ್ದಾರೆ. ಎಸ್ಟೇಟು ಬಂಗಲೆಯಲ್ಲಿ ನಡೆಯುವ ಈ ಕಥೆಯು ಪ್ರೀತಿ, ದ್ವೇಷ, ಅಸೂಯೆ, ವಂಚನೆ ಮುಂತಾದ ಹಲವು ಭಾವಗಳ ಸಮ್ಮಿಲನವಾಗಿದೆ. ವಿನಾಕಾರಣ ಕೊಲೆಯಾಗುವ ಓರ್ವ ಅಮಾಯಕ ಹೆಣ್ಣಿನ ಮನಸ್ಸನ್ನು ಆರ್ಥೈಸಲಾಗದೆ ಆಕೆಯ ಭಾವನೆಗಳ ಮೌಲ್ಯವನ್ನು ತಿಪ್ಪೆಗೆಸೆಯುವ ಕ್ರೌರ್ಯ ತಮ್ಮ ಜನ್ಮಸಿದ್ದ ಹಕ್ಕು ಎಂಬಂತೆ ವರ್ತಿಸುವ ಪುರುಷ ಸಮಾಜವನ್ನು ಈ ಕಾದಂಬರಿ ನಿಕಷಕ್ಕೊಡ್ಡುತ್ತದೆ. ಕೊಡಗಿನ ಪ್ರಾಕೃತಿಕ ರಮಣೀಯತೆ ಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವುದು ಈ ಕಾದಂಬರಿಯ ಮತ್ತೊಂದು ವಿಶೇಷ. ಕರಾವಳಿ ತೀರದ ನಾದಾ ಅವರ ಈ ಕಾದಂಬರಿ ಕನ್ನಡ ಸಾರಸ್ವತ ಲೋಕಕ್ಕೆ ಒಂದು ಅನುಪಮ ಕೊಡುಗೆ. ಟಿ.ಎಸ್. ದಕ್ಷಿಣಾಮೂರ್ತಿ
Showing 1051 to 1080 of 5204 results