• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಒಳ್ಳೆಯ ಬದುಕಿನ ಸೂತ್ರಗಳು | Olleya Badukina Sutragalu

ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು.

₹150   ₹128

ಕಗ್ಗಕ್ಕೊಂದು ನ್ಯಾನೋ ಕತೆ | Kaggakkondu Nano Kathe

ಇದೊಂದು ಮಹತ್ವದ ಕೃತಿ. ಕಗ್ಗಗಳ ಕುರಿತಾಗಿ ವ್ಯಾಖ್ಯಾನ ಹೊಸದೇನಲ್ಲ. ಆದರೆ ಆ ಕಗ್ಗದ ಸಾರವನ್ನು ಒಂದು ಪುಟ್ಟ ಕಥೆಯ ಮೂಲಕ ಹೇಳುವ ಪ್ರಯತ್ನ ಮಾತ್ರ ಹೊಚ್ಚಹೊಸದು. ವಿ. ಗೋಪುಕುಮಾರ್ ಅವರು ನ್ಯಾನೋ ಕಥಾಪ್ರಕಾರದ ನಿಷ್ಠರು ಮತ್ತು ಶ್ರೇಷ್ಠರೂ ಕೂಡ. ನಾನವರ ಕಥೆಗಳನ್ನು ಒಂದೇ ಉಸಿರಿನಲ್ಲಿ ಓದಿದ್ದೆ. ಹಾಗೆ ಓದಿಸಿಕೊಳ್ಳುವ ಗುಣ ಅವರ ಕಥೆಗಳಿಗಿದೆ.

₹130   ₹111

ಕೈ ಹಿಡಿದು ನೀ ನಡೆಸು ತಂದೆ | Kai Hididu Nee Nadesu Tande

ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಬರೆದಿರುವ ವಿಶಿಷ್ಟ ಪುಸ್ತಕ. ತಂದೆಯೊಬ್ಬ ಮಗನಿಗೆ ಕೊಡಬಹುದಾದ ಆಪ್ತ ಸಲಹೆಗಳು ಹೇಗಿರಬಲ್ಲವು ಎಂಬುದನ್ನು ಈ ಪುಸ್ತಕ ಕಟ್ಟಿಕೊಡುತ್ತದೆ.

₹250   ₹213

ಬದುಕೇ ಭಗವಂತ | Baduke Bhagavanta

ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ.

₹170   ₹145

ಮಹಿಳೆಯರಿಗೆ ಮಾತ್ರವಲ್ಲ! | Mahileyarige Matravalla!

ಮಹಿಳೆಯ ಮನಸ್ಸು ಮತ್ತು ಆ ಮನಸ್ಸನ್ನು ರೂಪಿಸುವ ಸಾಮಾಜಿಕ ಬೆಲೆ ಎರಡನ್ನೂ ಒಂದರೊಡನೊಂದು ಬೆಸೆದು ಬರೆದ ಹೊತ್ತಗೆ ಇದಾಗಿದೆ. ತಮ್ಮ ವೃತ್ತಿಯಲ್ಲಿ ಇದಿರಾದ ಹಲವಾರು ಸವಾಲುಳ್ಳ ಸಮಸ್ಯೆಗಳ ಸಿಕ್ಕುಗಳನ್ನು ಸಾವಧಾನದಿಂದ ಜಡಿಸುತ್ತಲೇ, ಇದೇಕೆ ಹೀಗೆ? ಎಂದು ಚಿಂತಿಸಿದ ಸೂಕ್ಷ್ಮ ಮನಸ್ಸಿನ ಫಲವೂ ಇದಾಗಿದೆ. ಈ ಕೃತಿಯುದ್ದಕ್ಕೂ ಮಹಿಳೆಯನ್ನು ನಿರ್ಬಂಧಿಸಿದ ಸಾಮಾಜಿಕ ರಚನೆಯಿಂದಾಗಿ ಅವಳ ಮನಷ್ಟೂ ಕೂಡಾ ಹೇಗೆ ನಿರ್ಬಂಧಕ್ಕೆ ಒಳಗಾಗಿದೆ ಮತ್ತು ಆಕೆಯೇ ಹೇಗೆ ಅದರಿಂದ ಹೊರಬರುವ ದಾರಿಯಿದ್ದರೂ ಸಂಕೋಲೆಯೊಳಗೇ ಅಡಗಿ ಕುಳಿತುಕೊಳ್ಳುತ್ತಾಳೆ ಎಂಬುದನ್ನು ಅನಾವರಣ ಮಾಡಲಾಗಿದೆ. -ಡಾ. ಸಬಿತಾ ಬನ್ನಾಡಿ

₹180   ₹153

ಮುಸ್ಸಂಜೆ ಮಾತು | Mussanje maatu

ವಯಸ್ಸಾಗುವುದು ಎಂಬ ಅನುದಿನದ ಪ್ರಕ್ರಿಯೆಯೇ ಸೃಷ್ಟಿಯ ಒಂದು ಸೋಜಿಗ. ಸಾವಿನ ಹಾದಿಯಲ್ಲಿ ಬರುವ ಒಂದು ಹಂತವಾದ ಕಾರಣಕ್ಕೋ ಏನೋ ವಯಸ್ಸಾಗುವುದೆಂದರೆ ನಿಡುಸುಯ್ಯುವವರೇ ಹೆಚ್ಚು. ಹಾಗಂತ ವಯಸ್ಸಾಗುವುದೇನು ನಿಲ್ಲುತ್ತದೆಯೇ? ಖಂಡಿತ ಇಲ್ಲ! ಮುಪ್ಪು, ವೃದ್ಧಾಪ್ಯ, ವಾನಪ್ರಸ್ಥಾಶ್ರಮಗಳೆಂದು ಹಲವು ಹೆಸರುಗಳಲ್ಲಿ ಕರೆಯಲಾಗುವ ಈ ಹಂತವು ಬರುವ ಸಮಯದಲ್ಲಿ ಬಂದೇ ಬರುತ್ತದೆ. ವರ್ಷಗಳಲ್ಲಿ ಆಯಸ್ಸನ್ನು ಅಳೆಯುವ ನಮಗೆ, ನಿಮಿಷಗಳಲ್ಲಿ ಸೋರಿಹೋಗುವ ಆಯಸ್ಸೇಕೆ ಅಷ್ಟಾಗಿ ಗಮನಕ್ಕೆ ಬರುವುದಿಲ್ಲ? ವೃದ್ಧಾಪ್ಯದಲ್ಲೂ ಚಂದದ ಬದುಕು ಸಾಧ್ಯವಿಲ್ಲವೇ? ವೃತ್ತಿಬದುಕಿನಲ್ಲಿ ನಿವೃತ್ತಿಗೆ ತಯಾರಾದಂತೆ, ಬದುಕಿನಲ್ಲಿ ವೃದ್ಧಾಪ್ಯಕ್ಕೆ ತಯಾರಾದರೆ ತಪ್ಪೇನಿದೆ? ಹೀಗೆ ಹಲವು ಪ್ರಶ್ನೆ-ತಲಾಶೆಗಳ ಚುಂಗು ಹಿಡಿಯುತ್ತಾ ಹೊರಟ ನನಗೆ ದಕ್ಕುತ್ತಾ ಹೋದ ಸಂಗತಿಗಳು ಸಾಕಷ್ಟು. ಈ ವಿಷಯದ ಬಗ್ಗೆ ಪುಸ್ತಕವೊಂದನ್ನು ಬರೆಯಲು ನನಗೇನು ಮಹಾವಯಸ್ಸು ಎಂಬ ಪ್ರಶ್ನೆಯು ಕಾಡಿದ್ದೇನೋ ಹೌದು. ಆದರೆ ಬರಹಗಾರನೊಬ್ಬ ತನ್ನನ್ನು ಬಲವಾಗಿ ಕಾಡಿದ ಸಂಗತಿಗಳ, ಕತೆಗಳ ಬಗ್ಗೆ ತನ್ನ ಓದುಗರೊಂದಿಗೆ ಹೇಳಿಕೊಳ್ಳದೆ ಹೆಚ್ಚು ಕಾಲ ಇರಲಾರ. ಇವೆಲ್ಲದರ ಫಲವೇ ಈ ಪುಸ್ತಕ. "ಮುಸ್ಸಂಜೆ ಮಾತು" ಬದುಕಿನ ಮುಸ್ಸಂಜೆಯ ಕತೆಗಳನ್ನು ನಿಮಗಾಗಿ ತೆರೆದಿಟ್ಟಿರುವ ಒಂದು ಕಿರುಹೊತ್ತಗೆ. ಒಂದಲ್ಲ ಒಂದು ಹಂತದಲ್ಲಿ ಬದುಕಿನ ಮುಸ್ಸಂಜೆಯನ್ನು ನೋಡಲಿರುವ ಪ್ರತಿಯೊಬ್ಬರೂ ಒಮ್ಮೆ ಓದಬೇಕಾದ ಪುಸ್ತಕವಿದು ಎಂದು ವಿನಯದಿಂದ ಹೇಳಬಲ್ಲೆ! - ಪ್ರಸಾದ್ ನಾಯ್ಕ

₹210   ₹179

ಹಿಟ್ಲರ್ ಲವ್ ಪಾಲಿಟಿಕ್ಸ್ | Hitler Love Politics

ಈ ಜಗತ್ತಿನಲ್ಲಿ ಕ್ರೂರ ಪ್ರಾಣಿಗಳಿವೆ. ನರ ಭಕ್ಷಕ ಜೀವಿಗಳಿವೆ. ಆದರೆ ಪ್ರಕೃತಿಯ ದೃಷ್ಟಿಯಲ್ಲಿ ನೋಡಿದರೆ ಮನುಷ್ಯನಿಗಿಂತ ಕೆಟ್ಟ ಪ್ರಾಣಿ ಇನ್ನೊಂದಿಲ್ಲ ಎನ್ನುತ್ತಾರೆ. ಅಂತಹ ಕ್ರೂರ ಮನುಷ್ಯರ ಪೈಕಿ ಹಿಟ್ಲರ್ ನಂಬರ್ ಒನ್ ಸ್ಥಾನದಲ್ಲಿ ನಿಲ್ಲುತ್ತಾನೆ. ಆತ ಒಬ್ಬ ಸರ್ವಾಧಿಕಾರಿಯಾಗಿ, ರಾಜಕಾರಣಿಯಾಗಿ, ದೇಶಭಕ್ತನಾಗಿ ಮೆಚ್ಚುಗೆ ಗಳಿಸುತ್ತಾನೆ. ಆದರೆ ಆತ ಮಾಡಿದ ನರ ಮೇಧ ಇದೆಯಲ್ಲ ಕಣ್ಣಂಚಿನಲ್ಲಿ ನೀರಲ್ಲ ರಕ್ತವನ್ನು ತೊಟ್ಟಿಕ್ಕಿಸುತ್ತದೆ.

₹170   ₹145

ಹಿಂದಿನ ನಿಲ್ದಾಣ | Hindina Nildana

ಕರಾವಳಿಯ ಪುಟ್ಟ ಊಲಗೆ ಮಾತ್ರ ಲಗತ್ತಾಗುವ ಈ ಚಿಟಿಜ ನೋಟಗಳು, ಜೀವಗಳು ಈಗ ಅಲ್ಲಯೂ ಅಪರೂಪವಾಗುತ್ತಿರುವ ಈ ಕಾಲದಲ್ಲಿ ಈ ನೆನಪಿನ ಹೆಣಿಗೆಗಳು ಮುಂದೊಮ್ಮೆ ಹೊಸಕಾಲದ ಹೊಸಪೀಱಗೆಯ ಕುತೂಹಲದ ಹಾಗೆ ಬೆಚ್ಚನೆಯ ಹೊಏಕಯಾಗಿ ಒದಗಬಹುದು, ಕಥೆಗಾತಿಯಾಗಬೇಕೆನ್ನುವ ಹಂಬಲದ ಶುಭಶ್ರೀಯ ಅನುಭವದ ಬುತ್ತಿಯಲ್ಲಿ ಸಾಕಷ್ಟು ಕಥಾಭೀಜಗಳವೆ

₹120   ₹102