nil
Nil
ಲಂಕೇಶರು ಒಮ್ಮೆ ಅತಿಯಾದ ವೈಚಾರಿಕತೆ ಕೂಡ ಬದುಕನ್ನು ಶುಷ್ಕವಾಗಿ ಮಾಡುತ್ತದೆ' ಎಂದು ಹೇಳಿದ್ದರು. ಆ ಮಾತನ್ನು ರಘುನಾಥ್ ಅವರ ಬರವಣಿಗೆ ನೆನಪಿಸುವಂತಿದೆ. ಭಾರತದ ಮಟ್ಟಿಗೆ ಪತ್ರಿಕೋದ್ಯಮದಲ್ಲಿ ಎರಡು ದೊಡ್ಡ ಮನಸ್ಸುಗಳು ಈ ದೇಶವನ್ನು ಕಟ್ಟುವಲ್ಲಿ ಕೆಲಸ ಮಾಡಿವೆ. ಒಂದು ಗಾಂಧಿ. ಇನ್ನೊಂದು ಬಾಬಾ ಸಾಹೇಬ್ ಅಂಬೇಡ್ಕರ್, ಈ ಎರಡೂ ಮನಸುಗಳ ಕನಸುಗಳ ನೆರಳು ರಘುನಾಥರ ಮನಸ್ಸಿನಲ್ಲಿ ಹಾಯ್ದುಹೋಗಿದೆ ಎಂಬುದನ್ನು ಇಲ್ಲಿನ ಲೇಖನಗಳು ಸಾಕ್ಷೀಕರಿಸುತ್ತವೆ. ಇಳಿಸಲಾಗದ ಶಿಲುಬೆ' ಕೃತಿಯ ಶೀರ್ಷಿಕೆಯೇ ಜಗದ ದುಃಖಗಳನ್ನು ಅರಿಯುವ ಮಾತನ್ನು ಹೇಳುತ್ತಿದೆ. ಈ ಹೊತ್ತಿನ ಮತ್ತು ಯಾವತ್ತಿನ ಈ ದೇಶದಲ್ಲಿ ಜಾತಿ, ಧರ್ಮ, ಕೋಮುವಾದ ಮತ್ತೆ ಮತ್ತೆ ಪೂತ್ಕರಿಸುತ್ತಲೇ ಇವೆ. ಇವುಗಳನ್ನು ಬೇರುಸಹಿತ ಕೀಳಲು ಸಾಧ್ಯವಿಲ್ಲ. ಆದರೆ. ಕೊನೆ ಪಕ್ಷ ಹದಮಾಡಲು ಪ್ರಯತ್ನಿಸಬಹುದು. ಹಾಗೆ ಹದ ಮಾಡುವ ಕೆಲಸವನ್ನು ರಘುನಾಥ್ ಬರೆಯುವ ಮೂಲಕ ಮಾಡುತ್ತಿದ್ದಾರೆ. ಕೆಲವು ಲೇಖನಗಳಲ್ಲಿ ಕೆಲವು ವಿಷಯಗಳ ಬಗ್ಗೆ ಕಠಿಣ ಶಬ್ದಗಳಲ್ಲಿ ಹೇಳಿದ್ದಾರಾದರೂ, ಯಾರ ವಿರುದ್ದ ಹೇಳಿದ್ದಾರೋ ಅವರು ಅದನ್ನು ಒಪ್ಪಿಕೊಳ್ಳುವ ರೀತಿಯಲ್ಲಿ ಅವರ ಬರವಣಿಗೆಯಿದೆ. ಅಕ್ಷರಗಳನ್ನು ವಾಕ್ಯ ಮಾಡುವಾಗ ತುಂಬ ಸೂಕ್ಷ್ಮವಾಗಿ ಬರೆಯುತ್ತಾ, ಆ ವಾಕ್ಯ ಮಲಿನವಾಗದಂತೆ ಎಚ್ಚರವಹಿಸುವುದು ರಘುನಾಥ್
ಬ್ರಿಟಿಷ್ ವಿದ್ವಾಂಸರು ಮತ್ತು ಸ್ವಾತಂತ್ಯೋತ್ತರ ಕಾಲದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ಹೋರಾಟದ ನೈಜ ಇತಿಹಾಸವನ್ನು ಮರೆಮಾಜಿ, ತಪ್ಪು ಇತಿಹಾಸವನ್ನೇ ಯುವ ಪೀಳಿಗೆಯ ತಲೆಯಲ್ಲಿ ತುಂಬಿತು. ನೈಜ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಪ್ರಾಮಾಣಿಕ ಅನಾವರಣ ಹಾಗೂ ಗಂಭೀರ ಅಧ್ಯಯನ ನಡೆಯಲೇ ಇಲ್ಲ. ತಮಗೆ ಬೇಕಾದಂತೆ ನೈಜ ಇತಿಹಾಸವನ್ನು ತಿರುಚಿ, ಭಾರತದ ಹೋರಾಟದ ಇತಿಹಾಸವನ್ನು ಕಾಂಗ್ರೆಸ್ ಇತಿಹಾಸವಾಗಿ ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮಸ್ತಿಷ್ಕದಲ್ಲಿ ತುರುಕಲಾಯಿತು. ಇದೊಂದು ಕಾಂಗ್ರೆಸ್ ಸರಕಾರದ ಅನುಚಿತ, ಅಸಂಬದ್ಧ ಹಾಗೂ ಅಹಂಕಾರದ ಕ್ರಮವೇ ಆಗಿತ್ತು ಏ. ಓ.ಹೂಮ್ ಎಂಬ ವಿದೇಶೀಯನಿಂದ ಸ್ಥಾಪನೆಗೊಂಡು ಇಟಿಷರನ್ನು ಓಲೈಸುವುದಕ್ಕಾಗಿಯೇ ಹುಟ್ಟಿದ ಕಾಂಗ್ರೆಸ್ಗೆ ಈಗಲೂ ಭಾರತ ನಿಷ್ಠೆಗಿಂತ ವಿದೇಶಿ ನಿಷ್ಠೆಯೇ ಹೆಚ್ಚು ಎನ್ನುವುದು ಪದೇಪದೇ ಸಾಬೀತಾಗುತ್ತಲೇ ಇದೆ. ಕಾಂಗ್ರೆಸ್ ಕರಾಳ ಇತಿಹಾಸ ಮುಂದುವರೆಯುತ್ತಲೇ ಇದೆ. ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಕಾಂಗ್ರೆಸ್ ನಡೆಸಿದ ಅಪಸವ್ಯಗಳ ಇತಿಹಾಸವನ್ನು ಆಧಾರಸಹಿತ ಈ ಕೃತಿಯಲ್ಲಿ ಆದಷ್ಟೂ ಸರಳವಾಗಿ ವಿಶ್ಲೇಷಿಸಲಾಗಿದೆ.
Showing 31 to 60 of 245 results