• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಸಮರಕಂಡ | Samarakanda

1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್‌ನ ಡಿಐಜಿ ಮತ್ತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯ ಗುಪ್ತಚರ ಇಲಾಖೆ ಮತ್ತು ರಾಜ್ಯ ಮಾಹಿತಿ ಇಲಾಖೆಯ ಮುಖ್ಯಸ್ಥರಾಗಿದ್ದರು. ಅವರು ರಾಜ್ಯ ಪೊಲೀಸ್‌ನಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು ಮತ್ತು ಅತ್ಯಂತ ಪಾರದರ್ಶಕ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ಅದು ಅವರಿಗೆ ಹೆಚ್ಚು ಪ್ರಶಸ್ತಿಗಳನ್ನು ತಂದಿತು. ಅವರು ಹೊಸದಿಲ್ಲಿಯ ಸಿಐಎಸ್‌ಎಫ್‌ನಲ್ಲಿಯೂ ತಮ್ಮ ಸೇವೆಯನ್ನು ಹೊಂದಿದ್ದರು. ಅವರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದರು ಮತ್ತು ಬೃಹತ್ ಘಟಕವನ್ನು ನಾಲ್ಕು ಸ್ವತಂತ್ರ ಘಟಕಗಳಾಗಿ ವಿಭಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಯು.ಕೆ.ಯಲ್ಲಿ ಪೊಲೀಸ್ ತರಬೇತಿಯ ಸಣ್ಣ ಅವಧಿಯನ್ನು ಹೊಂದಿದ್ದಾರೆ. ಅವರು ಕರ್ನಾಟಕ ಅಪರಾಧ ತನಿಖಾ ಇಲಾಖೆಯ ಮಹಾನಿರ್ದೇಶಕರಾಗಿ ಕೆಲಸ ಮಾಡಿದರು ಮತ್ತು 2011 ರಲ್ಲಿ ಡಿಜಿಪಿ ಹೋಮ್ ಗಾರ್ಡ್ಸ್, ಅಗ್ನಿಶಾಮಕ ಮತ್ತು ಸಿವಿಲ್ ಡಿಫೆನ್ಸ್ ಆಗಿ ನಿವೃತ್ತರಾದರು. ಅವರು ಭಾರತೀಯ ಪೊಲೀಸ್ ವ್ಯವಸ್ಥೆ ಮತ್ತು ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಸಂಬಂಧಿತ ವಿಷಯಗಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಪ್ರವಾಸ ಕಥನಗಳು. ಅವರು ಇಂಗ್ಲಿಷ್ ದಿನಪತ್ರಿಕೆ ಡೆಕ್ಕನ್ ಹೆರಾಲ್ಡ್‌ನ ಅಂಕಣಕಾರರೂ ಆಗಿದ್ದಾರೆ. ಅವರು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹಲವಾರು ಪುಸ್ತಕಗಳ ಲೇಖಕರಾಗಿದ್ದಾರೆ.

₹200   ₹178

Buy Now
ಸಹಜ ಜೀವನ | Sahaja Jeevanaa

ಆರೋಗ್ಯಪೂರ್ಣ ದೀರ್ಘಾಯುಷ್ಯದ ಬಯಕೆ ನಿಮಗಿದೆಯೇ? ಪ್ರಾಣಾಯಾಮ, ಯೋಗಾಸನಗಳನ್ನು ಮನೆಯಲ್ಲಿಯೇ ಮಾಡುವುದು ಹೇಗೆ ಎಂದು ತಿಳಿಯಬೇಕೆ? ಯಾವುದೇ ತರಗತಿಗಳಿಗೆ ಅಥವಾ ಶಿಬಿರಗಳಿಗೆ ಹೋಗದೆ ಧ್ಯಾನವನ್ನು ಮನೆಯಲ್ಲಿಯೇ ಅಭ್ಯಾಸ ಮಾಡಲು ಸರಳಸೂತ್ರಗಳು ಬೇಕೆ? ಯಾವ ರೀತಿಯ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ತಿಳಿದುಕೊಳ್ಳಬೇಕೆ? ಉತ್ತಮ ಆರೋಗ್ಯಕ್ಕಾಗಿ ನೆಮ್ಮದಿ ಮತ್ತು ಮನಃಶಾಂತಿ ಎಷ್ಟು ಮುಖ್ಯ ಮತ್ತು ಅದಕ್ಕಾಗಿ ಯಾವೆಲ್ಲಾ ಜೀವನ ಸಿದ್ಧಾಂತಗಳನ್ನು ಮತ್ತು ಜೀವನಶೈಲಿಯನ್ನು ರೂಡಿಸಿಕೊಳ್ಳಬೇಕು ಎನ್ನುವ ಪ್ರಶ್ನೆಗಳಿಗೆ ಉತ್ತರ ಬೇಕಿದೆಯೇ? ಹಾಗಿದ್ದಲ್ಲಿ, ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಮತ್ತು ಬಯಕೆಗಳಿಗೆ "ಸಹಜ ಜೀವನ"ದಲ್ಲಿ ಉತ್ತರಗಳಿವೆ, ಸುಲಭ ಮಾರ್ಗೋಪಾಯಗಳಿವೆ. ತಮ್ಮ ಹಲವಾರು ವರ್ಷಗಳ ಪ್ರಯೋಗ, ಅಭ್ಯಾಸ, ಓದು, ಅಧ್ಯಯನಗಳ ಸ್ವಾನುಭವದಿಂದ, ವೈಚಾರಿಕ ಚಿಂತನೆಗಳನ್ನಾಧರಿಸಿ ಮತ್ತು ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳ ಅರಿವಿನ ಬೆಳಕಿನಲ್ಲಿ ಲೇಖಕ ಮತ್ತು ರಾಜಕಾರಣಿ ರವಿ ಕೃಷ್ಣಾರೆಡ್ಡಿ ಸರಳಗನ್ನಡದಲ್ಲಿ ಬರೆದಿರುವ ಕೈಪಿಡಿ - "ಸಹಜ ಜೀವನ".

₹160   ₹136

Buy Now
ಸಹಭಾಷಿಕರ ಕನ್ನಡ ಪ್ರೇಮ | Sahabhashikara Kannada Prema

ಸಕಲ ಭಾಷಾಮಯೀ ಸರಸ್ವತಿ ಸರ್ವಭಾಷಾಮಯೀ ಸರಸ್ವತೀ ಎನ್ನುವ ಮಾತಿದೆ. ಇದೇ ಸಂದರ್ಭದಲ್ಲಿ ಕನ್ನಡ ಸಾರಸ್ವತ ಲೋಕಕ್ಕೆ ನಾಡು ನುಡಿಗಳ ಜಗತ್ತಿಗೆ ತಮ್ಮ ಮನೆಯ, ಕುಟುಂಬದ ಭಾಷೆ ಬೇರೆ ಆಗಿದ್ದರೂ ಕನ್ನಡಕ್ಕೆ ಅನೇಕರು ದಣಿವರಿಯದೆ ಜೀವ ತೇಯ್ದಿದ್ದಾರೆ. ಅಂಥ ೧೦೧ ಮಹಾನುಭಾವರ ಬಗ್ಗೆ ರಚಿಸಿರುವ ಕೃತಿಯೇ ಸಹಭಾಷಿಕರ ಕನ್ನಡ ಪ್ರೇಮ. ‌ ಇಲ್ಲಿ ಯಾವುದೂ, ಯಾರೂ ಅನ್ಯರಲ್ಲ, ಎಲ್ಲವೂ ಸಹಭಾಷೆಗಳೇ, ಎಲ್ಲರೂ ಸಹಭಾಷಿಕರೇ…

₹400   ₹340

Buy Now
ಸುಪ್ತ ಸಾಗರದಾಚೆ | Supta Saagaradache

ಆಸ್ಟ್ರೇಲಿಯಾದ ಎಲ್ಲಾ ವೈರುಧ್ಯಗಳನ್ನೂ ಕಟ್ಟಿಕೊಡುವ ಈ ಪ್ರವಾಸ ಕಥನ ಓದುಗರನ್ನು ನೇರವಾಗಿ ಆಸ್ಟ್ರೇಲಿಯಾದ ಹೃದಯಕ್ಕೆ ಕರೆದೊಯ್ದು ಪರಿಚಯ ಮಾಡಿಕೊಡುತ್ತದೆ.

₹200   ₹170

Buy Now
ಸೋಲೆಂಬ ಗೆಲುವು | Solemba Geluvu

ಕನ್ನಡದ ಪ್ರತಿಭಾಶಾಲಿ ಲೇಖಕಿ, ಅಧ್ಯಾಪಕರಾದ ದೀಪಾ ಹಿರೇಗುತ್ತಿ ಅವರು ಬರೆದಿರುವ ವ್ಯಕ್ತಿತ್ವ ವಿಕಸನದ ಬರಹದ ಪುಸ್ತಕ ಇದಾಗಿದೆ. ಜೀವನದಲ್ಲಿ ಸೋಲು, ಗೆಲುವು ಸಹಜ. ಗೆಲುವಿನಿಂದ ನಾವು ಪಾಠ ಕಲಿಯಲು ಸಾಧ್ಯವಿಲ್ಲ. ಆದರೆ ಸೋಲು ನಮಗೆ ಪಾಠ ಕಲಿಸುತ್ತೆ. ಅದಕ್ಕೇ ಲೇಖಕರು ಇಲ್ಲಿ ‘ಸೋಲೆಂಬ ಗೆಲುವು’ ಎಂಬ ಹೆಸರನ್ನು ಪುಸ್ತಕಕ್ಕೆ ಇಟ್ಟಿದ್ದಾರೆ. ಹಲವು ಸಾಧಕರ ಹಿಂದೆ ನೋವು, ಅಪಮಾನ, ತಾತ್ಸಾರ, ನಿಂದನೆಗಳು ಇರುತ್ತವೆ. ಆದರೆ ಇದೆಲ್ಲವನ್ನು ಮೆಟ್ಟಿ ನಿಂತು ಛಲ ಬಿಡದೆ ತನ್ನ ಗುರಿ ಸಾಧನೆಗಾಗಿ ಮುನ್ನುಗ್ಗುವವನೇ ನಿಜವಾದ ಸಾಧಕ ಆಗುತ್ತಾನೆ ಎಂಬ ಗುಣಾಂಶ ಈ ಪುಸ್ತಕದಲ್ಲಿದೆ. ಅಂತಹ ಮಹಾನ್ ಸಾಧಕರ ಜೀವನ ಚಿತ್ರಣ ಇಲ್ಲಿದೆ. ಇವರೆಲ್ಲರೂ ಪುಸ್ತಕ ಓದುವವರಿಗೆ ಸ್ಫೂರ್ತಿ, ಪ್ರೇರಣೆ ನೀಡುತ್ತಾರೆ.

₹150   ₹120

Buy Now
ಹಕ್ಕಿ ಅಟೆಂಡೆನ್ಸ್ | Hakki Attendence

ಬರ್ಡ್ ವಾಚಿಂಗ್ ಅನ್ನೋದು ತುಂಬಾ ತಾಳ್ಮೆ ಬೇಡುವ ಕೆಲಸ. ಅಂಥಹ ತಾಳ್ಮೆಯನ್ನು ಇಡೀ ಪುಸ್ತಕದುದ್ದಕ್ಕೂ ಸೆರೆಹಿಡಿದಿರುವ ಹಕ್ಕಿಗಳ ಮುದ್ದಾದ ಫೋಟೋಗಳಲ್ಲಿ ಕಾಣಬಹುದು.ಜೊತೆಗೆ ಆ ಫೋಟೊಗಳೊಂದಿಗೆ ನಡೆಸಿರುವಆತ್ಮೀಯ ಸಂಭಾಷಣೆಗಳಿವೆ. ಆ ಸಂಭಾಷಣೆಗಳಲ್ಲಿ ನಮ್ಮೆಲ್ಲರ ವಿದ್ಯಾರ್ಥಿ ಜೀವನವನ್ನು ನೆನಪಿಸುವ ಶಕ್ತಿ ಇದೆ.

₹595   ₹476

Buy Now
ಹಕ್ಕಿ ಮತ್ತು ಹುಡುಗಿ | Hakki Mattu Hudugi

ವೀರಲೋಕ ಮತ್ತು ಪ್ರಜಾವಾಣಿ ಸಹೋಯೋಗದ ಈ ʼಕಾವ್ಯಸಂಕ್ರಾಂತಿ ಸ್ಪರ್ಧೆʼಗೆ ಬಂದಿದ್ದ ಸಾವಿರಾರು ಕವಿತೆಗಳಲ್ಲಿ ಈ ಆಯ್ದ 50 ಕವಿತೆಗಳು ನಮ್ಮ ಮುಂದೆ ಇದ್ದವು. ಈ ಸಂಕಲನದ ಪ್ರತಿ ಕವಿತೆಯೂ ಓದಿದಾಗ ವಿಶೇಷ ಅನಿಸಿದೆ. ಅಂತಿಮವಾಗಿ ಆರು ಕವಿತೆಗಳನ್ನು ಆಯ್ಕೆ ಮಾಡುವುದು ನಿಜವಾಗಿಯೂ ಸವಾಲಿನದ್ದಾಗಿತ್ತು. ಯಾವುದೇ ಕವಿಯನ್ನು ತೂಕ ಮಾಡಲು ಸಾಧ್ಯವಿಲ್ಲ. -ಎಚ್‌.ಎಸ್‌.ವೆಂಕಟೇಶಮೂರ್ತಿ, ತೀರ್ಪುಗಾರರು

₹150   ₹113

Buy Now
ಹನ್ನೊಂದೂ ಮತ್ತೊಂದು ಕತೆಗಳು | Hannondu Mattondu kategalu

ತನಗೆ ತಾನು ಬಹುತೇಕ ಅನುಕೂಲ ಕಲ್ಪಿಸಿಕೊಳ್ಳಲಿಕ್ಕಾಗಿ ಲೋಕವು ತನ್ನದೇ ಕೆಲಪಾಲನ್ನು ಪ್ರತಿಕೂಲಕ್ಕೆಂದು ಮೀಸಲಿಡುತ್ತದೆ. ಇಲ್ಲಿರುವ ಕೆಲವೇ ಕೆಲಮಂದಿಯೂ ಹೀಗೇ.. ಬಹುತೇಕರಿಗೆ ಸ್ವರ್ಗ ದಕ್ಕಿಸಲೆಂದು ನರಕದಂತಹ ಕೋಟಲೆಯನ್ನೂ ಒಪ್ಪಿ ಅಪ್ಪಿಕೊಳ್ಳುತ್ತಾರೆ. -ಫೈರುಪೀಸ್ ಫೀಸ್ ಕತೆಯ ಮುಮ್ಮಾತು

₹395   ₹336

Buy Now
ಹರಿವ ಕನ್ನಡಿ | Hariva Kannadi

ಖ್ಯಾತ ಕವಿಗಳಾದ ಜಯಂತ ಕಾಯ್ಕಿಣಿಯವರು ಹೇಳಿರುವಂತೆ ಬಿಟ್ಟುಬಿಡದೆ ಓದಿಸಿಕೊಳ್ಳುವ ಕಾಡುವ ಗುಣ ಇಲ್ಲಿನ ಕವಿತೆಗಳಿಗೆ ಇವೆ.

₹120   ₹90

Buy Now
ಹಂಸಾಕ್ಷರ | Hamsakshara

“ನೀನಾ ಭಗವಂತ” ಎನ್ನುತ್ತಾ ಕನ್ನಡ ಸಿನಿ ಸಾಹಿತ್ಯಕ್ಕೆ ಹಂಸಲೇಖ ಕಾಲಿಟ್ಟು ಐವತ್ತು ವರ್ಷಗಳಾಗಿ ಹೋದವು, ಈ ವರ್ಷ ಹಂಸಾಭಿಮಾನಿಗಳಿಗೆ ಡಬಲ್ ಖುಷಿ, ಒಂದು ಕಡೆ ಹಂಸಲೇಖ ಕನ್ನಡ ಸಿನಿ ಸಾಹಿತ್ಯಕ್ಕೆ ಪಾದಾರ್ಪಣೆ ಮಾಡಿ ಐದು ದಶಕಗಳಾದರೆ, ಮತ್ತೊಂದು ಕನ್ನಡ ಸಂಸ್ಕೃತಿಯ ಹಬ್ಬ ದಸರಾಗೆ ಚಾಲನೆ ನೀಡಿದ್ದು ಹಂಸಲೇಖಾರೇ. ಈ ಡಬಲ್ ಖುಷಿಯನ್ನ ತ್ರಿಬಲ್ ಖುಷಿಯಾಗಿಸಲು ಈ ಪುಸ್ತಕ ಸಣ್ಣ ನೆಪವಷ್ಟೇ.

₹160   ₹136

Buy Now
ಹಾವಿನ ಮನೆ | Havina Mane

ಹಣ ಯಾರಿಗೆ ತಾನೆ ಕಹಿ? ಅವನಿಗೊಂದು ದೊಡ್ಡ ಕನಸಿತ್ತು. ಸಮಾಜದಲ್ಲಿ ತಾನೂ ಒಬ್ಬ ಗಣ್ಯ ವ್ಯಕ್ತಿ ಅನಿಸಿಕೊಳ್ಳಬೇಕು, ಕೈ ತುಂಬಾ ಹಣ ಗಳಿಸಬೇಕೆನ್ನುವುದು.

₹250   ₹215

Buy Now
ಹಿಟ್ಲರ್ ಲವ್ ಪಾಲಿಟಿಕ್ಸ್ | Hitler Love Politics

ಈ ಜಗತ್ತಿನಲ್ಲಿ ಕ್ರೂರ ಪ್ರಾಣಿಗಳಿವೆ. ನರ ಭಕ್ಷಕ ಜೀವಿಗಳಿವೆ. ಆದರೆ ಪ್ರಕೃತಿಯ ದೃಷ್ಟಿಯಲ್ಲಿ ನೋಡಿದರೆ ಮನುಷ್ಯನಿಗಿಂತ ಕೆಟ್ಟ ಪ್ರಾಣಿ ಇನ್ನೊಂದಿಲ್ಲ ಎನ್ನುತ್ತಾರೆ. ಅಂತಹ ಕ್ರೂರ ಮನುಷ್ಯರ ಪೈಕಿ ಹಿಟ್ಲರ್ ನಂಬರ್ ಒನ್ ಸ್ಥಾನದಲ್ಲಿ ನಿಲ್ಲುತ್ತಾನೆ. ಆತ ಒಬ್ಬ ಸರ್ವಾಧಿಕಾರಿಯಾಗಿ, ರಾಜಕಾರಣಿಯಾಗಿ, ದೇಶಭಕ್ತನಾಗಿ ಮೆಚ್ಚುಗೆ ಗಳಿಸುತ್ತಾನೆ. ಆದರೆ ಆತ ಮಾಡಿದ ನರ ಮೇಧ ಇದೆಯಲ್ಲ ಕಣ್ಣಂಚಿನಲ್ಲಿ ನೀರಲ್ಲ ರಕ್ತವನ್ನು ತೊಟ್ಟಿಕ್ಕಿಸುತ್ತದೆ.

₹170   ₹145

Buy Now
ಹಿಂದಿನ ನಿಲ್ದಾಣ | Hindina Nildana

ಕರಾವಳಿಯ ಪುಟ್ಟ ಊಲಗೆ ಮಾತ್ರ ಲಗತ್ತಾಗುವ ಈ ಚಿಟಿಜ ನೋಟಗಳು, ಜೀವಗಳು ಈಗ ಅಲ್ಲಯೂ ಅಪರೂಪವಾಗುತ್ತಿರುವ ಈ ಕಾಲದಲ್ಲಿ ಈ ನೆನಪಿನ ಹೆಣಿಗೆಗಳು ಮುಂದೊಮ್ಮೆ ಹೊಸಕಾಲದ ಹೊಸಪೀಱಗೆಯ ಕುತೂಹಲದ ಹಾಗೆ ಬೆಚ್ಚನೆಯ ಹೊಏಕಯಾಗಿ ಒದಗಬಹುದು, ಕಥೆಗಾತಿಯಾಗಬೇಕೆನ್ನುವ ಹಂಬಲದ ಶುಭಶ್ರೀಯ ಅನುಭವದ ಬುತ್ತಿಯಲ್ಲಿ ಸಾಕಷ್ಟು ಕಥಾಭೀಜಗಳವೆ

₹120   ₹96

Buy Now
ಹಿಮಾಲಯದ ನರಭಕ್ಷಕಗಳು | Himalayada Narabhakshakagalu

...ಬೇಟೆಯನ್ನು ಒಂದು ಕಾಯಕ ಪ್ರಜ್ಞೆಯಲ್ಲಿ ಬಾಳಿದ ಕಾರ್ಬೆಟ್ ನ ಅರಣ್ಯ ಪ್ರೀತಿ ಇರುವೆಂಭತ್ತು ಕೋಟಿ ಜೀವರಾಶಿಗಳನ್ನೂ ಅವುಗಳ ಬದುಕುವ ಹಕ್ಕನ್ನೂ ಮಾನ್ಯ ಮಾಡುವ ಗುಣಗೌರವದಿಂದ ಕೂಡಿದ್ದು.... ಪ್ರತಿಯೊಂದು ನರಭಕ್ಷಕ ಹುಲಿಯನ್ನು ಬೇಟೆಯಾಡಿದಾಗಲೂ ಆದ ಅನುಭವ ವಿವರಗಳನ್ನು ಕಟ್ಟಿಕೊಡುವಾಗ ಅವರು ವಿವರಿಸುವ ಕಾಡಿನ ಬಗೆ ವಿನ್ಯಾಸ ಅವರ ನೆನಪಿನ ತೀಕ್ಷ್ಣತೆಗೆ ಗ್ರಹಿಕೆಯ ಸೂಕ್ಷ್ಮತೆಗೆ ಕನ್ನಡಿ ಹಿಡಿದಂತಿದೆ. ಮೃತ್ಯು ಎದುರಿಗೇ ನಿಂತಾಗಲೂ ಧೃತಿಗೆಡದ ಅವರ ಆತ್ಮವಿಶ್ವಾಸದ ನಿಲುಮೆ ಅನನ್ಯವಾದುದು. ಇದೆಲ್ಲವನ್ನೂ ಅವರ ಬರಹ ತನ್ನ ಎದೆಯಲ್ಲಿ ತುಂಬಿಕೊಂಡಿದೆ. ಯಾವ ಜೀವ ವಿಜ್ಞಾನವೂ ತಿಳಿಸಲಾರದ ಎಷ್ಟೋ ಸೂಕ್ಷ್ಮಾತಿ ಸೂಕ್ಷ್ಮ ವಿಷಯಜ್ಞಾನವನ್ನು ಅನುಭವ ಮಾತ್ರದಿಂದ ಪಡೆದವರಾದ ಕಾರ್ಬೆಟ್ ಒಂದು ಅದ್ಭುತ, ಬೇಟೆಯನ್ನು ನಿಸರ್ಗಧರ್ಮಕ್ಕೆ ಎರವಾಗದ ನಡೆಯಲ್ಲಿ ಜೀವ ಸಂರಕ್ಷಕ ವಿಧಿಯಂತೆ ಪರಿಪಾಲಿಸಿದ ಮಹಾನುಭಾವ ಕಾರ್ಬೆಟ್. ...ಇಂಥ ಬೇಟೆಯ ಸಂತನ ಅನುಭವ ಕಥನವನ್ನು ಓದಿದ್ದೇ ನನ್ನ ಅಕ್ಷರಜ್ಞಾನದ ಅದೃಷ್ಟಭಾಗ್ಯವೆಂದು ನನ್ನ ತಿಳಿವು ಹೇಳುತ್ತಿದೆ. ಹಿಮಾಲಯದ ನರಭಕ್ಷಕಗಳು ...ಗೆಳೆಯ ವಿವೇಕಾನಂದನಿಗೆ ಆತ್ಮೀಯ ಕೃತಜ್ಞತೆಗಳು, ಕಾರಣ ಇಷ್ಟು ವಿಸ್ತಾರವಾದ ಈ ಬರಹವನ್ನು ಧ್ಯಾನಸ್ಥಿತಿಯ ಬದ್ಧತೆಯಲ್ಲಿ ಒಳಕ್ಕೆ ತಗೆದುಕೊಂಡು ಅದನ್ನು ಕನ್ನಡೀಕರಿಸಿದ್ದಕ್ಕೆ. ಇದನ್ನು ಕೇವಲ ಅನುವಾದ ಎಂದು ಹೇಳಿದರೆ ಅಪಚಾರವಾಗುತ್ತದೆ. ಕನ್ನಡ ಭಾಷೆಯ ಜಾಯಮಾನಕ್ಕೆ ಕಿಂಚಿತ್ತೂ ಊನವಾಗದ ಪ್ರಜ್ಞೆಯಲ್ಲಿ ಕಾರ್ಬೆಟ್‌ನ ಅನುಭವವನ್ನು ಕನ್ನಡಿಗರಿಗೆ ಕಟ್ಟಿಕೊಟ್ಟಿರುವ ಈ ಕಾರ್ಯ ಗುರುತರವಾದ ಹೊಣೆಗಾರಿಕೆಯಿಂದ ಮಾಡಿದ ಫಲವೇ ಸರಿ. ಈ ಜೀವಲೋಕದ ಬಗೆಗೆ ಕಾರ್ಬೆಟ್ ಪ್ರಜ್ಞೆಯನ್ನು ಬೆಳೆಸಿಕೊಂಡ ಮನಸ್ಸು ಮಾತ್ರ ಇಂಥ ಸಾಹಸಕ್ಕೆ ಶ್ರದ್ದೆ ಗೌರವಗಳಿಂದ ತೊಡಗುತ್ತದೆ.

₹675   ₹574

Buy Now
ಹೀಗೊಂದು ಏರೋಸ್ಪೇಸ್ ಪುರಾಣ | Heegondu Aerospace Puraana

ಆರಂಭದಿಂದಲೂ ನಿಮ್ಮ ಚೈತನ್ಯಪೂರ್ಣ ಬರವಣಿಗೆ ಮನ ಸೆಳೆಯಿತು. ಪಟ್ಟಿ ಪಾಡು, ಪರದಾಟಗಳ ನಡುವೆಯೂ ತೂರಿ ಬರುತ್ತಿದ್ದ ನಗೆಚಟಾಕಿ, ಅನ್ಯ ಜನಗಳ ಸ್ನೇಹಮಿಲನ, ವೀಲ್ ಚೇರಿನಲ್ಲಿ ಏಕಾಂಗಿಯಾಗಿ ಪಯಣಿಸಿದ ಪಯಣಿಕರ ಸಾಹಸಗಾಥೆ, ಭಾಷೆ ಬರದ ಹೆಣ್ಣೆಂದು ತನ್ನ ಫೈಟಿಗೆ ಹೋಗುತ್ತಿದ್ದವಳು ಓಡಿ ಬಂದು ನಿಮ್ಮನ್ನು ಅಪ್ಪಿಕೊಂಡು ಹೋದದ್ದು ಒಂದು ರೀತಿಯ ಮಾನವ ವ್ಯಕ್ತಿತ್ವಗಳ ಕಿರು ನೋಟ, ನಿಮ್ಮ ಲವಲವಿಕೆಯ " ಮಾತುಗಳಲ್ಲಿ ರೂಪ ತಾಳಿ. ಇದೊಂದು ಚೆಂದದ ಜೀವಂತ ಕಥಾ ಚಿತ್ರ ಶಿಲ್ಪ. -ಲೀಲಾವತಿ ಎಚ್.ಆರ್

₹170   ₹136

Buy Now
ಹೂವಿನ ಕೊಲ್ಲಿ | Hoovina Kolli

ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ. ಜಯಂತ್ ಕಾಯ್ಕಿಣಿ. ಕಾಯ್ಕಿಣಿ ಸರ್ ಇಂತಹ ಮಾತುಗಳನ್ನು ಹೇಳುತ್ತಾರೆಂದರೆ ‘ಅಬ್ದುಲ್ ರಶೀದ್’ ಅವರ ಸಾಹಿತ್ಯದ ಶಕ್ತಿ ನಿಮಗೆ ಅರಿವಾದೀತು. ಅವರು ಕಥೆ ಹೇಳುವ ರೀತಿ, ಅವರ ಕಥೆಗಳಲ್ಲಿನ ವಸ್ತು ವೈವಿದ್ಯತೆ, ಒಳನೋಟಗಳು ತುಂಬಾ ಅನನ್ಯವಾಗಿರುತ್ತವೆ. ಆದ್ದರಿಂದಲೇ ಅವರ ಕಥೆಗಳು ಒಂದಕ್ಕಿಂತ ಒಂದು ವಿಶೇಷವಾಗಿರುತ್ತವೆ ಮತ್ತು ಅವರನ್ನು ಓದುವ, ಅವರ ಕಥೆಗಳಿಗಾಗಿ ಕಾಯುವ ಒಂದು ದೊಡ್ಡವರ್ಗವೇ ಇದೆ. ಅಂತಹ ಅಬ್ದುಲ್ ರಶೀದ್ ಅವರ ಹೂವಿನ ಕೊಲ್ಲಿ ಪರಿಷ್ಕೃತ ಕಾದಂಬರಿಯನ್ನು ಇದೀಗ ವೀರಲೋಕ ಹೊರತರುತ್ತಿದೆ. ಕೊಡಗಿನ ಕಾಫಿ ತೋಟದ ಒಳಗಿನ ಬದುಕನ್ನು ಹೇಳುವ ಕಾದಂಬರಿ ಇದು. ಅಂತರ್ಜಾಲಕ್ಕಾಗಿ ಬರೆದಂತಹ ಈ ಕಾದಂಬರಿಯನ್ನು ಆಗ ಲೇಖಕರಾದ ಅಬ್ದುಲ್ ರಶೀದ್ ಅವರು ಬ್ಲಾಗಂಬರಿ ಎಂದೂ ಕರೆದಿದ್ದರು. ಈ ಕಾದಂಬರಿ ಈಗ ಪರಿಷ್ಕೃತಗೊಂಡು ಬಿಡುಗಡೆಗೊಳ್ಳುತ್ತಿದೆ.

₹270   ₹230

Buy Now
ಹೃದಯದ ಮಾತು | Hrudayada Mathu

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ.

₹160   ₹136

Buy Now