ನರಸಿಂಹಮೂರ್ತಿ ಎಂ ಎಸ್
#
nil
ಎಚ್ ಡುಂಡಿರಾಜ್
$#
NA
ಕನ್ನಡದ ಸಾಮಾನ್ಯ ಜನರಿಗೆ ಕನ್ನಡ ಭಾಷೆ- : ಕಲಿಯಲಿಚ್ಚಿಸುವವರಿಗೆ, ವಿಶೇಷವಾಗಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಪುಸ್ತಕ ರಚಿಸಲಾಗಿದೆ. ಅವರಲ್ಲಿ ಕನ್ನಡದ ಬಗ್ಗೆ ಆಸಕ್ತಿ ಹುಟ್ಟಿಸಿ, ಚಿಂತನೆಗೆ ತೊಡಗಿಸಿ ತನ್ಮೂಲಕ ಪದಗಳ : ಬಳಕೆ ಹೆಚ್ಚಿಸಿ ಕನ್ನಡವನ್ನು ಉಳಿಸಿ ಬೆಳೆಸುವ ಸದುದ್ದೇಶ ಈ ಪುಸ್ತಕದ್ದು,
ಕನ್ನಡ ನೆಲ, ಜಲ, ಭಾಷೆಯ ಬಗ್ಗೆ, ಸಾಹಿತ್ಯ, ಕಲೆ, ಸಂಗೀತ, ಇತಿಹಾಸ, ವಿಜ್ಞಾನ, ತಂತ್ರಜ್ಞಾನ, ಸಿನೆಮಾ, ರಾಜಕೀಯ, ಕ್ರೀಡೆ ಹೀಗೆ ಹತ್ತು ಹಲವಾರು ಕ್ಷೇತ್ರದ ವಿಷಯಗಳ ಬಗ್ಗೆ ಮತ್ತು ಈ ಕ್ಷೇತ್ರಗಳ ಸಾಧಕರ ವಿವರಗಳನ್ನು ಸುಳಿವುಗಳಲ್ಲಿ ಅಳವಡಿಸಲಾಗಿದೆ. ಈ ಸುಳಿವುಗಳನ್ನು ಓದಿ ಸೂಕ್ತ ಉತ್ತರ ಕಂಡುಹಿಡಿಯಬೇಕು. ಸಾಮಾನ್ಯ ಬಳಕೆಯ ಪದಗಳ ಜೊತೆಗೆ ಅಷ್ಟೇನೂ ಬಳಕೆಯಲ್ಲಿಲ್ಲದ ಗ್ರಾಂಥಿಕ ಪದಗಳು ಮತ್ತು ಕೆಲ ಪ್ರಾಂತೀಯ ಪದಗಳೂ ಸೇರಿಕೊಂಡಿವೆ.
ಬನ್ನಂಜೆ ಗೋವಿಂದಾಚಾರ್ಯ
ಅಂಗಿಯ ಗುಂಡಿ, ಚಪ್ಪಲಿಗಂಟಿದ ಕೆಸರು, ಮೇಜನ್ನು ತಯಾರಿಸಲು ಬಳಸಿದ ಮರ, ವ್ಯಕ್ತಿಯೊಬ್ಬ ಪೆನ್ನನ್ನು ಹಿಡಿಯುವ ರೀತಿ, ನಡಿಗೆಯಲ್ಲಿರುವ ಚೂರೇ ಚೂರು ವಕ್ರತೆ, ಕೋಣೆಯಲ್ಲಿನ ಪರಿಮಳ, ಕರವಸ್ತ್ರಕ್ಕಂಟಿದ ಕಣ್ಣೀರು- ನಾವೆಲ್ಲ ನಿರ್ಲಕ್ಷಿಸಿ ಮುನ್ನಡೆಯಬಹುದಾದ ಇಂಥ ಸಣ್ಣ ವಿಷಯಗಳೇ ಷರ್ಲಾಕ್ ಹೋಮ್ಸ್ನನ್ನು ಹಿಡಿದು ನಿಲ್ಲಿಸುತ್ತಿದ್ದವು. ಅಪರಾಧದ ಸ್ಥಳದಲ್ಲಿ ಕಂಡ ನಗಣ್ಯವೆನ್ನುವಂತೆ ತೋರುವ ಸುಳಿವುಗಳನ್ನು ಹಿಂಬಾಲಿಸಿ, ಅವಕ್ಕೆ ತನ್ನ ಸರಿಸಾಟಿಯಿಲ್ಲದ ತರ್ಕಸರಣಿಯನ್ನು ಹೊಂದಿಸಿ, ಅಚ್ಚರಿಯೆನಿಸುವಂತೆ ಕೊಲೆಗಾರನನ್ನು ಪತ್ತೆ ಮಾಡುವ ವಿಶಿಷ್ಟ ದಾರಿಯೊಂದು ಅವನಿಗೆ ಗೊತ್ತಿತ್ತು. ಟೋಪಿ, ಸಿಗಾರ್ ಹಾಗೂ ಸಣ್ಣದೊಂದು ಭೂತಗನ್ನಡಿಯ ಜೊತೆ ಜಗತ್ತಿನ ಓದುಗರೆಲ್ಲರ ಮನಸ್ಸಿನಲ್ಲಿ ಅಷ್ಟೊತ್ತಿದಂತೆ ಉಳಿದಿರುವ ಪತ್ತೇದಾರ ಷರ್ಲಾಕ್ ಹೋಮ್ಸ್. ಈ ಕಾಲ್ಪನಿಕ ಪಾತ್ರದ ಸೃಷ್ಟಿಕರ್ತ ಅರ್ಥರ್ ಕಾನನ್ ಡಾಯ್ಸ್, ಹೋಮ್ಸ್ ಇರುವವರೆಗೆ ತಾನು ಬೇರೇನೂ ಬರೆಯಲಾರೆ ಎಂದೆನಿಸಿ ಒಂದು ಕತೆಯಲ್ಲಿ ಅವನನ್ನು ಸಾಯಿಸಿಬಿಟ್ಟನಂತೆ. ಆದರೆ ಅದಕ್ಕೆ ಓದುಗರ ಪ್ರತಿಕ್ರಿಯೆ ಹೇಗಿತ್ತೆಂದರೆ, ವಿಧಿಯಿಲ್ಲದೆ ಕೆಲ ವರ್ಷಗಳ ನಂತರ ಡಾಯ್ಸ್ ಇನ್ನೊಂದು ಕತೆ ಬರೆದು ಹೋಮ್ಸ್ನನ್ನು ಬದುಕಿಸಬೇಕಾಯ್ತು! ಅದ್ಭುತ ಪಾತ್ರಗಳೇ ಹಾಗೆ ಅಜರಾಮರ- ಸೃಷ್ಟಿಕರ್ತನೇ ಬಯಸಿದರೂ ಅವು ಸಾಯುವುದಿಲ್ಲ!
ಪರ್ವತವಾಡಿ...ಅಲ್ಲ..ಅಲ್ಲ.ಪರ್ವತವಾಣಿ ಅದು ನಾನೇ
ಪರ್ವತವಾಡಿ...ಅಲ್ಲ ಅಲ್ಲ..ಪರ್ವತವಾಣಿ ಅದು ನಾನೇ
ಕಾಡುವ ಕಥೆ ಥಟ್ಟನೆ ಬರೆಯಿಸಿಕೊಳ್ಳುವುದಿಲ್ಲ. ಅದು ಒಳಗೊಳಗೆ ವಿಸ್ತಾರಗೊಳ್ಳುತ್ತದೆ. ಅಲ್ಲಿ ವಿಷಾದ ಮಡುಗಟ್ಟಿದಂತೆ ಮಾತು ಮೌನವಾಗುತ್ತದೆ, ಪ್ರೇಮ್ ಚಂದ್, ಅಲೆಕಾಂಡರ್ ಪುಕ್ರೀನ್, ಕಾಮುಗಳ ಕಾದಂಬರಿಗಳು ಘಟಿಸಿದ್ದೇ ಹೀಗೆ ಘನ ಗಂಭೀರ ಕಾರ್ಮೋಡಗಳು ಆಕಾಶ ತುಂಬಿದಂತೆ ತಟ್ಟನೆ ಮಳೆ ಸುರಿಯುವುದಿಲ್ಲ. ಓಡಾಡುತ್ತವೆ, ಕಾಡುತ್ತವೆ ಕೊನೆಗೊಮ್ಮೆ ಸುರಿದುಬಿಟ್ಟರೆ ನಿಂತ ನೆಲದ ಗತಿ ಏನಾದೀತು ಎನ್ನುವ ಭಯ ಹುಟ್ಟಿಸುತ್ತವೆ. ಎಲ್ಲ ತಿಳಿದೂ ಈ ತಿಳುವಳಿಕೆಯನ್ನು ತೆಗೆದುಕೊಂಡು ಏನು ಮಾಡುವುದು ಎನ್ನುವ ಹತಾಶದ ಮುಂದೆ ನಮ್ಮನ್ನು ನಿಲ್ಲಿಸುತ್ತವೆ. ಬಹುತೇಕ ಈ ಕಾದಂಬರಿಯ ಕಥಾವಸ್ತು ಹಾಗೆಯೇ. ಇಲ್ಲಿ ಪಾತ್ರಗಳು ನೆಪ ಮಾತ್ರ ಸಂಬಂಧಗಳ ತಾತ್ವಿಕತೆಯೇ ಕಾದಂಬರಿ ನಮಗೆ ಒಡ್ಡುವ ಪ್ರಶ್ನೆ. ಕಾದಂಬರಿಕಾರ್ತಿ ಸುಶೀಲಾ ಡೋಣೂರ ಕಣ್ಣಿಗೆ ಕಂಡರೂ ಎಂಬ ಮಾತ್ರಕ್ಕೆ ಮನುಷ್ಯರನ್ನು ನೋಡಲಿಲ್ಲ. ಬದಲಾಗಿ ಓದುವ ಗಂಭೀರ ಯತ್ನವನ್ನು ಮಾಡಿದ್ದಾರೆ. ನಮ್ಮ ಸಂದರ್ಭದ ಅತಿ ದೊಡ್ಡ ದುರಂತದ ಮುನ್ನುಡಿಯ ಸಾಲುಗಳನ್ನ ಪ್ಲೇ ಅವರು ಇಲ್ಲಿ ಇಟ್ಟಿರುವುದು. ಕಾದಂಬರಿ ಇನ್ನೂ ಬರಬೇಕಾಗಿದೆ. ಆಗ ಅದು ಮತ್ತೊಂದು ರಿಸರಕ್ಷನ್ ಆಗಲು ಸಾಧ್ಯವಿದೆ. 'ಬದುಕೆನ್ನುವ ವಿಕಾರದ ಅರ್ಥವನ್ನು ಹುಡುಕುತ್ತಾ ಹೋದಷ್ಟು ಅದು ಬದಲಾಗುತ್ತಾ ಹೋಗುತ್ತದೆ. ಅದು ಒಂದು ರೀತಿ ಕೈಯೊಳಗೆ ಸಿಕ್ಕೂ ಹಾರಿ ಹೋಗುವ ಚಿಟ್ಟೆಯಂತೆ' ಇವು ಬೇರುಗಡಿತವಾಗಿ ಬದುಕುವ ನಗರದ ಮನಸ್ಸಿನಲ್ಲಿ ನಿತ್ಯ ಸಾವಿರ ಬಾರಿ ಹುಟ್ಟಿ ಸಾಯುವ ಸಹಾಯವಿಲ್ಲದ ವಾಸ್ತವದ ಸಾಲುಗಳು, ಕಾದಂಬರಿಯ ವಸ್ತು ಹೊಸದು, ಅಷ್ಟೇ ಸಂಕಟದ ಭಾಷೆ, ಲೇಖಕಿಯನ್ನು ಕುತೂಹಲ ಕೆರಳಿಸುವ ಅಭಿವ್ಯಕ್ತಿ, ಈ ಕಾರಣ ಅಭಿನಂದಿಸದೆ ಇರಲಾಗದು - ರಾಗಂ
Showing 151 to 180 of 299 results