ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ ಮತ್ತು ಮನುಷ್ಯ ಗ್ರಹಿಕೆಯ ಭಾಗವೇ ಎನ್ನುವುದು ಅರ್ಥವಾಗುವುದು ಕಷ್ಟವೇನಲ್ಲ, ಎಲ್ಲಕ್ಕಿಂತ ಹೆಚ್ಚಾಗಿ ಈ ಬಗೆಯ ಓದು, ಓದುಗನ ಕಲ್ಪನಾ ಶಕ್ತಿಯನ್ನು ಒರೆಗೆ ಹಚ್ಚುತ್ತದೆ. ಓದುಗನ ಆಲೋಚನಾ ಶಕ್ತಿಯನ್ನು ವೃದ್ಧಿಸುತ್ತಲೇ ಈ ರೀತಿಯ ವಸ್ತುಗಳೆಡೆಗಿನ ಸಿನಿಕತನವನ್ನೂ ಸಹ ಕಡಿಮೆ ಮಾಡುತ್ತವೆ. ಹಾಗೆ ಮಾಡುವುದರ ಮೂಲಕ ಮುಕ್ತ ಮನಸ್ಸಿನಿಂದ ಈ ಕ್ಷೇತ್ರದ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ಅನಾವಶ್ಯಕವಾಗಿ ಭಯ ಹುಟ್ಟಿಸುವ ವಿಷಯಗಳು ಅರಿವಿಗೆ ಸಿಕ್ಕುತ್ತವೆ. ಇಲ್ಲಿ ನಮ್ಮನ್ನೂ ಮೀರಿದ್ದು ಇನ್ನೇನೋ ಇದೆ ಎನ್ನುವುದು ಆರಿವಾಗಿ ಭಯ ಕಡಿಮೆಯಾಗಿ ಆತ್ಮ ವಿಶ್ವಾಸ ಹೆಚ್ಚುತ್ತದೆ ಎಂದರೂ ಅತಿಶಯೋಕ್ತಿಯಲ್ಲ.
ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
ನಮಗೆ ಜನ್ಮ ಕೊಟ್ಟ ತಾಯಿ ತಂದೆಯ ಋಣ ತೀರಿಸಲು ಸಾಧ್ಯವಿಲ್ಲ; ಭಾಮಳಿಗೆ ತನ್ನ ಅಪ್ಪನ ಸಂಧ್ಯಾಕಾಲದಲ್ಲಿನ ಜೀವನ ಚೇತೋಹಾರಿಯಾಗಿಡಲು ಹಾಗೂ ನೆಮ್ಮದಿಗೆ ಎಡೆ ಮಾಡಿಕೊಡಲು ಋಣ 'ಪ್ರಾಪ್ತಿ' ಆಗಿದ್ದು ಸಂತೋಷವೆನಿಸಿತು. ಈ ಧಾರಾವಾಹಿಯಲ್ಲಿನ ಪ್ರತಿಯೊಂದು ಪಾತ್ರವೂ ವಾಸ್ತವಿಕತೆಗೆ ಹತ್ತಿರವಾಗಿದೆ. ಟಿ.ಎಸ್. ಪ್ರತಿಭಾ, ಚಿತ್ರದುರ್ಗ ಮನೋಜ್ಞವಾಗಿ ಓದಿಸಿಕೊಂಡು ಹೋದ ಧಾರಾವಾಹಿ ಇಷ್ಟು ಬೇಗ ಮುಗಿಯಿತೇ ಅಂತ ಅನ್ನಿಸಿತು. ಕಾದಂಬರಿಯಲ್ಲಿ ಬರುವ ಚಿದಾನಂದ, ಸತ್ಯಭಾಮ, ಭಾರ್ಗವ. ಶೀಲಾ ಈ ಪಾತ್ರಗಳ ವ್ಯಕ್ತಿತ್ವ ನಿರೂಪಣೆ ಸಹಜವಾಗಿದೆ. ಜೀವನದಿಂದ ಆರಿಸಿ ತೆಗೆದಂತೆ ಇದೆ. ಸತ್ಯಭಾಮ ಅಪ್ಪನನ್ನು ಅನುಮಾನಿಸುವ ವಯಸ್ಸಿನಿಂದ ಮೊದಲ್ಗೊಂಡು, ಜೀವನದ ಅನುಭವಗಳಿಂದ ಮಾಗಿ, ಕೊನೆಗೆ ಅಪ್ಪನನ್ನು ಒಪ್ಪಿಕೊಳ್ಳುವ, ತನ್ನ ಬಳಿಯೇ ಇರಿಸಿಕೊಳ್ಳುವ ಪರಿ ಅನನ್ಯವಾಗಿದೆ. - ಬಿ.ವಿ. ರಾಜಲಕ್ಷ್ಮಿ, ಬೆಂಗಳೂರು ಧಾರಾವಾಹಿ ಮನಮುಟ್ಟುವಂತಿತ್ತು. ತನ್ನ ಅಪ್ಪನನ್ನು ಧಿಕ್ಕರಿಸಿ ಅಂತರ್ಜಾತಿ ವಿವಾಹವಾಗಿ ಮಾನಸಿಕ ಯಾತನೆ ಅನುಭವಿಸಿ, ಸುಗಮ ಬದುಕು ಕಂಡುಕೊಂಡ ಭಾಮ, ತನ್ನ ಅಪ್ಪನನ್ನು ಕರೆತರಲು ವೆಂಕಟೇಶನೊಂದಿಗೆ ಚರ್ಚಿಸಿದಾಗ, ನಾಳೆ ನಮಗೂ ಇಂತಹ ಸ್ಥಿತಿ ಬರಬಹುದು. ನಾಳೆ ನಮ್ಮ ಮಗಳು ನಮ್ಮನ್ನು ನೋಡಿಕೊಳ್ಳಬೇಕು. ನಾವು ಅವರಿಗೆ ಮೇಲ್ಪಂಕ್ತಿ ಆಗಬೇಕೆ ಹೊರತು ತಪ್ಪು ಮಾದರಿ ಆಗಬಾರದು ಎಂಬ ವೆಂಕಟೇಶನ ಉದಾತ್ತ ಮಾತುಗಳಿಂದ ಭಾಮಾಳ ಹೃದಯ ತುಂಬಿ ಬಂದು ತನ್ನ ತಂದೆಯನ್ನು ಕರೆತರುವ ನಿರ್ಧಾರ ಮಾಡಿದ್ದು ಶ್ಲಾಘನೀಯ. ಎಂ. ಟಿ. ರಮಾನಂದ ರೆಡ್ಡಿ, ಚಿತ್ರದುರ್ಗ ಧಾರಾವಾಹಿ ಕೊನೆಯ ಕಂತಿನಲ್ಲಿ ಗಳಗಳನೆ ಅಳುವಂತೆ ಮಾಡಿಬಿಟ್ಟಿತು. ಮನುಷ್ಯ ಸಂಬಂಧಗಳ ಅನಾವರಣ ಎಷ್ಟು ಚೆನ್ನಾಗಿತ್ತೆಂದರೆ ವಸುಮತಿ ಉಡುಪರಿಗೆ ಮಾತ್ರ ಸಾಧ್ಯವೇನೋ ಇಂತಹ ಬರವಣಿಗೆ ಎನಿಸಿತು.
#
nil
NA
ಬೇಲೂರು ರಾಮಮೂರ್ತಿ ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
ಅಪರಂಜಿ ಶಿವು
ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
"ಬದುಕು ಗಣಿತದ ಸೂತ್ರಗಳ ಲೆಕ್ಕಾಚಾರದಂತೆ ಒಂದು ಅಂಕೆ ತಪ್ಪಿದರೆ ಇಡೀ ಸೂತ್ರವೇ ತಪ್ಪಿಹೋಗುತ್ತದೆ" ಎಂಬ ಕಾದಂಬರಿಯ ಕೇಂದ್ರ ಪಾತ್ರ ವಸಂತಿ ಹೇಳುವ ಮಾತು ಕಾದಂಬರಿಯ ಆಶಯವನ್ನು ಹೇಳುವಂತದ್ದು. ಬದುಕಿನ ಬವಣೆಗಳನ್ನು, ಕ್ಲಿಷ್ಟ ಸಮಸ್ಯೆಗಳನ್ನು ತಾಳ್ಮೆಯಿಂದ ಧೈರ್ಯದಿಂದ ಅಂತಃಕರಣದಿಂದ ಬಿಡಿಸುತ್ತಾ ಸಾಗಬೇಕೇ ಹೊರತು ಕೋಪತಾಪ ಆತುರದ ನಿರ್ಧಾರಗಳು ಬದುಕನ್ನು ಹಾಳುಗೆಡವುತ್ತವೆಂಬುದನ್ನು ಲೇಖಕಿ ಮಾಲತಿಯವರು ಈ ಕಾದಂಬರಿಯ ಮೂಲಕ ಚಂದದಲ್ಲಿ ಕಟ್ಟಿಕೊಡುತ್ತಾರೆ. ಯುವ ಮನಸ್ಸುಗಳು ಎದುರಿಸುವ ಅನೇಕ ಸಂಘರ್ಷಗಳಿಗೆ ಪ್ರೀತಿ ಬೆಂಬಲ ಪ್ರೋತ್ಸಾಹದ ಕೊರತೆ ಕಾರಣವಾಗಿರುವುದನ್ನು ಕುರಿತು ಹೇಳುವ ಲೇಖಕಿ, ಹಾಗೆಯೇ ಅತೀ ಕೊಂಡಾಟ ಕೂಡಾ ಅವರನ್ನು ದಿಕ್ಕುಗೆಡಿಸುತ್ತದೆ ಎಂಬ ಪ್ರಸ್ತುತ ಸಮಾಜದ ಜ್ವಲಂತ ಸಮಸ್ಯೆಯನ್ನು ಇಲ್ಲಿ ಕುತೂಹಲಕಾರಿಯಾಗಿ, ಆಪ್ತವಾಗಿ ಚಿತ್ರಿಸಿದ್ದಾರೆ. ತಲ್ಲಣಗಳನ್ನು ಎದುರಿಸುವ, ಅದರಿಂದ ಹೊರಬರುವ ಮಾರ್ಗಗಳನ್ನು ಕಥಾನಕ ಸರಳ, ಸುಂದರವಾಗಿ ಚಿತ್ರಿಸಿದರೂ, ಬದುಕೆಂಬುದು ಅಷ್ಟು ಸಲೀಸಲ್ಲ, ಅನೂಹ್ಯವಾದದ್ದು ಎಂಬ ಧ್ವನಿಯೂ ಅಂತರ್ಗತವಾಗಿದೆ. ಆಶಾದಾಯಕ, ಭರವಸೆಯ ದಿಕ್ಕಿನೆಡೆ ಕಥೆ ಮುಖಮಾಡಿರುವುದು ವಿಶೇಷವಾಗಿದೆ.
ರಘುನಾಥ ಚ ಹ
Showing 181 to 210 of 299 results