• ಯಾವುದೇ ಕನ್ನಡ ಸ್ತಕಕ್ಕಾಗಿ ಸಂಪರ್ಕಿಸಿ
  • Call Us : +91 7022122121 / +91 8861212172
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
back

Publishers

Categories

Authors

Languages

Book Type

Clear All
Filter
Festive

₹249   ₹212

Festive Ebook

₹249   ₹125

ಅಂತಾರಾಷ್ಟ್ರೀಯ ಕುಂಬಳಕಾಯಿ | Antarashtreeya Kumbalakayi

ತೀರ ಸಾಮಾನ್ಯರನ್ನು ಕುರಿತ ಕತೆಗಳಿವು, ನಿಜ. ಆದರೆ ಈ ಸಾಮಾನ್ಯರ ಕನಸುಗಳು, ನಿರಾಶಾದಾಯಕವಾಗಿದ್ದರೂ ಅವರ ದೈನಿಕದ ಸ್ಥಿತಿಗತಿಗಳನ್ನು ಮರೆಮಾಚುವುದಿಲ್ಲ.

₹120   ₹102

ಅನಾಥ ಪ್ರೀತಿಯ ಅನುಬಂಧ | Anatha Preetiya Anubandha

‘ ಪ್ರೀತಿ ‘ ಇದು ಎರಡೇ ಅಕ್ಷರದ ಒಂದು ಚಿಕ್ಕ ಪದವಾದರೂ ಎಲ್ಲಾ ಜೀವ ಚೇತನದಲ್ಲೂ ಸುಪ್ತವಾಗಿರುವ ಒಂದು ಅಪೂರ್ವ ಅನಂತ ಅನುಭೂತಿ. ಅದರಲ್ಲೂ ಮಾನವನಲ್ಲಿ ಹದಿ ಹರೆಯ ಅರಳುವ ಕಾಲಘಟ್ಟದಲ್ಲಿ ಪರಸ್ಪರ ಆಕರ್ಷಣೆಯ ರೆಕ್ಕೆ ಕಟ್ಟಿಕೊಂಡೇ ಹ್ರದಯಕ್ಕೆ ಲಗ್ಗೆ ಇಡುತ್ತದೆ. ಆಗ ಅದುಯಾವ ಪ್ರತಿಬಂಧಕ್ಕೂ ಒಳ ಪಡುವುದು ಕಷ್ಟ.

₹140   ₹119

ಅಮೋಘವರ್ಷ | Amoghavarsha

“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು. ಅಮೋಘವರ್ಷ” ಕಾದಂಬರಿ ರಾಷ್ಟ್ರಕೂಟರ ಕುರಿತು ಪೂರ್ಣ ಪ್ರಮಾಣದಲ್ಲಿ ಅರಿತುಕೊಳ್ಳುವುದಕ್ಕೆ ಸಹಾಯಕಾರಿಯಾಗಲಿದೆ. ಲೇಖಕರಾದ ಲಕ್ಷ್ಮಣ ಕೌಂಟೆ ಅವರು ಹಲವು ಗ್ರಂಥಗಳನ್ನು ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದು ರಾಷ್ಟ್ರಕೂಟರ ಕುರಿತು ಇದುವರೆಗೂ ಪ್ರಕಟವಾದ ಎಲ್ಲ ಕಾದಂಬರಿಗಳಿಗಿಂತಲೂ ಭಿನ್ನವೂ ವಿಶಿಷ್ಠವೂ ಆಗಿದೆ.

₹420   ₹357

ಅಮೋಘವರ್ಷ ಇಬುಕ್ | Amoghavarsha Ebook

“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು.

₹420   ₹210

ಅರ್ಧ ಬಿಸಿಲು ಅರ್ಧ ಮಳೆ | Ardha Bisilu Ardha Male

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ…

₹120   ₹102

ಅರ್ಧ ಬಿಸಿಲು ಅರ್ಧ ಮಳೆ ಇಬುಕ್ | Ardha Bisilu Ardha Male Ebook

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ… ಹೀಗೆ ವಿವಿಧ ವಸ್ತುಗಳ ಎಳೆ ಹಿಡಿದು ನಡೆದಿದ್ದಾರೆ ಸದಾಶಿವ ಸೊರಟೂರು, ಇಲ್ಲನ ಕಥೆಗಳಲ್ಲಿ ಕಲಾತ್ಮಕತೆ ಇದೆ. ಸುಲಅತ ಭಾಷೆ, ಮಾನವೀಯ ಮೌಲ್ಯಗಳ ಐಸಿ ಕಥನಗಾರಿಕೆಯ ಅಂದ ಹೆಚ್ಚಿಸಿವೆ. ವಾಸ್ತವ ಲೋಕದ ತಲ್ಲಣಗಳು ಇಲ್ಲ ಕಥೆಗಳಾಗಿವೆ. ಬಹುತ್ವದ ಪದರು ಪದರುಗಳು ಕಥೆಗಳಾಗಿ ಅನಾವರಣಗೊಳ್ಳುವ ಈ ಬಗೆ ಹೃದ್ಯ.

₹120   ₹60

ಆ ವದನ (ಕಾದಂಬರಿ) | Aa Vadana

ಈ ಭೂಮಿಯ ಮೇಲೆ ‘ಕಾಮ’ ಯಾರನ್ನೂ ಬಿಟ್ಟಿಲ್ಲ. ಆದರೆ ಎಲ್ಲರೂ ಕಾಮಕ್ಕಾಗಿಯೇ ಬದುಕುವವರಲ್ಲ. ಪ್ರತಿಯೊಬ್ಬರ ಬದುಕಿನಲ್ಲೂ ಕವಲು ದಾರಿಗಳು ಇದ್ದೇ ಇರುತ್ತವೆ.

₹240   ₹204

ಆ ವದನ ಇಬುಕ್ | Aa Vadana Ebook

ಈ ಭೂಮಿಯ ಮೇಲೆ ‘ಕಾಮ’ ಯಾರನ್ನೂ ಬಿಟ್ಟಿಲ್ಲ. ಆದರೆ ಎಲ್ಲರೂ ಕಾಮಕ್ಕಾಗಿಯೇ ಬದುಕುವವರಲ್ಲ. ಪ್ರತಿಯೊಬ್ಬರ ಬದುಕಿನಲ್ಲೂ ಕವಲು ದಾರಿಗಳು ಇದ್ದೇ ಇರುತ್ತವೆ.

₹240   ₹120

ಆಕಾಶ ಬುಟ್ಟಿ ಅಪ್ಪನ ನೆನಪಿನ ಕನವರಿಕೆ | Akasha Butti Appana nenapina kanavarike

ಆಕಾಶಬುಟ್ಟಿಯ ಲೇಖಕರಾದ ಪ್ರೊ. ನಟರಾಜ್ ಅರಳಸುರಳಿ, ತೀರ್ಥಹಳ್ಳಿ ತಾಲ್ಲೂಕಿನ ಪುಟ್ಟ ಗ್ರಾಮ ಅರಳಸುರಳಿಯ ನಿವಾಸಿ. ಮೂಲತಃ ವ್ಯಂಗ್ಯಚಿತ್ರಗಾರರಾಗಿರುವ ನಟರಾಜ್ ನಾಡಿನಾದ್ಯಂತ ವ್ಯಂಗ್ಯಚಿತ್ರಕಾರರಾಗಿ ಹೆಚ್ಚು ಜನ ಓದುಗರಿಗೆ ಪರಿಚಿತರಾದವರು. ಈವರೆಗೂ ಐದು ಸಾವಿರಕ್ಕೂ ಹೆಚ್ಚು ವ್ಯಂಗ್ಯಚಿತ್ರಗಳನ್ನು ರಚಿಸಿದ್ದಾರೆ. ಕನ್ನಡದ ಪ್ರಸಿದ್ದ ವಾರ, ಮಾಸ ಪತ್ರಿಕೆಗಳೆಲ್ಲೆಲ್ಲಾ ಇವರ ವ್ಯಂಗ್ಯಚಿತ್ರಗಳು ಪ್ರಕಟವಾಗಿವೆ. ತೀರ್ಥಹಳ್ಳಿಯ ಪ್ರಸಿದ್ದ ಶಿಕ್ಷಣ ಸಂಸ್ಥೆಯಾದ ತುಂಗಾ ಮಹಾವಿದ್ಯಾಲಯದಲ್ಲಿ ಸರಿ ಸುಮಾರು ಮುವತ್ತೈದು ವರ್ಷಗಳ ಕಾಲ ಇಂಗ್ಲಿಷ್ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಆಕಾಶಬುಟ್ಟಿ ನಟರಾಜ್ ಅರಳಸುರಳಿಯವರ ಚೊಚ್ಚಲ ಕೃತಿ.

₹220   ₹176

ಆರೋಹಣ | Arohana

ಕಾದಂಬರಿಯಲ್ಲಿ ಆದರ್ಶ ಶಿಕ್ಷಕನಾಗಿರುವ ತಂದೆಯ ಮೌಲ್ಯಗಳು ಒಂದೆಡೆಯಾದರೆ, ಅದೇ ದಾರಿಯಲ್ಲಿ ನಡೆದುಬಂದ ಮಗನ ವ್ಯಾಪಾರಿಕ ಆಲೋಚನೆಗಳು ಬೇರೆಯಾಗಿರುತ್ತವೆ. ಇಬ್ಬರು ಬದುಕಿನಲ್ಲಿ ಆರಿಸಿಕೊಂಡ ದಾರಿ ಒಂದೇಯಾದರೂ.. ನೋಡುವ ದೃಷ್ಟಿಕೋನಗಳು ಬೇರೆ ಬೇರೆ. ಇದು ಬರಿ ಅಪ್ಪ ಮಗನ ಕತೆ ಅಲ್ಲ, ಎರಡು ತಲೆಮಾರುಗಳ ನಡುವೆ ಬದಲಾದ ಮನಸ್ಥಿತಿಗಳ ಅಂತರದ ಕತೆ.

₹190   ₹162

ಆರೋಹಣ ಇಬುಕ್ | Arohana Ebook

ಕಾದಂಬರಿಯಲ್ಲಿ ಆದರ್ಶ ಶಿಕ್ಷಕನಾಗಿರುವ ತಂದೆಯ ಮೌಲ್ಯಗಳು ಒಂದೆಡೆಯಾದರೆ, ಅದೇ ದಾರಿಯಲ್ಲಿ ನಡೆದುಬಂದ ಮಗನ ವ್ಯಾಪಾರಿಕ ಆಲೋಚನೆಗಳು ಬೇರೆಯಾಗಿರುತ್ತವೆ

₹190   ₹95

ಆರ್ಟ್ ಆಫ್ ಸಕ್ಸಸ್ | Art Of Success

ಕನ್ನಡ ನಟ, ನಿರ್ದೇಶಕ ಇದೀಗ ತಮ್ಮದೊಂದು ಪುಸ್ತಕ ಪ್ರಕಟಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಆರ್ಟ್‌ ಆಫ್ ಸಕ್ಸಸ್ ಎಂಬುದು ಅವರ ಕೃತಿ. ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಲೇ ಬಂದ ನಟ ರಮೇಶ್ ಇಂಥದೊಂದು ಯಶಸ್ಸಿನ ಬಗ್ಗೆ ಹೇಳಲು, ಮಾರ್ಗದರ್ಶಿಯಾಗಲು ತುಂಬ ಅರ್ಹರು. ಅವರ ಈ ಕೃತಿ ಯಶಸ್ಸಿನ ಕಲೆಯ ಬಗ್ಗೆ ಹೇಳುತ್ತದೆ. ರಮೇಶ್ ಅವರದೇ ಆದ ಶೈಲಿಯೊಂದು ಈ ಕೃತಿಯ ಮುಖ್ಯ ಆಕರ್ಷಣೆ.

₹120   ₹102

ಇತ್ತ ಹಾಯಲಿ ಚಿತ್ತ | Itta Hayali Chitta

ಉತ್ತರ ಪರ್ವ”ದಲ್ಲಿ ಆಯ್ಕೆಯಾದ ಅನುವಾದಿತ ಕಥೆಗಳ ಈ ಸಂಕಲನ ಒಂದು ತಾಜಾ ಅನುಭೂತಿಯನ್ನು ಎದುರು ನೋಡುತ್ತಿರುವ ಅಕ್ಷರಮೋಹಿಗಳ ಜೋಳಿಗೆಗೆ ಮುಡಿಪಾಗಿಟ್ಟ ಹೋಳಿಗೆ.

₹110   ₹94

ಇತ್ತ ಹಾಯಲಿ ಚಿತ್ತ ಇಬುಕ್ | Itta Hayali Chitta Ebook

ಉತ್ತರ ಪರ್ವ”ದಲ್ಲಿ ಆಯ್ಕೆಯಾದ ಅನುವಾದಿತ ಕಥೆಗಳ ಈ ಸಂಕಲನ ಒಂದು ತಾಜಾ ಅನುಭೂತಿಯನ್ನು ಎದುರು ನೋಡುತ್ತಿರುವ ಅಕ್ಷರಮೋಹಿಗಳ ಜೋಳಿಗೆಗೆ ಮುಡಿಪಾಗಿಟ್ಟ ಹೋಳಿಗೆ.

₹110   ₹55

ಇರುಳ ಬಾಗಿಲಿಗೆ ಕಣ್ಣ ದೀಪ | Irula Bagilige Kanna Deepa

ಜೀವ ಕಾರುಣ್ಯದ ಕವಿತೆಗಳನ್ನು ಒಳಗೊಂಡ ಈ ಕೃತಿಯನ್ನು ಓದಲು ಹತ್ತು ಹಲವು ಕಾರಣಗಳಿವೆ. ಬಹುತ್ವದ ಆಶಯವನ್ನು ಕಟ್ಟಿಕೊಡುವ ಸಂಕಲನ ಸಮಕಾಲೀನ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ.

₹140   ₹119

ಇರುಳ ಬಾಗಿಲಿಗೆ ಕಣ್ಣ ದೀಪ ಇಬುಕ್ | Irula Bagilige Kanna Deepa Ebook

ಜೀವ ಕಾರುಣ್ಯದ ಕವಿತೆಗಳನ್ನು ಒಳಗೊಂಡ ಈ ಕೃತಿಯನ್ನು ಓದಲು ಹತ್ತು ಹಲವು ಕಾರಣಗಳಿವೆ. ಬಹುತ್ವದ ಆಶಯವನ್ನು ಕಟ್ಟಿಕೊಡುವ ಸಂಕಲನ ಸಮಕಾಲೀನ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ.

₹140   ₹70

ಇವರು ಅವರು ದೇವರು | Ivaru Avaru Devaru

ಕನ್ನಡದ ಜನಪ್ರಿಯ ಲೇಖಕರು, ಪತ್ರಕರ್ತರು ಆದ ಜೋಗಿ ಅವರ ‘ಇವರು ಅವರು ದೇವರು’ ಪುಸ್ತಕ ವ್ಯಕ್ತಿಚಿತ್ರಗಳನ್ನು ಕುರಿತ ಆಪ್ತ ಬರಹವಾಗಿದೆ.

₹200   ₹170

ಇವರು ಅವರು ದೇವರು ಇಬುಕ್ | Ivaru Avaru Devaru Ebook

ಕನ್ನಡದ ಜನಪ್ರಿಯ ಲೇಖಕರು, ಪತ್ರಕರ್ತರು ಆದ ಜೋಗಿ ಅವರ ‘ಇವರು ಅವರು ದೇವರು’ ಪುಸ್ತಕ ವ್ಯಕ್ತಿಚಿತ್ರಗಳನ್ನು ಕುರಿತ ಆಪ್ತ ಬರಹವಾಗಿದೆ. ಬದುಕಿನಲ್ಲಿ ಒಡನಾಡಿದ ಲೇಖಕರು, ಪತ್ರಕರ್ತರು, ಬಂಧುಗಳ ವ್ಯಕ್ತಿತ್ವವನ್ನು ತಮ್ಮ ಅನುಭವಕ್ಕೆ ದಕ್ಕಿಸಿಕೊಂಡು ನುಡಿಚಿತ್ರಗಳಾಗಿ ಜೋಗಿ ಅವರು ಕಟ್ಟಿಕೊಟ್ಟಿದ್ದಾರೆ. ಇವರ ಬರಹದಲ್ಲಿ ಭಾವುಕತೆ ಇದೆ, ಹಸನುಗೊಳಿಸುವ ಬದುಕಿದೆ, ಜೀವನದಲ್ಲಿ ಏನೇ ಬಂದರೂ ಜಯಿಸಿ ನಿಲ್ಲುವ ಆತ್ಮಸೈರ್ಯದ ಮಾರ್ಗದರ್ಶಿ ನೋಟವಿದೆ. ಈ ಪುಸ್ತಕ ಓದುತ್ತಾ ಹೋದರೆ ನಮ್ಮ ಬದುಕಿನಲ್ಲಿ ಬಂದ ಒಡನಾಡಿಗಳ ನೆನಪು ಮರುಕಳಿಸದೇ ಇರದು. ಹಾಗಾಗಿ ಓದಲು ನಿಮಗೆ ಇದೊಂದು ಉತ್ತಮ ಪುಸ್ತಕ.

₹200   ₹100

ಈ ಸಾವು ನ್ಯಾಯವೇ | E Saavu Nyayave

ಪ್ರತಿ ನಲ್ವತ್ತು ಸೆಕೆಂಡಿಗೆ ಜಗತ್ತಿನಲ್ಲಿ ಒಂದು ಆತ್ಮಹತ್ಯೆ. ಹದಿಹರೆಯದವರು ಹಾಗೂ ಯುವಜನತೆ ಸಾವಿಗೆ ಒಂದು ಪ್ರಮುಖ ಕಾರಣ ಆತ್ಮಹತ್ಯೆ. ಕುಟುಂಬ ಹಾಗೂ ಸಮಾಜದ ಮೇಲೆ ಆತ್ಮಹತ್ಯೆ ಬೀರುವ ಮಾನಸಿಕ, ಸಾಮಾಜಿಕ, ಆರ್ಥಿಕ ಪರಿಣಾಮ ಅನೂಹ್ಯ ಅಗಣಿತ. ಭಾರತದಲ್ಲಿ ವರ್ಷಂಪ್ರತಿ ಒಂದು ಲಕ್ಷಕ್ಕೂ ಮೀರಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಆತ್ಮಹತ್ಯೆ ಇಪ್ಪತ್ತು ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ. ಅಂದರೆ ಇಪ್ಪತ್ತು ಲಕ್ಷ ಮಂದಿ ಅಪರಾಧಿ ಪ್ರಜ್ಞೆ. ಪಾಪಪ್ರಜ್ಞೆಯಿಂದ ನರಳುತ್ತಾರೆ. ಪರೀಕ್ಷೆಯ ಒತ್ತಡ, ಪ್ರೇಮಭಂಗ, ಪಾಲಕರ ಮಿತಿಮೀರಿದ ಮಹತ್ವಾಕಾಂಕ್ಷೆ. ಅತಿಯಾದ ನಿರೀಕ್ಷೆಗಳು, ಅಸಾಮರ್ಥ್ಯ, ಅದಕ್ಷತೆ, ಒಂಟಿತನ, ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ತೀವ್ರವಾದ ಕೊರಗು, ಆರ್ಥಿಕ ಸಂಕಷ್ಟಗಳು, ತಿರಸ್ಕಾರ, ತಾತ್ಸಾರ, ಅಪಮಾನ ಮೊದಲಾದ ಕಾರಣಗಳಿಂದ ಆತ್ಮಹತ್ಯೆಗಳಾಗುತ್ತಿವೆ. ಮಹಡಿ ಏರಿ ಹಾರುವುದು, ಅಣೆಕಟ್ಟೆಯಿಂದ ಧುಮುಕುವುದು. ರೈಲಿಗೆ ತಲೆ ಕೊಡುವುದು ಯಾವ ಸಮಸ್ಯೆಗೂ ಪರಿಹಾರವಲ್ಲ. ಸತ್ತ ಮಾತ್ರಕ್ಕೆ ಸಮಸ್ಯೆಗಳು ಮುಗಿಯುವುದಿಲ್ಲ. ತಾಳ್ಮೆಯಿಂದ ಯೋಚಿಸಿದರೆ. ಸುತ್ತಲೂ ನೋಡಿದರೆ ಸಹಾಯಹಸ್ತ ಗೋಚರಿಸುತ್ತದೆ. ಕಣ್ಣೀರು ಒರೆಸುವ ಬೆರಳು ಕಾಣುತ್ತದೆ. ಸಾಂತ್ವನದ ಕೊರಳು ಕೇಳುತ್ತದೆ. ಸಹಾಯ ಬಯಸಿ, ಸಹಾಯ ಮಾಡಿ ಮುಂದಾಗುವ ಅನಾಹುತ ತಪ್ಪಿಸಿ: ಜೀವ ಉಳಿಸಿ ಎಂಬುದೇ ಈ ಕೃತಿಯ ಸಾರ. ನಾಡಿನ ಖ್ಯಾತ ಮನೋವಿಜ್ಞಾನ ಹಾಗೂ ಶಿಕ್ಷಣ ಲೇಖಕ ಡಾ. ಮಹಾಬಲೇಶ್ವರ ರಾವ್ ಈ ಕೃತಿಯ ಕರ್ತೃ.

₹130   ₹111

ಈ ಸಾವು ನ್ಯಾಯವೇ ಇಬುಕ್ | E Saavu nyayave Ebook

ಪ್ರತಿ ನಲ್ವತ್ತು ಸೆಕೆಂಡಿಗೆ ಜಗತ್ತಿನಲ್ಲಿ ಒಂದು ಆತ್ಮಹತ್ಯೆ. ಹದಿಹರೆಯದವರು ಹಾಗೂ ಯುವಜನತೆ ಸಾವಿಗೆ ಒಂದು ಪ್ರಮುಖ ಕಾರಣ ಆತ್ಮಹತ್ಯೆ. ಕುಟುಂಬ ಹಾಗೂ ಸಮಾಜದ ಮೇಲೆ ಆತ್ಮಹತ್ಯೆ ಬೀರುವ ಮಾನಸಿಕ, ಸಾಮಾಜಿಕ, ಆರ್ಥಿಕ ಪರಿಣಾಮ ಅನೂಹ್ಯ ಅಗಣಿತ. ಭಾರತದಲ್ಲಿ ವರ್ಷಂಪ್ರತಿ ಒಂದು ಲಕ್ಷಕ್ಕೂ ಮೀರಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಆತ್ಮಹತ್ಯೆ ಇಪ್ಪತ್ತು ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ. ಅಂದರೆ ಇಪ್ಪತ್ತು ಲಕ್ಷ ಮಂದಿ ಅಪರಾಧಿ ಪ್ರಜ್ಞೆ. ಪಾಪಪ್ರಜ್ಞೆಯಿಂದ ನರಳುತ್ತಾರೆ. ಪರೀಕ್ಷೆಯ ಒತ್ತಡ, ಪ್ರೇಮಭಂಗ, ಪಾಲಕರ ಮಿತಿಮೀರಿದ ಮಹತ್ವಾಕಾಂಕ್ಷೆ. ಅತಿಯಾದ ನಿರೀಕ್ಷೆಗಳು, ಅಸಾಮರ್ಥ್ಯ, ಅದಕ್ಷತೆ, ಒಂಟಿತನ, ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ತೀವ್ರವಾದ ಕೊರಗು, ಆರ್ಥಿಕ ಸಂಕಷ್ಟಗಳು, ತಿರಸ್ಕಾರ, ತಾತ್ಸಾರ, ಅಪಮಾನ ಮೊದಲಾದ ಕಾರಣಗಳಿಂದ ಆತ್ಮಹತ್ಯೆಗಳಾಗುತ್ತಿವೆ. ಮಹಡಿ ಏರಿ ಹಾರುವುದು, ಅಣೆಕಟ್ಟೆಯಿಂದ ಧುಮುಕುವುದು. ರೈಲಿಗೆ ತಲೆ ಕೊಡುವುದು ಯಾವ ಸಮಸ್ಯೆಗೂ ಪರಿಹಾರವಲ್ಲ. ಸತ್ತ ಮಾತ್ರಕ್ಕೆ ಸಮಸ್ಯೆಗಳು ಮುಗಿಯುವುದಿಲ್ಲ. ತಾಳ್ಮೆಯಿಂದ ಯೋಚಿಸಿದರೆ. ಸುತ್ತಲೂ ನೋಡಿದರೆ ಸಹಾಯಹಸ್ತ ಗೋಚರಿಸುತ್ತದೆ. ಕಣ್ಣೀರು ಒರೆಸುವ ಬೆರಳು ಕಾಣುತ್ತದೆ. ಸಾಂತ್ವನದ ಕೊರಳು ಕೇಳುತ್ತದೆ. ಸಹಾಯ ಬಯಸಿ, ಸಹಾಯ ಮಾಡಿ ಮುಂದಾಗುವ ಅನಾಹುತ ತಪ್ಪಿಸಿ: ಜೀವ ಉಳಿಸಿ ಎಂಬುದೇ ಈ ಕೃತಿಯ ಸಾರ. ನಾಡಿನ ಖ್ಯಾತ ಮನೋವಿಜ್ಞಾನ ಹಾಗೂ ಶಿಕ್ಷಣ ಲೇಖಕ ಡಾ. ಮಹಾಬಲೇಶ್ವರ ರಾವ್ ಈ ಕೃತಿಯ ಕರ್ತೃ.

₹130   ₹65

ಈಗಲ್ಸ್ ಲೈನ್ | Eagles Line

ಈ ಕೃತಿಯ ಹಲವು ಅಧ್ಯಾಯಗಳಲ್ಲಿ ಒಂದೊಂದು ಕಥೆಗೆ ವಸ್ತುವಾಗುವಂಥ ಬೆರಗಿನ ವಿವರಗಳಿವೆ. ಸ್ವಾರಸ್ಯಕರ ಮಾಹಿತಿಗಳಿವೆ. ಹಾಗಂತ ಇದು ಅಜ್ಜಿಕಥೆಯಲ್ಲ. ಕುತೂಹಲ, ಪದೇಪದೇ ಕೈಜಗ್ಗುತ್ತದೆ; ಆದರೆ ಇದು ಸಸ್ಪೆನ್ಸ್ ಥಿಲ್ಲರ್ ಅಲ್ಲ. ಕಾಡಿನ ಹತ್ತಾರು ಜೀವಿಗಳ ಬದುಕಿನ ವಿವರವಿದ್ದರೂ ಇದು ಪರಿಸರದ ಕಥೆಯಷ್ಟೇ ಅಲ್ಲ. ಹಲವು ನಂಬಿಕೆ, ಆಚರಣೆಗಳ ಮೆರವಣಿಗೆಯಿದೆ. ಆದರೆ ಇದು ಕಾಡಂಚಿನ/ ಮಲೆನಾಡಿನ ಹಳ್ಳಿಯೊಂದರ ಕಥೆಯಷ್ಟೇ ಆಗಿ ಉಳಿಯುವುದಿಲ್ಲ. ಬದಲಿಗೆ, ಈ ಎಲ್ಲಾ ಅಂಶಗಳನ್ನೂ ಇಷ್ಟಿಷ್ಟೇ ಸೇರಿಸಿ ಹೆಣಿಗೆ ಹಾಕಿದ ಕಾದಂಬರಿ ಎಂಬ ಕುಲಾವಿ

₹220   ₹187

ಉಪರಿ | Upari

ಹಗ್ಗದ ಮೇಲೆ ನಡೆಯುವಂತಹ ಏಕಾಗ್ರತೆಯಿಂದ ಗಮ್ಯದತ್ತ ಸಾಗುವ ಇಲ್ಲಿನ ಕಥೆಗಳಲ್ಲಿ ನಗರ ಜೀವನದ ಸಂಕೀರ್ಣತೆಯೂ ಇದೆ: ಹಳ್ಳಿಗಳ ಮುಗ್ಧ ಬದುಕಿನ ಸರಳತೆಯೂ ಇದೆ. ಅಜಿತ್ ಆರಿಸಿಕೊಂಡಿರುವ ಕಥಾವಸ್ತುಗಳು ಯಾವುದೇ ಒಂದು ಪ್ರದೇಶಕ್ಕೆ, ವರ್ಗಕ್ಕೆ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರನ್ನೂ ಒಳಗಿಳಿಸಿಕೊಂಡು ಪಾತ್ರಗಳೊಂದಿಗೆ ಬೆಸೆಯುತ್ತವೆ.

₹120   ₹102

ಉಪರಿ ಇಬುಕ್ | Upari Ebook

ಹಗ್ಗದ ಮೇಲೆ ನಡೆಯುವಂತಹ ಏಕಾಗ್ರತೆಯಿಂದ ಗಮ್ಯದತ್ತ ಸಾಗುವ ಇಲ್ಲಿನ ಕಥೆಗಳಲ್ಲಿ ನಗರ ಜೀವನದ ಸಂಕೀರ್ಣತೆಯೂ ಇದೆ: ಹಳ್ಳಿಗಳ ಮುಗ್ಧ ಬದುಕಿನ ಸರಳತೆಯೂ ಇದೆ. ಅಜಿತ್ ಆರಿಸಿಕೊಂಡಿರುವ ಕಥಾವಸ್ತುಗಳು ಯಾವುದೇ ಒಂದು ಪ್ರದೇಶಕ್ಕೆ, ವರ್ಗಕ್ಕೆ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರನ್ನೂ ಒಳಗಿಳಿಸಿಕೊಂಡು ಪಾತ್ರಗಳೊಂದಿಗೆ ಬೆಸೆಯುತ್ತವೆ.

₹120   ₹60

ಎಲ್ಲೆಲ್ಲು ಸಂಗೀತವೇ ಇಬುಕ್ | YELLELLU SANGEETHAVE Ebook

ವಿಜಯಭಾಸ್ಕ‌ರ್ ಸಂಗೀತ ನಿರ್ದೇಶನಕ್ಕೇ ಘನತೆ, ಗೌರವಗಳನ್ನು ತಂದವರು. ನಾನು ಅವರು ಚಿತ್ರರಂಗ ಪ್ರವೇಶಿಸಿದ ದಿನಗಳಿಂದಲೂ ಅವರ ಕಾರ್ಯ ವೈಖರಿಯನ್ನು ನೋಡುತ್ತಾ ಬಂದಿದ್ದೇನೆ, ಅವರು ಕೆಲಸವನ್ನು ಅರಸುತ್ತಿರುವ ಸಂದರ್ಭದಲ್ಲಿಯೂ ನೋಡಿದ್ದೇನೆ, ಕೈತುಂಬಾ ಕೆಲಸ ಇದ್ದ ಕಾಲದಲ್ಲಿಯೂ ನೋಡಿದ್ದೇನೆ. ಸ್ಥಿತಪ್ರಜ್ಞ ಸಾಧಕರು, ಚಿತ್ರಕ್ಕೆ ಏನು ಬೇಕು ಎನ್ನುವುದರ ಕಡೆಗೆ ಸದಾ ಅವರ ಚಿತ್ತ ಇರುತ್ತಿತ್ತು. ಸಂಗೀತವನ್ನು ಎಷ್ಟು ಆಳವಾಗಿ ಬಲ್ಲರೋ, ಸಾಹಿತ್ಯವನ್ನೂ ಕೂಡ ಅಷ್ಟೇ ಆಳವಾಗಿ ತಿಳಿದವರು. ಚಿತ್ರದ ಅಗತ್ಯವನ್ನು ಅರಿತು ಸಂಗೀತವನ್ನು ನೀಡುತ್ತಿದ್ದರು. ಹಾಡನ್ನು ರಂಜಕೀಯವಾಗಿಸುವುದು ಎಂದಿಗೂ ಅವರ ಉದ್ದೇಶವಾಗಿರಲಿಲ್ಲ. ಅದು ಕಥೆಯ ಹಂದರದಲ್ಲಿ ಸೇರಬೇಕು, ಪಾತ್ರದ ಅಭಿವ್ಯಕ್ತಿಯಾಗಬೇಕು, ಜನರ ಮನದಲ್ಲಿ ಉಳಿದುಕೊಳ್ಳಬೇಕು ಎನ್ನುವುದನ್ನು ಸದಾ ಚಿಂತಿಸುತ್ತಿದ್ದರು, ಹೀಗಾಗಿ ಅವರು ಸೃಷ್ಟಿಸಿದ ಗೀತೆಗಳು ಇಂದಿಗೂ ಅಮರವಾಗಿ ಉಳಿದಿವೆ. ವಿಜಯಭಾಸ್ಕ‌ರ್ ಕನ್ನಡಕ್ಕೆ ಟೈಟಲ್ ಕಾರ್ಡ್ ತೋರಿಸುವಲ್ಲಿ ಹೊಸತನ ತಂದರು, ಥೀಂ ಮ್ಯೂಸಿಕ್ ತಂದರು, ಶಾಟ್ ಡಿವಿಷನ್ಗಳನ್ನು ತಂದರು, ಹೊಸ ವಾದ್ಯಗಳನ್ನು ಬಳಸಿದರು, ಬಹಳ ಮುಖ್ಯವಾಗಿ ಕನ್ನಡದ ಗಾಯಕರನ್ನು ಹುಡುಕಿ ಅವರ ಬಳಿ ಹಾಡಿಸಿದರು. ವಿಜಯಭಾಸ್ಕ‌ರ್ ಇದ್ದಲ್ಲಿ ಹೊಸತನ ಮತ್ತು ಪ್ರಯೋಗಶೀಲತೆ ಇದ್ದೇ ಇರುತ್ತಿತ್ತು. ಹೀಗಾಗಿ ಅವರು ವ್ಯಾಪಾರಿ ಚಿತ್ರಗಳಂತೆ ಕಲಾತ್ಮಕ ಚಿತ್ರಗಳಿಗೂ ವರದಾನವಾದರು. ವಿಜಯಭಾಸ್ಕ‌ರ್ ಗೀತ ರಚನೆಕಾರರ, ಸಂಗೀತ ನಿರ್ದೇಶಕರ ಹಕ್ಕುಗಳಿಗೆ ಹೋರಾಡಿದರು, ಈ ಹೋರಾಟದಲ್ಲಿ ಅವರ ತತ್ಪರತೆಯನ್ನು ನಾನು ಹತ್ತಿರದಿಂದ ಕಂಡಿದ್ದೇನೆ, 'ಸಿನಿ ಮ್ಯೂಸಿಷಿಯನ್ಸ್ ಅಸೋಸಿಯೇಷನ್' ಅಧ್ಯಕ್ಷರಾಗಿ ಅವರು ವಾದ್ಯಗಾರರ ಅಭ್ಯುದಯಕ್ಕೆ ಶ್ರಮಿಸಿದರು. ವಿಜಯಭಾಸ್ಕರ್ ನಿಜವಾದ ಅರ್ಥದಲ್ಲಿ ಶಕಪುರುಷರು.

₹195   ₹98