
ಅಂಬೇಡ್ಕರ್ ಹೆಸರಿನ ಬದಲು ದೈವದ ಸ್ಮರಣೆ ಮಾಡಿದರೆ ಸೌಭಾಗ್ಯ ಕೂಡಿಬರಲಾರದು. ಕಾಣದ ದೈವಕ್ಕಿಂತ ಕೈಹಿಡಿದು ನಡೆಸುವ ಧೀಮಂತ ನಾಯಕ ಮತ್ತು ಆದರ್ಶ ಮೌಲ್ಯಗಳ ಸಾಕಾರಮೂರ್ತಿ ಬಾಬಾ ಸಾಹೇಬರು. ಅವರನ್ನು ಪರಿಚಯಿಸುವ ಗ್ರಂಥಗಳ ಮಹಾಪೂರಕ್ಕೆ ಈಗಾಗಲೇ ಸಾರವತ್ತಾಗಿ ನೆಲ್ಸನ್ ಮಂಡೇಲಾ ಜೀವನ ಚರಿತ್ರೆಯನ್ನು ನೀಡಿರುವ ಡಾ. ಎಂ. ವೆಂಕಟಸ್ವಾಮಿಯವರ ನೂತನ ಮೌಲಿಕ ಕೃತಿಯ ಸೇರ್ಪಡೆಯಾಗುತ್ತಿದೆ. ನಮ್ಮ ಸಾಂಸ್ಕೃತಿಕ - ಆರ್ಥಿಕ - ಸಾಮಾಜಿಕ ಸವಾಲುಗಳನ್ನೆದುರಿಸಲು ಡಾ. ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟಗಳನ್ನು ವಿಹಂಗಮ ಶೈಲಿಯಲ್ಲಿ ಪ್ರಸ್ತುತ ಕೃತಿಯು ಕಟ್ಟಿಕೊಡುತ್ತದೆ. ಬಾಬಾ ಸಾಹೇಬರ ಜೀವನ, ಹೋರಾಟ, ವಿದ್ವತ್ತು, ಕಳಕಳಿ ಮುಂತಾದವು ನಮಗಿಂದು ದಾರಿದೀಪ. ಸನಾತನವೆಂಬ ಹೊರೆಗೆ ಪರ್ಯಾಯಗಳಲ್ಲಿ ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟ ಅನನ್ಯವಾದುವು. ಡಾ. ಜಿ. ರಾಮಕೃಷ್ಣ
Category: | ಕನ್ನಡ |
Sub Category: | ಆತ್ಮಕಥೆ ಜೀವನ ಚರಿತ್ರೆ |
Author: | ವೆಂಕಟಸ್ವಾಮಿ ಎಂ | Venkataswamy M |
Publisher: | Navakarnataka Publications Pvt Ltd |
Language: | Kannada |
Number of pages : | 288 |
Publication Year: | 2025 |
Weight | 400 |
ISBN | 9788198356757 |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ವೆಂಕಟಸ್ವಾಮಿ ಎಂ | Venkataswamy M |
0 average based on 0 reviews.