ನಾವು ಬದುಕನ್ನು ನೋಡುವ ರೀತಿ ಬದಲಿಸಿಕೊಂಡರೆ ಸಾಕು, ನಮಗೆ ಬಹಳಷ್ಟು ವಿಷಯಗಳು ಸಹ್ಯವಾಗುತ್ತವೆ. ಮನಸ್ಸಿನಲ್ಲಿದ್ದ ದುಃಖ, ದುಮ್ಮಾನಗಳು ಮರೆಯಾಗುತ್ತವೆ. ನಾನು ಬದುಕಿನಲ್ಲಿ ಎಂದಿಗೂ ಪರ್ಫೆಕ್ಷನ್ ಹುಡುಕಿದವನಲ್ಲ. ಏಕೆಂದರೆ ಇದು ಪರ್ಫೆಕ್ಟ್ ಎಂದು ಸರ್ಟಿಫಿಕೇಟ್ ಕೊಡುವವರು ಯಾರು? ಅದೇ ಪರ್ಫೆಕ್ಟ್ ಎನ್ನುವುದಕ್ಕೆ ಪುರಾವೆಯಾದರೂ ಏನಿದೆ? ಅಲ್ಲದೆ ಈ ಪರ್ಫೆಕ್ಟ್ ಎನ್ನುವುದು ಟೈಮ್ ಸೆನ್ಸಿಟಿವ್ ವಿಷಯ. ಇಂದು, ಈಗ ಪರ್ಫೆಕ್ಟ್ ಎನ್ನಿಸಿದ್ದು ಮರುಘಳಿಗೆ ಬದಲಾಗಿರಬಹುದಲ್ವಾ? ಸೃಷ್ಟಿಯಲ್ಲಿ ಯಾವುದೂ ಪೂರ್ಣವೂ ಅಲ್ಲ, ಯಾವುದೂ ಅಪೂರ್ಣವೂ ಅಲ್ಲ. ಪೂರ್ಣದ ತೃಣ ಅಪೂರ್ಣ, ಆದರೂ ತನ್ನ ಪರಿಧಿಯಲ್ಲಿ ಪೂರ್ಣ ಕೂಡ ಹೌದಲ್ಲ! ಸೃಷ್ಟಿಯಲ್ಲಿ “imperfect, impermanent and incomplete” ಅಷ್ಟೆ ಸತ್ಯ. ಹೀಗೆ ಪ್ರಕೃತಿಯಲ್ಲಿ ಇದ್ದದ್ದು ಇದ್ದಹಾಗೆ ನೋಡುವ ಪರಿಪಾಠಕ್ಕೆ ಜಪಾನೀಯರು `ವಾಬಿ ಸಬಿ' ಎನ್ನುತ್ತಾರೆ. ಜಪಾನ್ ಪ್ರವಾಸ ನನ್ನ ಹಲವಾರು ನಂಬಿಕೆಗಳಿಗೆ ನೀರೆರೆದಿದೆ. ಬದುಕೆಂದರೆ ಅದೊಂದು Endless Discovery!
ಪಿಂಚ್ ಆಫ್ ಪ್ರಪಂಚ
ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ. ’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.
ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ.’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.
ಆಸ್ಕರ್ ಟಿವಿಯಲ್ಲಿ 1992ರ ಬಾರ್ಸಿಲೋನಾ ಒಲಂಪಿಕ್ಸ್ ಹೈಲೈಟ್ಸ್ ಹಲ್ಲು ಕಿಸಿದು ಕೊಂಡು ನೋಡಿದ ನೆನಪು ಅಚ್ಚಳಿಯದೆ ಮಸ್ತಕದಲ್ಲಿ ಅಚ್ಚಾಗಿದೆ.
ಆಸ್ಕರ್ ಟಿವಿಯಲ್ಲಿ 1992ರ ಬಾರ್ಸಿಲೋನಾ ಒಲಂಪಿಕ್ಸ್ ಹೈಲೈಟ್ಸ್ ಹಲ್ಲು ಕಿಸಿದು ಕೊಂಡು ನೋಡಿದ ನೆನಪು ಅಚ್ಚಳಿಯದೆ ಮಸ್ತಕದಲ್ಲಿ ಅಚ್ಚಾಗಿದೆ. ಅವತ್ತಿಗೆ ಯಾರಾದರೂ ಇನ್ನೊಂದು ಹತ್ತು ವರ್ಷದಲ್ಲಿ ಈ ಒಲಂಪಿಕ್ ಆಟಗಾರರಿಗೆ ಎಂದು ಕಟ್ಟಿರುವ ಸುಸಜ್ಜಿತ ಮನೆಯೊಂದರ ಒಡೆಯ ನೀನಾಗುತ್ತೀಯ ಎಂದಿದ್ದರೆ ಹುಚ್ಚಾಪಟ್ಟೆ ನಕ್ಕು, ಹಂಗಿಸುವುದಕ್ಕೂ ಒಂದು ಮಿತಿ ಇರುತ್ತೆ ಗೆಳೆಯ ಎಂದು ಹೇಳಿ ಕಳಿಸುತ್ತಿದ್ದೆ. ಆದರೆ ದೈವೇಚ್ಛೆ ಬೇರೆಯಿತ್ತು, ಬಾರ್ಸಿಲೋನಾದಲ್ಲಿ ಒಂದಕ್ಕಿಂತ ಹೆಚ್ಚು ಮನೆಕೊಳ್ಳುವಂತಾಯ್ತು. 17 ವರ್ಷ ಬಾರ್ಸಿಲೋನಾ ನೆಲೆಯಾಯ್ತು, ಭಾಷೆ, ಬದುಕುವ ರೀತಿ, ಈ ಅಗಾಧ ಪ್ರಪಂಚದಲ್ಲಿ ನಾವೇನೂ ಅಲ್ಲ ಎನ್ನುವುದನ್ನ ಕಲಿಸಿತು.ಸಹಜೀವಿಗಳ ಬಗ್ಗೆ ಪ್ರೀತಿ, ಮಮಕಾರ ಕೂಡ ಕಲಿಸಿದ್ದು ಬಾರ್ಸಿಲೋನಾ. ಈ ಪುಸ್ತಕದಲ್ಲಿ, ಬಾರ್ಸಿಲೋನಾ ನನಗೆ ಉಣಬಡಿಸಿದ ಅನುಭವಗಳ ಕಥೆಯನ್ನ ಕಟ್ಟಿಕೊಟ್ಟಿದ್ದೇನೆ.
ಅಸಾಮಾನ್ಯರು ಎನ್ನಿಸಿಕೊಳ್ಳುವುದಕ್ಕೆ ಮುಂಚೆ ಎಲ್ಲರೂ ಸಾಮಾನ್ಯರೆ! ಹೌದಲ್ವಾ? ನೀವೇ ಯೋಚಿಸಿ ನೋಡಿ, ಅವರಿಗೂ ಅಡೆತಡೆಗಳು ಎಲ್ಲರಿಗೂ ಬಂದಂತೆ ಬಂದಿರುತ್ತವೆ. ಅವರು ಅಡೆತಡೆಗಳ ಬಗ್ಗೆ ಗೊಣಗುತ್ತ ಕೂರುವ ಬದಲು ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆದಿರುತ್ತಾರೆ. ಈ ಧೀಮಂತ ಗುಣವೇ ಅವರನ್ನು ಗುಂಪಿನಿಂದ ಬೇರ್ಪಡಿಸುತ್ತದೆ. ವಿಶೇಷರನ್ನಾಗಿಸುತ್ತದೆ. ಲಕ್ಷಾಧಿಪತಿಯ ಗುಣಲಕ್ಷಣಗಳನ್ನು ನಾವು ಅಳವಡಿಸಿಕೊಳ್ಳಬಹುದೇ? ಅಥವಾ ಅವು ಅನುವಂಶಿಕವಾಗಿ ಬರುವಂತಹ ಗುಣಗಳೆ? ಎನ್ನುವ ಪ್ರಶ್ನೆ ಸಹಜವಾಗಿ ಉದ್ಭವವಾಗುತ್ತದೆ. ಕೆಲವೊಂದು ಹುಟ್ಟಿನಿಂದ ಬಂದಿರುತ್ತದೆ ಎನ್ನುವುದು ನಿಜವಾದರೂ, ಬಹುತೇಕ ಗುಣಗಳನ್ನು ಕಲಿಕೆಯಿಂದ, ಸ್ವ-ಪ್ರಯತ್ನದಿಂದ ಅಳವಡಿಸಿಕೊಳ್ಳಬಹುದು. ಜಗತ್ತಿನ ಮುಕ್ಕಾಲು ಪಾಲು ಶೀಮಂತರು ಸೆಲ್ಫ್ ಮೇಡ್. ಅವರಿಗೂ ಯಾವ ಗಾಡ್ಫಾದರ್ ಇರಲಿಲ್ಲ ಎನ್ನುವುದು ಗೊತ್ತಿರಲಿ. ನಿಮಗೆಲ್ಲಾ ಒಂದು ಅಚ್ಚರಿಯ ವಿಷಯವನ್ನು ಹೇಳುವೆ. ಅಚಾನಕ್ಕಾಗಿ ಅಂದರೆ ಲಾಟರಿ ಮೂಲಕ ಹಣ ಗಳಿಸಿದವರಲ್ಲಿ 70ಕ್ಕೂ ಹೆಚ್ಚು ಪ್ರತಿಶತ ಜನ ಒಂದೆರಡು ವರ್ಷಗಳಲ್ಲಿ ದಿವಾಳಿ ಎದ್ದು ಹೋಗುತ್ತಾರೆ ಎನ್ನುತ್ತದೆ ಸಂಶೋಧನೆ. ಅಮೆರಿಕನ್ ಬಾಂಕ್ರಾಫ್ಟ್ಸಿ ಇನ್ಸ್ಟಿಟ್ಯೂಟ್ ನಡೆಸಿದ ಸಂಶೋಧನೆಯಲ್ಲಿ ಲಾಟರಿ ಗೆದ್ದವರಲ್ಲಿ ಮೆಜಾರಿಟಿ 2ರಿಂದ 5 ವರ್ಷಗಳಲ್ಲಿ ದಿವಾಳಿ ಘೋಷಿಸಿಕೊಳ್ಳುತ್ತಾರೆ ಎನ್ನುವುದು ತಿಳಿದು ಬಂದಿದೆ. ಇದರರ್ಥ ಸುಲಭವಾಗಿ ಬಂದದ್ದು ಸುಲಭವಾಗಿ ಹೋಗುತ್ತದೆ. ನಮಗ್ಯಾವುದೂ ಪುಕ್ಕಟೆ ಬೇಡ. ಸುಲಭವಾಗುವುದೂ ಬೇಡ. ಕ್ಷಮತೆ ಹೆಚ್ಚಿಸಿಕೊಳ್ಳೋಣ, ಇಲ್ಲಿನ ಗುಣಗಳನ್ನು ಅಳವಡಿಸಿಕೊಳ್ಳೋಣ. ಅವು ನಿಜಕ್ಕೂ ನಮ್ಮೊಂದಿಗೆ ಕೊನೆಯವರೆಗೂ ಬರುತ್ತವೆ.
ತುಮಕೂರು ಜಿಲ್ಲೆಯ ಸಿರಾದಲ್ಲಿ ೧೮.೦೫.೧೯೭೫ ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. ೨೩ ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. Read More...