nil
ದೇಶ ವಿಭಜನೆಯನ್ನು ಕುರಿತು ಈಗಾಗಲೇ ಲೆಕ್ಕವಿಲ್ಲದಷ್ಟು ಪುಸ್ತಕಗಳು ಬಂದಿವೆ. ಹಾಗೆ ನೋಡಿದರೆ ಇದೊಂದು ಮುಗಿಯದ ಸರಕು.ಕಾಲದಿಂದ ಕಾಲಕ್ಕೆ ಈ ದುರಂತವು ಬೇರೆ ಬೇರೆ ಮಾಹಿತಿ, ಅಂಕಿ-ಅಂಶ,ಸಂಶೋಧನೆ, ಚರಿತ್ರೆಯ ಅಧ್ಯಯನಗಳೊಂದಿಗೆ ಹೊಸ ಹೊಸ ಕೃತಿಗಳನ್ನು ಸೃಷ್ಟಿಸುತ್ತಿದೆ. ಅಂದಂತೆ,ಭಾರತದಲ್ಲಿ ಸಮಾಜವಾದದ ಯುಗದಲ್ಲಿ ಒಬ್ಬರಾದ ರಾಮ ಮನೋಹರ ಲೋಹಿಯಾ ಅವರು, ಅಖಂಡ ಭಾರತದ ಇಬ್ಭಾಗಕ್ಕೆ ನೇರ ಸಾಕ್ಷಿಯಾಗಿದ್ದವರು. ನೇರ ನಡೆ-ನುಡಿಗಳಿಗೆ ಮತ್ತು ನಿಲುವುಗಳಿಗೆ ಹೆಸರಾಗಿದ್ದ ಅವರು, ಭಾರತದ ಚಿಂತಕರ ವರ್ತುಲ ಮತ್ತು ಸಾರ್ವಜನಿಕ ಬದುಕಿನ ಮೇಲೆ ಬೀರಿರುವ ಪ್ರಭಾವ ಅಗಾಧವಾದುದು.ಅದರಲ್ಲೂ ಲೋಹಿಯಾ ಅವರು ದೇಶ ವಿಭಜನೆಗೆ ಕಾರಣರಾದವರು ಯಾರೆಂದು ಬಗೆದು ನೋಡಿ ಬರೆದಿರುವ The Guilty Men of India's Partition ಅತ್ಯಂತ ಮಹತ್ವದ ಕೃತಿಯಾಗಿದೆ.ಇದನ್ನು ಹೆಸರಾಂತ ಲೇಖಕ ಡಾ.ಟಿ ಎನ್ ವಾಸುದೇವಮೂರ್ತಿ ಅವರು "ದೇಶ ವಿಭಜನೆಯ ಪಾಪ ಹೊತ್ತವರು" ಎನ್ನುವ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿ ಕೊಟ್ಟಿದ್ದಾರೆ. ಇದಕ್ಕಾಗಿ ನಾವು ಅವರಿಗೆ ಆಭಾರಿಗಳಾಗಿದ್ದೇವೆ ದೊಡ್ಡದೊಡ್ಡ ಪದಗಳ ಬಾರವಿಲ್ಲದೆ ಸಹಜವಾದ ತಿಳಿಗನ್ನಡದಲ್ಲಿ ಮೂಡಿಬಂದಿರುವ ಈ ಭಾಷಾಂತರವು ಕನ್ನಡ ವಾಙ್ಮಯಕೊಂದು ಬೆಲೆಯುಳ್ಳ ಸೇರ್ಪಡೆಯಾಗಿದೆ
#