ಇತ್ತೀಚೆಗೆ ಬರೆಯುತ್ತಿರುವ ಕತೆಗಾರರಲ್ಲಿ ನೀವು ಹೆಚ್ಚು ಇಷ್ಟವಾಗುತ್ತೀರಿ. ಮನುಷ್ಯರ ಮನಸ್ಸಿನೊಳಗೆ ನೀವು ಪ್ರವೇಶಿಸುತ್ತಿರುವ ರೀತಿ ನನಗೆ ಆಶ್ಚರ್ಯವನ್ನು ತಂದಿದೆ... ಮನುಷ್ಯನಿಗೆ ಅಂಥಾ ಹೇಳಿಕೊಳ್ಳುವಂತಹಾ ಗುರಿ-ಉದ್ದೇಶಗಳಿರುವುದಿಲ್ಲ. ಆತ ಭಾವ ಜೀವಿಯಾಗಿರುತ್ತಾನೆ. ಭ್ರಮಾಜೀವಿಯಾಗಿರುತ್ತಾನೆ. ಮನುಷ್ಯ ಜಗತ್ತು ಇವುಗಳಿಂದಲೇ ನಿರ್ಮಾಣವಾಗಿದೆ. ಆಗುತ್ತಲೂ ಇರುತ್ತದೆ. ನಿಮ್ಮ 'ನಿರ್ಗಮನ', 'ಒಂದುಹನಿ ಪ್ರೀತಿಗಾಗಿ', 'ಆ ಇನ್ನರ್ಧ', 'ನಾನು ನಾನಲ್ಲ', 'ಕಾಲ', 'ಚಿಟ್ಟೆ' ಹೀಗೆ ಹೆಚ್ಚು ಕಡಿಮೆ ಎಲ್ಲಾ ಕತೆಗಳೂ ನನಗೆ ಬಹಳ ಇಷ್ಟವಾದವು. ಮೇಲಿನ ಕತೆಗಳನ್ನು ಎರಡೆರಡು ಬಾರಿ ಓದಿದೆ. "ಹಾರಲು ಮರೆತ ಚಿಟ್ಟೆಗಳಂತೆ ಹೂವುಗಳು ಬಿದ್ದಿದ್ದವು' ಎಂಬ ವಾಕ್ಯ ಮತ್ತೆ ಮತ್ತೆ ನೆನಪಾಗುತ್ತಿರುತ್ತದೆ.
#