• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಆಟೋ ಚಾಲಕನ ಕಥೆ ವ್ಯಥೆ | Auto Chaalakana Kathe Vyathe

ಕಥೆಗಳು ನಮ್ಮ ಅಂಗಳದಲ್ಲಿಯೇ ಇರುತ್ತದೆ. ಅದನ್ನು ಕೇಳುವ ಕಿವಿಗಳು, ನೋಡುವ ಕಣ್ಣುಗಳು ಕಥೆಗಾರನದಾಗಿರಬೇಕು. ಅಂದರೆ ಕಥೆಗಳು ಜನರ ನಡುವೆಯೇ ಹುಟ್ಟಬೇಕು. ಆಗಲೇ ಅದು ಓದುಗರ ಮನಸ್ಸು ತಟ್ಟಲು ಸಾಧ್ಯ. ಕಲ್ಪನೆಯ, ಪೆಂಟಾಸಿಯ ಕಥೆಗಳು ರಂಜಿಸುತ್ತವೆ. ಆದರೆ ಮನಸ್ಸಿನ ಆಳಕ್ಕೆ ತಿಳಿಯುವುದು ಕಷ್ಟ. ರಂಜನೆ ಒಂದು ಕಥಾಂಶವಾದರೆ ಹೆಚ್ಚಿನದು ಬದುಕಿನ ವಿಸ್ತಾರವನ್ನು ಹೆಚ್ಚಿಸುವ ಕಲೆಗಾರಿಕೆ ಆಗಿರಬೇಕು. ಸರಳವಾಗಿ, ಸಂದೇಶವನ್ನ ಅದು ಹೊತ್ತಿರಬೇಕು. ಹಾಗೆಯೇ ಹಲವು ಅರ್ಥಗಳನ್ನು ಹೊಮ್ಮಿಸುವಂತಾಗಬೇಕು. ಒಟ್ಟಿನಲ್ಲಿ ರಂಜನೆಯ ಜೊತೆಗೆ ಓದುಗನ ಬೆಳವಣಿಗೆಗೆ ಕಥೆಗಳು ಸಹಕಾರಿಯಾಗಿರಬೇಕು. ಶ್ರೀಮತಿ ಸತ್ಯವತಿ ಮೂರ್ತಿಯವರ ಕಥೆಗಳು ಈ ಅಂಶಗಳನ್ನು ಸಮೃದ್ಧವಾಗಿ ಒಳಗೊಂಡಿದೆ. ಓದಿಸಿಕೊಂಡು ಹೋಗುವ ಬರಹ, ಕಲಾತ್ಮಕವಾಗಿ ಕೂಡಿಕೊಂಡ ಪದ, ವಾಕ್ಯ ಪುಂಜಗಳು. ಆಸಕ್ತಿ ಹುಚ್ಛಿಸುವ ಘಟನಾವಳಿಗಳು, ಚಿಂತಿಸುವ ಅಂಶಗಳು... ಹೀಗೆ ಸುಪುಷ್ಟವಾದ ಕಥೆಗಳು ಅವರದು. ಡಾ.ಸತ್ಯವತಿ ಮೂರ್ತಿ

₹130   ₹116

ನಾನು ಮತ್ತು ನನ್ನವರ ಸ್ವೀಟಿ | Naanu mattu nannavara sweety

ಅಪಾರ ಅಧ್ಯಯನ, ಅಧ್ಯಾಪನ, ಅನುಭವಗಳಿಂದ ಮೂಡಿಬಂದ ನೇರ ಹಾಗೂ ಸರಳ ನಿರೂಪಣೆ, ಅಗತ್ಯ ವಿವರಗಳು, ಅಲ್ಲಲ್ಲಿ ಶೋಭಿಸುವ ಗಾದೆ ಮಾತುಗಳು ಲೇಖನಗಳ ವಾಚ್ಯಾಸಕ್ತಿಯನ್ನು ಹೆಚ್ಚಿಸುತ್ತವೆ. ಬದುಕನ್ನು ಬಂದಹಾಗೆ ಸ್ವೀಕರಿಸುವ ಆಲೋಚನೆ, ಬರೆದಿದ್ದು ಕಮ್ಮಿ ಬರೆಯಬೇಕಾದ್ದು ಇನ್ನೂ ಇದೆ ಎಂಬ ಆಸೆ ಎಲ್ಲವೂ ಲೇಖಕಿಯ ಘನಾತ್ಮಕ ಅಂಶಗಳು. ಈಗಾಗಲೇ ಹಲವಾರು ಸಾಂದರ್ಭಿಕ ಲೇಖನಗಳು, ಕಥೆ, ಕವನ, ವಿಮರ್ಶೆ, ನಾಟಕ, ಅನುವಾದಗಳ ಮೂಲಕ ಹೆಸರಾಗಿರುವ ಡಾ.ಸತ್ಯವತಿ ಮೂರ್ತಿ ಅವರು ರಚಿಸಿರುವ 'ನಾನೂ ಮತ್ತು ನನ್ನವರ ಸ್ವೀಟಿ ಮತ್ತು ಇತರ ಪ್ರಬಂಧಗಳು ಸಂಕಲನವನ್ನು ಓದಿ ನನ್ನ ಅರಿವು,ಆಲೋಚನೆಗಳ ಮಿತಿಯಲ್ಲಿ ಒಂದಿಷ್ಟು ಅಭಿಪ್ರಾಯಗಳನ್ನು ಇಲ್ಲಿ ನೀಡಿದ್ದೇನೆ.ಈ ಮೂಲಕ ಅವರಿಗೆ ಶುಭ ಹಾರೈಸುತ್ತ,ಅವರಿಂದ ಇನ್ನಷ್ಟು ಮತ್ತಷ್ಟು ಸಾಹಿತ್ಯ ಕೈಂಕರ್ಯ ನಡೆಯಲೆಂದು ಆಶಿಸುತ್ತೇನೆ ಕೆ.ಎನ್.ಭಗವಾನ್

₹175   ₹156

ಸಣ್ಣ ಕಥೆಗಳಲ್ಲಿ ಜೀವನ ತತ್ವ | Sanna kathegalalli Jeevana Tatva

ಈ ಪುಸ್ತಕವನ್ನು ಬರೆದ ಡಾ. ಸತ್ಯವತಿ ಮೂರ್ತಿಯವರ ಕನ್ನಡ ಪ್ರೇಮ ಮತ್ತು ಸಾಧನೆಯೂ ಗಮನಾರ್ಹ. ವಿವಿಧ ಪ್ರಕಾರಗಳ ಹಲವು ಪುಸ್ತಕಗಳನ್ನು ರಚಿಸಿರುವ ಇವರು, ಇಂಗ್ಲೆಂಡಿನ ಮ್ಯಾಂಚೆಸ್ಟರ್ ನಲ್ಲಿ (ರಾಯಲ್ ಕಾಲೇಜ್ ಆಫ್ ಮ್ಯೂಸಿಕ್) ನಡೆದ ಅಖಿಲ ಭಾರತೀಯ ಕವಿಗೋಷ್ಠಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಂಗ್ಲೆಂಡಿನಲ್ಲಿ ನೆಲೆಸಿ, ಸಾಹಿತ್ಯ ರಚನೆ, ಸಂಶೋಧನೆ ಮತ್ತು ಉಪನ್ಯಾಸಗಳನ್ನು ನೀಡುತ್ತಾ ಬಂದಿರುವ ಇಂಗ್ಲೆಂಡಿನ ಸರ್ಕಾರದ ವತಿಯಿಂದ 'ಪ್ರಿಸನ್ ಮಿನಿಸ್ಟರ್' ಆಗಿ ನೇಮಕಾತಿಯಾಗಿರುವುದು ಹೆಮ್ಮೆಯ ವಿಚಾರ. ವಿದೇಶದಲ್ಲಿ ನೆಲೆಸಿದ್ದು, ಇಷ್ಟೆಲ್ಲಾ ಬಿಡುವಿಲ್ಲದ ಕೆಲಸದ ನಡುವೆಯೂ, ಕನ್ನಡದ ಕುರಿತು, ಕನ್ನಡದ ಸಣ್ಣ ಕಥೆಗಳ ಕುರಿತು ಅಪಾರ ಅಭಿಮಾನವಿಟ್ಟುಕೊಂಡು, ಈ ಕೃತಿಯನ್ನು ಬರೆದಿರುವುದು ಸಹ ಎಲ್ಲರೂ ಹೆಮ್ಮೆ ಪಡುವ ವಿಚಾರ. "ಸಣ್ಣ ಕಥೆಗಳಲ್ಲಿ ಜೀವನ ತತ್ವ"ದಂತಹ ಅಪರೂಪದ ಕೃತಿಯನ್ನು ಕನ್ನಡದ ಓದುಗರಿಗೆ ನೀಡಿರುವ ಡಾ. ಸತ್ಯವತಿ ಮೂರ್ತಿಯವರನ್ನು ಮನಸಾರೆ ಅಭಿನಂದಿಸುತ್ತೇನೆ. -ಶಶಿಧರ ಹಾಲಾಡಿ

₹170   ₹151