ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ. ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಆಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.