ಬೇಲೂರು ರಾಮಮೂರ್ತಿ ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
#
ಅಪರಂಜಿ ಶಿವು
ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
nil
ನಾಡಿನ ಹೆಸರಾಂತ ಸಾಹಿತಿಗಳು, ತತ್ತ್ವ ದರ್ಶನಗಳ ರಸಮಯ ವ್ಯಾಖ್ಯಾನಕಾರರೂ ಆಗಿರುವ ಜಿ. ಬಿ. ಹರೀಶರು ಬರೆದಿರುವ ಸಾ.ಕೃ. ರಾಮಚಂದ್ರ ರಾಯರ ಜೀವನ ಚರಿತ್ರೆಯನ್ನು ಓದುವಾಗ ರೋಮಾಂಚನವಾಗುವ ಜೊತೆ ಜೊತೆಗೇ ದುಃಖವೂ ಆಗುತ್ತದೆ. ಬಹುಶ: ಅವರು ಅಮೆರಿಕದಲ್ಲೋ, ಜರ್ಮನಿಯಲ್ಲೋ ಹುಟ್ಟಿ ಆ ದೇಶಗಳ ಇತಿಹಾಸ ಇಂಡಿಕ್, ಅಧ್ಯಯನ ವಿಭಾಗಗಳಲ್ಲಿ ದುಡಿದಿದ್ದರೆ ಈಗಿಗಿಂತ ಹೆಚ್ಚಿನ ಜಗದ್ವಿಖ್ಯಾತಿ, ಧನ ಸಂಪಾದನೆ ಮಾಡಿ ಮೇಲೇರಬಹುದಿತ್ತು. ಆಸ್ತಿಕ ಸಮಾಜವೇನೋ ಅವರನ್ನು ಗೌರವಿಸಿತ್ತು. ಆದರೆ ಇದ್ದಷ್ಟು ದಿನ ಅವರಿಗೆ ಒಂದು ಪದ್ಮಪ್ರಶಸ್ತಿಯೂ ಬರಲಿಲ್ಲ ಎಂಬುದೇ ನಮ್ಮ ಕಾಲದ ಮಹಿಮೆಯನ್ನು ಹೇಳುತ್ತದೆ. ರಾಯರು ತುಂಬು ಜೀವನ ನಡೆಸಿ ಕನ್ನಡ, ಇಂಗ್ಲಿಷ್, ಸಂಸ್ಕೃತ, ಪ್ರಾಕೃತ ಪಾಳಿ ಭಾಷೆಗಳ ಕಣಜವನ್ನು ತಿಳಿವಿನಿಂದ ತುಂಬಿದರು. ಸಾವಿರದ ಹೊಳೆಯುವ ಈ ಸಾಲಿಗ್ರಾಮಕ್ಕೆ ಇದು ನಮಸ್ಕಾರ ಪೂರ್ವಕ ನುಡಿ ನಮನ.
Nil
ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು. ಆದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಿಗೆ ಹೋಲಿಸದರೆ, ಮಹಿಳೆಯರು ವಹಿಸಿದ ಪಾತ್ರವು ಇತಿಹಾಸದ ಪುಟಗಳಲ್ಲಿ ಮಬ್ಬು ಮಬ್ಬಾಗಿ ದಾಖಲಾಗಿದೆ. ಆ ಹಿನ್ನಲೆಯಲ್ಲಿ ನೋಡಿದಾಗ ಬೆಳವಡಿ ಮಲ್ಲಮ್ಮ ಕೃತಿಯ ಮಹತ್ವ ನಮಗೆ ಅರಿವಾಗುತ್ತದೆ. ಬೆಳವಡಿ ಮಲ್ಲಮ್ಮ ಯುದ್ಧವ್ಯೂಹಗಳಿಗೆ, ಗಾಳಿವೇಗದ ಪ್ರಹಾರಗಳಿಗೆ, ಸ್ವಾಭಿಮಾನ, ಧೈರ್ಯ ಸಾಹಸಗಳಿಗೆ ಹೆಸರಾದವರು.
Showing 3211 to 3240 of 5241 results