nil
#
‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು.
ಡಾ. ಟಿಸ್ವಿ ಪರಿಸರವನ್ನು ಕುರಿತು ತಮ್ಮ ಅಧ್ಯಯನಗಳಿಂದಾಗಿ ಕನ್ನಡ ಸಂವೇದನಾಶೀಲ ಮನಸ್ಸುಗಳಿಗೆ ಪರಿಚಿತರು. ಬಹುತೇಕರ ಹಾಗೆ ಪರಿಸರ ಅಧ್ಯಯನವೆಂದರೆ ಜೀವವೈವಿಧ್ಯ ಕುರಿತ ವಿಸ್ಮಯಕಾರಿಯಾದ ಶುಪ್ಕ ಮಾಹಿತಿಗಳನ್ನು ಒದಗಿಸುವುದು ಎನ್ನುವ ಕ್ರಮ ಇವರದ್ದಲ್ಲ, ಬದಲಾಗಿ ಇದು ಸಾಮಾಜಿಕ, ಧಾರ್ಮಿಕ, ಆರ್ಥಿಕ, ನೈತಿಕತೆಗಳ ಸಂಕಥನವೆಂದು ಇವರು ಪರಿಭಾವಿಸುವುದರಿಂದಾಗಿ ಇವರ ಪರಿಸರ ಅಧ್ಯಯನ ಜೀವಪರ ನೆಲೆಗಳ ಹುಡುಕಾಟದ ವೇದಿಕೆಯಾಗಿ ರೂಪಗೊಂಡಿದೆ.
Showing 4381 to 4410 of 5301 results