nil
ಈ ಕೃತಿಯನ್ನು ಸೊಗಸಾಗಿ ಕನ್ನಡಕ್ಕೆ ಅನುವಾದಿಸಿರುವ ಡಾ| ಎಚ್.ಆರ್. ಕೃಷ್ಣಮೂರ್ತಿಯವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಗಳಿಸಿದವರು. ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಜ್ಞಾನಾಧಿಕಾರಿಯಾಗಿ ಆಕಾಶವಾಣಿ ಪ್ರವೇಶಿಸಿದ ಇವರು, ಈಗ ಆಕಾಶವಾಣಿಯ ದಕ್ಷಿಣ ವಲಯದ ಉನ್ನತಾಧಿಕಾರಿ. ಪ್ರಕೃತಿ, ಪರಿಸರ, ವನ್ಯಜೀವಿಗಳಿಗೆ ಸಂಬಂಧಿಸಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ವಿಮರ್ಶೆ: ಜಗತ್ತಿನಲ್ಲಿ ಕಣ್ಮರೆಯಾಗುತ್ತಿರುವ ಜೀವಿಗಳ ಪಟ್ಟಿಯಲ್ಲಿ ಮಾರ್ಜಾಲ ಕುಟುಂಬಕ್ಕೆ ಸೇರಿದ ಹುಲಿಗಳೂ ಸೇರಿವೆ. ಹುಲಿಗಳ ಜೀವನದ ಬಗ್ಗೆ ಹಾಗೂ ಅವು ನಶಿಸುತ್ತಿರುವದಕ್ಕೆ ಕಾರಣಗಳನ್ನು ಕಾರಂತರು ಈ ಪುಸ್ತಕದಲ್ಲಿ ನೀಡಿದ್ದಾರೆ. ಮನುಷ್ಯನ ಸಹಜೀವಿಗಳಲ್ಲಿ ಒಂದಾದ ಹುಲಿಯ ಕುರಿತಂತೆ ಆಸಕ್ತ ಇರುವ ಎಲ್ಲರನ್ನೂ ಸೆಳೆಯುವ ಪುಸ್ತಕ ಪ್ರಜಾವಾಣಿ ೧೧ ಮಾರ್ಚ್ ೨೦೦೭. ಹುಲಿಗಳನ್ನು ಏಕೆ ಉಳಿಸಬೇಕು? ಎನ್ನುವ ಲೇಖನದಲ್ಲಿ ಬರೆಯುತ್ತಾ " ನಮ್ಮ ದಾಳಿಗೀಡಾಗಿರುವ ನೈಸರ್ಗಿಕ ಭೂ ಪ್ರದೇಶಗಳು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಿವೆಯೆಂಬುದನ್ನು ಸೂಚಿಸುವ ಎಚ್ಚರಿಕೆಯ ದೀಪವೇ ಹುಲಿ. ಮಲ್ಲ ಕರ್ನಾಟಕ ೨೩-೦೩-೨೦೦೭.
ವೈಜ್ಞಾನಿಕ ಸಾಧನಗಳನ್ನು ಬಳಸಿ ಹುಲಿಯಂತಹ ಅದ್ಭುತಜೀವಿಯ ಉಳಿವಿಗಾಗಿ ಶ್ರಮಿಸಿದವರಲ್ಲಿ ಕೆ.ಉಲ್ಲಾಸ ಕಾರಂತರಂಥವರು ಭಾರತದಲ್ಲೇ ಏಕೆ, ಇಡೀ ಜಗತ್ತಿನಲ್ಲೇ ಮತ್ತೊಬ್ಬರಿಲ್ಲ. ಹುಲಿಗಳ ಬದುಕಿನ ಬಗೆಗೆ ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ತತ್ಪರತೆಯಿಂದ ಅಧ್ಯಯನ ಮಾಡಿದ ಉಲ್ಲಾಸ ಕಾರಂತರು ಭಾರತದ ಅತಿಕುಶಲ ಕ್ಷೇತ್ರ ಜೀವಶಾಸ್ತ್ರಜ್ಞರಾಗಿಯೂ ಹುಲಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿ ಯಶ ಕಂಡ ಸಂರಕ್ಷಣಾವಾದಿಯಾಗಿಯೂ ವಿಶ್ವದ ಗಮನ ಸೆಳೆದಿದ್ದಾರೆ. ಅವರ ವೈಜ್ಞಾನಿಕ ಕಾರ್ಯಕುಶಲತೆ, ಸಂರಕ್ಷಣಾವಾದಿಯಾಗಿ ಕಾರಂತರ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹುಲಿ ಮತ್ತು ಬಲಿಪ್ರಾಣಿಗಳ ಗಣತಿಗಾಗಿ ವಿಶ್ವಸನೀಯ ತಂತ್ರಗಳನ್ನು ಅಭಿವೃದ್ಧಿಪಡಿಸಿರುವ ಕಾರಂತರು, ಇವೆರಡರ ಸಂಖ್ಯೆಗಳ ನಡುವೆ ಇರುವ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ವಿಮರ್ಶೆ: ಹುಲಿ - ಚಿರತೆಗಳಂಥ ಮಾರ್ಜಾಲಗಳಿಗೆ ರೇಡಿಯೋ ಕಾಲರ್ ತೊಡಿಸಿ ಅವುಗಳ ಚಲನ ವಲನ, ಅವುಗಳ ಸಂಖ್ಯೆಯಲ್ಲಾಗುವ ಏರಿಳಿತ ಇವುಗಳ ಮೇಲೆ ಪಾಳತಿ ಇಡುವುದೇ ಉಲ್ಲಾಸ ಕಾರಂತರ ಗುರಿ.
Showing 5251 to 5280 of 5358 results