• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಇದು ಕತೆಯಲ್ಲ ಜೀವನ | Idu Katheyalla Jeevana

ಕನ್ನಡದ ಮಹತ್ವದ ಹಿರಿಯ ಲೇಖಕಿಯರಲ್ಲೊಬ್ಬರಾದ ವಸುಮತಿ ಉಡುಪರವರ ಕಥಾಜಗತ್ತು ವಿಶಿಷ್ಟವಾದದ್ದು. ಸಂದುಹೋಗುತ್ತಿರುವ ಒಂದು ಕಾಲಘಟ್ಟದ ತಲೆಮಾರಿನ ಚಿತ್ರಣವನ್ನು ಕಟ್ಟಿಕೊಡುವ ವಸುಮತಿ ಉಡುಪರವರು ಅಪ್ಪಟ ಕಥೆಗಾರ್ತಿ, ನೇರವಾಗಿ, ಸಹಜ ಹದದಲ್ಲಿ ಕಂಡಿರಿಸಿರುವ ಇವರ ಪಾತ್ರಗಳು ಹೆಣ್ಣುಮನದ ನಾನಾಭಾವಗಳ ರಂಗಶಾಲೆ, ಪಾತ್ರಗಳ ದಿಟ್ಟತನ, ನೇರವಂತಿಕೆ, ಬದುಕನೆದುರಿಸುವ ಛಲ, ತಾಕಲಾಟಗಳ ನಡುವೆಯೂ ಗುರಿಯನ್ನು ಕಂಡುಕೊಳ್ಳುವ ಆಶಾವಾದ ಇಲ್ಲಿ ಅಸಾಧಾರಣ ರೀತಿಯಲ್ಲಿ ಅಭಿವ್ಯಕ್ತಗೊಂಡಿದೆ. ಬದುಕಿನ ಹತ್ತು ಹಲವಾರು ಹಳವಂಡಗಳಲ್ಲಿ, ಬಾಳಿನ ಕುಲುಮೆಯಲ್ಲಿ ಬೆಂದು ನೊಂದರೂ ತಮ್ಮದೇ ರೀತಿಯಲ್ಲಿ ಪ್ರತಿರೋಧಿಸುತ್ತಾ, ಜೀವನದ ಕಟು ಸತ್ಯವನ್ನು ಅರಿಯುತ್ತಾ ಮಾನವೀಯ ಮೂರ್ತಿಗಳಾಗಿ ನಿಲ್ಲುವ ಇಲ್ಲಿನ ಹಲವಾರು ಪಾತ್ರಗಳ ಕಥೆ ಹೃದಯಸ್ಪರ್ಶಿಯಾಗಿ ಚಿತ್ರಿತಗೊಂಡಿದೆ.

₹130   ₹116

Buy Now
ಇದೆ ಎಂದರೆ ಇದೆ ಇಲ್ಲ ಎಂದರೆ ಇಲ್ಲ | illa Endare illa Ede Endare ide

ಸಮುದ್ಯತಾ ಅವರ ಮೊದಲ ಕಾದಂಬರಿ ‘ಇದೆ ಎಂದರೆ ಇದೆ ಇಲ್ಲ ಎಂದರೆ ಇಲ್ಲ’ ಹಳ್ಳಿಯ ಮಧ್ಯಮ ವರ್ಗದ ಕುಟುಂಬವೊಂದರ ಸ್ತ್ರೀಯರ ಬಹುಸ್ತರೀಯ ಸಂಕಟವನ್ನು ಮುಖ್ಯವಾಗಿ ಕೇಂದ್ರೀಕರಿಸಿ ನಿರೂಪಿಸುತ್ತದೆ. ಮನೆತನದ ಬದುಕಿನ ಏಳು ಬೀಳಿನ ಗತಿಬಿಂಬ ನಾಲ್ಕು ತಲೆಮಾರುಗಳನ್ನು ಹಾದು ಸುಮಾರು ಒಂದು ಶತಮಾನವನ್ನು ವ್ಯಾಪಿಸುತ್ತದೆ… ಕುಟುಂಬದ ದೈನಿಕ ಅನುಭವದ ವಾಸ್ತವಿಕ ವಿವರಗಳನ್ನು ನೇಯುವ ಈ ಕೃತಿಯನ್ನು ಹವ್ಯಕ ಸಮುದಾಯದ ಸಾಂಸ್ಕೃತಿಕ ದಾಖಲೆಯಾಗಿ ಓದಬಹುದಾಗಿದೆ… ಕಷ್ಟಗಳು ಯಾವ ರೂಪ ಮತ್ತು ಮೂಲದಿಂದ ಬಂದರೂ ಅವುಗಳನ್ನು ಅನುಭವಿಸುವವಳು ಹೆಣ್ಣು ಎಂಬ ಆಶಯ ಕಾದಂಬರಿಯುದ್ದಕ್ಕೂ ಪುನರಾವರ್ತನೆಯಾಗುತ್ತದೆ… ಸಂಸಾರ ಸುಸೂತ್ರ ಸಾಗದಿರುವುದಕ್ಕೆ ಕಾದಂಬರಿ ಸೂಚಿಸುವ ಮೂಲ ಕಾರಣವಾದರೂ ಯಾವುದು? ಮುಳುಗಡೆಯಂಥ ಪ್ರಾಕೃತಿಕ ವಿಪತ್ತೆ? ಮನುಷ್ಯ ಮಾಡುವ ಆಯ್ಕೆಗಳೆ? ಕಂದಾಚಾರಗಳೆ? ಗುಟ್ಟು ಬಿಟ್ಟು ಕೊಡದ ಕಾಲವೆ? ಕೈಮೀರಿದ ಅಸಹಾಯಕತೆಗೆ ಇನ್ನೊಂದು ಹೆಸರಾದ ಕೈಕೊಟ್ಟ ದೈವವೆ? ದುರ್ಬಲ ಪುರುಷರೆ? ಇಂಥ ತಾತ್ವಿಕ ಪ್ರಶ್ನೆಗಳಿಗೆ ಉತ್ತರಿಸುವ ಆಸಕ್ತಿಯನ್ನು ಕಾದಂಬರಿ ಓದುಗರಿಗೆ ಬಿಡುತ್ತದೆ. ಶ್ರೀಧರ ಬಳಗಾರ

₹200   ₹178

Buy Now
ಇರುಳ ಬಾಗಿಲಿಗೆ ಕಣ್ಣ ದೀಪ | Irula Bagilige Kanna Deepa

ಜೀವ ಕಾರುಣ್ಯದ ಕವಿತೆಗಳನ್ನು ಒಳಗೊಂಡ ಈ ಕೃತಿಯನ್ನು ಓದಲು ಹತ್ತು ಹಲವು ಕಾರಣಗಳಿವೆ. ಬಹುತ್ವದ ಆಶಯವನ್ನು ಕಟ್ಟಿಕೊಡುವ ಸಂಕಲನ ಸಮಕಾಲೀನ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ.

₹140   ₹119

Buy Now
ಇಲ್ಲಿಂದ ಮುಂದೆಲ್ಲ ಕಥೆ | Illinda Mundella Kathe

'ಇಲ್ಲಿಂದ ಮುಂದೆಲ್ಲ ಕಥೆ' ಇತ್ತೀಚಿನ ಕೆಲವು ವರ್ಷಗಳಲ್ಲಿ ಕನ್ನಡ ಕಥಾಲೋಕದ ಚಾಚುಗಳ ಅತ್ಯುತ್ತಮ ಮಾದರಿಯಾಗಿದೆ. ಈ ಪ್ರಯತ್ನಕ್ಕೆ ಹುಡುಕಾಟಕ್ಕೆ ಎರಡು ಲಕ್ಷಣಗಳಿವೆ. ಒಂದು, ತಾತ್ವಿಕವಾಗಿ ಮತ್ತು ತಾಂತ್ರಿಕವಾಗಿ ಈ ತನಕದ ಕನ್ನಡ ಕಥಾಪರಂಪರೆಯ ಧಾತುಗಳನ್ನೆಲ್ಲ ಒಳಗೊಳ್ಳುವ ಹಂಬಲ ಮತ್ತೊಂದು, ಮಾನುಷಲೋಕವನ್ನು ಕರಾರುಗಳಿಲ್ಲದೆ ಒಳಗೊಳ್ಳುವ ತವಕ ಕಥೆಗಾರರಾಗಿ ಮೊದಲ ಸಂಕಲನದಿಂದಲೂ ರಘುನಾಥರು ಉಳಿಸಿಕೊಂಡು ಬಂದಿರುವ ಉತ್ಕಟತೆ ಮತ್ತು ತನ್ಮಯತೆ ಅವರನ್ನು ಕನ್ನಡದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರನ್ನಾಗಿಸಿವೆ. ಪ್ರತಿಭೆಯ ಜೊತೆಗೆ ಬರವಣಿಗೆಯಲ್ಲಿ ಅವಸರ ತೋರಿಸದೇ ಇವರು ಕಾಯ್ದುಕೊಂಡು ಬಂದಿರುವ ಸಂಯಮದ ಪಾತ್ರವೂ ದೊಡ್ಡದು. ರಘುನಾಥರ ಬರವಣಿಗೆಯ ಬಗ್ಗೆ ವ್ಯಕ್ತಿತ್ವದ ಬಗ್ಗೆ ನನಗೆ ಸಕಾರಣವಾದ ಮೆಚ್ಚುಗೆ. ಅವರ ಸಾಹಿತ್ಯಕ ಸಂವೇದನೆ ಮತ್ತು ಸಾಂಸ್ಕೃತಿಕ ಎಚ್ಚರ ಇದಕ್ಕೆ ಮುಖ್ಯ ಕಾರಣ, ಇತ್ತೀಚಿನ ದಿನಗಳಲ್ಲಿ ಸಮಕಾಲೀನ ಬೆಳವಣಿಗೆಗಳನ್ನು ಕುರಿತ ಅವರ ಪ್ರತಿಕ್ರಿಯೆಗಳ ಸ್ಪಷ್ಟತೆ ಮತ್ತು ನಿರ್ಭಯವಾದ ಮಾತುಗಳು ಎರಡೂ ಅವರ ಮೇಲಿನ ಭರವಸೆ ಮತ್ತು ಗೌರವವನ್ನು ಹೆಚ್ಚಿಸುತ್ತಿವೆ.

₹170   ₹151

Buy Now