• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಇಲ್ಲಿರುವುದು ಸುಮ್ಮನೆ | Illiruvudhu sumanae

ವಿವೇಕ್ ಶಾನಭಾಗ್

₹100   ₹89

Buy Now
ಇವರು ಅವರು ದೇವರು | Ivaru Avaru Devaru

ಕನ್ನಡದ ಜನಪ್ರಿಯ ಲೇಖಕರು, ಪತ್ರಕರ್ತರು ಆದ ಜೋಗಿ ಅವರ ‘ಇವರು ಅವರು ದೇವರು’ ಪುಸ್ತಕ ವ್ಯಕ್ತಿಚಿತ್ರಗಳನ್ನು ಕುರಿತ ಆಪ್ತ ಬರಹವಾಗಿದೆ.

₹200   ₹170

Buy Now
ಇಳಿಸಲಾಗದ ಶಿಲುಬೆ | Ilisalaagada shilube

ಲಂಕೇಶರು ಒಮ್ಮೆ ಅತಿಯಾದ ವೈಚಾರಿಕತೆ ಕೂಡ ಬದುಕನ್ನು ಶುಷ್ಕವಾಗಿ ಮಾಡುತ್ತದೆ' ಎಂದು ಹೇಳಿದ್ದರು. ಆ ಮಾತನ್ನು ರಘುನಾಥ್ ಅವರ ಬರವಣಿಗೆ ನೆನಪಿಸುವಂತಿದೆ. ಭಾರತದ ಮಟ್ಟಿಗೆ ಪತ್ರಿಕೋದ್ಯಮದಲ್ಲಿ ಎರಡು ದೊಡ್ಡ ಮನಸ್ಸುಗಳು ಈ ದೇಶವನ್ನು ಕಟ್ಟುವಲ್ಲಿ ಕೆಲಸ ಮಾಡಿವೆ. ಒಂದು ಗಾಂಧಿ. ಇನ್ನೊಂದು ಬಾಬಾ ಸಾಹೇಬ್ ಅಂಬೇಡ್ಕರ್, ಈ ಎರಡೂ ಮನಸುಗಳ ಕನಸುಗಳ ನೆರಳು ರಘುನಾಥರ ಮನಸ್ಸಿನಲ್ಲಿ ಹಾಯ್ದುಹೋಗಿದೆ ಎಂಬುದನ್ನು ಇಲ್ಲಿನ ಲೇಖನಗಳು ಸಾಕ್ಷೀಕರಿಸುತ್ತವೆ. ಇಳಿಸಲಾಗದ ಶಿಲುಬೆ' ಕೃತಿಯ ಶೀರ್ಷಿಕೆಯೇ ಜಗದ ದುಃಖಗಳನ್ನು ಅರಿಯುವ ಮಾತನ್ನು ಹೇಳುತ್ತಿದೆ. ಈ ಹೊತ್ತಿನ ಮತ್ತು ಯಾವತ್ತಿನ ಈ ದೇಶದಲ್ಲಿ ಜಾತಿ, ಧರ್ಮ, ಕೋಮುವಾದ ಮತ್ತೆ ಮತ್ತೆ ಪೂತ್ಕರಿಸುತ್ತಲೇ ಇವೆ. ಇವುಗಳನ್ನು ಬೇರುಸಹಿತ ಕೀಳಲು ಸಾಧ್ಯವಿಲ್ಲ. ಆದರೆ. ಕೊನೆ ಪಕ್ಷ ಹದಮಾಡಲು ಪ್ರಯತ್ನಿಸಬಹುದು. ಹಾಗೆ ಹದ ಮಾಡುವ ಕೆಲಸವನ್ನು ರಘುನಾಥ್ ಬರೆಯುವ ಮೂಲಕ ಮಾಡುತ್ತಿದ್ದಾರೆ. ಕೆಲವು ಲೇಖನಗಳಲ್ಲಿ ಕೆಲವು ವಿಷಯಗಳ ಬಗ್ಗೆ ಕಠಿಣ ಶಬ್ದಗಳಲ್ಲಿ ಹೇಳಿದ್ದಾರಾದರೂ, ಯಾರ ವಿರುದ್ದ ಹೇಳಿದ್ದಾರೋ ಅವರು ಅದನ್ನು ಒಪ್ಪಿಕೊಳ್ಳುವ ರೀತಿಯಲ್ಲಿ ಅವರ ಬರವಣಿಗೆಯಿದೆ. ಅಕ್ಷರಗಳನ್ನು ವಾಕ್ಯ ಮಾಡುವಾಗ ತುಂಬ ಸೂಕ್ಷ್ಮವಾಗಿ ಬರೆಯುತ್ತಾ, ಆ ವಾಕ್ಯ ಮಲಿನವಾಗದಂತೆ ಎಚ್ಚರವಹಿಸುವುದು ರಘುನಾಥ್

₹250   ₹223

Buy Now
ಈ ಸಾವು ನ್ಯಾಯವೇ | E Saavu Nyayave

ಪ್ರತಿ ನಲ್ವತ್ತು ಸೆಕೆಂಡಿಗೆ ಜಗತ್ತಿನಲ್ಲಿ ಒಂದು ಆತ್ಮಹತ್ಯೆ. ಹದಿಹರೆಯದವರು ಹಾಗೂ ಯುವಜನತೆ ಸಾವಿಗೆ ಒಂದು ಪ್ರಮುಖ ಕಾರಣ ಆತ್ಮಹತ್ಯೆ. ಕುಟುಂಬ ಹಾಗೂ ಸಮಾಜದ ಮೇಲೆ ಆತ್ಮಹತ್ಯೆ ಬೀರುವ ಮಾನಸಿಕ, ಸಾಮಾಜಿಕ, ಆರ್ಥಿಕ ಪರಿಣಾಮ ಅನೂಹ್ಯ ಅಗಣಿತ. ಭಾರತದಲ್ಲಿ ವರ್ಷಂಪ್ರತಿ ಒಂದು ಲಕ್ಷಕ್ಕೂ ಮೀರಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಆತ್ಮಹತ್ಯೆ ಇಪ್ಪತ್ತು ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ. ಅಂದರೆ ಇಪ್ಪತ್ತು ಲಕ್ಷ ಮಂದಿ ಅಪರಾಧಿ ಪ್ರಜ್ಞೆ. ಪಾಪಪ್ರಜ್ಞೆಯಿಂದ ನರಳುತ್ತಾರೆ. ಪರೀಕ್ಷೆಯ ಒತ್ತಡ, ಪ್ರೇಮಭಂಗ, ಪಾಲಕರ ಮಿತಿಮೀರಿದ ಮಹತ್ವಾಕಾಂಕ್ಷೆ. ಅತಿಯಾದ ನಿರೀಕ್ಷೆಗಳು, ಅಸಾಮರ್ಥ್ಯ, ಅದಕ್ಷತೆ, ಒಂಟಿತನ, ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ತೀವ್ರವಾದ ಕೊರಗು, ಆರ್ಥಿಕ ಸಂಕಷ್ಟಗಳು, ತಿರಸ್ಕಾರ, ತಾತ್ಸಾರ, ಅಪಮಾನ ಮೊದಲಾದ ಕಾರಣಗಳಿಂದ ಆತ್ಮಹತ್ಯೆಗಳಾಗುತ್ತಿವೆ. ಮಹಡಿ ಏರಿ ಹಾರುವುದು, ಅಣೆಕಟ್ಟೆಯಿಂದ ಧುಮುಕುವುದು. ರೈಲಿಗೆ ತಲೆ ಕೊಡುವುದು ಯಾವ ಸಮಸ್ಯೆಗೂ ಪರಿಹಾರವಲ್ಲ. ಸತ್ತ ಮಾತ್ರಕ್ಕೆ ಸಮಸ್ಯೆಗಳು ಮುಗಿಯುವುದಿಲ್ಲ. ತಾಳ್ಮೆಯಿಂದ ಯೋಚಿಸಿದರೆ. ಸುತ್ತಲೂ ನೋಡಿದರೆ ಸಹಾಯಹಸ್ತ ಗೋಚರಿಸುತ್ತದೆ. ಕಣ್ಣೀರು ಒರೆಸುವ ಬೆರಳು ಕಾಣುತ್ತದೆ. ಸಾಂತ್ವನದ ಕೊರಳು ಕೇಳುತ್ತದೆ. ಸಹಾಯ ಬಯಸಿ, ಸಹಾಯ ಮಾಡಿ ಮುಂದಾಗುವ ಅನಾಹುತ ತಪ್ಪಿಸಿ: ಜೀವ ಉಳಿಸಿ ಎಂಬುದೇ ಈ ಕೃತಿಯ ಸಾರ. ನಾಡಿನ ಖ್ಯಾತ ಮನೋವಿಜ್ಞಾನ ಹಾಗೂ ಶಿಕ್ಷಣ ಲೇಖಕ ಡಾ. ಮಹಾಬಲೇಶ್ವರ ರಾವ್ ಈ ಕೃತಿಯ ಕರ್ತೃ.

₹130   ₹111

Buy Now
ಈ ಹೊತ್ತಿನ ಕಥೆಗಳು | E Hottina Kathegalu

ನಮ್ಮ ಕಾಲದ ತಲ್ಲಣಗಳಿಗೆ ಮತ್ತು ಸ್ಥಿತ್ಯಂತರಗಳಿಗೆ ಮಾತು ಕೊಡಲಿಕ್ಕೆ ಕಥೆ ಹೇಳಿಮಾಡಿಸಿದ ಪ್ರಕಾರ. ಇದರ ಸಾಧ್ಯತೆಗಳನ್ನು ಕಾಲದಿಂದ ಕಾಲಕ್ಕೆ ಎಲ್ಲ ಕಥೆಗಾರರೂ ಹುಡುಕುತ್ತಲೇ ಬಂದಿದ್ದಾರೆ. ಕಥೆ ಬರೆಯುವ ಜರೂರತ್ತು ಏನಿದೆ ಎನ್ನುವುದನ್ನು ಪುನರ್ ಸ್ಥಾಪಿಸುತ್ತಲೂ ಇದ್ದಾರೆ - ಇದು ಬರಿಯ ಒಳಗಿನ ತಳಮಳವಲ್ಲ ಒಂದು ಸಾಮಾಜಿಕ ಜವಾಬ್ದಾರಿ ಎನ್ನುವಂತೆ. ಸಾಮಾಜಿಕ ಜಾಲತಾಣಗಳು ಬರೆಯುವ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಾಗೆಯೇ ಬರವಣಿಗೆಯಲ್ಲಿ ಕಾವು ಕೂರುವ ತಾಳ್ಮೆಯನ್ನು ಕಳೆಯುತ್ತಿವೆ. ತಕ್ಷಣದ ಪ್ರತಿಕ್ರಿಯೆಗಳಿಗೆ ಮನಸೋತಾಗ ಆಳಕ್ಕಿಳಿದ, ಸಾಂದ್ರವಾಗುವ ಕಥನಗಳು ಹುಟ್ಟುವುದು ಕಷ್ಟವಾಗುತ್ತದೆ. ಇಂಥದ್ದರ ನಡುವೆ ಕಥೆಗಾರರು ತಮಗೆ ಬೇಕಾದ ಅವಕಾಶವನ್ನು ಅಲ್ಲಲ್ಲಿ ಹುಡುಕುತ್ತಾ ತಮ್ಮದನ್ನಾಗಿಸಿಕೊಳ್ಳುವತ್ತ ತುಡಿಯುತ್ತಲೇ ಇದ್ದಾರೆ.

₹250   ₹212.5

Buy Now