nil
ತನ್ನ ಕಾಲದ ಹಲವು ಬಗೆಯ ಒತ್ತಡಗಳನ್ನು ಒಳಗೊಂಡು, ಅರಗಿಸಿಕೊಂಡ ನಂತರವೂ ಸೃಜನಶೀಲತೆಯ ಹೊಸ ಹಾದಿಗಳನ್ನು ಹುಡುಕುವ, 'ಸಯರ ಸಮ್ಮತ ಸಂತೆಯ ದಾರಿ'ಯನ್ನು ಅನುಸರಿಸದ ಲೇಖಕರು ಮಾತ್ರವೇ ಒಂದು ಭಾಷೆಯ ಸಾಹಿತ್ಯವನ್ನು ಕಟ್ಟಬಲ್ಲರು. ರಂಗಭೂಮಿ, ಚಲನಚಿತ್ರ, 'ಜೀವಂತ' ಜೀವನ ಮುಂತಾದ ಹತ್ತು ಹಲವು ಸಂಗತಿಗಳಲ್ಲಿ ತೀವ್ರವಾದ ಆಸಕ್ತಿಗಳನ್ನು ಹೊಂದಿರುವ ಗೆಳೆಯ ಮೌನೇಶ ಬಡಿಗೇರ್ ಅವರು ಅಂತಹ ಕೆಲವು ತರುಣ-ತರುಣಿಯರಲ್ಲಿ ಒಬ್ಬರು. ಕಥೆ, ಕವಿತೆ, ಕಾದಂಬರಿ ಮುಂತಾದ ಪುಕಾರಗಳ ಸಾಧ್ಯತೆಗಳನ್ನು ಅರಸುವ ಕೆಲಸವು 'ಸೃಜನಶೀಲ ಕಲ್ಪನೆ' ಮತ್ತು 'ಮಾಧ್ಯಮ ಶೋಧನೆ'ಗಳನ್ನು ಅವಲಂಬಿಸಿರುತ್ತದೆ. ಇವುಗಳ ಜೊತೆಗೆ, ಜಡವಲ್ಲದ ಕೇವಲ ಬೌದ್ಧಿಕವಲ್ಲದ ತಾತ್ವಿಕ ಕುತೂಹಲ/ಚಿಂತನೆಯೂ ಅದಕ್ಕೆ ಅಗತ್ಯವಾದ ಇನ್ನೊಂದು ಗುಣ. ಇದೆಲ್ಲದರ ಸಂಗಡ ಕತೆಸಾರನಿಗೆ ಲೋಕವನ್ನು ಅದರ ಸ್ಕೂಲನೆಲೆಯಲ್ಲಿ ಮಾತ್ರವಲ್ಲ, ವಿವರಗಳಲ್ಲಿ ಕಾಣುವ ಸುಣವೂ ಬೇಕು. ಮೂರ' ಮತ್ತು 'ಅಮೂರ' ಒಟ್ಟಿಸೆ ಗ್ರಹಿಸುವ, ಒಟ್ಟಾಗಿ ಹೆಣೆಯುವ ಕೆಲಸ ಬಹಳ ಜಟಲವಾದುದು. ಮೌನೇಶ್ ಈ ಎಲ್ಲ ಶಕ್ತಿಗಳನ್ನೂ ಬೇರೆ ಬೇರೆ ಪ್ರಮಾಣದಲ್ಲಿ ಪಡೆದಿದ್ದಾರೆ. ಆದ್ದರಿಂದ ಅವರ ಈ ಕಾದಂಬರಿ ನನಗೆ ಇಷ್ಟವಾಯಿತು. ನನ್ನನ್ನು ಬೆಳೆಸಿತು. ನಾನು ಅವರ ಕಥೆ, ಕವಿತೆಗಳನ್ನೂ ಪ್ರೀತಿಯಿಂದ ಓದಿದ್ದೇನೆ. -ಎಚ್. ಎಸ್. ರಾಘವೇಂದ್ರ ರಾವ್
ಇದು ನನ್ನ ಇಂತಹ ಬರಹಗಳ ಮೂರನೆಯ ಸಂಪುಟ. ಇದರಲ್ಲಿ ಹದಿನೇಳು ಜನರ ವ್ಯಕ್ತಿತ್ವ ಚಿತ್ರಣಗಳಿವೆ. ನಾನು ಬಾಲ್ಯದಲ್ಲಿ ನೋಡಿದವರು, ನನಗೆ ವೇದಪಾಠ ಹೇಳಿಕೊಟ್ಟವರು, ಜೊತೆಯಲ್ಲಿ ಕೆಲಸ ಮಾಡಿದ ಪತ್ರಕರ್ತರು, ಚಿತ್ರ ಕಲಾವಿದರು, ನಮ್ಮ ಕಾಲದ ರಸಿಕ ವಿದ್ವಾಂಸರು, ಪರ್ಯಾಯ ಚಿಕಿತ್ಸಕರು, ನಮ್ಮ ತಂದೆಯ ಓರಗೆಯವರು, ನಮ್ಮ ಮನೆಯ ಭಾಗವಾಗಿದ್ದವರು, ಪರಿವ್ರಾಜಕ ಮನೋಭಾವದ ಮಿತ್ರರು, ತಮ್ಮ ಸಾಹಿತ್ಯ-ಚಿಂತನೆಗಳಿಂದ ನನ್ನನ್ನು ರೂಪಿಸಿದವರು.... ಹೀಗೆ ಹಲವರಿದ್ದಾರೆ. ಇಂತಹ ಯಾರ ಲೋಪವನ್ನೂ ಎತ್ತಿ ತೋರಿಸುವುದು ಇಲ್ಲಿಯ ಆಶಯವಲ್ಲ. ಇಂಥವರ ಮೂಲಕ ನಮ್ಮ ಸಮಾಜವನ್ನು ಗ್ರಹಿಸುವುದು ಇಲ್ಲಿರುವ ಬಯಕೆ. ಇಲ್ಲಿ ಚಿತ್ರಣಗೊಂಡಿರುವವರೆಲ್ಲರೂ ನನ್ನ ಬದುಕನ್ನು ಶ್ರೀಮಂತಗೊಳಿಸಿದ್ದಾರೆ. ಇವರೆಲ್ಲರ ಚೈತನ್ಯದಿಂದ ಬದುಕಿನ ಚೆಲುವು ವರ್ಧಿಸಿದೆ; ಜಗತ್ತು ಸ್ವಾರಸ್ಯವಾಗಿ ಕಂಡಿದೆ; ಮನುಷ್ಯಸ್ವಭಾವದ ಮೇಲಿನ ಕುತೂಹಲ ಹೆಚ್ಚಾಗಿದೆ.
ವಿನಾಯಕ ನಾಯಕ್ , ರಾಜನ್ ದೇಶಪಾಂಡೆ
#
ರತಿಯು ಬೇಲಿ ದಾಟಿ ನಾಲ್ಲು ದಾಪು ನಡೆದು ಬಾವಿ ತಲುಪಿ ಕಟ್ಟೆಯ ಹಸಿರು ಮೆತ್ತೆ ಮೇಲೆ ಕುಳಿತಳು. ಪಾಚಿಯನ್ನು ನೇವರಿಸಿದಳು. ಸಮಾಧಾನವೆನ್ನಿಸಿತು. ನೀರಿನ ಮೇಲೈಯು ಗಾಳಿಗೆ ಕಂಪಿಸುತ್ತ ತರಂಗಗಳು ಹುಟ್ಟಿ, ಬೆಳೆದು, ಮತ್ತೆ ಹುಟ್ಟಿ ಬೆಳೆದು ಅಂತರ್ಧಾನ ಆಗುವುದನ್ನು ನೋಡತೊಡಗಿದಳು. ಅದೊಂದು ಮುಗಿಯದ ವರ್ತುಲವಾಗಿ ಯಾವುದು ಶುರು, ಎಲ್ಲಿಗೆ ಕೊನೆ ಎಂದು ಅವಳಿಗೆ ಬಗೆಹರಿಯಲಿಲ್ಲ. ಬಿಸಿಲು ಇಳಿಯುತ್ತಿತ್ತು. ಕುಳಿತಿದ್ದ ರತಿ ಎದ್ದಳು. ಅವಳು ಇನ್ನೂ ನೀರಿನ ಮೈಯನ್ನೇ ನೋಡುತ್ತಿದ್ದಳು. ತಿಳಿಬಣ್ಣದ ನೀರು ಮರದ ನೆರಳು, ಸಂಜೆಯ ಛಾಯೆಯ ಜೊತೆ ಸೇರಿಕೊಂಡು ಕಪ್ಪಾಗಿ ಕಾಣುತ್ತಿತ್ತು. ರತಿಯ ಕಣ್ಣಿಗೆ ಗಳಿಗೆ ಗಳಿಗೆಗೂ ಆ ಕಪ್ಪು ಗಾಡವಾಗುತ್ತ ಹೋದಂತೆನಿಸಿ, ಒಂದು ಹಂತದಲ್ಲಿ ಎಲ್ಲ ಕಡೆ ಕಪ್ಪು ಆವರಿಸಿಕೊಂಡುಬಿಟ್ಟಿತು. ಆ ಕ್ಷಣ ಸುತ್ತಲ ಶಬ್ದಗಳೂ ಸದ್ದಡಗಿ, ಕತ್ತಲ ಸುರಂಗದೊಳಗೆ ಹೋಗುತ್ತಿರುವ ಅನುಭವವಾಯಿತಷ್ಟೆ,
Showing 1801 to 1830 of 5159 results