• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಪ್ರಾಣಪಕ್ಷಿಯ ಅರಸುತ್ತಾ... | Pranapakshi Arasutta..

ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.

₹230   ₹205

Buy Now
ಪ್ರಾಣೇಶ್ PUNCH ಪಕ್ವಾನ್ | Pranesh punch pakvan

ರವಿ ಜೆ ಭಜಂತ್ರಿ

₹100   ₹89

Buy Now
ಪ್ರಾಣೇಶ್ ಪಯಣ | Pranesh payana

ಗಂಗಾವತಿ ಬಿ ಪ್ರಾಣೇಶ್

₹150   ₹134

Buy Now
ಪ್ರಾಣೇಶ್ ಪ್ರಪಂಚ | Pranesh prapancha

ಗಂಗಾವತಿ ಬಿ ಪ್ರಾಣೇಶ್

₹150   ₹134

Buy Now
ಪ್ರಾಪ್ತಿ | Praapti

ನಮಗೆ ಜನ್ಮ ಕೊಟ್ಟ ತಾಯಿ ತಂದೆಯ ಋಣ ತೀರಿಸಲು ಸಾಧ್ಯವಿಲ್ಲ; ಭಾಮಳಿಗೆ ತನ್ನ ಅಪ್ಪನ ಸಂಧ್ಯಾಕಾಲದಲ್ಲಿನ ಜೀವನ ಚೇತೋಹಾರಿಯಾಗಿಡಲು ಹಾಗೂ ನೆಮ್ಮದಿಗೆ ಎಡೆ ಮಾಡಿಕೊಡಲು ಋಣ 'ಪ್ರಾಪ್ತಿ' ಆಗಿದ್ದು ಸಂತೋಷವೆನಿಸಿತು. ಈ ಧಾರಾವಾಹಿಯಲ್ಲಿನ ಪ್ರತಿಯೊಂದು ಪಾತ್ರವೂ ವಾಸ್ತವಿಕತೆಗೆ ಹತ್ತಿರವಾಗಿದೆ. ಟಿ.ಎಸ್. ಪ್ರತಿಭಾ, ಚಿತ್ರದುರ್ಗ ಮನೋಜ್ಞವಾಗಿ ಓದಿಸಿಕೊಂಡು ಹೋದ ಧಾರಾವಾಹಿ ಇಷ್ಟು ಬೇಗ ಮುಗಿಯಿತೇ ಅಂತ ಅನ್ನಿಸಿತು. ಕಾದಂಬರಿಯಲ್ಲಿ ಬರುವ ಚಿದಾನಂದ, ಸತ್ಯಭಾಮ, ಭಾರ್ಗವ. ಶೀಲಾ ಈ ಪಾತ್ರಗಳ ವ್ಯಕ್ತಿತ್ವ ನಿರೂಪಣೆ ಸಹಜವಾಗಿದೆ. ಜೀವನದಿಂದ ಆರಿಸಿ ತೆಗೆದಂತೆ ಇದೆ. ಸತ್ಯಭಾಮ ಅಪ್ಪನನ್ನು ಅನುಮಾನಿಸುವ ವಯಸ್ಸಿನಿಂದ ಮೊದಲ್ಗೊಂಡು, ಜೀವನದ ಅನುಭವಗಳಿಂದ ಮಾಗಿ, ಕೊನೆಗೆ ಅಪ್ಪನನ್ನು ಒಪ್ಪಿಕೊಳ್ಳುವ, ತನ್ನ ಬಳಿಯೇ ಇರಿಸಿಕೊಳ್ಳುವ ಪರಿ ಅನನ್ಯವಾಗಿದೆ. - ಬಿ.ವಿ. ರಾಜಲಕ್ಷ್ಮಿ, ಬೆಂಗಳೂರು ಧಾರಾವಾಹಿ ಮನಮುಟ್ಟುವಂತಿತ್ತು. ತನ್ನ ಅಪ್ಪನನ್ನು ಧಿಕ್ಕರಿಸಿ ಅಂತರ್ಜಾತಿ ವಿವಾಹವಾಗಿ ಮಾನಸಿಕ ಯಾತನೆ ಅನುಭವಿಸಿ, ಸುಗಮ ಬದುಕು ಕಂಡುಕೊಂಡ ಭಾಮ, ತನ್ನ ಅಪ್ಪನನ್ನು ಕರೆತರಲು ವೆಂಕಟೇಶನೊಂದಿಗೆ ಚರ್ಚಿಸಿದಾಗ, ನಾಳೆ ನಮಗೂ ಇಂತಹ ಸ್ಥಿತಿ ಬರಬಹುದು. ನಾಳೆ ನಮ್ಮ ಮಗಳು ನಮ್ಮನ್ನು ನೋಡಿಕೊಳ್ಳಬೇಕು. ನಾವು ಅವರಿಗೆ ಮೇಲ್ಪಂಕ್ತಿ ಆಗಬೇಕೆ ಹೊರತು ತಪ್ಪು ಮಾದರಿ ಆಗಬಾರದು ಎಂಬ ವೆಂಕಟೇಶನ ಉದಾತ್ತ ಮಾತುಗಳಿಂದ ಭಾಮಾಳ ಹೃದಯ ತುಂಬಿ ಬಂದು ತನ್ನ ತಂದೆಯನ್ನು ಕರೆತರುವ ನಿರ್ಧಾರ ಮಾಡಿದ್ದು ಶ್ಲಾಘನೀಯ. ಎಂ. ಟಿ. ರಮಾನಂದ ರೆಡ್ಡಿ, ಚಿತ್ರದುರ್ಗ ಧಾರಾವಾಹಿ ಕೊನೆಯ ಕಂತಿನಲ್ಲಿ ಗಳಗಳನೆ ಅಳುವಂತೆ ಮಾಡಿಬಿಟ್ಟಿತು. ಮನುಷ್ಯ ಸಂಬಂಧಗಳ ಅನಾವರಣ ಎಷ್ಟು ಚೆನ್ನಾಗಿತ್ತೆಂದರೆ ವಸುಮತಿ ಉಡುಪರಿಗೆ ಮಾತ್ರ ಸಾಧ್ಯವೇನೋ ಇಂತಹ ಬರವಣಿಗೆ ಎನಿಸಿತು.

₹150   ₹134

Buy Now
ಪ್ರಿಯ ಮೀರಾ | PRIYA MEERA

"ನಮ್ಮ ಪ್ರೀತಿಪಾತ್ರರು ಸಾಧ್ಯವಾದಷ್ಟು ಕಾಲ ರಕ್ತಮಾಂಸದ ನಡುವೆ ಇರಲಿ ಎಂದು ಬಯಸುವುದೇ ನಿಜಕ್ಕೂ ಸ್ವಾರ್ಥ ಬಯಕೆ. ಇದು ನಮ್ಮ ದೌರ್ಬಲ್ಯದಿಂದ ಹುಟ್ಟಿಕೊಂಡಿದ್ದು ಅಥವಾ ಕಾಯವನ್ನು ತೊರೆದ ಬಳಿಕ ಅತ್ಯದ ಉಳಿವಿನ ಬಗ್ಗೆ ಇರುವ ನಂಬಿಕೆಯ ಫಲ. ಅಕಾರವು ಬದಲಾಗುತ್ತ ಬದಲಾಗುತ್ತ ಅಳಿದು ಹೋಗುತ್ತದೆ. ಆದರೆ ಮಾರ್ಗದರ್ಶಿಯಾದ ಚೈತನ್ಯವು ಬದಲಾಗುವುದೂ ಇಲ್ಲ, ಅಳಿದು ಹೋಗುವುದೂ ಇಲ್ಲ. ಪರಿಶುದ್ಧವಾದ ಪ್ರೀತಿಯು ಭೌತಿಕವಾದ ಕಾಯವನ್ನು ಮೀರಿ ಅಂತರಾತ್ಮವನ್ನು ಸೇರಿಕೊಂಡಾಗ ಅಗಣಿತ ಕಾಯಗಳಲ್ಲಿ ಇರುವ ಎಲ್ಲ ಜೀವಗಳಲ್ಲಿ ಏಕೀಭವಿಸುತ್ತದೆ..."

₹425   ₹362

Buy Now
ಪ್ರಿಯ ಸಖೀ

nil

₹130   ₹116

Buy Now
ಪ್ರೀತಿಯೆನುವ ಮಾಯೆ | Preetiyenuva Maaye

ಕಾವ್ಯದಂತೆ, ಸಣ್ಣಕಥೆಯಲ್ಲೂ ಲಕ್ಷಣರಾವ್ ಸದ್ಯ ಬಂಡಾಯಗಳ ಹಣೆಪಟ್ಟಿಗೆ ದಕ್ಕುವವರಲ್ಲ, ನವ್ಯದ ಅಂತರ್ಮುಖಿಕೆ, ಅಂತಃಪ್ರಶ್ನೆ, ಪ್ರಜ್ಞಾಪ್ರವಾಹತಂತ್ರ ಇದೇ ಮೊದಲಾದವು ಇವರ ಕಥೆಗಳಲ್ಲಿ ಕಾಣುವುದಿಲ್ಲ ಸಾಮಾಜಿಕ ಕಳಕಳಿಗಿಂತ ಭಿನ್ನ, ಅಂದರೆ ಸಾಮಾಜಿಕ ಸಮಸ್ಯೆಗಳಿಂದ ವಿಮುಖರು ಎಂದಲ್ಲ, ಸಾಮಾಜಿಕ ಸಮಸ್ಯೆಗಳು, ಕ್ರೂರ ವ್ಯವಸ್ಥೆ ಇವುಗಳ ಒತ್ತಡದಲ್ಲಿ, ದಮನಕಾರಿ ನಿಲುವುಗಳಲ್ಲಿ ಮನುಷ್ಯ ಸಂಬಂಧಗಳು, ಪ್ರೀತಿ ವಿಶ್ವಾಸಗಳು ಹೇಗೆ ನಲುಗಿಹೋಗುತ್ತಿವೆ ಎಂಬುದು ಲಕ್ಷಣರಾವ್ ಅವರ ಸೃಜನಶೀಲ ಮನಸ್ಸಿನ ಮುಖ್ಯ ಕಾಳಜಿಯಾಗಿದೆ. ಪ್ರೀತಿ, ಗಂಡು-ಹೆಣ್ಣಿನ ಪ್ರೀತಿ, ಜೀವನಪ್ರೀತಿ - ಇವು ವ್ಯವಸ್ಥೆಯ ಕ್ರೂರ ಹಿಡಿತದಲ್ಲಿ ನಲುಗಬಾರದು. ನಿಷೇಧ ಮೊದಲಾದ ನಕಾರಾತ್ಮಕ ಪ್ರವೃತ್ತಿಗಳಲ್ಲಿ ಪ್ರೀತಿ ಮುರುಟಿಹೋಗಬಾರದು ಎಂಬ ಆರೋಗ್ಯಕರ ಜೀವನದೃಷ್ಟಿ ಲಕ್ಷಣರಾವ್ ಅವರ ಕಥೆಗಳ ಹಿಂದಿನ ಮುಖ್ಯ ಮಾನವೀಯ ದನಿಯಾಗಿದೆ. ಲಕ್ಷಣರೊಳಗಿನ ಕವಿಯ ಆರೋಗ್ಯಕರ ಜೀವನದೃಷ್ಟಿ, ಸ್ಪಷ್ಟ ವಿಚಾರಗಳ ಜೊತೆಗೆ ಅವರ ಗದ್ಯವು ವಾಚ್ಯವಾಗದೆ ಧ್ವನಿಪೂರ್ಣವಾಗಿ ಕಾವ್ಯಕ್ಕೆ ಹತ್ತಿರವಾಗುತ್ತದೆ. ಜಿ.ಎಸ್.ಆಮೂರರು ಹೇಳಿರುವಂತೆ ಪ್ರಾಮಾಣಿಕತೆ, ತೀವ್ರತೆ ಮತ್ತು ಹೊಸದೃಷ್ಟಿ ಲಕ್ಷಣರಾವ್ ಅವರ ಕಾವ್ಯದ ಮುಖ್ಯ ಗುಣಗಳಾಗಿರುವಂತೆ ಕಥೆಗಳ ಮುಖ್ಯ ಗುಣವೂ ಆಗಿದೆ: ಶಕ್ತಿಯೂ ಆಗಿದೆ.

₹320   ₹272

Buy Now
ಪ್ರೀತ್ಸು | Preethsu

ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.

₹170   ₹145

Buy Now