• ಯಾವುದೇ ಕನ್ನಡ ಸ್ತಕಕ್ಕಾಗಿ ಸಂಪರ್ಕಿಸಿ
  • Call Us : +91 7022122121 / +91 8861212172
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
back

Publishers

Categories

Authors

Languages

Book Type

Clear All
Filter
Festive Ebook

₹249   ₹125

ಅಂತಾರಾಷ್ಟ್ರೀಯ ಕುಂಬಳಕಾಯಿ ಇಬುಕ್ |Antarashtreeya Kumbalakayi Ebook

ತೀರ ಸಾಮಾನ್ಯರನ್ನು ಕುರಿತ ಕತೆಗಳಿವು, ನಿಜ. ಆದರೆ ಈ ಸಾಮಾನ್ಯರ ಕನಸುಗಳು, ನಿರಾಶಾದಾಯಕವಾಗಿದ್ದರೂ ಅವರ ದೈನಿಕದ ಸ್ಥಿತಿಗತಿಗಳನ್ನು ಮರೆಮಾಚುವುದಿಲ್ಲ.

₹120   ₹60

ಅನಾಥ ಪ್ರೀತಿಯ ಅನುಬಂಧ ಇಬುಕ್ | Anatha Preetiya Anubandha Ebook

‘ ಪ್ರೀತಿ ‘ ಇದು ಎರಡೇ ಅಕ್ಷರದ ಒಂದು ಚಿಕ್ಕ ಪದವಾದರೂ ಎಲ್ಲಾ ಜೀವ ಚೇತನದಲ್ಲೂ ಸುಪ್ತವಾಗಿರುವ ಒಂದು ಅಪೂರ್ವ ಅನಂತ ಅನುಭೂತಿ. ಅದರಲ್ಲೂ ಮಾನವನಲ್ಲಿ ಹದಿ ಹರೆಯ ಅರಳುವ ಕಾಲಘಟ್ಟದಲ್ಲಿ ಪರಸ್ಪರ ಆಕರ್ಷಣೆಯ ರೆಕ್ಕೆ ಕಟ್ಟಿಕೊಂಡೇ ಹ್ರದಯಕ್ಕೆ ಲಗ್ಗೆ ಇಡುತ್ತದೆ. ಆಗ ಅದುಯಾವ ಪ್ರತಿಬಂಧಕ್ಕೂ ಒಳ ಪಡುವುದು ಕಷ್ಟ.

₹140   ₹70

ಅಮೋಘವರ್ಷ ಇಬುಕ್ | Amoghavarsha Ebook

“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು.

₹420   ₹210

ಅರ್ಧ ಬಿಸಿಲು ಅರ್ಧ ಮಳೆ ಇಬುಕ್ | Ardha Bisilu Ardha Male Ebook

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ… ಹೀಗೆ ವಿವಿಧ ವಸ್ತುಗಳ ಎಳೆ ಹಿಡಿದು ನಡೆದಿದ್ದಾರೆ ಸದಾಶಿವ ಸೊರಟೂರು, ಇಲ್ಲನ ಕಥೆಗಳಲ್ಲಿ ಕಲಾತ್ಮಕತೆ ಇದೆ. ಸುಲಅತ ಭಾಷೆ, ಮಾನವೀಯ ಮೌಲ್ಯಗಳ ಐಸಿ ಕಥನಗಾರಿಕೆಯ ಅಂದ ಹೆಚ್ಚಿಸಿವೆ. ವಾಸ್ತವ ಲೋಕದ ತಲ್ಲಣಗಳು ಇಲ್ಲ ಕಥೆಗಳಾಗಿವೆ. ಬಹುತ್ವದ ಪದರು ಪದರುಗಳು ಕಥೆಗಳಾಗಿ ಅನಾವರಣಗೊಳ್ಳುವ ಈ ಬಗೆ ಹೃದ್ಯ.

₹120   ₹60

ಆ ವದನ ಇಬುಕ್ | Aa Vadana Ebook

ಈ ಭೂಮಿಯ ಮೇಲೆ ‘ಕಾಮ’ ಯಾರನ್ನೂ ಬಿಟ್ಟಿಲ್ಲ. ಆದರೆ ಎಲ್ಲರೂ ಕಾಮಕ್ಕಾಗಿಯೇ ಬದುಕುವವರಲ್ಲ. ಪ್ರತಿಯೊಬ್ಬರ ಬದುಕಿನಲ್ಲೂ ಕವಲು ದಾರಿಗಳು ಇದ್ದೇ ಇರುತ್ತವೆ.

₹240   ₹120

ಆರೋಹಣ ಇಬುಕ್ | Arohana Ebook

ಕಾದಂಬರಿಯಲ್ಲಿ ಆದರ್ಶ ಶಿಕ್ಷಕನಾಗಿರುವ ತಂದೆಯ ಮೌಲ್ಯಗಳು ಒಂದೆಡೆಯಾದರೆ, ಅದೇ ದಾರಿಯಲ್ಲಿ ನಡೆದುಬಂದ ಮಗನ ವ್ಯಾಪಾರಿಕ ಆಲೋಚನೆಗಳು ಬೇರೆಯಾಗಿರುತ್ತವೆ

₹190   ₹95

ಇತ್ತ ಹಾಯಲಿ ಚಿತ್ತ ಇಬುಕ್ | Itta Hayali Chitta Ebook

ಉತ್ತರ ಪರ್ವ”ದಲ್ಲಿ ಆಯ್ಕೆಯಾದ ಅನುವಾದಿತ ಕಥೆಗಳ ಈ ಸಂಕಲನ ಒಂದು ತಾಜಾ ಅನುಭೂತಿಯನ್ನು ಎದುರು ನೋಡುತ್ತಿರುವ ಅಕ್ಷರಮೋಹಿಗಳ ಜೋಳಿಗೆಗೆ ಮುಡಿಪಾಗಿಟ್ಟ ಹೋಳಿಗೆ.

₹110   ₹55

ಇರುಳ ಬಾಗಿಲಿಗೆ ಕಣ್ಣ ದೀಪ ಇಬುಕ್ | Irula Bagilige Kanna Deepa Ebook

ಜೀವ ಕಾರುಣ್ಯದ ಕವಿತೆಗಳನ್ನು ಒಳಗೊಂಡ ಈ ಕೃತಿಯನ್ನು ಓದಲು ಹತ್ತು ಹಲವು ಕಾರಣಗಳಿವೆ. ಬಹುತ್ವದ ಆಶಯವನ್ನು ಕಟ್ಟಿಕೊಡುವ ಸಂಕಲನ ಸಮಕಾಲೀನ ವೈರುಧ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ.

₹140   ₹70

ಇವರು ಅವರು ದೇವರು ಇಬುಕ್ | Ivaru Avaru Devaru Ebook

ಕನ್ನಡದ ಜನಪ್ರಿಯ ಲೇಖಕರು, ಪತ್ರಕರ್ತರು ಆದ ಜೋಗಿ ಅವರ ‘ಇವರು ಅವರು ದೇವರು’ ಪುಸ್ತಕ ವ್ಯಕ್ತಿಚಿತ್ರಗಳನ್ನು ಕುರಿತ ಆಪ್ತ ಬರಹವಾಗಿದೆ. ಬದುಕಿನಲ್ಲಿ ಒಡನಾಡಿದ ಲೇಖಕರು, ಪತ್ರಕರ್ತರು, ಬಂಧುಗಳ ವ್ಯಕ್ತಿತ್ವವನ್ನು ತಮ್ಮ ಅನುಭವಕ್ಕೆ ದಕ್ಕಿಸಿಕೊಂಡು ನುಡಿಚಿತ್ರಗಳಾಗಿ ಜೋಗಿ ಅವರು ಕಟ್ಟಿಕೊಟ್ಟಿದ್ದಾರೆ. ಇವರ ಬರಹದಲ್ಲಿ ಭಾವುಕತೆ ಇದೆ, ಹಸನುಗೊಳಿಸುವ ಬದುಕಿದೆ, ಜೀವನದಲ್ಲಿ ಏನೇ ಬಂದರೂ ಜಯಿಸಿ ನಿಲ್ಲುವ ಆತ್ಮಸೈರ್ಯದ ಮಾರ್ಗದರ್ಶಿ ನೋಟವಿದೆ. ಈ ಪುಸ್ತಕ ಓದುತ್ತಾ ಹೋದರೆ ನಮ್ಮ ಬದುಕಿನಲ್ಲಿ ಬಂದ ಒಡನಾಡಿಗಳ ನೆನಪು ಮರುಕಳಿಸದೇ ಇರದು. ಹಾಗಾಗಿ ಓದಲು ನಿಮಗೆ ಇದೊಂದು ಉತ್ತಮ ಪುಸ್ತಕ.

₹200   ₹100

ಈ ಸಾವು ನ್ಯಾಯವೇ ಇಬುಕ್ | E Saavu nyayave Ebook

ಪ್ರತಿ ನಲ್ವತ್ತು ಸೆಕೆಂಡಿಗೆ ಜಗತ್ತಿನಲ್ಲಿ ಒಂದು ಆತ್ಮಹತ್ಯೆ. ಹದಿಹರೆಯದವರು ಹಾಗೂ ಯುವಜನತೆ ಸಾವಿಗೆ ಒಂದು ಪ್ರಮುಖ ಕಾರಣ ಆತ್ಮಹತ್ಯೆ. ಕುಟುಂಬ ಹಾಗೂ ಸಮಾಜದ ಮೇಲೆ ಆತ್ಮಹತ್ಯೆ ಬೀರುವ ಮಾನಸಿಕ, ಸಾಮಾಜಿಕ, ಆರ್ಥಿಕ ಪರಿಣಾಮ ಅನೂಹ್ಯ ಅಗಣಿತ. ಭಾರತದಲ್ಲಿ ವರ್ಷಂಪ್ರತಿ ಒಂದು ಲಕ್ಷಕ್ಕೂ ಮೀರಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಆತ್ಮಹತ್ಯೆ ಇಪ್ಪತ್ತು ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ. ಅಂದರೆ ಇಪ್ಪತ್ತು ಲಕ್ಷ ಮಂದಿ ಅಪರಾಧಿ ಪ್ರಜ್ಞೆ. ಪಾಪಪ್ರಜ್ಞೆಯಿಂದ ನರಳುತ್ತಾರೆ. ಪರೀಕ್ಷೆಯ ಒತ್ತಡ, ಪ್ರೇಮಭಂಗ, ಪಾಲಕರ ಮಿತಿಮೀರಿದ ಮಹತ್ವಾಕಾಂಕ್ಷೆ. ಅತಿಯಾದ ನಿರೀಕ್ಷೆಗಳು, ಅಸಾಮರ್ಥ್ಯ, ಅದಕ್ಷತೆ, ಒಂಟಿತನ, ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ತೀವ್ರವಾದ ಕೊರಗು, ಆರ್ಥಿಕ ಸಂಕಷ್ಟಗಳು, ತಿರಸ್ಕಾರ, ತಾತ್ಸಾರ, ಅಪಮಾನ ಮೊದಲಾದ ಕಾರಣಗಳಿಂದ ಆತ್ಮಹತ್ಯೆಗಳಾಗುತ್ತಿವೆ. ಮಹಡಿ ಏರಿ ಹಾರುವುದು, ಅಣೆಕಟ್ಟೆಯಿಂದ ಧುಮುಕುವುದು. ರೈಲಿಗೆ ತಲೆ ಕೊಡುವುದು ಯಾವ ಸಮಸ್ಯೆಗೂ ಪರಿಹಾರವಲ್ಲ. ಸತ್ತ ಮಾತ್ರಕ್ಕೆ ಸಮಸ್ಯೆಗಳು ಮುಗಿಯುವುದಿಲ್ಲ. ತಾಳ್ಮೆಯಿಂದ ಯೋಚಿಸಿದರೆ. ಸುತ್ತಲೂ ನೋಡಿದರೆ ಸಹಾಯಹಸ್ತ ಗೋಚರಿಸುತ್ತದೆ. ಕಣ್ಣೀರು ಒರೆಸುವ ಬೆರಳು ಕಾಣುತ್ತದೆ. ಸಾಂತ್ವನದ ಕೊರಳು ಕೇಳುತ್ತದೆ. ಸಹಾಯ ಬಯಸಿ, ಸಹಾಯ ಮಾಡಿ ಮುಂದಾಗುವ ಅನಾಹುತ ತಪ್ಪಿಸಿ: ಜೀವ ಉಳಿಸಿ ಎಂಬುದೇ ಈ ಕೃತಿಯ ಸಾರ. ನಾಡಿನ ಖ್ಯಾತ ಮನೋವಿಜ್ಞಾನ ಹಾಗೂ ಶಿಕ್ಷಣ ಲೇಖಕ ಡಾ. ಮಹಾಬಲೇಶ್ವರ ರಾವ್ ಈ ಕೃತಿಯ ಕರ್ತೃ.

₹130   ₹65

ಈಗಲ್ಸ್ ಲೈನ್ ಇಬುಕ್ | Eagles Line Ebook

ಈ ಕೃತಿಯ ಹಲವು ಅಧ್ಯಾಯಗಳಲ್ಲಿ ಒಂದೊಂದು ಕಥೆಗೆ ವಸ್ತುವಾಗುವಂಥ ಬೆರಗಿನ ವಿವರಗಳಿವೆ. ಸ್ವಾರಸ್ಯಕರ ಮಾಹಿತಿಗಳಿವೆ. ಹಾಗಂತ ಇದು ಅಜ್ಜಿಕಥೆಯಲ್ಲ.

₹220   ₹110

ಉಪರಿ ಇಬುಕ್ | Upari Ebook

ಹಗ್ಗದ ಮೇಲೆ ನಡೆಯುವಂತಹ ಏಕಾಗ್ರತೆಯಿಂದ ಗಮ್ಯದತ್ತ ಸಾಗುವ ಇಲ್ಲಿನ ಕಥೆಗಳಲ್ಲಿ ನಗರ ಜೀವನದ ಸಂಕೀರ್ಣತೆಯೂ ಇದೆ: ಹಳ್ಳಿಗಳ ಮುಗ್ಧ ಬದುಕಿನ ಸರಳತೆಯೂ ಇದೆ. ಅಜಿತ್ ಆರಿಸಿಕೊಂಡಿರುವ ಕಥಾವಸ್ತುಗಳು ಯಾವುದೇ ಒಂದು ಪ್ರದೇಶಕ್ಕೆ, ವರ್ಗಕ್ಕೆ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರನ್ನೂ ಒಳಗಿಳಿಸಿಕೊಂಡು ಪಾತ್ರಗಳೊಂದಿಗೆ ಬೆಸೆಯುತ್ತವೆ.

₹120   ₹60

ಎಲ್ಲೆಲ್ಲು ಸಂಗೀತವೇ ಇಬುಕ್ | YELLELLU SANGEETHAVE Ebook

ವಿಜಯಭಾಸ್ಕ‌ರ್ ಸಂಗೀತ ನಿರ್ದೇಶನಕ್ಕೇ ಘನತೆ, ಗೌರವಗಳನ್ನು ತಂದವರು. ನಾನು ಅವರು ಚಿತ್ರರಂಗ ಪ್ರವೇಶಿಸಿದ ದಿನಗಳಿಂದಲೂ ಅವರ ಕಾರ್ಯ ವೈಖರಿಯನ್ನು ನೋಡುತ್ತಾ ಬಂದಿದ್ದೇನೆ, ಅವರು ಕೆಲಸವನ್ನು ಅರಸುತ್ತಿರುವ ಸಂದರ್ಭದಲ್ಲಿಯೂ ನೋಡಿದ್ದೇನೆ, ಕೈತುಂಬಾ ಕೆಲಸ ಇದ್ದ ಕಾಲದಲ್ಲಿಯೂ ನೋಡಿದ್ದೇನೆ. ಸ್ಥಿತಪ್ರಜ್ಞ ಸಾಧಕರು, ಚಿತ್ರಕ್ಕೆ ಏನು ಬೇಕು ಎನ್ನುವುದರ ಕಡೆಗೆ ಸದಾ ಅವರ ಚಿತ್ತ ಇರುತ್ತಿತ್ತು. ಸಂಗೀತವನ್ನು ಎಷ್ಟು ಆಳವಾಗಿ ಬಲ್ಲರೋ, ಸಾಹಿತ್ಯವನ್ನೂ ಕೂಡ ಅಷ್ಟೇ ಆಳವಾಗಿ ತಿಳಿದವರು. ಚಿತ್ರದ ಅಗತ್ಯವನ್ನು ಅರಿತು ಸಂಗೀತವನ್ನು ನೀಡುತ್ತಿದ್ದರು. ಹಾಡನ್ನು ರಂಜಕೀಯವಾಗಿಸುವುದು ಎಂದಿಗೂ ಅವರ ಉದ್ದೇಶವಾಗಿರಲಿಲ್ಲ. ಅದು ಕಥೆಯ ಹಂದರದಲ್ಲಿ ಸೇರಬೇಕು, ಪಾತ್ರದ ಅಭಿವ್ಯಕ್ತಿಯಾಗಬೇಕು, ಜನರ ಮನದಲ್ಲಿ ಉಳಿದುಕೊಳ್ಳಬೇಕು ಎನ್ನುವುದನ್ನು ಸದಾ ಚಿಂತಿಸುತ್ತಿದ್ದರು, ಹೀಗಾಗಿ ಅವರು ಸೃಷ್ಟಿಸಿದ ಗೀತೆಗಳು ಇಂದಿಗೂ ಅಮರವಾಗಿ ಉಳಿದಿವೆ. ವಿಜಯಭಾಸ್ಕ‌ರ್ ಕನ್ನಡಕ್ಕೆ ಟೈಟಲ್ ಕಾರ್ಡ್ ತೋರಿಸುವಲ್ಲಿ ಹೊಸತನ ತಂದರು, ಥೀಂ ಮ್ಯೂಸಿಕ್ ತಂದರು, ಶಾಟ್ ಡಿವಿಷನ್ಗಳನ್ನು ತಂದರು, ಹೊಸ ವಾದ್ಯಗಳನ್ನು ಬಳಸಿದರು, ಬಹಳ ಮುಖ್ಯವಾಗಿ ಕನ್ನಡದ ಗಾಯಕರನ್ನು ಹುಡುಕಿ ಅವರ ಬಳಿ ಹಾಡಿಸಿದರು. ವಿಜಯಭಾಸ್ಕ‌ರ್ ಇದ್ದಲ್ಲಿ ಹೊಸತನ ಮತ್ತು ಪ್ರಯೋಗಶೀಲತೆ ಇದ್ದೇ ಇರುತ್ತಿತ್ತು. ಹೀಗಾಗಿ ಅವರು ವ್ಯಾಪಾರಿ ಚಿತ್ರಗಳಂತೆ ಕಲಾತ್ಮಕ ಚಿತ್ರಗಳಿಗೂ ವರದಾನವಾದರು. ವಿಜಯಭಾಸ್ಕ‌ರ್ ಗೀತ ರಚನೆಕಾರರ, ಸಂಗೀತ ನಿರ್ದೇಶಕರ ಹಕ್ಕುಗಳಿಗೆ ಹೋರಾಡಿದರು, ಈ ಹೋರಾಟದಲ್ಲಿ ಅವರ ತತ್ಪರತೆಯನ್ನು ನಾನು ಹತ್ತಿರದಿಂದ ಕಂಡಿದ್ದೇನೆ, 'ಸಿನಿ ಮ್ಯೂಸಿಷಿಯನ್ಸ್ ಅಸೋಸಿಯೇಷನ್' ಅಧ್ಯಕ್ಷರಾಗಿ ಅವರು ವಾದ್ಯಗಾರರ ಅಭ್ಯುದಯಕ್ಕೆ ಶ್ರಮಿಸಿದರು. ವಿಜಯಭಾಸ್ಕರ್ ನಿಜವಾದ ಅರ್ಥದಲ್ಲಿ ಶಕಪುರುಷರು.

₹195   ₹98

ಒಳ್ಳೆಯ ಬದುಕಿನ ಸೂತ್ರಗಳು ಇಬುಕ್ | Olleya Badukina Sutragalu Ebook

ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು. ಇದರಲ್ಲಿ ಸಮಾಜದ ಸಾಕಷ್ಟು ಸಾಧಕ-ಬಾಧಕಗಳನ್ನು ಕಂಡಿರುವ ಲೇಖಕ ಒಬ್ಬ ವ್ಯಕ್ತಿಯಾಗಿ ನಾವು ಹೇಗೆ ನಡೆದುಕೊಂಡರೆ ಚೆಂದ ಎಂಬುದನ್ನು ಹೇಳುತ್ತಾರೆ. ನಮ್ಮನ್ನು ನಿಂದಿಸುವವರು, ಕೆಟ್ಟದ್ದು ಮಾಡುವವರು, ತೊಂದರೆ ಕೊಡುವವರು ಇದ್ದೇ ಇರುತ್ತಾರೆ. ಆದರೆ ಇವರಿಗೆ ನಾವು ನಮ್ಮ ಒಳ್ಳೆತನವನ್ನೇ ತೋರಿಸುತ್ತಲೇ ಇರಬೇಕು. ನೆಗೆಟಿವ್ ಅಂಶಗಳನ್ನು ಬಿಟ್ಟು ಸದಾ ಪಾಸಿಟಿವ್ ಆಲೋಚನೆಗಳನ್ನು ಮಾಡುತ್ತಾ ನಮ್ಮ ಮಾನಸಿಕ, ದೈಹಿಕ ಸ್ಥಿತಿಯನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬೇಕು ಎಂಬುದೇ ಈ ಪುಸ್ತಕದ ಸಂದೇಶವಾಗಿದೆ. ಒಟ್ಟಾರೆ ನಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವಲ್ಲಿ ಈ ಪುಸ್ತಕ

₹150   ₹75

ಓಡಿ ಹೋದಾಕಿ ಇಬುಕ್ | Odi Hodaki Ebook

ಎಪ್ಪತ್ತುಎಪ್ಪತೈದು ವರುಷಗಳ ಹಿಂದೆ ವಿಧವೆಯೊಬ್ಬಳು, ಮರು ಮದುವೆಗೆ ಅವಕಾಶವಿಲ್ಲದೆ, ಮತ್ತೆ ಬದುಕು ಕಟ್ಟಿ ಕೊಳ್ಳಲು ಪ್ರಯತ್ನಿಸಿ ನರಕ ಯಾತನೆ ಅನುಭವಿಸಿದ ಒಬ್ಬ ವಿಧವೆಯ ಕಥೆಯಿತು

₹215   ₹108

ಕಗ್ಗಕ್ಕೊಂದು ನ್ಯಾನೋ ಕತೆ ಇಬುಕ್ | Kaggakkondu Nano Kathe Ebook

ಇದೊಂದು ಮಹತ್ವದ ಕೃತಿ. ಕಗ್ಗಗಳ ಕುರಿತಾಗಿ ವ್ಯಾಖ್ಯಾನ ಹೊಸದೇನಲ್ಲ.

₹130   ₹65

ಕಥಾ ಸಾಗರಿ ಇಬುಕ್ | Katha Saagari Ebook

ಇದು ಮಕ್ಕಳ ಪ್ರತಿಯಾಗಿದ್ದರೂ ಹಿರಿಯರು ಕೂಡ ಓದಿ ಆನಂದಿಸುವಂಥದ್ದು. ಪಾಲಕರು ಓದಿ ಮಕ್ಕಳಿಗೂ ಓದಿಸಿ ಟಿವಿ ಕಂಪ್ಯೂಟರ್ ಮೊಬೈಲ್ ಗಳಿಗಿಂತ ಪುಸ್ತಕಗಳನ್ನು ಓದುವುದು ಮಕ್ಕಳ ವಿಕಾಸ ಹಾಗೂ ಆರೋಗ್ಯದ ಹಿತೈದ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು ಉತ್ತಮ ಪುಸ್ತಕಗಳನ್ನು ಮಕ್ಕಳಿಂದ ಓದಿಸಿ ಅವರ ವ್ಯಕ್ತಿತ್ವ ವಿಕಸನವಾದರೆ ಈ ಪುಸ್ತಕ ಬರೆದದ್ದು ಸಾರ್ಥಕವಾದಂತೆ.

₹120   ₹60

ಕನಸುಗಳ ಶ್ರಾದ್ಧ ಇಬುಕ್ | Kanasugala Shraaddha Ebook

ಬ್ರಾಹ್ಮಣರಿಗೆ ʼಮನು ಸ್ಮತಿʼ ಅಸ್ಪೃಶ್ಯ ಸಂಸ್ಕೃತಿಯನ್ನು ಹೇಳಿ ಕೊಟ್ಟಿತೆ?

₹200   ₹100