• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಬದುಕೇ ಭಗವಂತ ಇಬುಕ್ | Baduke Bhagavanta Ebook

ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ. ಶ್ರೀಯುತರಾದ ತರಾಸು ಅನಕೃ ಎಸ್ ಕೆ ಕರೀಂಖಾನ್ ಮುಂತಾದವರ ಜೀವನದ ಮೇಲೆ ಒಂದಿಷ್ಟು ಬೆಳಕು ಚೆಲ್ಲುತ್ತಾರೆ. ಅವರು ಸಂದರ್ಭಕ್ಕೆ ತಕ್ಕಂತೆ ಉದಾಹರಣೆ ನೀಡಿರುವ ಖ್ಯಾತ ಕವಿಗಳ ಕವನಗಳ ಸಾಲು ನಮ್ಮಲ್ಲಿ ಚಿಂತನೆ ಉಂಟುಮಾಡುತ್ತದೆ. ಈ ಲೇಖನಮಾಲೆ ಪದೇ ಪದೇ ಓದುತ್ತಲೇ ಇರುವಂತಹದ್ದು.

₹170   ₹85

Buy Now
ಬಿಂಬ ಬಿಂಬನ ಇಬುಕ್ | Bimba Bimbana Ebook

ಸಿನಿಮಾ ಮತ್ತು ಸಾಹಿತ್ಯ ಎರಡರಲ್ಲೂ ಪ್ರತಿಮಾ ವಿಧಾನ ಭಿನ್ನ, ಸಂಜ್ಞಾ ಕ್ರಮವೂ ಭಿನ್ನ. ಸಾಹಿತ್ಯದ ಮೂಲಧಾತುವಾದ ಶಬ್ದವು ಅಮೂರ್ತವಾಗಿರುತ್ತದೆ. ಈ ಅಮೂರ್ತ ಧಾತುವನ್ನು ಇಟ್ಟುಕೊಂಡು ಸಾಹಿತಿ ಮೂರ್ತ ಬಿಂಬವನ್ನು ಕಟ್ಟುತ್ತಿರುತ್ತಾನೆ. ಸಿನಿಮಾದಲ್ಲಿ ಮೂಲಧಾತುವಾದ ಬಿಂಬವೇ ಮೂರ್ತ. ನಿರ್ದೇಶಕ ಅದರ ನೆರವಿನಿಂದ ಕೃತಿ ಕಟ್ಟುತ್ತಿರುವಾಗ ಮೂರ್ತವನ್ನು ಮೀರಿ ಅಮೂರ್ತವನ್ನು ತರಬಲ್ಲ ಬಿಂಬದ ಹುಡುಕಾಟದಲ್ಲಿರುತ್ತಾನೆ. ಅಂದರೆ ಅಮೂರ್ತದಿಂದ ಮೂರ್ತ ಬಿಂಬ ಕಟ್ಟುವ ಸಾಹಿತಿಯ ನುಡಿಗಟ್ಟು ಮೂರ್ತದಿಂದ ಅಮೂರ್ತಕ್ಕೆ ಜಿಗಿಯಬಲ್ಲ ಬಿಂಬಕ್ಕೆ ಹುಡುಕುವ ಸಿನಿಮಾ ನಿರ್ದೇಶಕನಿಗೆ ಊರುಗೋಲಾಗಲಾರದು.

₹385   ₹193

Buy Now
ಬೂಸ್ಟರ್ ಡೋಸ್ ಮುನಿಯಮ್ಮ ಇಬುಕ್ | BOOSTER DOSE MUNIYAMMA Ebook

ಇಪ್ಪತ್ತನೆಯ ಶತಮಾನದ ನಲ್ವತ್ತರ ದಶಕದಲ್ಲಿ ಅಲ್ಬೆ ಕಮೂ ಬರೆದ ಆಧುನಿಕ ಕ್ಲಾಸಿಕ್ ಎಂದು ಪರಿಗಣಿಸಲಾಗುವ ದಿ ಪ್ಲೇಗ್ ಕೃತಿಯೂ ಮನುಷ್ಯರ ಅಸಹಾಯಕತೆ, ದಾರುಣತೆ, ದುಷ್ಟತನ ಮತ್ತು ಕರುಣೆಯನ್ನು ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪರಿಶೀಲಿಸುತ್ತದೆ. ಕಾಯಿಲೆಯೊಂದು ರೂಪಕವಾಗಿ ಕೊಳೆತ ಸಮಾಜದ ಅಸ್ವಾಸ್ಥ್ಯವನ್ನು ಬೆಳಕಿಗೆ ತರುವುದೇ ಈ ಕೃತಿಯ ಮುಖ್ಯ ಆಶಯ. ಅದಾಗಿ ಏಳು ದಶಕದ ಬಳಿಕ ನಾವು ಬದುಕುತ್ತಿರುವ ವಿಶ್ವವು ಒಂದು ಜಾಗತಿಕ ಸಾಂಕ್ರಾಮಿಕವನ್ನು ಎದುರಿಸಿತು. ಇಂದು ಬದುಕುಳಿದಿರುವ ನಾವೆಲ್ಲ ಅದಕ್ಕೆ ಸಾಕ್ಷಿಯಾದೆವು. ಪತ್ರಕರ್ತರಾದ ಸಂತೆಕಸಲಗೆರೆ ಪ್ರಕಾಶ್ ಅವರು ಕೂಡ ಆ ಕಾಲಘಟ್ಟದ ಅನುಭವವನ್ನು ಕಥೆಗಳ ರೂಪದಲ್ಲಿ 'ಬೂಸ್ಟರ್ ಡೋಸ್ ಮುನಿಯಮ್ಮ' ಎಂಬ ಸಂಕಲನದ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಹನ್ನೆರಡು ಕಥೆಗಳ ಈ ಸಂಕಲನವು ಜಾಗತಿಕ ಮಹಾಮಾರಿಯ ರುದ್ರಭಯಾನಕತೆಯ ವಿವಿಧ ರೂಪವನ್ನು ಕಥೆಗಳಲ್ಲಿ ಹಿಡಿದಿರಲು ಯತ್ನಿಸುತ್ತದೆ. ಜಾಗತಿಕ ಕಾಯಿಲೆಯ ಸ್ವರೂಪ ಮನೆ-ಕುಟುಂಬ-ಗ್ರಾಮ-ನಗರದ ಬೀದಿಗಳಲ್ಲಿ ಹೇಗೆ ಕಾಣಿಸಿಕೊಂಡಿತು. ಯಾವ ಪರಿಣಾಮವನ್ನುಂಟು ಮಾಡಿತು ಎಂದು ಇಲ್ಲಿನ ಕಥೆಗಳು ಅರಿಯಲು ಪ್ರಯತ್ನಿಸುತ್ತವೆ.

₹180   ₹90

Buy Now
ಬೆಳವಡಿ ಮಲ್ಲಮ್ಮ ಇಬುಕ್ | Belavadi Mallamma Ebook

ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು

₹200   ₹100

Buy Now
ಬೇಸೂರ್ ಇಬುಕ್ | Besur Ebook

ಕವಯತ್ರಿ ವಿದ್ಯಾ ಭರತನಹಳ್ಳಿಯವರು ಕಥಾ ಪ್ರಪಂಚಕ್ಕೆ ಕಾಲಿರಿಸಿದ್ದು ಇತ್ತೀಚೆಗೆ. ನೋಡನೋಡುತ್ತ ಮೂಡಿಬಂದ ಹದಿಮೂರು ಕಥೆಗಳ ಸಂಕಲನ 'ಬೇಸೂರ್'. ರೋಚಕತೆಯ ಮೋಹಕ್ಕೆ ಬೀಳದಿದ್ದರೂ ಶೈಲಿ ಚುರುಕಾಗಿದೆ. ವಸ್ತು ಮತ್ತು ಪಾತ್ರಗಳ ಆಯ್ಕೆ ತುಂಬಾ ಅಥೆಂಟಿಕ್ ಆಗಿದೆ. ಕಥೆಗಾರನಿಗೆ ಅಗತ್ಯವಾದ ನಿರ್ಲಿಪ್ತತೆ ವಿದ್ಯಾರಿಗೆ ಸಿದ್ದಿಸಿದೆ. ಕೆಲವು ಕತೆಗಳಂತೂ ಹೃದಯದಾಳವ ಹೊಕ್ಕು ಬಗೆಯುವಂತಿವೆ. ಗಂಡನೆಂಬ ಪ್ರಾಣಿಯ ಕ್ರೌರ್ಯಕ್ಕೆ ಸಿಕ್ಕು. ಹಿಚುಕಲ್ಪಟ್ಟು ಮಸಣ ಸೇರುವ 'ಆಯಿ'ಯ ಕಮಲಾಕ್ಷಿ, ಅಂಥದೇ ಇನ್ನೊಬ್ಬ ಗಂಡನನ್ನು ಧಿಕ್ಕರಿಸಿ ಹೊರಬಂದು ಸ್ವಂತ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸುವ 'ಹೇಳೆ ಮೇದಿನಿ'ಯ ಮೇದಿನಿ. ಸ್ತ್ರೀ ಹೃದಯದ ಉದಾತ್ತತೆ ಮೆರೆಯುವ 'ಗಿಂಡಿ ತುಂಬಿದ ಹಾಲಿ'ನ ಶಾಂತಲೆ. ತನ್ನ ಉಕ್ಕುವ ಪ್ರತಿಭೆಯನ್ನು ಸದಾ ಸಿಟ್ಟು, ಸೆಡವು, ಕೊಂಕು ಮಾತುಗಳಿಂದ ಮುರುಟಿಸುವ ಗಂಡನನ್ನು ಕಟ್ಟಿಕೊಂಡು ವಿಲ ವಿಲ ಒದ್ದಾಡುವ ವರ್ಷಾ ದೇಶಪಾಂಡೆ ಮುಂತಾದ ಜೀವಗಳು ಕಥೆ ಓದಿ ಮುಗಿಸಿಯಾದಮೇಲೂ ಬಹುಕಾಲ ನೆನಪಿನಲ್ಲಿ ಸ್ಥಾಯಿಯಾಗುತ್ತವೆ. ಮನ ಕದಡುತ್ತವೆ. ಚಿಂತನೆಗೆ ಹಚ್ಚುತ್ತವೆ. ವಸ್ತುವಿನ ಗಟ್ಟಿತನದಿಂದ, ಶೈಲಿಯ ದಟ್ಟತೆಯಿಂದ, ಜೀವನಾನುಭವದ ಸಮೃದ್ಧತೆಯಿಂದ ವಿದ್ಯಾ ಭರತನಹಳ್ಳಿಯವರ 'ಬೇಸೂರ್' ಕಥಾ ಸಂಕಲನ ಸಾಹಿತ್ಯ ಲೋಕದಲ್ಲಿ ತನ್ನದೇ ಒಂದು ಛಾಪು ಮೂಡಿಸುತ್ತದೆ.

₹125   ₹63

Buy Now
ಭಾನುಮತಿಯ ಪರಿವಾರ ಇಬುಕ್ | Bhanumatiya Parivara Ebook

” ಭಾನುಮತಿಯ ಪರಿವಾರ” ಎಂಬುದು ಹಿಂದಿ ನಾಣ್ಣುಡಿ “ಭಾನುಮತೀ ಕಾ ಕುನ್ ಬಾ”ದ ಕನ್ನಡ ಅನುವಾದ.

₹140   ₹70

Buy Now
ಮಂಡ್ಯ ರಮೇಶ್ ನಟನ ಕಥೆ ಇಬುಕ್ | Mandya Ramesh natana Kathe Ebook

ನಟನ ಕಥೆ. ಮಂಡ್ಯ ರಮೇಶ್ ಕಟ್ಟಿದ ನಾಟಕ ಕೂಟದ ಸಾಹಸಗಾಥೆ. ಭೂಮಿ ಪಡೆಯುವುದರಿಂದ ಕಟ್ಟಡ ಕಟ್ಟುವವರೆಗಿನ ಬವಣೆಗಳು ಮನಸ್ಸನ್ನು ತಟ್ಟುತ್ತವೆ. ಜೊತೆಗೆ ಮಂಡ್ಯ ರಮೇಶ್ ಅವರ ಅಂಕಿತ ಭಾವ, ಪಾತ್ರಧಾರಿಗಳಿಂದ ಪರಿಪೂರ್ಣ ಅಭಿನಯಕ್ಕೆ ತರಬೇತಿ ಅನನ್ಯ. ಅವರ ವಿದೇಶ ಪ್ರವಾಸ… ಅವರ ವಿನೀತ ಭಾವ… ಅವರ ಪುಸ್ತಕ ಪಠಣ ಮುದ ನೀಡುತ್ತವೆ. ಕನ್ನಡ ಸ್ಪಷ್ಟವಾಗಿ ಮಾತಾಡಲು ಬರದ ಮಕ್ಕಳು ರಜಾಮಜಾ ಕೂಟ ಸೇರಿ ವೇದಿಕೆ ಹತ್ತುವ ಭಯ ಕಳೆದು ನಟಿಸುವುದು… ಹ್ಯಾಟ್ಸ್ ಆಫ್ ಟು ಮಂಡ್ಯ ರಮೇಶ್.

₹250   ₹125

Buy Now
ಮನಿ ಮನಿ ಎಕಾನಮಿ ಇಬುಕ್ | Money Money Economy Ebook

ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ.’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.

₹160   ₹80

Buy Now
ಮನೆ ಇ೦ಜಿನಿಯರ್ ಇಬುಕ್ | mane Engineer Ebook

ಮನೆ ಇಂಜಿನಿಯರ್" ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್‌ಕದಮ್‌ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ಮನೆ ಇಂಜಿನಿಯರ್' ಪರಿಪೂರ್ಣತೆಯನ್ನು ಪಡೆದು ಕೊಳ್ಳುವುದರಲ್ಲಿ ಸಫಲವಾಗಿದೆ. ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್, ಒಳಾಂಗಣ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾಗಬಹುದಾದ ಎಲ್ಲ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ಲಭ್ಯವಿದೆ. 'ಮನೆ ಕಟ್ಟಿನೋಡು, ಮದುವೆ ಮಾಡಿನೋಡು' ಎಂಬ ಕನ್ನಡದ ಗಾದೆ ಮಾತೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಿಬಿಡಬಹುದು. ಆದರೆ ಮನೆಯನ್ನು ಕಟ್ಟುವುದು ಹಾಗಾಗುವುದಿಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆಯಿರುತ್ತದೆ. ಈ ನಿಟ್ಟಿನಲ್ಲ. ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಮನೆಯನ್ನು ಕಟ್ಟುವ ಮಾಲೀಕರು ಹೀಗೆ ಪ್ರತಿಯೊಬ್ಬರಿಗೂ ಈ ಪುಸ್ತಕವು ಅತ್ಯಂತ ಉಪಯುಕ್ತವಾಗಿದೆ. ಇವರಿಗೆ ಶುಭವಾಗಲಿ.

₹495   ₹248

Buy Now
ಮಹಾವಿನಾಶ ಇಬುಕ್ | Mahavinasha Ebook

ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ

₹450   ₹225

Buy Now
ಮಾದಕ ದೊರೆ ಇಬುಕ್ | Maadaka Dore Ebook

ಕೇವಲ ಮಾದಕ ವಸ್ತುಗಳ ಮಾರಾಟ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವವರು ಇದ್ದಾರೆ. ಆದರೆ ಪಾಬ್ಲೊ ಕೇವಲ ಮಾದಕ ದೊರೆ ಮಾತ್ರ ಅಲ್ಲ. ಅವನ ಜನರ ಆರಾಧ್ಯ ದೈವ. ಅಮೆರಿಕ ಸರ್ಕಾರಕ್ಕೆ ತಲೆನೋವಾಗಿ… ಕೊನೆಗೆ ತನ್ನ ದೇಶದ ಮಕುಟವಿಲ್ಲದ ಮಹಾರಾಜನಾದ. ಪಾಬ್ಲೊನ ಗೆಳತಿಯರು… ಮಕ್ಕಳು… ಅವನ ದೊಡ್ಡ ವಿಲ್ಲಾ.. ಅವನನ್ನು ಹಿಡಿಯಲು ಪ್ರಯತ್ನಿಸಿದ ಅಧಿಕಾರಿಗಳು. ರೋಚಕ ನಿರೂಪಣೆ.

₹375   ₹188

Buy Now
ಮಾಯಾಗುಹೆ ಮತ್ತು ಇತರ ಮಕ್ಕಳ ಕತೆಗಳು ಇಬುಕ್| Maya Guhe Mattu Itara Makkala Kathegalu Ebook

ಮಕ್ಕಳ ಸಾಹಿತ್ಯ ರಚನೆಗೆ ಬೇಕಾದ ಮುಗ್ಧ ಮನಸ್ಥಿತಿ, ಆದರ್ಶಪ್ರಿಯತೆ ಮತ್ತು ಬೆರಗು ನಮ್ಗಳಲ್ಲಿ ಇನ್ನೂ ಕಲುಷಿತಗೊಳ್ಳದೇ ಹಾಗೆಯೇ ಉಳಿದುಕೊಂಡು ໙໐໖໖. ಜನಪದ ಕತೆಗಳ ಹಾಗೂ ಪ್ರಾಣಿ ಪ್ರಪಂಚದ ಕಥನಗಳ ಜಾಡಿನಲ್ಲಿ ನವ್ಯ ಇಲ್ಲಿನ ಕತೆಗಳನ್ನು ಬರೆದಂತೆ ತೋರಿದರೂ ಮನುಷ್ಯನಲ್ಲಿ ನೆಲೆಗೊಂಡಿರುವ ಕ್ರೌರ್ಯ, ದುರಾಸೆ, ಅಪ್ರಮಾಣಿಕತೆ ಮುಂತಾದೆ ಅಪಸವ್ಯಗಳ ಎದುರಿಗೆ ಬಾಲಕರು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು ಎನ್ನುವ ಮಾದರಿಯನ್ನು ಇಲ್ಲಿನ ಕತೆಗಳು ನೀಡುತ್ತವೆ.

₹140   ₹70

Buy Now
ಮಿಸ್ಸಿನ ಡೈರಿ ಇಬುಕ್ | Missina Dairy Ebook

ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ

₹200   ₹100

Buy Now
ಮೆಮರೀಸ್ ಆಫ್ ಬಾರ್ಸ ಇಬುಕ್ | Memories of Barca Ebook

ಆಸ್ಕರ್ ಟಿವಿಯಲ್ಲಿ 1992ರ ಬಾರ್ಸಿಲೋನಾ ಒಲಂಪಿಕ್ಸ್ ಹೈಲೈಟ್ಸ್ ಹಲ್ಲು ಕಿಸಿದು ಕೊಂಡು ನೋಡಿದ ನೆನಪು ಅಚ್ಚಳಿಯದೆ ಮಸ್ತಕದಲ್ಲಿ ಅಚ್ಚಾಗಿದೆ. ಅವತ್ತಿಗೆ ಯಾರಾದರೂ ಇನ್ನೊಂದು ಹತ್ತು ವರ್ಷದಲ್ಲಿ ಈ ಒಲಂಪಿಕ್ ಆಟಗಾರರಿಗೆ ಎಂದು ಕಟ್ಟಿರುವ ಸುಸಜ್ಜಿತ ಮನೆಯೊಂದರ ಒಡೆಯ ನೀನಾಗುತ್ತೀಯ ಎಂದಿದ್ದರೆ ಹುಚ್ಚಾಪಟ್ಟೆ ನಕ್ಕು, ಹಂಗಿಸುವುದಕ್ಕೂ ಒಂದು ಮಿತಿ ಇರುತ್ತೆ ಗೆಳೆಯ ಎಂದು ಹೇಳಿ ಕಳಿಸುತ್ತಿದ್ದೆ. ಆದರೆ ದೈವೇಚ್ಛೆ ಬೇರೆಯಿತ್ತು, ಬಾರ್ಸಿಲೋನಾದಲ್ಲಿ ಒಂದಕ್ಕಿಂತ ಹೆಚ್ಚು ಮನೆಕೊಳ್ಳುವಂತಾಯ್ತು. 17 ವರ್ಷ ಬಾರ್ಸಿಲೋನಾ ನೆಲೆಯಾಯ್ತು, ಭಾಷೆ, ಬದುಕುವ ರೀತಿ, ಈ ಅಗಾಧ ಪ್ರಪಂಚದಲ್ಲಿ ನಾವೇನೂ ಅಲ್ಲ ಎನ್ನುವುದನ್ನ ಕಲಿಸಿತು.ಸಹಜೀವಿಗಳ ಬಗ್ಗೆ ಪ್ರೀತಿ, ಮಮಕಾರ ಕೂಡ ಕಲಿಸಿದ್ದು ಬಾರ್ಸಿಲೋನಾ. ಈ ಪುಸ್ತಕದಲ್ಲಿ, ಬಾರ್ಸಿಲೋನಾ ನನಗೆ ಉಣಬಡಿಸಿದ ಅನುಭವಗಳ ಕಥೆಯನ್ನ ಕಟ್ಟಿಕೊಟ್ಟಿದ್ದೇನೆ.

₹160   ₹80

Buy Now
ಮ್ಯಾಜಿಕ್ ಮಕ್ಕಳು ಇಬುಕ್ | Magic Makkalu Ebook

ಮಲ್ಲಿಗೆಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಕುವೆಂಪು, ಬೇಂದ್ರೆ,ಕಾರಂತಜ್ಜರ ಬಣ್ಣಬಣ್ಣದ ಚಿತ್ರಗಳಿಂದ ಕೂಡಿದ್ದ ಶಾಲೆಯ ಗೋಡೆ, ಊರಿನ ಪರಿಸರ ಇವೆಲ್ಲಾ ಪುಸ್ತಕದ ಪುಟ ತಿರುಗಿಸುತಿದ್ದಂತೆ ಎಂಥವರನ್ನು ಕೂಡ ತಮ್ಮ ಬಾಲ್ಯಕ್ಕೆ ಮರಳಿ ಕರೆದೊಯ್ಯೋದರಲ್ಲಿ ಡೌಟೇ ಇಲ್ಲ.. ಅಷ್ಟು ಚೆಂದವಾಗಿ ಕಥೆಗೆ ಪೂರಕವಾಗಿ ಆಕರ್ಷ್ ಎಂ.ಆರ್ ಅವರು ಚಿತ್ರಗಳ ಬಿಡಿಸಿದ್ದಾರೆ. ತರಲೇ ಕಿತಾಪತಿ ತುಂಟಾಟಗಳಿಗೆ ಎತ್ತಿದ ಕೈ, ಓದುವುದರಲ್ಲೂ ಕೂಡ ಅಷ್ಟೇ ಫೇಮ್ಮಸ್ಸಾದ ಆರನೇ ತರಗತಿಯ ಐವರು ಮಕ್ಕಳು ಸೇರಿ ಒಂದು ತಂಡ ಕಟ್ಟಿಕೊಂಡು ಶಾಲೆಯ ಪ್ರತಿಭಾ ಕಾರಂಜಿಯಲ್ಲಿ ಸೋಲಾರ್ ಪ್ಯಾನೆಲ್ ತಯಾರಿಸಿ, ಗೆದ್ದು ಇಡೀ ಊರಿಗೆ ಮಾದರಿಯಾದ ಮಕ್ಕಳ ಸಾಹಸಮಯ ಎಳೆ ಹೊಂದಿರುವ ಕಾದಂಬರಿ ಮೂರರಿಂದ ಹನ್ನೆರಡನೇ ವಯಸ್ಸಿನ ಮಕ್ಕಳವರೆಗೂ ಒಂದೊಳ್ಳೆ ಕಥೆಯ ಜೊತೆಗೆ ಸೋಲಾರ್ ಪ್ಯಾನಲ್ ಹೇಗೆ ತಯಾರಿಸುತ್ತಾರೆ, ಅದರ ಕಾರ್ಯವೈಖರಿ ಹೇಗೆ? ಪ್ಯಾನಲ್ನ ಮುಖ್ಯ ಕೆಲಸವೇನು? ಈರುಳ್ಳಿ ಕತ್ತರಿಸಿದಾಗ ಕಣ್ಣಲ್ಲೇಕೆ ನೀರು ಬರುತ್ತೆ ಹೀಗೆ ವಿಜ್ಞಾನದ ಪಾಠವನ್ನು ತಿಳಿಸುತ್ತದೆ.

₹165   ₹111

Buy Now
ಯಾರು ಹೇಳದ ಕಥೆಗಳು ಇಬುಕ್ | Yaru Helada kathegaluu Ebook

ಕನ್ನಡದಲ್ಲಿ ಸಣ್ಣಕಥೆಗ ಆಗೀಗ ದೆಸೆ ತಿರುಗಿ, ಕಥಾಸ್ಪರ್ಧೆಯ ಮೊತ್ತಬೀಗ ಅರ್ಧ ಲಕ್ಷ ಮುಟ್ಟದೆ. ಇದು ಯುವ ಕಥೆಗಾರರಿಗೆ ಇಂಬಾಗುವ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯೆ ಹೌದು, ಐದುನೂರು ರೂಪಾಯಿಯಿಂದ ಐವತ್ತು ಸಾವಿರದವರೆಗೆ ನಮ್ಮ ಹಣ್ಣಕಥೆಗಳನ್ನು ವಿಸ್ತರಿಸುತ್ತಿರುವ ಪತ್ರಿಕೆಗಳು ಮತ್ತು ಪ್ರಾಯೋಜಕರು ಪ್ರಶಂಸಾರ್ಹರು.

₹150   ₹75

Buy Now
ಲಾಸ್ಟ ಡೇಸ್ ಆಫ್ ಲೆಜೆಂಡ್ಸ್ ಇಬುಕ್ | Last days of legends Ebook

ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ಬರೆದಿರುವ ‘ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್’ ಪುಸ್ತಕವಿದು. ಈ ಪುಸ್ತಕ ಓದುತ್ತಾ ಹೋದರೆ ಸದಾ ಕಾಡುವ ಕಲಾವಿದರ ಕಥಾನಕ ನಿಮ್ಮದಾಗುತ್ತದೆ. ಕನ್ನಡ ಚಿತ್ರರಂಗದ ಲೆಜೆಂಡ್‌ಗಳ ಕೊನೆಯ ದಿನಗಳ ಚಿತ್ರಣ ಇಲ್ಲಿದೆ. ನಿಮ್ಮ ಇಷ್ಟ ಕಲಾವಿದರ ಬಗ್ಗೆ ನೀವಿಲ್ಲಿ ಓದಿದ ಮೇಲೆ ನಮ್ಮ ಮನಸ್ಸು ಮೂಕವಾಗುತ್ತೆ. ಈ ಪುಸ್ತಕ ಭಾವಸ್ಪರ್ಶಿಯಾಗಿದೆ, ಹೃದಯಸ್ಪರ್ಶಿಯಾಗಿದೆ. ಕಲಾವಿದರ ಹೃದಯವಿದ್ರಾವಕ ಘಟನೆಗಳ ಚಿತ್ರಣ ನಮ್ಮ ಕರುಳು ಹಿಂಡಿ ಮನಕಲಕುತ್ತವೆ. ಒಂದು ಕಾಲದಲ್ಲಿ ತೆರೆಯ ಮೇಲೆ ಮಿಂಚಿದವರು ಇನ್ನೊಂದು ಕಾಲದಲ್ಲಿ ಹಲವು ಸಂಕಷ್ಟಗಳಿಂದ ನರಳುವ ಕಥಾನಕ ನಮ್ಮ ಮನ ಕರಗಿಸಿಬಿಡುತ್ತದೆ.

₹225   ₹113

Buy Now
ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ ಇಬುಕ್ | Lets make a Short film Ebook

ಬೇರೆಯವರಿಗೆ ಕತೆ ಹೇಳುವ,ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿದಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ.

₹120   ₹60

Buy Now