nil
ಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ. ಯು.ಆರ್.ಅನಂತಮೂರ್ತಿ
ಆತ್ಮೀಯ ಸಹೋದರಿ ಕನ್ನಡ ಕವಯಿತ್ರಿ ಡಾ. ಸುಮಂಗಲಾ ಅತ್ತಿಗೇರಿ ಅವರಲ್ಲಿ ಅಮೂರ್ತ ರೂಪದಲ್ಲಿದ್ದ ಭಾವನೆಗಳ ಹೂವುಗಳು ಮೊಗ್ಗಿನಾವಸ್ಥೆಯಿಂದ ವಾಚಿಸುವ ಕಣ್ಮನಗಳಿಗೆ ಹೂವಾಗಿ ಅರಳಿ ಮಕರಂದ ಸೂಸಿದೆ. ಹೆಣ್ಣಿನ ಗುಣಕ್ಕೆ ತಕ್ಕಂತೆ ರಚನೆಗಳು ಹೊರಬಂದಿವೆ. ಮಹಿಳೆಯ ನೋವು, ನಲಿವು, ಆಸೆ. ಆಕಾಂಕ್ಷೆ, ನಿರಾಸೆ, ದುಗುಡ, ದುಮ್ಮಾನಗಳ ಅನುಭವದ ಪಾಕದಿಂದ ಹೆತ್ತವರ ನೆನಪಿನವರೆಗೆ ತಮ್ಮ ಚಿತ್ರದಲ್ಲಿನ ಚಿತ್ರಗಳು ಹದ ತಪ್ಪದೆ ಪದ ರೂಪದಿಂದ ಎದೆಯ ಕದ ತೆರೆದು ಓದುಗರ ಮಂಗಳ ಮನಸ್ಸಿಗೆ ಸುಮಂಗಲವೆನಿಸಿದೆ. ಅವಳೀಗ ನೆನಪು ಮಾತ್ರ ಕವನ ಸಂಕಲನ ಇದವರ ಎರಡನೆಯ ಕೂಸು. ಇವರ ರಚನೆಯ ಸಾಲುಗಳೆಲ್ಲ ಕರುಳ ಬಳ್ಳಿಯಂತೆ ಬಳ್ಳಿ ಬಳ್ಳಿಯಾಗಿ ಹಸುರಿನಂತೆ ಅವರದೆಯಾದ ಅನುಭವದ ಉಸಿರಿನಿಂದ ಇದೀಗ ಎಲ್ಲರ ಮನೆ ಮತ್ತು ಮನಕ್ಕೆ ಹಬ್ಬಿ ಕಂಗೊಳಿಸಿದೆ. ಅಧ್ಯಯನದ ಜೊತೆ ಜೊತೆಗೆ ಅನುಭವದ ಮೂಸೆಯಿಂದ ಇವರ ಕವನ ಕುಲಾವಿ ತೊಟ್ಟಿದೆ. ಓದುಗರ ಮನ ಮುಟ್ಟುವಲ್ಲಿ ಕವಯಿತ್ರಿಯ ಕೈ ರಚನೆ ಕೈ ಹಿಡಿದಿದೆ. ಮನ ಮುಟ್ಟಿದೆ. ಎದೆ ತಟ್ಟಿದೆ. ಇಲ್ಲಿಯ ಸಾಲುಗಳೆಲ್ಲ ಕವಯಿತ್ರಿಯ ಅಂತರಾಳದ ದೀಪಗಳು, ಆ ದೀಪದಲ್ಲಿ ವಿನಯ, ವಿಸ್ಮಯ, ವೈಖರ್ಯ ರೂಪಗಳೇ ನುಡಿ ಬೆಳಕಾಗಿ ಬೆಳಗಿವೆ. ಒಟ್ಟಿನಲ್ಲಿ ಕನ್ನಡ ನಾಡಿನ ನರನಾಡಿಗೆ ಇಂತವರ ಸಾಹಿತ್ಯ ವ್ಯವಸಾಯವೇ ಜೀವನಾಡಿ, ಕವಯಿತ್ರಿಯ ಕೈರಚನೆಯ ಕೈಂಕರ್ಯ್ಯ ನಮ್ಮ ನಾಡಿನಲ್ಲಿ ಸತ್ಯಂ. ಶಿವಂ, ಸುಂದರಂ ನಂತೆ ದಿನನಿತ್ಯ ಕಂಗೊಳಿಸುತ್ತಿರಲಿ.
Showing 1 to 30 of 71 results