• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಅವನರಿವಲ್ಲಿ ಖಂಡಕಾವ್ಯ | Avanarivalli

ಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ. ಯು.ಆರ್.ಅನಂತಮೂರ್ತಿ

₹110   ₹98

ಅವಳೀಗ ನೆನಪು ಮಾತ್ರ | Avaliga Nenapu matra

ಆತ್ಮೀಯ ಸಹೋದರಿ ಕನ್ನಡ ಕವಯಿತ್ರಿ ಡಾ. ಸುಮಂಗಲಾ ಅತ್ತಿಗೇರಿ ಅವರಲ್ಲಿ ಅಮೂರ್ತ ರೂಪದಲ್ಲಿದ್ದ ಭಾವನೆಗಳ ಹೂವುಗಳು ಮೊಗ್ಗಿನಾವಸ್ಥೆಯಿಂದ ವಾಚಿಸುವ ಕಣ್ಮನಗಳಿಗೆ ಹೂವಾಗಿ ಅರಳಿ ಮಕರಂದ ಸೂಸಿದೆ. ಹೆಣ್ಣಿನ ಗುಣಕ್ಕೆ ತಕ್ಕಂತೆ ರಚನೆಗಳು ಹೊರಬಂದಿವೆ. ಮಹಿಳೆಯ ನೋವು, ನಲಿವು, ಆಸೆ. ಆಕಾಂಕ್ಷೆ, ನಿರಾಸೆ, ದುಗುಡ, ದುಮ್ಮಾನಗಳ ಅನುಭವದ ಪಾಕದಿಂದ ಹೆತ್ತವರ ನೆನಪಿನವರೆಗೆ ತಮ್ಮ ಚಿತ್ರದಲ್ಲಿನ ಚಿತ್ರಗಳು ಹದ ತಪ್ಪದೆ ಪದ ರೂಪದಿಂದ ಎದೆಯ ಕದ ತೆರೆದು ಓದುಗರ ಮಂಗಳ ಮನಸ್ಸಿಗೆ ಸುಮಂಗಲವೆನಿಸಿದೆ. ಅವಳೀಗ ನೆನಪು ಮಾತ್ರ ಕವನ ಸಂಕಲನ ಇದವರ ಎರಡನೆಯ ಕೂಸು. ಇವರ ರಚನೆಯ ಸಾಲುಗಳೆಲ್ಲ ಕರುಳ ಬಳ್ಳಿಯಂತೆ ಬಳ್ಳಿ ಬಳ್ಳಿಯಾಗಿ ಹಸುರಿನಂತೆ ಅವರದೆಯಾದ ಅನುಭವದ ಉಸಿರಿನಿಂದ ಇದೀಗ ಎಲ್ಲರ ಮನೆ ಮತ್ತು ಮನಕ್ಕೆ ಹಬ್ಬಿ ಕಂಗೊಳಿಸಿದೆ. ಅಧ್ಯಯನದ ಜೊತೆ ಜೊತೆಗೆ ಅನುಭವದ ಮೂಸೆಯಿಂದ ಇವರ ಕವನ ಕುಲಾವಿ ತೊಟ್ಟಿದೆ. ಓದುಗರ ಮನ ಮುಟ್ಟುವಲ್ಲಿ ಕವಯಿತ್ರಿಯ ಕೈ ರಚನೆ ಕೈ ಹಿಡಿದಿದೆ. ಮನ ಮುಟ್ಟಿದೆ. ಎದೆ ತಟ್ಟಿದೆ. ಇಲ್ಲಿಯ ಸಾಲುಗಳೆಲ್ಲ ಕವಯಿತ್ರಿಯ ಅಂತರಾಳದ ದೀಪಗಳು, ಆ ದೀಪದಲ್ಲಿ ವಿನಯ, ವಿಸ್ಮಯ, ವೈಖರ್ಯ ರೂಪಗಳೇ ನುಡಿ ಬೆಳಕಾಗಿ ಬೆಳಗಿವೆ. ಒಟ್ಟಿನಲ್ಲಿ ಕನ್ನಡ ನಾಡಿನ ನರನಾಡಿಗೆ ಇಂತವರ ಸಾಹಿತ್ಯ ವ್ಯವಸಾಯವೇ ಜೀವನಾಡಿ, ಕವಯಿತ್ರಿಯ ಕೈರಚನೆಯ ಕೈಂಕರ್ಯ್ಯ ನಮ್ಮ ನಾಡಿನಲ್ಲಿ ಸತ್ಯಂ. ಶಿವಂ, ಸುಂದರಂ ನಂತೆ ದಿನನಿತ್ಯ ಕಂಗೊಳಿಸುತ್ತಿರಲಿ.

₹120   ₹107

ಜಗದ ಗೆಳತಿ | Jagada Gelati

ಕಾವ್ಯವು ಕಾಲಕಾಲದ ಅಗತ್ಯಗಳಿಗೆ ತಕ್ಕಂತೆ ತನ್ನ ಪ್ರಸ್ತುತಿಯಲ್ಲಿ ಬದಲಾವಣೆ ಮಾಡಿಕೊಂಡ ಒಂದು ಪ್ರಕಾರವೆನ್ನಬಹುದು. ಕವಿಯ ಕಲ್ಪನಾ ಯಾನದ ಅಭಿವ್ಯಕ್ತಿಯಾಗಿ ಮೂಡಿ ಬಂದ ಭಾವಗೀತೆಗಳ ಪರಂಪರೆಯನ್ನು ಹಾದು ನವ ಕವನಗಳು ವರ್ತಮಾನದ ಅನುಭೂತಿಯನ್ನು ದಕ್ಕಿಸಿಕೊಂಡರೂ ಇಂದಿಗೂ ಭಾವ ಗೀತೆಗಳು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಂಡಿಲ್ಲ ತನ್ನ ಇರುವಿಕೆಗೆ ಭಾವ, ಲಯ, ಪ್ರಾಸವನ್ನು ಬಯಸುವ ಈ ಕವಿತೆಗಳು ಅದರ ಚೆಲುವು ಮತ್ತು ಗೇಯತೆಯ ಗುಣಗಳಿಂದಾಗಿ ಜನ ಸಾಮಾನ್ಯರನ್ನೂ ಒಲಿಸಿಕೊಳ್ಳುತ್ತದೆ. ಇಂತಹ ಗೇಯತೆಗೆ ಒಗ್ಗಿಕೊಳ್ಳುವ ಕವಿತೆಗಳಿಂದಾಗಿಯೇ ರೂಪಕಲಾ ಆಳರ 'ಜಗದ ಗೆಳತಿ' ಸಂಕಲನದ ಬಹಳಷ್ಟು ಕವಿತೆಗಳು ಈಗಾಗಲೇ ಜನಮನವನ್ನು ಗೆದ್ದುಕೊಂಡಿದೆ. ಅದು ಬರಿಯ ಭಾವ ಲಹರಿಯಾಗಿರದೆ ಬೇರೆ ಬೇರೆ ಸಂದರ್ಭಗಳಲ್ಲಿ ಹಾಡಬಹುದಾದ ಅಭಿನಂದನಾ ಗೀತೆಗಳು, ಸಾಂದರ್ಭಿಕ ಕವಿತೆಗಳು, ಆಶಯ ಗೀತೆಗಳಿಂದಾಗಿಯೂ ಬಹುಮುಖಿಯಾಗಿ ಸಮೃದ್ಧವಾಗಿದೆ. ಬೇರೆ ಬೇರೆ ಸಂಸ್ಥೆಗಳ ಉತ್ಸವಗಳಿಗೆಂದೇ ಬರೆದ ಹಾಡುಗಳೂ ಇವೆ. ಬಹಳಷ್ಟು ಕವನಗಳಲ್ಲಿ ಶುಭಹಾರೈಕೆಗಳು, ಹರಕೆಗಳು, ಮನೆಯ ಚಾವಡಿಯೊಳಗಿನ ಅನುನಯದ ಆಶೋತ್ತರಗಳು ಬಯಲಾಗಿವೆ. ಹುಟ್ಟು ಹಬ್ಬದ ದಿನ ಕನ್ನಡದಲ್ಲಿಯೇ ಶುಭ ಹಾರೈಸಬಹುದಾದ ಎರಡೆರಡು ಹಾಡುಗಳು 'ಹುಟ್ಟು ಹಬ್ಬಕ್ಕೆ ಹಾರೈಕೆ' ಮತ್ತು 'ಜನುಮ ದಿನದ ಹಾರೈಕೆ'ಯಾಗಿ ಮೂಡಿಬಂದಿದೆ. 'ಗೆದ್ದು ಬಾರೋ ವೀರ', 'ಎದ್ದೇಳು ಕನ್ನಡಿಗ', 'ಕನ್ನಡ ಮರ', 'ಹಣತೆ ಹಳ್ಳೋಣ ಬನ್ನಿ', 'ಜಗದ ಗೆಳತಿ, 'ಅಮ್ಮ ನೆನಪಾಗುತ್ತಾಳೆ', ಮುಂತಾದ ಕವನಗಳು ಆಯಾ ಸಂದರ್ಭದಲ್ಲಿ ಹಾಡಬಹುದಾದ ಕವಿತೆಗಳು, ಅವುಗಳನ್ನು ಬರಿಯ ಪುಸ್ತಕದೊಳಗಿನ ಅಕ್ಷರಗಳಾಗಿರಲು ಬಿಡದೆ ಸಂದರ್ಭಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು. ಎದೆಯ ಭಾವನೆಗಳನ್ನು ಹೃದಗೊಳಿಸುವ ಹಾದಿಯಲ್ಲಿ ಗೇಯಗೀತೆಗಳು ಬಯಸುವ ಪ್ರಾಸ ಲಯಗಳನ್ನು ಅರ್ಥಕ್ಕೆ ಚ್ಯುತಿ ಬರದಂತೆ ಹೊಂದಿಸಿಕೊಳ್ಳುವಲ್ಲಿ ಅವರ ಶ್ರಮ ಸಾರ್ಥಕವಾಗಬಹುದು.

₹130   ₹116

ನವಿಲು | Navilu

#

₹65   ₹65