nil
ತಾನೊಬ್ಬ ಆಗೋಸ್ಟಿಕ್. ಹಾಗೆಂದುಕೊಂಡ ಪರ್ವನ ಮನಸು ಗೊಂದಲದ ಗೂಡು. ಆಜೇಯತಾವಾದಿ ಎನ್ನುತ್ತಾರಂತೆ ಕನ್ನಡದಲ್ಲಿ ದೇವರಲ್ಲಿ ಅತಿಯಾಗಿ ವಿಶ್ವಾಸವಿರದ, ನಾಸ್ತಿಕತೆಯನ್ನೂ ಒಪ್ಪದ ಮನಸ್ಥಿತಿ ತನ್ನದು. ದೇವರು ಇರಲಿ, ಇರದಿರಲಿ ತನ್ನ ಬದುಕಿಗೆ ವ್ಯತ್ಯಾಸವೇನೂ ಆಗದು ಎನ್ನುವ ತರ್ಕ. ಅವನಿದ್ದರೆ ಅವನ ಪಾಡಿಗಿರಲಿ, ನಾನು ನನ್ನ ಪಾಡಿಗೆ ಎಂದುಕೊಂಡವನ ಬದುಕಲ್ಲಿ ಏನು ನಡೆಯುತ್ತಿದೆ ಎನ್ನುವುದು ಅರ್ಥವಾಗದ ಸ್ಥಿತಿ ಅವನಿಗೆ. ಪರಮ ಆಸ್ತಿಕರಾದ ಹೆತ್ತವರು ತನ್ನ ತರ್ಕವನ್ನು ಅಲ್ಲಗಳೆಯುತ್ತಿದ್ದಾರೆ. ಗೆಳೆಯನಿಗೆ ವಿಷಯದ ಗಂಭೀರತೆಯನ್ನು ವಿವರಿಸುವುದು ಕಷ್ಟ. ಚಿಕ್ಕಪ್ಪನಿಗೆ ವಿವರಿಸಿ ಅರ್ಥ ಮಾಡಿಸೋಣ ವೆಂದರೆ ಅವನಿನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ. ಎಲ್ಲಕ್ಕಿಂತ ಅಚ್ಚರಿಯೆಂದರೆ ಸ್ಮಶಾನದಲ್ಲಿ ಕೊನೆಯವರೆಗೂ ತನ್ನ ಜೊತೆಗೇ ಇದ್ದ ಹೆಂಡತಿಗೆ ಏನೆಂದರೇ ಏನೂ ನೆನಪಿಲ್ಲ. ಆಕೆ ಕೂಡ ಲೋಕಿಯ ಸಾವು ಸಹಜ ಸಾವು ಎನ್ನುತ್ತಾಳೆ. ಅವನ ಸಾವಿಗೆ ಮಾನಸಿಕ ಕಾಯಿಲೆಯೇ ಕಾರಣ ಎಂದು ವಾದಿಸುತ್ತಾಳೆ. ಊಹುಂ..!! ಖಂಡಿತ ಇಲ್ಲ, ಅದು ಸಹಜ ಸಾವಲ್ಲ. ಮೇಲ್ನೋಟಕ್ಕೆ ಸಹವೆನ್ನಿಸಿದರೂ ಅಲ್ಲೊಂದಿಷ್ಟು ಅನುಮಾನಗಳಿಗೆ ಅವಕಾಶವಿದೆ. ಅಲ್ಲೊಂದು ವಿಲಕ್ಷಣತೆಯಿದೆ. ಯಾರ ಗಮನಕ್ಕೂ ಬಾರದ, ಒಂದೇನೋ ಅವ್ಯಕ್ತ ಅಸಹಜತೆಯಿದೆ. ಅದು ನಿಗೂಢ..!! ಅದು ವಿಕ್ಷಿಪ್ತ...!! ಅದು ಮನುಷ್ಯ ಸಹಜವಾದ ಸಾವಲ್ಲ, ಅದು ಅತಿಮಾನುಷ....!! ISBN
ಲಕ್ಷ್ಮೀಶ್ ಹೆಗಡೆ ಸೋಂದಾ, ಇತಿಹಾಸಕಾರರಾಗಿ, ವಾಗ್ನಿಗಳಾಗಿ ನಾಡಿನ ಚಿರಪರಿಚಿತ ಹೆಸರು. ಕಳೆದ 15 ವರ್ಷಗಳಿಂದ ಇತಿಹಾಸ ಸಂಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲುಗಳು, ಐತಿಹಾಸಿಕ ಕುರುಹುಗಳನ್ನು ಸಂಶೋಧಿಸಿ ಅವುಗಳನ್ನ ಅಭ್ಯಸಿಸಿ ಸಮಾಜಕ್ಕೆ ಪರಿಚಯಿಸಿರುತ್ತಾರೆ. ಇದುವರೆಗೂ 14 ಕೃತಿಗಳು, 400ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಸಂಶೋಧನೆಗಾಗಿ 2013ರಲ್ಲಿ ಬಸವರಾಜ ಕಟ್ಟಿಮನಿ ರಾಜ್ಯ ಪ್ರಶಸ್ತಿ ಮತ್ತು 2016ರಲ್ಲಿ ಕದಂಬ ಸೇವಾರತ್ನ ರಾಜ್ಯ ಪ್ರಶಸ್ತಿ, 2022ರಲ್ಲಿ ರವಿದಾತಾರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿ ವರ್ಷ ಇವರ ಸಂಚಾಲಕತ್ವದಲ್ಲಿ ನಡೆಯುವ ಸೋಂದಾ ಇತಿಹಾಸೋತ್ಸವ ನಾಡಿನಲ್ಲಿ ಪ್ರಸಿದ್ದಿ ಪಡೆದಿದೆ. ಯುವ ಜನತೆಯಲ್ಲಿ ಸ್ಥಳೀಯ ಇತಿಹಾಸದ ಕುರಿತು ಆಸಕ್ತಿ ಮೂಡಿಸಲು ಕಳೆದ 6 ವರ್ಷಗಳಿಂದ ಇವರು ನಡೆಸಿಕೊಂಡು ಬರುತ್ತಿರುವ ಉತ್ತರ ಕನ್ನಡ ಜಿಲ್ಲಾ ಚರಿತ್ರಾ ಅಭಿಯಾನ' ಆದರ್ಶ ಸಮಾಜದ ಸ್ಥಾಪನೆಗೊಂದು ಮಾದರಿ ಯೋಜನೆಯಾಗಿದೆ. * ಅನುರಾಯ ಶಾಲ್ಮಲೆ " ಎಂಬ ಈ ಐತಿಹಾಸಿಕ ಕಾದಂಬರಿಯ ಮೂಲವಸ್ತು ಸದಾಶಿವರಾಯ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋದೆ ಎಂಬ ಪ್ರದೇಶವನ್ನು ಕ್ರಿ.ಶ 1678ರಿಂದ 1718ರ ವರೆಗೆ ಆಳ್ವಿಕೆ ಮಾಡಿದ ಪರಾಕ್ರಮಿ, ಸಾಹಿತಿ, ಸಂಗೀತ ತಜ್ಞ ಅರಸ. ಈತನ ಶ್ರೇಷ್ಠ ಸಾಧನೆಯೆಂದರೆ ಕ್ರಿಶ 1680ರಲ್ಲೇ ಭಾರತದಲ್ಲಿ ಮೊದಲ ಬಾರಿಗೆ ಬ್ರಿಟಿಷರನ್ನು ಸೋಲಿಸಿದ ಮಹೋನ್ನತ ಶ್ರೇಯ, ಈತನನ್ನ ಕಥಾವಸ್ತುವನ್ನಾಗಿಸಿಕೊಂಡು ಕೃತಿಕಾರರು ಈ ಕಾದಂಬರಿಯನ್ನು ರಚಿಸಿದ್ದಾರೆ. ఈ ఐతియౌనిక ఊరు ಕಾದಂಬರಿಯನ್ನು ಓದುಗರು ಸ್ವಾಗತಿಸುವರೆಂದು ನಂಬಿದ್ದೇನೆ. -ಪ್ರಕಾಶಕ
Showing 1 to 30 of 644 results