ಒಂದು ಉದ್ಯಾನದ ಹಲವಾರು ಹೂಗಳ ನಡುವೆ ನಮ್ಮ ಕಣ್ಣಿಗೆ ಸುಂದರವಾಗಿ ಕಂಡ ಹೂವನ್ನು ಮೆಚ್ಚುವುದು, ಅದರ ಗಿಡಕ್ಕೆ ನೀರುಣಿಸುವುದು-ಪ್ರೇಮ. ಆ ಹೂವನ್ನು ಕಿತ್ತು ನಮ್ಮ ಬಳಿ ಇಟ್ಟುಕೊಳ್ಳುವುದು-ಕಾಮ. ಅದೇ ಉದ್ಯಾನದಲ್ಲಿ ಎಲ್ಲ ಹೂಗಳೂ ಸುಂದರವಾಗಿ ಕಂಡು, ಎಲ್ಲವನ್ನೂ ಮೆಚ್ಚಿ, ಎಲ್ಲ ಹೂಗಿಡಗಳಿಗೂ ನೀರುಣಿಸುವುದು-ಅಧ್ಯಾತ್ಮ.
#
ದೊಡ್ಡ ಬೆರಗು. ಶಬ್ದ, ನಾದ, ಲಯ, ಛಂದ ಎಂಬ ನಾಲ್ಕು ತಂತ್ರ ಚತುರ್ಮುಖತೆಯಿಂದ ಕನ್ನಡ ಕಾವ್ಯವಾಹಿನಿಗೆ ಬೆಲೆಯುಳ್ಳ ಚಿರಕಾವ್ಯವನ್ನು ಕೊಟ್ಟ ಧೀಮಂತ ಕವಿ. ಇವರ ಕಾವ್ಯವನ್ನು ಓದಿ ನಾಡು ತಣಿದಿದೆ. ಕವಿಯ ಕಾವ್ಯ ವ್ಯಕ್ತಿತ್ವದ ಆಯಾಮ ಒಂದು ಮಜಲಾದರೆ, ಆತನ ಸಾಮಾಜಿಕ ವ್ಯಕ್ತಿತ್ವ ಮತ್ತೊಂದು ಮಜಲು. ವಿದ್ವತ್ತಿನ ಗತ್ತು, ಕಾವ್ಯಪ್ರತಿಭೆಯ ಮೇಲರಿಮೆ, ಸಿಟ್ಟು, ಸೆಡವು, ಜಗಳಗಂಟಿತನ, ವಾಗ್ವಿಲಾಸದ ವೈಖರಿ, ಬಹುಶ್ರುತ ಆಸಕ್ತಿ, ಅಪಾರವಾದ ಜ್ಞಾನಾಕಾಂಕ್ಷೆ, ಜಗದೆಲ್ಲ ಚಟುವಟಿಕೆಗಳನ್ನು ಕಾವ್ಯ ಪರಿಪ್ರೇಕ್ಷ್ಯದಲ್ಲಿ ಕಾಣುವ, ಕಾಣಿಸುವ ಬಗೆ, ಮಗು ಸಹಜ ಮುಗ್ಧತೆ ಈ ಎಲ್ಲ ಗುಣಗಳ ಸಮ್ಮಿಲನದ ಗಾರುಡಿಗ ವ್ಯಕ್ತಿತ್ವ ಬೇಂದ್ರೆಯವರದು. ಇವರ ಬಗೆಗೆ ಪ್ರಚಲಿತದಲ್ಲಿರುವ ಕತೆಗಳನ್ನು, ಸಂಗತಿಗಳನ್ನು, ಪ್ರಸಂಗಗಳನ್ನು ಒಂದೆಡೆ ಸಂಗ್ರಹಿಸಿ ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಒದಗಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕಾರಣದಿಂದ ಎಚ್. ಎಸ್. ಸತ್ಯನಾರಾಯಣ ಅವರ 'ಅಂಬಿಕಾತನಯದತ್ತನ ಹಾಡ ಬೆಳುದಿಂಗಳು ನೋಡಾ...' ಎಂಬ ಕೃತಿ ಮಹತ್ವದ್ದು.
ತನ್ನ ಕಛೇರಿಯ ಸಮಯದ ನಂತರವೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಿದ್ಧತೆ ಮಾಡುವ ವೃತ್ತಿ ಯಾವುದಾದರೂ ಇದ್ದರೇ ಅದು ಶಿಕ್ಷಕ ವೃತ್ತಿ ಮಾತ್ರ. ಆ ಕಾರ್ಯತತ್ಪರತೆಯ ಗೌರವ ನಮಗಿರಬೇಕು. ತಮ್ಮ ಸ್ವಂತ ಮಕ್ಕಳೊಡನೆ ಸಮಯ ಕೊಡಲಾಗದಿದ್ದರೂ ವಿದ್ಯಾರ್ಥಿಗಳೆಲ್ಲರನ್ನು ಮಕ್ಕಳಂತೆ ಪ್ರೀತಿಸಿ, ಪೋಷಿಸುವ ನಿಸ್ವಾರ್ಥ ಸೇವೆಯ ಅರಿವು ನಮಗಿರಬೇಕು. ನೂರಾರು ಕಣ್ಣುಗಳ ನಡುವೆ ನೊಂದು ತೇವವಾದ, ಸೋತು ಸೊರಗಿ ಹೋದ, ಆತ್ಮ ವಿಶ್ವಾಸ ಕಳೆದುಕೊಂಡು ಕುಗ್ಗಿ ಕಮರಿದ ಮನಸ್ಸುಗಳನ್ನು ಸದಾ ಹುರಿದುಂಬಿಸಿ, ಗೆಲುವಾಗುವ ದಾರಿ ತೋರಿಸಿ, ಕೈ ಹಿಡಿದು ಮುನ್ನಡೆಸಿ, ಭವ್ಯ ಭವಿಷ್ಯದ ಕನಸನ್ನು ಕಲ್ಪಿಸಿ ಬದುಕು ಬೆಳಗಿಸುವ ದಿವ್ಯ ದೃಷ್ಟಿಯನ್ನು ಸೃಷ್ಟಿಸುವ ಶಿಕ್ಷಕರ ಪಾತ್ರದ ಮಹತ್ವ ನಮಗೆ ತಿಳಿದಿರಬೇಕು. ಒಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಇಂತಹ ನಮ್ರತೆ, ಸದ್ಗುಣಗಳ ವಿವೇಕವನ್ನು ಜ್ಞಾನದ ಜೊತೆಗೆ ಕಲಿಸುವ ಮಹಾಗುರುವನ್ನು, ಸದಾ ಪೂಜ್ಯನೀಯ ಸ್ಥಾನದಲ್ಲಿ ನೋಡುವ ಹಾಗೂ ಸದ್ವಿಚಾರವನ್ನು ಕಲಿಸುವ ಜ್ಞಾನ ದೇಗುಲವೆಂಬ ಶಾಲೆಯನ್ನು ಕೈ ಮುಗಿದು ಗೌರವಿಸುವ ಮನವೆಂದೂ ಪ್ರಶ್ನಿಸುವ, ಅಪಮಾನಿಸುವ, ಅಣಕಿಸುವ, ಅಪಹಾಸ್ಯ ಮಾಡುವ ಕುತ್ಸಿತ ಸ್ಥಿತಿಗೆ ರೂಪಾಂತರವಾಗದಿರಲಿ.
nil
‘ಆಧುನಿಕ ಮನೋವಿಜ್ಞಾನದ ಪ್ರವರ್ತಕರು’ ಪುಸ್ತಕ ಮೇಲ್ನೋಟಕ್ಕೆ ನೂರೊಂದು ಜನ ಮನೋವಿಜ್ಞಾನಿಗಳ ಪರಿಚಯ ಮಾಡಿಕೊಡುವ ಸ್ವರೂಪದಲ್ಲಿದ್ದರೂ ವಾಸ್ತವವಾಗಿ ಇದು ಮನೋವಿಜ್ಞಾನದ ಇತಿಹಾಸವನ್ನು ಕನ್ನಡದಲ್ಲಿ ನಿರೂಪಿಸುವ ಅಪರೂಪದ ಪುಸ್ತಕ. ಯಾವ ವಿಷಯವನ್ನೇ ಆದರೂ ಐತಿಹಾಸಿಕ ದೃಷ್ಟಿಕೋನದಿಂದ ನೋಡುವುದು ಬಸವಣ್ಣನವರ ಅಧ್ಯಯನ ಕ್ರಮ. ಇದು ರೂಢಿಯ ಇತಿಹಾಸದ ಮಾದರಿಯಲ್ಲ, ನೂರೊಂದು ಮಂದಿ ಮನೋವಿಜ್ಞಾನಿಗಳ ಬದುಕು-ಸಾಧನೆ, ಅವರು ಮನೋವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಮನೋವಿಜ್ಞಾನವನ್ನು ಬೆಳೆಸಿದ ಬಗೆಯನ್ನು ಕಟ್ಟಿಕೊಡುತ್ತಲೇ ಬಸವಣ್ಣನವರು ಮನೋವಿಜ್ಞಾನದ ಇತಿಹಾಸವನ್ನು ನಮಗೆ ಪರಿಚಯ ಮಾಡಿಕೊಡುತ್ತಾರೆ. ಕಾಲಾನುಕ್ರಮದಲ್ಲಿ ಮನೋವಿಜ್ಞಾನಿಗಳ ಪರಿಚಯ ಮಾಡಿಕೊಟ್ಟಿರುವುದು ಈ ಆಶಯಕ್ಕೆ ಪೂರಕವಾಗಿದೆ. ವಿಲ್ ಹೆಲ್ತ್ ವೊಂಟ್ ನಿಂದ ಹಿಡಿದು ಇಂದಿನ ಸುಪರ್ಣಾ ರಾಜಾರಾಮ್ ವರೆಗೆ ಈ ಶತಮಾನದ ಎಲ್ಲ ಪ್ರಮುಖ ಮನೋವಿಜ್ಞಾನಿಗಳ ಬಗೆಗೆ ಇಲ್ಲಿ ಮಾಹಿತಿ ಇದೆ. ಇದನ್ನು ಓದುತ್ತಾ ಹೋದಂತೆ ಮನೋವಿಜ್ಞಾನ ಜಗತ್ತಿನ ಸಾಧಕರ ಸಾಧನೆಯ ಪಯಣದಲ್ಲಿ ಹಾದು ಬಂದ ಅನುಭವವಾಗುತ್ತದೆ. ಜಗತ್ತಿನ ಜ್ಞಾನ ಕನ್ನಡ ಮನಸ್ಸುಗಳಿಗೆ ಕನ್ನಡದಲ್ಲಿಯೇ ಸಿಗಬೇಕೆಂಬ ಹಿನ್ನೆಲೆಯಲ್ಲಿ ಬಸವಣ್ಣನವರ ಈ ಪ್ರಯತ್ನ ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಮಹತ್ವದ್ದು, – ನರಹಳ್ಳಿ ಬಾಲಸುಬ್ರಹ್ಮಣ್ಯ ಮುನ್ನುಡಿಯಿಂದ
Showing 1 to 30 of 160 results