• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಅಮೋಘವರ್ಷ | Amoghavarsha

“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು. ಅಮೋಘವರ್ಷ” ಕಾದಂಬರಿ ರಾಷ್ಟ್ರಕೂಟರ ಕುರಿತು ಪೂರ್ಣ ಪ್ರಮಾಣದಲ್ಲಿ ಅರಿತುಕೊಳ್ಳುವುದಕ್ಕೆ ಸಹಾಯಕಾರಿಯಾಗಲಿದೆ. ಲೇಖಕರಾದ ಲಕ್ಷ್ಮಣ ಕೌಂಟೆ ಅವರು ಹಲವು ಗ್ರಂಥಗಳನ್ನು ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದು ರಾಷ್ಟ್ರಕೂಟರ ಕುರಿತು ಇದುವರೆಗೂ ಪ್ರಕಟವಾದ ಎಲ್ಲ ಕಾದಂಬರಿಗಳಿಗಿಂತಲೂ ಭಿನ್ನವೂ ವಿಶಿಷ್ಠವೂ ಆಗಿದೆ.

₹450   ₹382.5

Buy Now
ಆರೋಹಣ | Arohana

ಕಾದಂಬರಿಯಲ್ಲಿ ಆದರ್ಶ ಶಿಕ್ಷಕನಾಗಿರುವ ತಂದೆಯ ಮೌಲ್ಯಗಳು ಒಂದೆಡೆಯಾದರೆ, ಅದೇ ದಾರಿಯಲ್ಲಿ ನಡೆದುಬಂದ ಮಗನ ವ್ಯಾಪಾರಿಕ ಆಲೋಚನೆಗಳು ಬೇರೆಯಾಗಿರುತ್ತವೆ. ಇಬ್ಬರು ಬದುಕಿನಲ್ಲಿ ಆರಿಸಿಕೊಂಡ ದಾರಿ ಒಂದೇಯಾದರೂ.. ನೋಡುವ ದೃಷ್ಟಿಕೋನಗಳು ಬೇರೆ ಬೇರೆ. ಇದು ಬರಿ ಅಪ್ಪ ಮಗನ ಕತೆ ಅಲ್ಲ, ಎರಡು ತಲೆಮಾರುಗಳ ನಡುವೆ ಬದಲಾದ ಮನಸ್ಥಿತಿಗಳ ಅಂತರದ ಕತೆ.

₹190   ₹162

Buy Now
ಈಗಲ್ಸ್ ಲೈನ್ | Eagles Line

ಈ ಕೃತಿಯ ಹಲವು ಅಧ್ಯಾಯಗಳಲ್ಲಿ ಒಂದೊಂದು ಕಥೆಗೆ ವಸ್ತುವಾಗುವಂಥ ಬೆರಗಿನ ವಿವರಗಳಿವೆ. ಸ್ವಾರಸ್ಯಕರ ಮಾಹಿತಿಗಳಿವೆ. ಹಾಗಂತ ಇದು ಅಜ್ಜಿಕಥೆಯಲ್ಲ. ಕುತೂಹಲ, ಪದೇಪದೇ ಕೈಜಗ್ಗುತ್ತದೆ; ಆದರೆ ಇದು ಸಸ್ಪೆನ್ಸ್ ಥಿಲ್ಲರ್ ಅಲ್ಲ. ಕಾಡಿನ ಹತ್ತಾರು ಜೀವಿಗಳ ಬದುಕಿನ ವಿವರವಿದ್ದರೂ ಇದು ಪರಿಸರದ ಕಥೆಯಷ್ಟೇ ಅಲ್ಲ. ಹಲವು ನಂಬಿಕೆ, ಆಚರಣೆಗಳ ಮೆರವಣಿಗೆಯಿದೆ. ಆದರೆ ಇದು ಕಾಡಂಚಿನ/ ಮಲೆನಾಡಿನ ಹಳ್ಳಿಯೊಂದರ ಕಥೆಯಷ್ಟೇ ಆಗಿ ಉಳಿಯುವುದಿಲ್ಲ. ಬದಲಿಗೆ, ಈ ಎಲ್ಲಾ ಅಂಶಗಳನ್ನೂ ಇಷ್ಟಿಷ್ಟೇ ಸೇರಿಸಿ ಹೆಣಿಗೆ ಹಾಕಿದ ಕಾದಂಬರಿ ಎಂಬ ಕುಲಾವಿ

₹220   ₹187

Buy Now
ಓಡಿ ಹೋದಾಕಿ | Odi Hodaki

ಎಪ್ಪತ್ತುಎಪ್ಪತೈದು ವರುಷಗಳ ಹಿಂದೆ ವಿಧವೆಯೊಬ್ಬಳು, ಮರು ಮದುವೆಗೆ ಅವಕಾಶವಿಲ್ಲದೆ, ಮತ್ತೆ ಬದುಕು ಕಟ್ಟಿ ಕೊಳ್ಳಲು ಪ್ರಯತ್ನಿಸಿ ನರಕ ಯಾತನೆ ಅನುಭವಿಸಿದ ಒಬ್ಬ ವಿಧವೆಯ ಕಥೆಯಿತು

₹215   ₹172

Buy Now
ಕಂದಕ | Kandaka

'ಕಂದಕ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ'ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವ್ನಿಗೆ (ಕಾದಂಬರಿ), ಸಂದಾಯಿ(ಕಾದಂಬರಿ), ಕ್ರಮಣ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ. -ಎನ್. ನಾಗರಾಜ್‌ ರಾವ್ ರಂಗಕರ್ಮಿ ಬಸವನಗುಡಿ, ಬೆಂಗಳೂರು.

₹265   ₹225

Buy Now
ಕವಚ | Kavacha

ಕರ್ಣನಿಗೆ ಪೂರ್ವ ಜನ್ಮದಲ್ಲಿ ಸಹಸ್ರ ಕವಚಗಳಿದ್ದುವೆಂದೂ, ಅದನ್ನು ನರ ಮತ್ತು ನಾರಾಯಣರೆಂಬ ಋಷಿಗಳು ಯುದ್ಧದಲ್ಲಿ ಕತ್ತರಿಸುತ್ತ ಬಂದರೆಂಬುದು ಕಥೆ. ಅವುಗಳಲ್ಲಿ ಒಂದು ಕವಚ ಉಳಿದು ಬಂತು. ಅದನ್ನು ಕತ್ತರಿಸುವುದಕ್ಕಾಗಿ ಕೃಷ್ಣಾರ್ಜುನರು ಈ ಜನ್ಮದಲ್ಲಿ ಕಾಣಿಸಿಕೊಂಡರು. ಅಷ್ಟೇ ಅಲ್ಲ, ಜೀವನೊಬ್ಬನಿಗೆ ಅನೇಕ ಕವಚಗಳು, ಕರ್ಣನಂತೆ. ಅವುಗಳನ್ನು ಕಳೆದುಕೊಳ್ಳುತ್ತ, ಕಳೆದುಕೊಳ್ಳುತ್ತ ಸಾಗುವುದೇ ಅವನ ಪಾಡು. ಆ ಕವಚಗಳು ಲೋಹದ ಕವಚಗಳಲ್ಲ. ಕವಚ ಸಾಂಕೇತಿಕ ಅಷ್ಟೇ. ಕರ್ಣನ ಬದುಕೂ ಈ ಕವಚಗಳನ್ನು ಕಳೆದುಕೊಳ್ಳುವ ಪ್ರಕ್ರಿಯೆ. ಅದನ್ನೇ ಕಾದಂಬರಿಯೂ ಧ್ವನಿಸುತ್ತದೆ..

₹185   ₹157

Buy Now
ಕಿತ್ತೂರು ಹುಲಿ ಸಂಗೊಳ್ಳಿ ರಾಯಣ್ಣ | Kitturu Huli Sangolli Rayanna

ಸಂಗೊಳ್ಳಿ ರಾಯಣ್ಣ ಕಿತ್ತೂರು ರಾಣಿ ಚೆನ್ನಮ್ಮಳ ಮೈಗಾವಲು ಪಡೆಯ ವಿಶ್ವಾಸಿಕ ನಾಯಕ. ಕಿತ್ತೂರು ಸಂಸ್ಥಾನವನ್ನು ಕಬಳಿಸಲು ಉದ್ದೇಶಿಸಿದ ಬ್ರಿಟಿಷರ ವಿರುದ್ಧ ಸಿಡಿದೆದ್ದವನು. ಕಿತ್ತೂರು ಆಂಗ್ಲರ ವಶವಾದ ನಂತರವೂ ಅವನು ಸರದಾರ ಅವರಾದಿ ವೀರಪ್ಪನವರ ಜೊತೆ ಕೂಡಿಕೊಂಡು ಸುರಪುರ, ಶಿವಗುತ್ತಿ ಮೊದಲಾದ ಸಂಸ್ಥಾನಗಳ ಸಹಾಯ ಪಡೆದದ್ದಲ್ಲದೆ ಅನೇಕ ಜನ ದರೋಡೆಕೋರರ ಮನಸ್ಸುಗಳನ್ನು ಒಲಿಸಿಕೊಂಡು ಅವರ ಸಹಾಯದಿಂದ ಆರು ಸಾವಿರ ಯೋಧರ ಪಡೆಯೊಂದನ್ನು ಸಂಘಟಿಸುತ್ತಾನೆ. ಆದರೆ ನೇಗಿನಹಾಳ ಮತ್ತು ಬೊದಾನಪುರದ ಗೌಡರು ಮೋಸ ಮಾಡಿ ಸೆರೆ ಹಿಡಿದು ಅವನನ್ನು ಬ್ರಿಟಿಷರಿಗೆ ಒಪ್ಪಿಸುತ್ತಾರೆ. ಅವರು ಅವನನ್ನು ನಂದಗಡದ ಬಯಲಿನಲ್ಲಿ ನೇಣುಗಂಬಕ್ಕೆ ಏರಿಸುತ್ತಾರೆ.

₹575   ₹489

Buy Now
ಕ್ರಮಣ | Kramana

'ಕ್ರಮಣ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ?ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವಿಗೆ (ಕಾದಂಬರಿ), ಸಂದಾಯಿ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ. (ಕಾದಂಬರಿ), ಕಂದಕ ಈಗಾಗಲೇ ಪ್ರಕಟವಾಗಿದೆ.

₹375   ₹319

Buy Now
ಕ್ಷಯ | Kshaya

‘ಕ್ಷಯ’ ಕಾದಂಬರಿಯು ಗಾತ್ರದಲ್ಲಿ ಚಿಕ್ಕದಿದ್ದರೂ (…ಪುಟಗಳು) ಅಚ್ಚರಿಪಡುವಷ್ಟು ಸಾಂದ್ರವಾದ ಹಾಗೂ ಅಷ್ಟೇ ವಿಸ್ಮತವಾದ ಜಗತ್ತೊಂದು ಅದರೊಳಗಿದೆ. ಹೊನ್ನಾವರ ಹತ್ತಿರದ, ಕರಾವಳಿಯ ಒಂದು ಚಿಕ್ಕ ಹಳ್ಳಿಯ ಪರಿಸರದಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಕಾದಂಬರಿಯ ಕಥಾಜಗತ್ತಿನಲ್ಲಿ ಸುಮಾರು 25ಕ್ಕೂ ಹೆಚ್ಚು ಪಾತ್ರಗಳು ಕಾಣಿಸಿಕೊಳ್ಳುತ್ತವೆ.

₹120   ₹102

Buy Now
ಗದಾಯುದ್ಧಂ | Gadayuddham

ಕವಿಚಕ್ರವರ್ತಿ ಬಿರುದಾಂಕಿತ ಮಹಾಮೇರು ಕವಿ ರನ್ನ ವಿರಚಿತ ಗದಾಯುದ್ದಂ (ಸಾಹಸ ಭೀಮ ವಿಜಯಂ) ಕೃತಿ , ಗಮಕ ವಿದ್ವಾನ್ ಡಾ. ಎಂ ಎ ಜಯರಾಮ್ ರಾವ್ ಅವರ ವ್ಯಾಖ್ಯಾನದೊಂದಿಗೆ. 'ಗದಾಯುದ್ಧ'ವನ್ನು ರನ್ನನು ತನ್ನ ಆಶ್ರಯದಾತ ಅರಸನಾದ ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿ, ಭೀಮನನ್ನೇ ಕಥಾನಾಯಕನನ್ನಾಗಿ ಕಲ್ಪಿಸಿ(ಕೊನೆಯಲ್ಲಿ ಪಟ್ಟಾಭಿಷೇಕವಾಗುವುದು ಭೀಮನಿಗೇ) ಬರೆದಿದ್ದಾನೆ. ಹತ್ತು ಆಶ್ವಾಸಗಳುಳ್ಳ ಈ ಚಂಪೂ ಕೃತಿಯು ಕೇವಲ ಗದಾಯುದ್ಧದ ಪ್ರಸಂಗವನ್ನಷ್ಟೇ ಕಥಾವಸ್ತುವನ್ನಾಗಿ ಹೊಂದಿದ್ದರೂ, ಸಮಗ್ರ ಮಹಾಭಾರತದ ಸಿಂಹಾವಲೋಕನವನ್ನಿಲ್ಲಿ ಕಾಣಬಹುದು.

₹350   ₹298

Buy Now
ಟೈಟಾನಿಕ್ | Titanic

ಕೆಲವರು ತಪ್ಪಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಮಾಡದೇ ತಮ್ಮ ತಮ್ಮ ಕ್ಯಾಬಿನ್‌ಗಳಲ್ಲಿ ಮತ್ತು ಅಲ್ಲಲ್ಲಿ ನಿಂತುಕೊಂಡು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇನ್ನೂ ಕೆಲವು ಪ್ರಯಾಣಿಕರು ಟ್ರಂಕುಗಳು ಮತ್ತು ಉಳಿದ ವಸ್ತುಗಳನ್ನು ಹಿಡಿದುಕೊಂಡು ಡೆಕ್ ಗಳಲ್ಲಿ ನಿಂತುಕೊಂಡು ಯಾರಾದರು ಬಂದು ತಮ್ಮನ್ನ ಕರೆದುಕೊಂಡು ಹೋಗುವರೆಂದು ಕಾಯುತ್ತಿದ್ದರು. ಮನಶಾಸ್ತ್ರಜ್ಞ ವೈನ್ ಕ್ರೇಗ್ ವೇಡ್ ಇದನ್ನು ಸಾಮಾಜಿಕ ಮೇಲಾಧಿಕಾರಿಗಳ ಪೀಳಿಗೆಗಳಿಂದ ಉತ್ಪತ್ತಿಯಾಗುವ Stoic Passitivity ಎಂದು ಹೇಳುತ್ತಾರೆ. ಇವರಲ್ಲಿ ಹೆಚ್ಚಿನವರು ಬದುಕುಳಿಯಲು ಯಾವುದೇ ಪ್ರಯತ್ನವನ್ನು ಮಾಡಲಿಲ್ಲ. ನೂರಾರು ಜನರು ಸಭಾಂಗಣಗಳಲ್ಲಿ ಬೋಧಕರೊಂದಿಗೆ ನಿಂತುಕೊಂಡು ಪ್ರಾರ್ಥಿಸುತ್ತಿದ್ದರು, ದೇವರು ಮತ್ತು ಮೇರಿ ಅವರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಿದ್ದರು. ಕೆಲವರು ಅಲ್ಲಿಯೇ ಮಲಗಿಕೊಂಡು ಚೀರಾಡುತ್ತಿದ್ದರು, ಅವರು ತಮ್ಮ ಸ್ವಂತ ಇಚ್ಛಾಶಕ್ತಿಯನ್ನು ಕಳೆದುಕೊಂಡಿದ್ದರು ಮತ್ತು ದೇವರೇ ಎಲ್ಲಾ ಕೆಲಸಗಳನ್ನು ಮಾಡಬೇಕೆಂದು ನಿರೀಕ್ಷಿಸುತ್ತಿದ್ದರು. ಟೈಟಾನಿಕ್ ದುರಂತ ಸಾಗರ ಇತಿಹಾಸದಲ್ಲಿ ಮೈ ನವಿರೇಳಿಸುವ ಮತ್ತು ಕೇಳಲಾರದ ವಿದ್ರಾವಕ ಸತ್ಯಕತೆಯಾಗಿದೆ. ಸಹಸ್ರಮಾನಗಳ ಇತಿಹಾಸದಲ್ಲಿ ಇಂತಹ ನರಕಸದೃಶ ದುರಂತ ಹಿಂದೆ ಎಂದೂ ನಡೆದಿರಲಿಲ್ಲ. ಈ ದುರಂತದ ನಂತರ ಸಾಗರ ಕಾನೂನುಗಳನ್ನು ಬದಲಿಸಬೇಕಾಯಿತು ಮತ್ತು ಅನೇಕ ಕಟ್ಟೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಯಿತು. ಇದರಿಂದ ಇಡೀ ಜಗತ್ತು ಸಾಗರಲೋಕದಲ್ಲಿ ಒಂದು ಹೊಸ ಪಾಠವನ್ನೇ ಕಲಿತುಕೊಂಡಿತು. ನಂತರದ ಕಾಲದಲ್ಲಿ ಯಾವುದೇ ದೊಡ್ಡ ದುರಂತಗಳು ನಡೆಯಲಿಲ್ಲ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಗೊಂದಲಗಳಿಂದ ಕೂಡಿದ್ದು ಸುಮಾರು 1,490 ರಿಂದ 1635ರ ಎನ್ನಲಾಗಿದೆ. ಇನ್ನು ಸಮುದ್ರದಿಂದ ಸಂಗ್ರಹಿಸಿದ ಮೃತದೇಹಗಳ ಸಂಖ್ಯೆ ಕೇವಲ 333. ಒಟ್ಟಿನಲ್ಲಿ ಈ ಟೈಟಾನಿಕ್ ಹಡಗಿನ ಕತೆಯ ವ್ಯಥೆಯನ್ನು ಓದಿಯೇ ತಿಳಿಯಬೇಕು. ಡಾ. ಎಂ. ವೆಂಕಟಸ್ವಾಮಿ

₹150   ₹128

Buy Now
ಟ್ರಾಯ್ | Troy

ಗ್ರೀಕ್ ಇತಿಹಾಸದಲ್ಲೇ ಒಮ್ಮೆ ಕಾಲ್ಪನಿಕ… ಒಮ್ಮೆ ಪೌರಾಣಿಕ… ಮತ್ತೊಮ್ಮೆ ಜನಪದ ಕಥೆ ಎನ್ನುವ ವಿವಾದದೊಂದಿಗೇ ಅತ್ಯಂತ ಹೆಸರುವಾಸಿಯಾದ… ಅತ್ಯಂತ ಭೀಕರ ಯುದ್ಧವೊಂದಕ್ಕೆ ನಾಂದಿಯಾದ ಒಂದು ಅಮರ ಪ್ರೇಮಕಥೆ ಈ ” ಟ್ರಾಯ್” .

₹200   ₹160

Buy Now
ದ್ವೈತ | Dwaita

ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ. ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹೆಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ. ಪ್ರಾಮೀಸ್, ನಾವು ರಾಜ್ಯದ ಕಟ್ಟಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ. ನಮ್ಮದು ಉದ್ಯಮವಲ್ಲ. ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ. ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್ ಕಾಮ್ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.

₹140   ₹119

Buy Now
ನಾತಿಚರಾಮಿ | Naaticharami

‘ನಾತಿಚರಾಮಿ’ ನಿನ್ನ ಹೊರತಾಗಿ ಅಲ್ಲ ಎನ್ನುವ ಮಾತು ಮದುವೆಯ ಪ್ರಮಾಣದಲ್ಲಿ ಧರ್ಮ, ಅರ್ಥ, ಮೋಕ್ಷಗಳ ಜೊತೆಯಲ್ಲಿ ಕಾಮಕ್ಕೂ ಅನ್ವಯವಾಗುತ್ತದೆ ನಂಬಿಕೆ, ಭರವಸೆ ಆಗಬೇಕಿದ್ದ ಈ ಪ್ರಮಾಣ ಗೌರಿಯ ಪಾಲಿಗೆ ಒಂದು ಅಗೋಚರ ಬಂಧನವೂ ಆಗಿರುತ್ತದೆ. ಆ ಬಂಧನ ಕೇವಲ ಮಾಡಿದ ಆ ಪ್ರಮಾಣದ್ದಲ್ಲ, ಬಾಲ್ಯದಿಂದಲೂ ಸಮಾಜದಿಂದ ಕಲಿಸಲ್ಪಟ್ಟ ಸೋ ಕಾಲ್ಡ್ ಮೌಲ್ಯಗಳದ್ದು, ನಂಬಿಕೆಗಳದ್ದು, ನಿರೀಕ್ಷೆಗಳದ್ದು. ಗಂಡ ಬಿಟ್ಟು ಹೋದಮೇಲೆ ಸಹ ದಾಂಪತ್ಯದ ಈ ಪ್ರಮಾಣವನ್ನು ಕಳಚಿಕೊಳ್ಳುವುದು ಗೌರಿಗೆ ಸಲೀಸಲ್ಲ. ಇದು, ಗೌರಿ ಅವುಗಳನ್ನು ದಾಟುವ ಕಥೆ, ಆ ಮೂಲಕ ಬದುಕಿನ ಸಮೀಕರಣದಲ್ಲಿ ತನ್ನನ್ನು ತಾನು ಪಡೆದುಕೊಳ್ಳುವ ಕಥೆ

₹150   ₹119.98

Buy Now
ನಿಷಿತೆ | Nishite

ಪ್ರೀತಿನಿ ಧನಂಜಯ ಅವರ “ನಿಷಿತೆ”. ಈ ಕಾದಂಬರಿಯು ಮನೋವೈಜ್ಞಾನಿಕ ಥ್ರಿಲ್ಲರ್ ಆಗಿದ್ದು, ಪ್ರೀತಿನಿ ಅವರು ತಮ್ಮ ಮೊದಲ ಕೃತಿಯಲ್ಲೇ ಇಂಥದ್ದೊಂದು ಪ್ರಯೋಗಕ್ಕೆ ಅಣಿಯಾಗಿದ್ದು ಮೆಚ್ಚಬೇಕಾದ ಸಂಗತಿ. ದೆವ್ವ, ಭೂತ, ವಾಸ್ತವ, ಕಲ್ಪನೆ ಮತ್ತು ವೈಜ್ಞಾನಿಕ ವಿಷಯಗಳ ಸುತ್ತಲೇ ಸುತ್ತುವ ಈ ಕಾದಂಬರಿಯ ಮೂಲಕ ನಿಜಕ್ಕೂ ದೆವ್ವ ಭೂತಗಳಿಗೆ ಅಸ್ತಿತ್ವ ಇದೆಯೋ? ಇಲ್ಲವೋ? ಎನ್ನುವ ವೈಚಾರಿಕತೆಯ ಬೆಳಕು ಚೆಲ್ಲಲು ಲೇಖಕಿ ಪ್ರಯತ್ನಿಸಿದ್ದಾರೆ. ಎಷ್ಟೊಂದು ಸಿನೆಮಾಗಳನ್ನು ನೋಡಿದರೂ ದೆವ್ವ ಭೂತಗಳ ಬಗೆಗಿನ ಕುತೂಹಲ ತಣಿಯದವರಿಗೆ ಈ ಕೃತಿ ರಸಾನುಭವ ನೀಡಬಲ್ಲುದು ಮತ್ತು ಒಂದೊಳ್ಳೆ ಎಂಟರ್‌ಟ್ರೈನರ್ ಆಗಬಲ್ಲುದು.

₹250   ₹200

Buy Now
ನೀ ದೂರ ಹೋದಾಗ | Nee Dura Hodaga

ಮಂಗಳೂರು ನಗರ ಹಲವು ಬದುಕುಗಳ ವಿವಿಧ್ಯಮಯ ನಗರ. ವಿವಿಧ ಭಾಷೆ, ಸಂಸ್ಕೃತಿ, ಧರ್ಮ, ಹಾಗೂ ಪಾಕ ವೈವಿಧ್ಯತೆಗಳನ್ನು ಹಿತವಾಗಿ ತನ್ನ ಜನರಿಗೆ ದೊರಕಿಸುವ ಉದಾರನಗರ ಎನಿಸಿಕೊಂಡಿದೆ.

₹220   ₹176

Buy Now
ಪ್ರೀತಿಯೆನುವ ಮಾಯೆ | Preetiyenuva Maaye

ಕಾವ್ಯದಂತೆ, ಸಣ್ಣಕಥೆಯಲ್ಲೂ ಲಕ್ಷಣರಾವ್ ಸದ್ಯ ಬಂಡಾಯಗಳ ಹಣೆಪಟ್ಟಿಗೆ ದಕ್ಕುವವರಲ್ಲ, ನವ್ಯದ ಅಂತರ್ಮುಖಿಕೆ, ಅಂತಃಪ್ರಶ್ನೆ, ಪ್ರಜ್ಞಾಪ್ರವಾಹತಂತ್ರ ಇದೇ ಮೊದಲಾದವು ಇವರ ಕಥೆಗಳಲ್ಲಿ ಕಾಣುವುದಿಲ್ಲ ಸಾಮಾಜಿಕ ಕಳಕಳಿಗಿಂತ ಭಿನ್ನ, ಅಂದರೆ ಸಾಮಾಜಿಕ ಸಮಸ್ಯೆಗಳಿಂದ ವಿಮುಖರು ಎಂದಲ್ಲ, ಸಾಮಾಜಿಕ ಸಮಸ್ಯೆಗಳು, ಕ್ರೂರ ವ್ಯವಸ್ಥೆ ಇವುಗಳ ಒತ್ತಡದಲ್ಲಿ, ದಮನಕಾರಿ ನಿಲುವುಗಳಲ್ಲಿ ಮನುಷ್ಯ ಸಂಬಂಧಗಳು, ಪ್ರೀತಿ ವಿಶ್ವಾಸಗಳು ಹೇಗೆ ನಲುಗಿಹೋಗುತ್ತಿವೆ ಎಂಬುದು ಲಕ್ಷಣರಾವ್ ಅವರ ಸೃಜನಶೀಲ ಮನಸ್ಸಿನ ಮುಖ್ಯ ಕಾಳಜಿಯಾಗಿದೆ. ಪ್ರೀತಿ, ಗಂಡು-ಹೆಣ್ಣಿನ ಪ್ರೀತಿ, ಜೀವನಪ್ರೀತಿ - ಇವು ವ್ಯವಸ್ಥೆಯ ಕ್ರೂರ ಹಿಡಿತದಲ್ಲಿ ನಲುಗಬಾರದು. ನಿಷೇಧ ಮೊದಲಾದ ನಕಾರಾತ್ಮಕ ಪ್ರವೃತ್ತಿಗಳಲ್ಲಿ ಪ್ರೀತಿ ಮುರುಟಿಹೋಗಬಾರದು ಎಂಬ ಆರೋಗ್ಯಕರ ಜೀವನದೃಷ್ಟಿ ಲಕ್ಷಣರಾವ್ ಅವರ ಕಥೆಗಳ ಹಿಂದಿನ ಮುಖ್ಯ ಮಾನವೀಯ ದನಿಯಾಗಿದೆ. ಲಕ್ಷಣರೊಳಗಿನ ಕವಿಯ ಆರೋಗ್ಯಕರ ಜೀವನದೃಷ್ಟಿ, ಸ್ಪಷ್ಟ ವಿಚಾರಗಳ ಜೊತೆಗೆ ಅವರ ಗದ್ಯವು ವಾಚ್ಯವಾಗದೆ ಧ್ವನಿಪೂರ್ಣವಾಗಿ ಕಾವ್ಯಕ್ಕೆ ಹತ್ತಿರವಾಗುತ್ತದೆ. ಜಿ.ಎಸ್.ಆಮೂರರು ಹೇಳಿರುವಂತೆ ಪ್ರಾಮಾಣಿಕತೆ, ತೀವ್ರತೆ ಮತ್ತು ಹೊಸದೃಷ್ಟಿ ಲಕ್ಷಣರಾವ್ ಅವರ ಕಾವ್ಯದ ಮುಖ್ಯ ಗುಣಗಳಾಗಿರುವಂತೆ ಕಥೆಗಳ ಮುಖ್ಯ ಗುಣವೂ ಆಗಿದೆ: ಶಕ್ತಿಯೂ ಆಗಿದೆ.

₹320   ₹272

Buy Now
ಪ್ರೀತ್ಸು | Preethsu

ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.

₹170   ₹145

Buy Now
ಫಾರೆಸ್ಟರ್ ಪೊನ್ನಪ್ಪ | Forester Ponnappa

ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ.

₹300   ₹255

Buy Now
ಬೆಳವಡಿ ಮಲ್ಲಮ್ಮ | Belavadi Mallamma

ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು. ಆದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಿಗೆ ಹೋಲಿಸದರೆ, ಮಹಿಳೆಯರು ವಹಿಸಿದ ಪಾತ್ರವು ಇತಿಹಾಸದ ಪುಟಗಳಲ್ಲಿ ಮಬ್ಬು ಮಬ್ಬಾಗಿ ದಾಖಲಾಗಿದೆ. ಆ ಹಿನ್ನಲೆಯಲ್ಲಿ ನೋಡಿದಾಗ ಬೆಳವಡಿ ಮಲ್ಲಮ್ಮ ಕೃತಿಯ ಮಹತ್ವ ನಮಗೆ ಅರಿವಾಗುತ್ತದೆ. ಬೆಳವಡಿ ಮಲ್ಲಮ್ಮ ಯುದ್ಧವ್ಯೂಹಗಳಿಗೆ, ಗಾಳಿವೇಗದ ಪ್ರಹಾರಗಳಿಗೆ, ಸ್ವಾಭಿಮಾನ, ಧೈರ್ಯ ಸಾಹಸಗಳಿಗೆ ಹೆಸರಾದವರು.

₹200   ₹170

Buy Now
ಬೇವಾಚ್ | Bevach

“ಬೇವಾಚ್” ಕತ್ತಲಾಗುತ್ತಿದ್ದಂತೆ ಎಚ್ಚರವಾಗುವ ಲೈವ್ ಬ್ಯಾಂಡಿನ ಝಗಮಗಿಸುವ ಬೆಳಕಿನಡಿಯಲ್ಲಿ, ಕಿವಿಗಡಚಿಕ್ಕುವ ಅಬ್ಬರದ ಹಾಡಿಗೆ ಅರೆಬರೆ ಬಟ್ಟೆತೊಟ್ಟು ಮೈ ಬಳಕಿಸುತ್ತಾ, ಗ್ರಾಹಕರನ್ನು ಕಣ್ಣಲ್ಲೇ ಸೆಳೆಯುವ ಯುವತಿಯೊಬ್ಬಳ ಸುತ್ತ ಹೆಣೆದ ಕಾದಂಬರಿ ಪರಿಸ್ಥಿತಿ ಮತ್ತು ಜವಾಬ್ದಾರಿ ಒಬ್ಬ ಮುಗ್ಧ ಹೆಣ್ಣನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ; ಮುಂದೆ, ಬದಲಾಗುವ ಅವಕಾಶ ಇದ್ದರೂ ಹಣದಾಸೆಗೆ ಬಿದ್ದ ಅವಳು ಯಾವ್ಯಾವ ಕುಕೃತ್ಯದಲ್ಲಿ ತೊಡಗಿಕೊಳ್ಳುತ್ತಾಳೆ ಎಂಬುದರ ಜೊತೆಗೆ ಬಡತನ, ಮೋಸ, ವ್ಯಭಿಚಾರ, ಗಂಡು ಮಗುವಿನ ವ್ಯಾಮೋಹ, ಪೊಲೀಸರ ಕ್ರೌರ್ಯ, ಕ್ರೈಂ ಮಿಗಿಲಾಗಿ ಬೆಲೆವೆಣ್ಣುಗಳ ಸಹವಾಸ ಮಾಡುವುದರಿಂದಾಗುವ ಪರಿಣಾಮವನ್ನು ಕಾದಂಬರಿಯಲ್ಲಿ ಕಾಣಬಹುದಾಗಿದೆ.

₹225   ₹191

Buy Now
ಭಾನುಮತಿಯ ಪರಿವಾರ | Bhanumatiya Parivara

” ಭಾನುಮತಿಯ ಪರಿವಾರ” ಎಂಬುದು ಹಿಂದಿ ನಾಣ್ಣುಡಿ “ಭಾನುಮತೀ ಕಾ ಕುನ್ ಬಾ”ದ ಕನ್ನಡ ಅನುವಾದ.

₹140   ₹119

Buy Now
ಮಹಾವಿನಾಶ | Mahavinasha

ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ.

₹450   ₹383

Buy Now
ಮಾದಕ ದೊರೆ | Maadaka Dore

ಕೇವಲ ಮಾದಕ ವಸ್ತುಗಳ ಮಾರಾಟ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವವರು ಇದ್ದಾರೆ. ಆದರೆ ಪಾಬ್ಲೊ ಕೇವಲ ಮಾದಕ ದೊರೆ ಮಾತ್ರ ಅಲ್ಲ. ಅವನ ಜನರ ಆರಾಧ್ಯ ದೈವ. ಅಮೆರಿಕ ಸರ್ಕಾರಕ್ಕೆ ತಲೆನೋವಾಗಿ… ಕೊನೆಗೆ ತನ್ನ ದೇಶದ ಮಕುಟವಿಲ್ಲದ ಮಹಾರಾಜನಾದ. ಪಾಬ್ಲೊನ ಗೆಳತಿಯರು… ಮಕ್ಕಳು… ಅವನ ದೊಡ್ಡ ವಿಲ್ಲಾ.. ಅವನನ್ನು ಹಿಡಿಯಲು ಪ್ರಯತ್ನಿಸಿದ ಅಧಿಕಾರಿಗಳು. ರೋಚಕ ನಿರೂಪಣೆ.

₹375   ₹319

Buy Now
ವಿಶ್ವಸುಂದರಿ | Vishwasundari

ಕನ್ನಡದ ಪ್ರಸಿದ್ಧ ಲೇಖಕರಾದ ಕುಂ. ವೀರಭದ್ರಪ್ಪ ಅವರು ಬರೆದಿರುವ ವಿನೂತನ ಕಾದಂಬರಿ ಇದಾಗಿದೆ. ಕುತೂಹಲ ಕಥಾವಸ್ತು ಹೊಂದಿರುವ ಕಾದಂಬರಿ ರೋಚಕವಾಗಿದೆ.

₹160   ₹136

Buy Now
Sold Out
ವೀರ ಸಿಂಧೂರ ಲಕ್ಷ್ಮಣ | Veera Sindhoora Laksmana

`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು ತಿಳಿಸುವ ಕಾದಂಬರಿಯಾಗಿದೆ.

₹190   ₹162

Buy Now
ವ್ಯಗ್ರ ಮತ್ತು ಇತರ ಕಾದಂಬರಿಗಳು | Vyagra Mattu Itara Kadambarigalu

‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು.

₹180   ₹144

Buy Now