• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಬೆಳಕಿನ ಹೊಳೆ | Belakina Hole

ನಾಡಿನ ಹೆಸರಾಂತ ಸಾಹಿತಿಗಳು, ತತ್ತ್ವ ದರ್ಶನಗಳ ರಸಮಯ ವ್ಯಾಖ್ಯಾನಕಾರರೂ ಆಗಿರುವ ಜಿ. ಬಿ. ಹರೀಶರು ಬರೆದಿರುವ ಸಾ.ಕೃ. ರಾಮಚಂದ್ರ ರಾಯರ ಜೀವನ ಚರಿತ್ರೆಯನ್ನು ಓದುವಾಗ ರೋಮಾಂಚನವಾಗುವ ಜೊತೆ ಜೊತೆಗೇ ದುಃಖವೂ ಆಗುತ್ತದೆ. ಬಹುಶ: ಅವರು ಅಮೆರಿಕದಲ್ಲೋ, ಜರ್ಮನಿಯಲ್ಲೋ ಹುಟ್ಟಿ ಆ ದೇಶಗಳ ಇತಿಹಾಸ ಇಂಡಿಕ್, ಅಧ್ಯಯನ ವಿಭಾಗಗಳಲ್ಲಿ ದುಡಿದಿದ್ದರೆ ಈಗಿಗಿಂತ ಹೆಚ್ಚಿನ ಜಗದ್ವಿಖ್ಯಾತಿ, ಧನ ಸಂಪಾದನೆ ಮಾಡಿ ಮೇಲೇರಬಹುದಿತ್ತು. ಆಸ್ತಿಕ ಸಮಾಜವೇನೋ ಅವರನ್ನು ಗೌರವಿಸಿತ್ತು. ಆದರೆ ಇದ್ದಷ್ಟು ದಿನ ಅವರಿಗೆ ಒಂದು ಪದ್ಮಪ್ರಶಸ್ತಿಯೂ ಬರಲಿಲ್ಲ ಎಂಬುದೇ ನಮ್ಮ ಕಾಲದ ಮಹಿಮೆಯನ್ನು ಹೇಳುತ್ತದೆ. ರಾಯರು ತುಂಬು ಜೀವನ ನಡೆಸಿ ಕನ್ನಡ, ಇಂಗ್ಲಿಷ್, ಸಂಸ್ಕೃತ, ಪ್ರಾಕೃತ ಪಾಳಿ ಭಾಷೆಗಳ ಕಣಜವನ್ನು ತಿಳಿವಿನಿಂದ ತುಂಬಿದರು. ಸಾವಿರದ ಹೊಳೆಯುವ ಈ ಸಾಲಿಗ್ರಾಮಕ್ಕೆ ಇದು ನಮಸ್ಕಾರ ಪೂರ್ವಕ ನುಡಿ ನಮನ.

₹120   ₹107

Buy Now
ಬೆಳ್ಳಿ ಚುಕ್ಕಿ | Belli Chukki

"ಬದುಕು ಗಣಿತದ ಸೂತ್ರಗಳ ಲೆಕ್ಕಾಚಾರದಂತೆ ಒಂದು ಅಂಕೆ ತಪ್ಪಿದರೆ ಇಡೀ ಸೂತ್ರವೇ ತಪ್ಪಿಹೋಗುತ್ತದೆ" ಎಂಬ ಕಾದಂಬರಿಯ ಕೇಂದ್ರ ಪಾತ್ರ ವಸಂತಿ ಹೇಳುವ ಮಾತು ಕಾದಂಬರಿಯ ಆಶಯವನ್ನು ಹೇಳುವಂತದ್ದು. ಬದುಕಿನ ಬವಣೆಗಳನ್ನು, ಕ್ಲಿಷ್ಟ ಸಮಸ್ಯೆಗಳನ್ನು ತಾಳ್ಮೆಯಿಂದ ಧೈರ್ಯದಿಂದ ಅಂತಃಕರಣದಿಂದ ಬಿಡಿಸುತ್ತಾ ಸಾಗಬೇಕೇ ಹೊರತು ಕೋಪತಾಪ ಆತುರದ ನಿರ್ಧಾರಗಳು ಬದುಕನ್ನು ಹಾಳುಗೆಡವುತ್ತವೆಂಬುದನ್ನು ಲೇಖಕಿ ಮಾಲತಿಯವರು ಈ ಕಾದಂಬರಿಯ ಮೂಲಕ ಚಂದದಲ್ಲಿ ಕಟ್ಟಿಕೊಡುತ್ತಾರೆ. ಯುವ ಮನಸ್ಸುಗಳು ಎದುರಿಸುವ ಅನೇಕ ಸಂಘರ್ಷಗಳಿಗೆ ಪ್ರೀತಿ ಬೆಂಬಲ ಪ್ರೋತ್ಸಾಹದ ಕೊರತೆ ಕಾರಣವಾಗಿರುವುದನ್ನು ಕುರಿತು ಹೇಳುವ ಲೇಖಕಿ, ಹಾಗೆಯೇ ಅತೀ ಕೊಂಡಾಟ ಕೂಡಾ ಅವರನ್ನು ದಿಕ್ಕುಗೆಡಿಸುತ್ತದೆ ಎಂಬ ಪ್ರಸ್ತುತ ಸಮಾಜದ ಜ್ವಲಂತ ಸಮಸ್ಯೆಯನ್ನು ಇಲ್ಲಿ ಕುತೂಹಲಕಾರಿಯಾಗಿ, ಆಪ್ತವಾಗಿ ಚಿತ್ರಿಸಿದ್ದಾರೆ. ತಲ್ಲಣಗಳನ್ನು ಎದುರಿಸುವ, ಅದರಿಂದ ಹೊರಬರುವ ಮಾರ್ಗಗಳನ್ನು ಕಥಾನಕ ಸರಳ, ಸುಂದರವಾಗಿ ಚಿತ್ರಿಸಿದರೂ, ಬದುಕೆಂಬುದು ಅಷ್ಟು ಸಲೀಸಲ್ಲ, ಅನೂಹ್ಯವಾದದ್ದು ಎಂಬ ಧ್ವನಿಯೂ ಅಂತರ್ಗತವಾಗಿದೆ. ಆಶಾದಾಯಕ, ಭರವಸೆಯ ದಿಕ್ಕಿನೆಡೆ ಕಥೆ ಮುಖಮಾಡಿರುವುದು ವಿಶೇಷವಾಗಿದೆ.

₹250   ₹223

Buy Now
ಬೆಳ್ಳಿತೊರೆ | Bellitore

ರಘುನಾಥ ಚ ಹ

₹195   ₹174

Buy Now
ಬೇತಾಳಪ್ರಶ್ನೆಗಳು | Betalaprasnegalu

ಯಂಡಮೂರಿ ವೀರೇಂದ್ರನಾಥ್ ಯಂಡಮೂರಿ ವೀರೇಂದ್ರನಾಥ್ ಒಬ್ಬ ಭಾರತೀಯ ಕಾದಂಬರಿಕಾರರು ಮತ್ತು ಚಿತ್ರಕಥೆಗಾರರು. ಇವರು ತೆಲುಗು ಭಾಷೆಯಲ್ಲಿನ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ.ಅವರು ತಮ್ಮ ಸಾಮಾಜಿಕವಾಗಿ ಸಂಬಂಧಿತ ಬರಹಗಳು ಮತ್ತು ಯೂಟ್ಯೂಬ್ ವೀಡಿಯೊಗಳೊಂದಿಗೆ ಯುವ ಪೀಳಿಗೆಯ ಮೇಲೆ ಪ್ರಭಾವ ಬೀರುತ್ತಾರೆ. ಅವರ ಬರಹಗಳಲ್ಲಿ ಅವರು ಬಡತನ, ಪೂರ್ವಾಗ್ರಹಗಳು ಮತ್ತು ಮೂಢನಂಬಿಕೆಗಳಂತಹ ಭಾರತದಲ್ಲಿನ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಮತ್ತು ಸಾಮಾಜಿಕವಾಗಿ ಜವಾಬ್ದಾರಿಯುತವಾಗಿರಲು ಜನರನ್ನು ಪ್ರೋತ್ಸಾಹಿಸುತ್ತಾರೆ. ಅವರು ಸಾಹಿತ್ಯದ ಆದರ್ಶವಾದಿ ಮತ್ತು Read More...

₹220   ₹196

Buy Now