nil
ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ ಮತ್ತು ಮನುಷ್ಯ ಗ್ರಹಿಕೆಯ ಭಾಗವೇ ಎನ್ನುವುದು ಅರ್ಥವಾಗುವುದು ಕಷ್ಟವೇನಲ್ಲ, ಎಲ್ಲಕ್ಕಿಂತ ಹೆಚ್ಚಾಗಿ ಈ ಬಗೆಯ ಓದು, ಓದುಗನ ಕಲ್ಪನಾ ಶಕ್ತಿಯನ್ನು ಒರೆಗೆ ಹಚ್ಚುತ್ತದೆ. ಓದುಗನ ಆಲೋಚನಾ ಶಕ್ತಿಯನ್ನು ವೃದ್ಧಿಸುತ್ತಲೇ ಈ ರೀತಿಯ ವಸ್ತುಗಳೆಡೆಗಿನ ಸಿನಿಕತನವನ್ನೂ ಸಹ ಕಡಿಮೆ ಮಾಡುತ್ತವೆ. ಹಾಗೆ ಮಾಡುವುದರ ಮೂಲಕ ಮುಕ್ತ ಮನಸ್ಸಿನಿಂದ ಈ ಕ್ಷೇತ್ರದ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ಅನಾವಶ್ಯಕವಾಗಿ ಭಯ ಹುಟ್ಟಿಸುವ ವಿಷಯಗಳು ಅರಿವಿಗೆ ಸಿಕ್ಕುತ್ತವೆ. ಇಲ್ಲಿ ನಮ್ಮನ್ನೂ ಮೀರಿದ್ದು ಇನ್ನೇನೋ ಇದೆ ಎನ್ನುವುದು ಆರಿವಾಗಿ ಭಯ ಕಡಿಮೆಯಾಗಿ ಆತ್ಮ ವಿಶ್ವಾಸ ಹೆಚ್ಚುತ್ತದೆ ಎಂದರೂ ಅತಿಶಯೋಕ್ತಿಯಲ್ಲ.
ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
140
Showing 301 to 330 of 517 results