• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಕಥಾಭರಣ | Kathabharana

ಬಹುತೇಕ ಹಳ್ಳಿಗಳಲ್ಲಿ ಸುಗ್ಗಿಹಬ್ಬ ಮಾಡುತ್ತಾರೆ. ಹೊಸ ಬೆಳೆ ಮನೆಗೆ ಬಂದ ತಕ್ಷಣ, ಅದರಲ್ಲಿ ಮೊದಲ ಭಾಗವಾಗಿ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದಿಷ್ಟು ಧಾನ್ಯವನ್ನು ಊರ ದೇವರಿಗೆ ಎಲ್ಲರೂ ಅರ್ಪಿಸುತ್ತಾರೆ. ಬಡವ, ಬಲ್ಲಿದ, ಮೇಲು, ಕೀಳು ಇತ್ಯಾದಿಗಳ ಸೋಂಕಿಲ್ಲದೆ ಎಲ್ಲರೂ ಈ ದಾನ ಮಾಡುತ್ತಾರೆ. ಅವನ್ನೆಲ್ಲಾ ಸ್ವೀಕರಿಸಿದ ದೇವಸ್ಥಾನವು ಸುಗ್ಗಿಹಬ್ಬ ಹಮ್ಮಿಕೊಳ್ಳುತ್ತದೆ. ಊರವರೇ ನೀಡಿದ ಧಾನ್ಯಗಳನ್ನು ಬಳಸಿ ಊರವರೇ ಅಡಿಗೆ ತಯಾರಿಸಿ, ಎಲ್ಲರೂ ಊಟ ಮಾಡುತ್ತಾರೆ. ಈ ಊಟವು ಊರವರಿಗೆಲ್ಲಾ ಅತ್ಯಂತ ರುಚಿಯೆನ್ನಿಸುತ್ತದೆ.ಇಂತಹ ಸುಗ್ಗಿಹಬ್ಬದ ರುಚಿ ಈ ಕಥಾಸಂಕಲನಕ್ಕೆ ದಕ್ಕಿದೆ. ಕನ್ನಡ ಸಾಹಿತ್ಯಲೋಕದ ಸಾಕಷ್ಟು ಹೊಸ ಕತೆಗಾರರು ಮತ್ತು ಒಂದಿಷ್ಟು ಹಳಬರು ಈ ಸಂಕಲನಕ್ಕೆ ತಮ್ಮ ಕತೆಯನ್ನು ನೀಡಿದ್ದಾರೆ. ಸದ್ಯದ ಕನ್ನಡ ಲೋಕದ ಹೊಸ ಬರವಣಿಗೆಯ ಪಕ್ಷಿನೋಟವನ್ನು ಈ ಸಂಕಲನ ನೀಡುತ್ತದೆ. ಊರವರೆಲ್ಲರೂ ಒಂದಾದಾಗ ಮೂಡುವ ಸಹೃದಯತೆ, ಆತ್ಮೀಯತೆ ಮತ್ತು ಲವಲವಿಕೆಯೂ ಇಲ್ಲಿ ಕಾಣುತ್ತದೆ. ಇಂತಹ ಒಗ್ಗಟ್ಟಿನ ಕಾರ್ಯಗಳು ಸದ್ಯದ ಸಾಹಿತ್ಯದ ಲೋಕವನ್ನು ಜೀವಂತ ಉಳಿಸುವುದಕ್ಕೆ ಅವಶ್ಯ ಬೇಕಾದ ಲಸಿಕೆಯಾಗಿದೆ. ಕನ್ನಡ ಸಾಹಿತ್ಯ ಚರಿತ್ರೆಯ ಹಿರಿಯ ಮಹನೀಯರೆಲ್ಲರ ಪ್ರತಿಫಲನವೂ ಈ ಕತೆಗಳಲ್ಲಿ ಕಾಣುತ್ತದೆ. ಆ ನಿಟ್ಟಿನಿಂದ ಇದು ಪರಂಪರೆಯ ನೆಲದಲ್ಲಿ ಬೆಳೆದ ಹೊಸ ಬೆಳೆಯಾಗಿದೆ. ಊರ ದೇವಸ್ಥಾನವೂ ಒಂದಿಷ್ಟು ಹೊಲವನ್ನು ಹೊಂದಿದ್ದು, ಅದೂ ಕೊಯ್ದು ಮಾಡಿದ ಧಾನ್ಯದಲ್ಲಿ ಒಂದಿಷ್ಟು ಭಾಗವನ್ನು ಸುಗ್ಗಿಹಬ್ಬಕ್ಕೆ ದಾನ ಮಾಡುತ್ತದೆ. ಅದೇ ರೀತಿ ಈ ಸಂಕಲನವನ್ನು ಶ್ರದ್ಧೆಯಿಂದ ಸಂಪಾದಿಸಿದ ಅಜಿತ್ ಹರೀಶಿ ಮತ್ತು ವಿಠಲ್ ಶೆಣೈ ತಮ್ಮ ಕತೆಯನ್ನೂ ಇಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ರುಚಿಯ ನಿರ್ಧಾರದಲ್ಲಿ ನಾಲಿಗೆಗಿಂತಲೂ ಮನಸ್ಸು ದೊಡ್ಡ ಪಾತ್ರವಹಿಸುತ್ತದೆ. ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ತಯಾರಿಸಿದ ಸುಗ್ಗಿಯೂಟ ರುಚಿಯಾಗಿರಲು ಮನಸ್ಸೇ ಮುಖ್ಯ ಕಾರಣ. ಆದರೆ ಪಕ್ಕದೂರಿನವರೂ ನಮ್ಮೂರಿನ ಸುಗ್ಗಿ ಊಟ ರುಚಿ ಎಂದರೆ ಆಗ ಆ ಪಾಕ ಮಹತ್ವ ಪಡೆದುಕೊಳ್ಳುತ್ತದೆ. ಅಂತಹ ದಾರಿಯಲ್ಲಿ ಇಲ್ಲಿನ ಹಲವು ಕತೆಗಳಿವೆ ಎನ್ನುವುದು ನನಗೆ ಭರವಸೆಯನ್ನು ಕೊಟ್ಟಿದೆ.

₹290   ₹218

Buy Now
ಕದ್ರ/kadra/

nil

₹110   ₹98

Buy Now
ಕನಸು ಸೊಗಸು | Kanasu Sogasu

ಕನಸುಗಳನ್ನು ಶೃಂಗರಿಸುವ ಜರೂರನ್ನು ಕಾಪಾಡಿಕೊಳ್ಳುವುದು. ಸ್ತ್ರೀ ಸ್ವಾತಂತ್ರ್ಯ, ವೈಚಾರಿಕತೆಯನ್ನು ಮುಟ್ಟಲು ಕಾದಂಬರಿ ಮೇರೆ ಮೀರಿ ಪ್ರಯತ್ನಿಸಿದೆ ಮತ್ತು ಆ ಮೂಲಕ ಸರ್ವಾಂಗೀಣ ಬೆಳವಣಿಗೆ ಸಾಧ್ಯತೆಯನ್ನು ಸಾರಲು ಪರಿಕ್ರಮಿಸಿದೆ. ಎಲ್ಲಾ ತಾರತಮ್ಯವನ್ನು ತಿರಸ್ಕರಿಸಿ ಸಾಮಾಜಿಕ ಕಳಕಳಿಯ ಅಂಶವನ್ನು ಎತ್ತಿಹಿಡಿಯುವ ಮಾರ್ಗದಲ್ಲಿ ಸಾಗಿದೆ. ಲೇಖಕರೊಬ್ಬರ ಲೇಖನಿಯಲ್ಲಿ ಎಲ್ಲವೂ ಶುಭಂ ಆಗುವ ಸಂಭವವಿರುವುದರಿಂದ, ಕಾದಂಬರಿಯೂ ಸಹ ಆತಂಕ, ತಲ್ಲಣಗಳನ್ನು ಹೊತ್ತು ಕೊಂಡೇ, ಆದಷ್ಟೂ ಬದುಕಿನ ಸಹಜತೆಯನ್ನು ಕಾಯ್ದುಕೊಳ್ಳಲು ಯತ್ನಿಸಿದೆ. ಕಥೆಯಲ್ಲಿ ಹೆಚ್ಚು ಕಡಿಮೆ ಎಲ್ಲಾ ಪಾತ್ರಗಳಿಗೂ ಅವಕಾಶವಿದೆ. ಅಧ್ಯಾಯದ ಉಪಕತೆಗಳಲ್ಲಿ ಕನೆಕ್ಟಿವಿಟಿ ಇದೆ. ಒಟ್ಟು ಮುನ್ನೂರಕ್ಕೂ ಹೆಚ್ಚು ಪುಟಗಳ ಕಾದಂಬರಿ ಮೂವತ್ತು ಅಧ್ಯಾಯಗಳನ್ನು ಒಳಗೊಂಡಿದೆ. ಸಾದಾಸೀದವಾಗಿ ಯಾವುದೇ ಭಾರವಿಲ್ಲದೇ ಸರಳವಾಗಿ ಓದಿಸಿಕೊಳ್ಳುತ್ತದೆ. ಉದ್ವಿಗ್ನತೆ, ಒತ್ತಡದ ಸನ್ನಿವೇಶಗಳನ್ನು ಬರೆಯುವಾಗ ತೀರಾ ಒದ್ದಾಡದೆ, ನಿರುದ್ವಿಗ್ನವಾಗಿ ನಿರೂಪಿಸುತ್ತಾ ನೇರ ಮಾರ್ಗಕ್ಕೆ ತಂದು ಬಿಡುತ್ತಾರೆ. ಶೃಂಗಾರದ ಸಮಯ ತೀರಾ ಕಡಿಮೆಯಿವೆ. ಧಾರಾವಾಹಿಗಳಂತೆ ಅಸಹಜತೆಗಳಿಲ್ಲದೆ, ಕೃತಕ ಅಲಂಕಾರಗಳಿಲ್ಲದೆ, ನಿರಾಡಂಬರವಾಗಿ ವಿನ್ಯಾಸಿಸಿದ್ದಾರೆ. ಒಂದು ಸಿನೆಮಾವನ್ನು ಕುಟುಂಬ ಸಮೇತವಾಗಿ ನೋಡಬಹುದು ಅನ್ನುತ್ತಾರಲ್ಲ ಹಾಗೆ ಕನಸು ಸೊಗಸು ಎಲ್ಲಾ ವರ್ಗದ, ವಯೋಮಾನದ ಮಂದಿಯೂ ಓದಬಹುದಾದ ವಸ್ತು ವಿಷಯ ಹೊಂದಿದೆ. ಶ್ರೀನಾಥರಿಗೆ ಒಳಿತಾಗಲಿ, ಅವರು ಹಲವಾರು ಪ್ರಕಾರಗಳಲ್ಲಿ ಬರೆಯುವಂತಾಗಲಿ. ಈ ಕಾದಂಬರಿಯ ಸೊಗಡು ಸಾಹಿತ್ಯಕವಾಗಿ ಸಾಕಷ್ಟು ಹರಡಲಿ ಎಂಬ ಸದಾಶಯದೊಡನೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

₹450   ₹338

Buy Now
ಕನಸುಗಳೇ ಮರಳಿ ಬನ್ನಿ | kanasugale marali banni

ಇತ್ತೀಚೆಗೆ ಬರೆಯುತ್ತಿರುವ ಕತೆಗಾರರಲ್ಲಿ ನೀವು ಹೆಚ್ಚು ಇಷ್ಟವಾಗುತ್ತೀರಿ. ಮನುಷ್ಯರ ಮನಸ್ಸಿನೊಳಗೆ ನೀವು ಪ್ರವೇಶಿಸುತ್ತಿರುವ ರೀತಿ ನನಗೆ ಆಶ್ಚರ್ಯವನ್ನು ತಂದಿದೆ... ಮನುಷ್ಯನಿಗೆ ಅಂಥಾ ಹೇಳಿಕೊಳ್ಳುವಂತಹಾ ಗುರಿ-ಉದ್ದೇಶಗಳಿರುವುದಿಲ್ಲ. ಆತ ಭಾವ ಜೀವಿಯಾಗಿರುತ್ತಾನೆ. ಭ್ರಮಾಜೀವಿಯಾಗಿರುತ್ತಾನೆ. ಮನುಷ್ಯ ಜಗತ್ತು ಇವುಗಳಿಂದಲೇ ನಿರ್ಮಾಣವಾಗಿದೆ. ಆಗುತ್ತಲೂ ಇರುತ್ತದೆ. ನಿಮ್ಮ 'ನಿರ್ಗಮನ', 'ಒಂದುಹನಿ ಪ್ರೀತಿಗಾಗಿ', 'ಆ ಇನ್ನರ್ಧ', 'ನಾನು ನಾನಲ್ಲ', 'ಕಾಲ', 'ಚಿಟ್ಟೆ' ಹೀಗೆ ಹೆಚ್ಚು ಕಡಿಮೆ ಎಲ್ಲಾ ಕತೆಗಳೂ ನನಗೆ ಬಹಳ ಇಷ್ಟವಾದವು. ಮೇಲಿನ ಕತೆಗಳನ್ನು ಎರಡೆರಡು ಬಾರಿ ಓದಿದೆ. "ಹಾರಲು ಮರೆತ ಚಿಟ್ಟೆಗಳಂತೆ ಹೂವುಗಳು ಬಿದ್ದಿದ್ದವು' ಎಂಬ ವಾಕ್ಯ ಮತ್ತೆ ಮತ್ತೆ ನೆನಪಾಗುತ್ತಿರುತ್ತದೆ.

₹130   ₹104

Buy Now