nil
#
ಮಲೆನಾಡಿನ ಶ್ರೀಮಂತ ಜಮಿನ್ದಾರಿ ಕುಟುಂಬ ಶತಮಾನಗಳ ಕಾಲ ಪಾಳೆಗಾರರಾಗಿ ಸ್ವಂತ ಸೈನ್ಯವನ್ನು ಹೊಂದಿ ಸಾವಿರಾರು ಎಕರೆ ಭೂ ಮಾಲಿಕರಾಗಿ ಆಳು ಕಾಳು ಒಕ್ಕಲು ಹತ್ತಾರು ಗ್ರಾಮದ ಪಟೇಲ್ ಜವಬ್ದಾರಿ ಘರ್ವದಿಂದ ಗತ್ತಿನಿಂದ ಎಂತವರಿಗು ಅವರ ಆಡಳಿತ ಮತ್ತು ಶ್ರೀಮಂತಿಕೆ ಬೆರುಗು ತರುವಂತಿತ್ತು. ಇಲ್ಲಿ ಬರುವ ಪಟೇಲರು ಒಮ್ಮೆ ಹೈದರಾಲಿ ಆತನ ಮಗ ಟಿಪ್ಪು ವಿರುದ್ಧ ಬ್ರಿಟೀಷರ ಸಹಾಯ ಪಡೆದು ಸಮರ ಸಾರಿದವರು. ಒಮ್ಮೊಮ್ಮೆ ಗೆಲುವು ಕಂಡವರು. ಹೈದರ್ ಮತ್ತು ಟಿಪ್ಪು ಸಂತತಿ ಅಳಿದ ನಂತರ ಬ್ರಿಟೀಷರ ಕಾನೂನು ಮತ್ತು ಮತಾಂತರದ ವಿರುದ್ಧ ಸಮರ ಸಾರಿದವರು. ಹೀಗೆ ಹಲವಾರು ಘಟನೆಗಳ ಚಿತ್ರಣವನ್ನು ಈ ಕಾದಂಬರಿಯಲ್ಲಿ ಸೆರೆ ಹಿಡಿಯಲಾಗಿದೆ. ಒಮ್ಮೊಮ್ಮೆ ಕೆಲವು ಕಡೆ ಉತ್ತೇಕ್ಷೆಯಂತೆ ಕಂಡರು ಕೆಲವು ಕಡೆ ಗೊಂದಲವಾಗಿಯೂ ಕಂಡು ಬರಬಹುದು. ಅದೆಲ್ಲದಕ್ಕು ಕೂನೆಯಲ್ಲಿ ಉತ್ತರ ದೊರೆತಂತೆ ಕಾಣುತ್ತದೆ. ನಾನು ಹೇಳಬೇಕಾದ ಕೆಲವು ವಿಚಾರಗಳನ್ನು ಕಥಾ ನಾಯಕರ ಬಾಯಿಯಿಂದ ಹೇಳಿಸುವ ಪ್ರಯತ್ನ ಮಾಡಿದ್ದೇನೆ ಎನ್ನುವುದು ಸತ್ಯ. ಈ ಕೃತಿ ಓದಿ ತಾವು ಪ್ರಾಮಾಣಿಕ ಅಭಿಪ್ರಾಯವನ್ನು ನನ್ನೊಂದಿಗೆ ಹಂಚಿಕೊಳ್ಳುತ್ತೀರೆಂದು ನಂಬಿದ್ದೇನೆ.
Showing 1441 to 1470 of 5115 results