nil
ಹಿರಿಯ ಸಾಹಿತಿ ನಾ. ದಾಮೋದರ ಶೆಟ್ಟಿಯವರ 'ಕರಿಮಾಯಿ ಗುಡ್ಡ' ಕಾದಂಬರಿ ಸಂಶೋಧನಾತ್ಮಕ ಹಾಗೂ ಪತ್ತೇದಾರಿಯ ಗುಣಗಳನ್ನು ಹೊಂದಿದೆ. ಆಧುನಿಕ ಬದುಕಿಗೆ ಸಮೀಪವಾದ ಕಥಾವಸ್ತುವನ್ನೊಳಗೊಂಡಿದ್ದು ರೋಚಕ ತಿರುವುಗಳಿಂದ ಕೂಡಿ. ಕುತೂಹಲ ಕೆರಳಿಸುತ್ತ ಸಾಗುವ ಕಾದಂಬರಿ ಚೇತೋಹಾರಿ ಶೈಲಿಯಿಂದ ಕೂಡಿದೆ. ఇంగ్లీష్ ಸಾಹಿತ್ಯದಲ್ಲಿ ಇರಬಹುದಾದ ಇಂಥ ಕಥಾನಕಗಳು ಕನ್ನಡದಲ್ಲಿ ಅಪರೂಪ. ಎಸ್ಟೇಟ್ ಮಧ್ಯದ ಸಿರಿವಂತರ ಬದುಕಿನ ನಿಗೂಢ ಘಟನೆಯೊಂದನ್ನು ನಾದಾ ಅವರು ರೋಚಕವಾಗಿ ಹೆಣೆದಿದ್ದಾರೆ. ಎಸ್ಟೇಟು ಬಂಗಲೆಯಲ್ಲಿ ನಡೆಯುವ ಈ ಕಥೆಯು ಪ್ರೀತಿ, ದ್ವೇಷ, ಅಸೂಯೆ, ವಂಚನೆ ಮುಂತಾದ ಹಲವು ಭಾವಗಳ ಸಮ್ಮಿಲನವಾಗಿದೆ. ವಿನಾಕಾರಣ ಕೊಲೆಯಾಗುವ ಓರ್ವ ಅಮಾಯಕ ಹೆಣ್ಣಿನ ಮನಸ್ಸನ್ನು ಆರ್ಥೈಸಲಾಗದೆ ಆಕೆಯ ಭಾವನೆಗಳ ಮೌಲ್ಯವನ್ನು ತಿಪ್ಪೆಗೆಸೆಯುವ ಕ್ರೌರ್ಯ ತಮ್ಮ ಜನ್ಮಸಿದ್ದ ಹಕ್ಕು ಎಂಬಂತೆ ವರ್ತಿಸುವ ಪುರುಷ ಸಮಾಜವನ್ನು ಈ ಕಾದಂಬರಿ ನಿಕಷಕ್ಕೊಡ್ಡುತ್ತದೆ. ಕೊಡಗಿನ ಪ್ರಾಕೃತಿಕ ರಮಣೀಯತೆ ಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವುದು ಈ ಕಾದಂಬರಿಯ ಮತ್ತೊಂದು ವಿಶೇಷ. ಕರಾವಳಿ ತೀರದ ನಾದಾ ಅವರ ಈ ಕಾದಂಬರಿ ಕನ್ನಡ ಸಾರಸ್ವತ ಲೋಕಕ್ಕೆ ಒಂದು ಅನುಪಮ ಕೊಡುಗೆ. ಟಿ.ಎಸ್. ದಕ್ಷಿಣಾಮೂರ್ತಿ
“ಯೀಟ್ ದಿನ ಕತ್ಲು ಕೋಣ್ಯಾಗೆ ಬುಡ್ಡಿ ದೀಪದ್ ಮಬ್ಬು ಬೆಳ್ಕಲ್ಲಿ ಯಾರ್ ಯಾರಿಗೋ ಸೆರಗಾಸಿ ; ಮೈನ ಅವರಿಗೊಪ್ಸಿದ್ ಕೈಗಳು, ಇವತ್ತು ಕುವೆಂಪು ಸರ್ಕಲ್ನಾಗೆ, ಶಂಕರ್ ನಾಗ್ ಆಟೋ ಸ್ಟಾಂಡ್ ರೋಡ್ನಾಗೆ , ಸಂತ್ಯಾಗಿರೋ ನಾಕ್ ಮಂದಿ ತಾವ್ ನಿಂತು. ಕನ್ನಡ ಪುಸ್ತಕಗಳನ್ನ ಕೈಲಿಡ್ದು “ ಅಣ್ಣೋ ತೇಜಸ್ವಿಯವರ್ದು ಕರ್ವಾಲೋ, ಮಾದ್ಹೇವಣ್ಣಂದು ಎದೆಗೆ ಬಿದ್ದ ಅಕ್ಷರ, ಕುವೆಂಪುರವರದ್ದು ಮಂತ್ರ ಮಾಂಗಲ್ಯ, ಬೇಂದ್ರೆ ಅಜ್ಜಂದು ನಾಕುತಂತಿ. ಇವೆಲ್ಲಾ ಕನ್ನಡ ಪುಸ್ತಕಗಳು ಕಣಣ್ಣ, ಒಂದೇ ಒಂದ್ ಪುಸ್ತಕ ತಗೋ ಬಾ ಅಣ್ಣ, ಬಾರಕ್ಕ, ಸಾರ್, ಮೇಡಂ ಅಂತ ಕೂಗಿ -ಕೂಗಿ ಕರ್ದು, ನಾನಾ ನಮೂನಿ ಕನ್ನಡ ಸಾಹಿತ್ಯ ಪುಸ್ತಕಗಳನ್ನ ಮಾರಿ ಇಂದು ಬದ್ಕ ಕಟ್ಕೊಂಡಿವ್ನಿ. ಅವತ್ ನಾನು ಸೂಳೆ ದಿಟ, ಆದ್ರೆ ಇವತ್ ನಾನ್ ಸೂಳೆ ಅಲ್ಲ ಕನ್ರಪ್ಪೋ ಅಂತ ನಿರೂಪಿಸೀವ್ನಿ. ವೇಶ್ಯೆ ಅನ್ನೋ ಹಳೇ ನೀರು ಹರಿದೋಗಿ, ಹೊಸ ಹೆಣ್ಣಾಗಿ ಕನ್ನಡ ಪುಸ್ತಕಗಳ ಹೊಳೇಲಿ ತೇಲ್ತೀವ್ನಿ.” ಒಂದು ಪುಸ್ತಕ ಒಂದು ಬದಲಾವಣೆಗೆ ಕಾರಣವಾಗುತ್ತೆ, ಕಲ್ಲೆದೆಯಲ್ಲೂ ಭಾವನೆಗಳ ನೀರುಕ್ಕಿಸುವ ಕೆಲಸ ಕೆಲವು ಪುಸ್ತಕಗಳು ಮಾಡ್ತವೆ. ಈಗಿನ ಕಾಲದಲ್ಲಿ, ಕೈಲಿ ಪುಸ್ತಕಗಳನ್ನಿಡಿಯೋ ಬದಲು ಮೊಬೈಲ್ಗಳನ್ನ ಹಿಡಿಯೋ ಕೈಗಳೆ ಹೆಚ್ಚಿರುವಾಗ, ನೀನು ಪುಸ್ತಕಗಳನ್ನ ಮಾರಿ ಬದುಕ್ತಿನಿ ಅಂತಿದೀಯ
Showing 151 to 180 of 721 results