nil
#
ಎಂ ಎಸ್ ಶರತ್
ರಾಜಾರಾಂ ತಲ್ಲೂರ್
ಹೆಣ್ಣಿನ ಅಸಹಾಯಕತೆ ಮತ್ತು ಗಂಡಿನ ಸಂವೇದನಾಶೂನ್ಯತೆ ಅನುಪಮಾ ತಮ್ಮ ಕತೆಗಳಲ್ಲಿ ಮತ್ತೆ ಮತ್ತೆ ಶೋಧಿಸುವ ಎರಡು ಅಪರಿಹಾರ್ಯ ಸ್ಥಿತಿಗಳು. ಇಲ್ಲಿ ನಮಗೆ ಎದುರಾಗುವ ಎಲ್ಲಾ ಪಾತ್ರಗಳು ದಿನನಿತ್ಯದ ಕಷ್ಟ ಕಾರ್ಪಣ್ಯ ಮತ್ತು ಅನಿರೀಕ್ಷಿತವಾಗಿ ಎರಗಿಬರುವ ಆಘಾತಗಳ ಜೊತೆ ನಮ್ಮ ಕಾಲದ ರಾಜಕೀಯದಲ್ಲಿ ಹಾಸುಹೊಕ್ಕಾಗಿರುವ ಕ್ರೌರ್ಯದ ಜೊತೆ ಸಹ ಏಗಿಕೊಂಡು ತಾಳಿಕೊಂಡು ಬಾಳುವವರು; ಆದರೆ ಯಾರೂ ಒಂಟಿಯಲ್ಲ. ಸಂಕಲನದ ಎಲ್ಲ ಕಥೆಗಳೂ ಊರು ಮನೆಗಳ ಆವರಣವನ್ನೂ ಕಾಲದೇಶದ ಸಂದರ್ಭವನ್ನೂ ಕಟ್ಟಿಕೊಂಡೇ ನಮ್ಮೆದುರು ಅನಾವರಣಗೊಳ್ಳುವುದು. ಜಿ ರಾಜಶೇಖರ
ನಮ್ಮ ದೇಶದಲ್ಲಿ ರಾಮಾಯಣ, ಮಹಾಭಾರತ, ಭಾಗವತಗಳಿಗೆ ಸಂಬಂಧಪಡದ ನದಿಗಳಿಲ್ಲ, ಬೆಟ್ಟಗಳಿಲ್ಲ, ಯಾವ ಊರೂ ಇಲ್ಲ. ಹಾಗಾಗಿ ಇಡೀ ಭಾರತವೇ ಒಂದು ತೀರ್ಥಕ್ಷೇತ್ರ. ತೀರ್ಥಯಾತ್ರೆ ಅಭಯದ ಸಂಕೇತ. ಮನಸ್ಸಿಗೆ ಬಲ ಕೊಡುವ ಪ್ರಕ್ರಿಯೆ. ಭರವಸೆ ಕುಗ್ಗಿದಾಗ, ಚೈತನ್ಯ ತರುತ್ತದೆ. ಮನುಷ್ಯನ ತಿರುಗಾಟಕ್ಕೊಂದು ಆಧ್ಯಾತ್ಮಿಕ ಸ್ಪರ್ಶ ನೀಡುವುದೇ ತೀರ್ಥಯಾತ್ರೆ.. ಪ್ರವಾಸ ಲೌಕಿಕ ಅನುಭವವನ್ನು ಕೊಟ್ಟರೆ, ತೀರ್ಥಯಾತ್ರೆ ಅಲೌಕಿಕ ಅನುಭವವನ್ನು ತಂದುಕೊಡುತ್ತದೆ.
Showing 2041 to 2070 of 5029 results