#
nil
ಭಾರತೀಯರಾದ ನಮ್ಮ ಪಾಲಿಗೆ ದೇವಾಲಯಗಳು ಜೀವನಮಾರ್ಗಕ್ಕೆ ಅವಶ್ಯಕವಾದ ಶ್ರದ್ಧಾಕೇಂದ್ರಗಳಾಗಿವೆ. ದೇವಾಲಯಗಳು ಸಮಾಜ-ಸಂಸ್ಕೃತಿ ಇತಿಹಾಸ-ಧರ್ಮ ಕ್ಷೇತ್ರಗಳಿಗೆ ಅಪಾರವಾದ ಕೊಡುಗೆಯನ್ನು ನೀಡುತ್ತಾ ನಮ್ಮೊಟ್ಟಿಗೆ ಸಾಗಿ ಬಂದಿವೆ. ಇವುಗಳ ಆಳ-ವೈಶಾಲ್ಯಗಳ ಬಗೆಗೆ ಚಿಂತನ-ಮಂಥನಗಳೂ ನಡೆದುಕೊಂಡು ಬಂದಿವೆ. ಆಲಯಗಳ ಬಗೆಗಿನ ನಮ್ಮ ಶ್ರವಣಾತ್ಮಕ ಅರಿವಿಗಿಂತ ಮಿಗಿಲಾಗಿ ಅವುಗಳನ್ನು ಕಣ್ಣುಂಬ ಕಂಡು ಮಾನಸಿಕ ಸಂತೋಷ-ಸಮಾಧಾನ-ಶಾಂತಿಗಳನ್ನು ಪಡೆಯಬೇಕೆಂದು ನಾವು ಸದಾ ಹಂಬಲಿಸುತ್ತೇವೆ.
ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ
ಕರ್ನಾಟಕದ ಆಯ್ದ ೫೦ ಸ್ಥಳಗಳಲ್ಲಿನ ಅಪರಿಚ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
##
ಪ್ರೊಫೆಸರ್ ಅಕ್ಕಿಹೆಬ್ಬಾಳು ನರಸಿಂಹಮೂರ್ತಿ ರಾವ್ ಅವರು ಪರಿಪಕ್ವತೆಗೆ, ಸುಸಂಸ್ಕೃತ ಅಭಿರುಚಿಗೆ ಮತ್ತೊಂದು ಹೆಸರು. ಅವರದು ವಿಸ್ತಾರವಾದ, ಆಳವಾದ ಪುಸ್ತಕಜ್ಞಾನ; ಮೂರು ಖಂಡಗಳಲ್ಲಿ ಬದುಕನ್ನು ಕಂಡಿರುವ ವೈವಿಧ್ಯಮಯವಾದ ಲೋಕಾನುಭವ ಅವರದು. ಡಾಕ್ಟರ್ ಮೂರ್ತಿರಾಯರು ತಮ್ಮ ವಿದ್ವತ್ತು, ತಿಳಿಹಾಸ್ಯ, ಸರಳತೆ ಮತ್ತು ತೆರೆದ ಮನಸ್ಸಿನಿಂದ ಎಲ್ಲ ಪೀಳಿಗೆಗಳ ಪ್ರೀತಿ, ಗೌರವಗಳನ್ನು ಗೆದ್ದುಕೊಂಡ ಹಿರಿಯರಾಗಿದ್ದಾರೆ. ಕನ್ನಡದಲ್ಲಿ ಲಲಿತಪ್ರಬಂಧಕ್ಕೆ ವಿಶಿಷ್ಟ ರೂಪ ಕೊಟ್ಟು, ಅದರ ಸಾಧ್ಯತೆಗಳನ್ನು ತೋರಿಸಿಕೊಟ್ಟ ಅವರು ಲಲಿತ ಪ್ರಬಂಧದ ಸಾಮ್ರಾಟರಾಗಿದ್ದಾರೆ.
Showing 181 to 210 of 240 results