• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಕೃಷಿ ಯಾಕೆ ಖುಶಿ? | Krushi Yake Khushi

ಬಹಳ ಹಿಂದೆ ಪೂರ್ಣಚಂದ್ರ ತೇಜಸ್ವಿಯವರಿಗೊಂದು ಪ್ರಶ್ನೆ ಕೇಳಿದ್ದೆ. “ನೀವು ಮೊದಮೊದಲು ಕಥೆ, ಕಾದಂಬರಿ, ಕಾವ್ಯ, ನಾಟಕ ಇತ್ಯಾದಿಗಳನ್ನು ಬರೆದವರು.

₹140   ₹119

ಕೈ ಹಿಡಿದು ನೀ ನಡೆಸು ತಂದೆ | Kai Hididu Nee Nadesu Tande

ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಬರೆದಿರುವ ವಿಶಿಷ್ಟ ಪುಸ್ತಕ. ತಂದೆಯೊಬ್ಬ ಮಗನಿಗೆ ಕೊಡಬಹುದಾದ ಆಪ್ತ ಸಲಹೆಗಳು ಹೇಗಿರಬಲ್ಲವು ಎಂಬುದನ್ನು ಈ ಪುಸ್ತಕ ಕಟ್ಟಿಕೊಡುತ್ತದೆ.

₹250   ₹213

ಕ್ರಮಣ | Kramana

'ಕ್ರಮಣ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ?ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವಿಗೆ (ಕಾದಂಬರಿ), ಸಂದಾಯಿ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ. (ಕಾದಂಬರಿ), ಕಂದಕ ಈಗಾಗಲೇ ಪ್ರಕಟವಾಗಿದೆ.

₹375   ₹319

ಕ್ರಿಕೆಟಾಯಣ | Cricketayana

ಕ್ರಿಕೆಟ್ ಅಂದರೆ ಕೇವಲ ರನ್ನು ವಿಕೆಟ್ಟು ಬಾಲ್‌ಗಳ ಆಟವಲ್ಲ, ಅಲ್ಲಿ ದೊಡ್ಡದೊಂದು ಇತಿಹಾಸ, ದಾಖಲೆ, ಕೌತುಕ, ಸ್ವಾರಸ್ಯ, ರೋಚಕ ಕಥನ, ವಿವಾದ, ಆಕ್ರೋಶ, ಸೇಡು, ಜೋಶ್, ತಮಾಷೆ, ಪರಿಶ್ರಮ… ಎಲ್ಲವೂ ಇದೆ.

₹230   ₹196

ಕ್ಷಯ | Kshaya

‘ಕ್ಷಯ’ ಕಾದಂಬರಿಯು ಗಾತ್ರದಲ್ಲಿ ಚಿಕ್ಕದಿದ್ದರೂ (…ಪುಟಗಳು) ಅಚ್ಚರಿಪಡುವಷ್ಟು ಸಾಂದ್ರವಾದ ಹಾಗೂ ಅಷ್ಟೇ ವಿಸ್ಮತವಾದ ಜಗತ್ತೊಂದು ಅದರೊಳಗಿದೆ. ಹೊನ್ನಾವರ ಹತ್ತಿರದ, ಕರಾವಳಿಯ ಒಂದು ಚಿಕ್ಕ ಹಳ್ಳಿಯ ಪರಿಸರದಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಕಾದಂಬರಿಯ ಕಥಾಜಗತ್ತಿನಲ್ಲಿ ಸುಮಾರು 25ಕ್ಕೂ ಹೆಚ್ಚು ಪಾತ್ರಗಳು ಕಾಣಿಸಿಕೊಳ್ಳುತ್ತವೆ.

₹120   ₹102

ಖದೀಜಾ (ಐತಿಹಾಸಿಕ ಕಾದಂಬರಿ) | Khadeeja - A Historical Novel

ಹಿಂದಿನದು ಬೇರೆ. ಇಂದು ಮಾತ್ರ ಮನುಷ್ಯನ ಜೀವನದ ಹಲವು ವ್ಯವಹಾರಗಳಲ್ಲಿ ಸಾಹಿತ್ಯವು ಒಂದು ಎನ್ನುವುದರತ್ತ ಅದರ ಬೆಳವಣಿಗೆ ಇದೆ. ಆದರೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಹೊಣೆಗಾರಿಕೆಯಿಂದ ಹೊರತಾದ ಮರುಕ್ಷಣವೇ ಸಾಹಿತ್ಯವೂ ಸಗಟು ಅಷ್ಟೇ.

₹215   ₹183

ಗದಾಯುದ್ಧಂ | Gadayuddham

ಕವಿಚಕ್ರವರ್ತಿ ಬಿರುದಾಂಕಿತ ಮಹಾಮೇರು ಕವಿ ರನ್ನ ವಿರಚಿತ ಗದಾಯುದ್ದಂ (ಸಾಹಸ ಭೀಮ ವಿಜಯಂ) ಕೃತಿ , ಗಮಕ ವಿದ್ವಾನ್ ಡಾ. ಎಂ ಎ ಜಯರಾಮ್ ರಾವ್ ಅವರ ವ್ಯಾಖ್ಯಾನದೊಂದಿಗೆ. 'ಗದಾಯುದ್ಧ'ವನ್ನು ರನ್ನನು ತನ್ನ ಆಶ್ರಯದಾತ ಅರಸನಾದ ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿ, ಭೀಮನನ್ನೇ ಕಥಾನಾಯಕನನ್ನಾಗಿ ಕಲ್ಪಿಸಿ(ಕೊನೆಯಲ್ಲಿ ಪಟ್ಟಾಭಿಷೇಕವಾಗುವುದು ಭೀಮನಿಗೇ) ಬರೆದಿದ್ದಾನೆ. ಹತ್ತು ಆಶ್ವಾಸಗಳುಳ್ಳ ಈ ಚಂಪೂ ಕೃತಿಯು ಕೇವಲ ಗದಾಯುದ್ಧದ ಪ್ರಸಂಗವನ್ನಷ್ಟೇ ಕಥಾವಸ್ತುವನ್ನಾಗಿ ಹೊಂದಿದ್ದರೂ, ಸಮಗ್ರ ಮಹಾಭಾರತದ ಸಿಂಹಾವಲೋಕನವನ್ನಿಲ್ಲಿ ಕಾಣಬಹುದು.

₹350   ₹298

ಗಾಯಗೊಂಡ ಸಾಲುಗಳು | Gayagonda Salugalu

ಸದಾಶಿವ ಸೊರಟೂರು ಅವರ ಬರಹಕ್ಕೆ ಇರುವ ಶಕ್ತಿಗೆ ನಾನು ಬೆರಗಾಗಿದ್ದೇನೆ. ಅವರ ಬರಹಕ್ಕೆ ಮಾಂತ್ರಿಕ ಶಕ್ತಿ ಇದೆ. ಇವರು ಕಥೆ ಬರೆಯಲಿ, ಕವಿತೆ ಬರೆಯಲಿ, ಲೇಖನ ಬರೆಯಲಿ ಎಲ್ಲದರಲ್ಲೂ ಸೊರಟೂರುತನವನ್ನು ಉಳಿಸುತ್ತಾರೆ. ಇವರ ಅಪಾರ ಓದು, ತನ ಓದುಗನನು ಗನನ್ನು ಓದಲು ಇವರು ಪಟ್ಟಿರುವ ಶ್ರಮ ಇವರ ಬರಹಗಳ ಯಶಸ್ಸಿಗೆ ಕಾರಣ. ಈಗ 'ಗಾಯಗೊಂಡ ಸಾಲುಗಳು ಕವನ ಸಂಕಲನದ ಜೊತೆಗೆ ಹಾಜರಾಗಿದ್ದಾರೆ. ಇವರ ಕವಿತೆಗಳಲ್ಲಿ ಕಳೆದು ಹೋಗೋಣ ಬನ್ನಿ ಜಿ. ಎನ್. ಮೋಹನ್

₹110   ₹83

ಗೌಡ ಪರಂಪರೆ | Gouda Parampare

ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಸಮುದಾಯ ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲ್ಲೂಕಿನ ವಿಟ್ಲ, ಪಾಣೆ ಮಂಗಳೂರು ಹಾಗೂ ಕೊಡಗಿನಲ್ಲಿ ಬಹುಸಂಖ್ಯಾತರಾಗಿ, ಸಾಕಷ್ಟು ಭೂ ಹಿಡುವಳಿ ಹೊಂದಿ ಜೀವಿಸುತ್ತಬಂದಿದ್ದಾರೆ.ಇವರು ಮೂಲತಃ ಕೃಷಿಕರು. ಆದರೆ ಈ ಸಮುದಾಯದ ಬೇರುಗಳನ್ನು ಹುಡುಕುತ್ತಾ ಹೋದರೆ ಇವರ ಮೂಲವನ್ನು ಸುಮಾರು ಸಾವಿರದ ಐದುನೂರು ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗಬಹುದಾಗಿದೆ ಎಂಬುದು ವಿದ್ವಾಂಸರ ಅಭಿಪ್ರಾಯವಾಗಿದೆ. ಇವರ ಮೂಲದ ಬಗ್ಗೆ ಅನೇಕ ಚರ್ಚೆ, ವಾದಗಳಿದ್ದರೂ ಪ್ರಸ್ತುತ ಕೃತಿಯಲ್ಲಿ ಈ ಸಮುದಾಯದ ಮೂಲವನ್ನು ಗಂಗವಂಶದಲ್ಲಿಗುರುತಿಸಲಾಗಿದೆ

₹325   ₹276

ಚಂದನವನದೊಳ್ | Chandanavanadol

ಒಂಬತ್ತು ದಶಕಗಳ ಕನ್ನಡ ಚಿತ್ರರಂಗದಲ್ಲಿ ಸುಮಾರು ಐದು ಸಾವಿರ ಚಿತ್ರಗಳು ಬಿಡುಗಡೆಯಾಗಿವೆ. ಬಹುಶಃ ಬೇರೆ ಯಾವುದೇ ಭಾಷೆಯಲ್ಲೂ ಬಿಡುಗಡೆಯಾಗದಷ್ಟು ಅತೀ ಹೆಚ್ಚು ಪೌರಾಣಿಕ ಚಿತ್ರಗಳು, ಐತಿಹಾಸಿಕ ಸಿನಿಮಾಗಳು, ಸಾಹಿತ್ಯಾಧಾರಿತ, ಕಲಾತ್ಮಕ, ಮಕ್ಕಳ, ಉಪಭಾಷೆಯ ಚಿತ್ರಗಳು ಕನ್ನಡದಲ್ಲಿ ಬಿಡುಗಡೆಯಾಗಿವೆ. ಕನ್ನಡ ಸಾಹಿತ್ಯ ಲೋಕದ ಹಲವು ದಿಗ್ಗಜರು ಚಿತ್ರರಂಗದಲ್ಲಿ ಪ್ರತ್ಯಕ್ಷವಾಗಿ ತೊಡಗಿಸಿಕೊಂಡಿದ್ದಾರೆ. ಹಲವರ ಕಥೆ, ಕಾದಂಬರಿಗಳು ಚಿತ್ರಗಳಾಗಿವೆ. ಕಾವ್ಯಗಳು ಹಾಡುಗಳಾಗಿವೆ. ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪೈಕಿ ಮೂವರು ಚಿತ್ರ ನಿರ್ದೇಶನ ಮಾಡಿದ್ದಾರೆ. ಸಂಭಾಷಣೆಯೇ ಇಲ್ಲದ ಚಿತ್ರಗಳು, ಒಂದೇ ಟೇಕ್‌ನಲ್ಲಿ ತಯಾರಾದ ಚಿತ್ರಗಳು, ಅತ್ಯಂತ ಕಡಿಮೆ ಅವಧಿಯಲ್ಲಿ ಚಿತ್ರೀಕರಣವಾದ ಚಿತ್ರಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ ಚಿತ್ರಗಳು, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡ ಚಿತ್ರಗಳು ಇಲ್ಲಿವೆ. ಇನ್ನು ಕನ್ನಡದಲ್ಲಾದ ಪ್ರಯೋಗಗಳಿಗೆ ಲೆಕ್ಕವಿಲ್ಲ. ಹಲವು ದಾಖಲೆಗಳು, ಸಾಹಸಗಳು, ವೈಶಿಷ್ಟ್ಯಗಳು, ಸ್ವಾರಸ್ಯಗಳು, ಹೆಗ್ಗಳಿಕೆಗಳು ಕನ್ನಡ ಚಿತ್ರರಂಗದಲ್ಲಿ ಆಗಿದೆ. ಇವೆಲ್ಲವನ್ನೂ ಮೆಲುಕು ಹಾಕುವ ಪ್ರಯತ್ನವೇ 'ಚಂದನವನದೊಳ್'. ಮುಂದಿನ ತಲೆಮಾರಿನ ಚಿತ್ರಕರ್ಮಿಗಳಿಗೆ ಮತ್ತು ಸಿನಿಮಾಸಕ್ತರಿಗೆ ಕೈಪಿಡಿಯಾಗಬಲ್ಲ ಪುಸ್ತಕ ಇದು.

₹395   ₹336

ಚಂದ್ರಾ ಲೇಔಟ್ | Chandra Layout

ಗ್ರಾಮೀಣ ಪ್ರದೇಶಗಳೂ ಸೇರಿದಂತೆ ಹಲವೆಡೆ ಇರುವ ಶೋಷಣೆ, ಮೂಢನಂಬಿಕೆ ಮತ್ತು ಜಾತೀಯತೆ, ಕೌಟುಂಬಿಕ ಸಂಘರ್ಷಗಳು, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಭ್ರಷ್ಟ ವ್ಯವಸ್ಥೆಯ ಚಿತ್ರಣಗಳ ಕಥೆಗಳು ಪ್ರಸ್ತುತ ಸಂದರ್ಭಗಳಿಗೆ ಹಿಡಿದ ಕೈಗನ್ನಡಿಯಾಗಿವೆ.

₹135   ₹115

ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಿಕೇಶಿ | Chalukya Chakravarthy Immadi Pulikeshi

ಉತ್ತರಾಪಥೇಶ್ವರ ಎಂಬ ಬಿರುದಾಂಕಿತ, ಕಾನ್ಯಕುಬ್ಬದ ಸಾಮ್ರಾಟ, ಅಪಾರ ಸೈನ್ಯವನ್ನು ಹೊಂದಿದ ಹರ್ಷವರ್ಧನನಂತಹ ಮಹಾಪ್ರತಾಪಿಯನ್ನು ರಣತಂತ್ರದ ಮೂಲಕವೇ ಬಾದಾಮಿ ಚಾಲುಕ್ಯ ಪುಲಿಕೇಶಿ ಸೋಲಿಸಿದ್ದಲ್ಲದೇ, ಸೌಜನ್ಯ ಮತ್ತು ಸ್ನೇಹ ವಿಶ್ವಾಸಗಳಿಂದ ಅವನ ಹೃದಯವನ್ನು ಗೆದ್ದು ಅವನಿಂದಲೇ ಪರಮೇಶ್ವರ ಪುಲಿಕೇಶಿ ಎಂದು ಹೊಗಳಿಸಿಕೊಂಡ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕುರಿತ ಐತಿಹಾಸಿಕ ಕಾದಂಬರಿ.

₹450   ₹382

ಚಿಕ್ಕಪುಟ್ಟಮ್ಮನವರ ಗೃಹನ್ಯಾಯ | Chikkaputtammanavara Gruhanyaya

ಇಲ್ಲಿರುವ ಕತೆಗಳು ಕೂಡ ಸ್ತ್ರೀ ಸಂವೇದನೆಯ ಸುತ್ತ ಸುತ್ತುವ ಕತೆಗಳಾಗಿದ್ದು, ಸಾಮಾಜಿಕ ಹಾಗು ಕೌಟುಂಬಿಕ ನೆಲೆಯಲ್ಲಿ ಹೆಣ್ಣಿನ ತುಮುಲಗಳು, ಹುಡುಕಾಟ, ಸ್ಥಿತಪ್ರಜ್ಞೆ, ಜವಾಬ್ದಾರಿಗಳು, ಎದುರಿಸಬೇಕಾದ ಅತ್ಯಂತ ಸೂಕ್ಷ್ಮ ಸಂಗತಿಗಳನ್ನು ಪದರು ಪದರುಗಳಾಗಿ ಬಿಡಿಸಿ ಹೇಳಲಾಗಿದೆ.

₹140   ₹119

ಚಿತ್ರ-ವಿಚಿತ್ರ | Chitra Vichitra

ಸಿನಿಮಾ ಎನ್ನುವುದು ಕಲೆ, ಉದ್ಯಮ, ಮನರಂಜನೆ.. ಇವೆಲ್ಲಕ್ಕಿಂತ ಮೀರಿದ ಒಂದು ತುಡಿತ ಎನ್ನಬಹುದು. ಕಥೆ ಹೇಳುವ, ಕೇಳುವ ತೋರಿಸುವ ಆ ಹುರುಪು ಉತ್ಸಾಹಕ್ಕೆ ಬೆಲೆ ಕಟ್ಟಲು ಸಾಧ್ಯವೇ..? ಹಾಗೆ ನೋಡಿದರೆ ನನಗೆ ನನ್ನ ಸಂಸ್ಕೃತಿ ಕಲಿಸಿದರಲ್ಲಿ ಸಿನಿಮಾದ ಪಾಲು ಇದೆ. ಒಂದು ಬೇರೆಯದೇ ಆದ ಪ್ರಪಂಚವನ್ನು ಸೃಷ್ಟಿಸುವ ತಾಕತ್ತು ಸಶಕ್ತವಾಗಿರುವ ಕ್ಷೇತ್ರವಿದು. ನನ್ನೆಲ್ಲ ವಿದ್ಯಾಭ್ಯಾಸ ಮುಗಿದ ಮೇಲೆ ನನ್ನ ಮುಂದಿದ್ದ ಪ್ರಶ್ನೆ? ಬದುಕುವುದಕ್ಕಾಗಿ ಕೆಲಸ ಮಾಡುವುದಾ..? ಅಥವಾ ಕನಸನ್ನು ಈಡೇರಿಸಿಕೊಳ್ಳುವುದಕ್ಕಾಗಿ ಬದುಕುವುದಾ..?

₹220   ₹187

ಜಗತ್ತಿನ ಭೀಕರ ಯುದ್ಧಗಳು | Jagattina Bheekara Yuddhagalu

ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು ಪಿರಮಿಡ್ ಳಿಂದ ಹಿಡಿದು ಯಾವುದೇ ನಾಗರಿಕ ತೊಟ್ಟಿಲುಗಳನ್ನು ಕಟ್ಟಿ ಬೆಳೆಸಿದವರು ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರು, ಜೊತೆಗೆ ಕಾಡಿನಿಂದ ಹಿಡಿದು ತಂದು ಪಳಗಿಸಿದ ಮೂಕಪ್ರಾಣಿಗಳು, ಜಗತ್ತಿನಲ್ಲಿ ಮುಂದೆಯೂ ಈ ತಾರತಮ್ಯ ಹೀಗೆ ಮು೦ದುವರಿಯುತ್ತದೆ. ಅಲ್ಲೊಬ್ಬರು ಇಲ್ಲೊಬ್ಬರು ಮಹನೀಯರು ಹುಟ್ಟಿ ಬಂದು ಈ ಅಸಮಾನತೆಯ ಸಮಾಜದ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡರೆ ವಿನಹಃ ಈ ಜಗತ್ತು ಮಾತ್ರ ಬದಲಾಗಲೇ ಇಲ್ಲ.

₹495   ₹421

ಜನ ನಾಯಕ | Jananayaka

ಜನನಾಯಕ ನಾಟಕ ಕೃತಿಯು ಒಂದು ಪ್ರಸ್ತುತ ನಮ್ಮ ದಿನಮಾನದ ರಾಜಕೀಯ ನಾಯಕರ ಡೊಂಬರಾಟದ ವ್ಯಂಗ್ಯ ಚಿತ್ರಣ

₹125   ₹106

ಜನಮಿತ್ರ ಅರಸು | Janamitra Arasu

ಜನಮಿತ್ರ ಅರಸು ನಾಟಕವು ದೇವರಾಜ ಅರಸು ಅವರ ಸಮಾಜಮುಖಿ ಕೊಡುಗೆಗಳನ್ನು ಹೇಳುತ್ತದೆ. ಅವರು ಚಿಂತಿಸಿದ ಜನಪರ ಸಾಧನೆಗಳು ದೇಶದ ಯಾವುದೇ ರಾಜ್ಯದಲ್ಲೂ ಜಾರಿಗೆ ಬಂದಿಲ್ಲ.

₹80   ₹68

ಜಾಲಿ ರೈಡ್ | JAALI RAID

"ನಮ್ಮ ಕಾಲ ಹಿಂಗ್ ಇರ್ಲಿಲ್ಲಪ್ಪ.." ಅನ್ನೋ ಆಪಾದನೆ ಇಂದಿನ ಜನರೇಶನ್ನಿನ ಮೇಲಿದೆ. ಅದನ್ನು ಒಪ್ಪುವಂತೆಯೇ ಇಂದಿನ ಜನರೇಶನ್ನಿನ ವರ್ತನೆ ಕೂಡ ಇದೆ. ವ್ಯವಹಾರಗಳಷ್ಟೇ ಮುಖ್ಯ, ದುಡ್ಡಿದ್ರೆ ದುನಿಯಾ ಅನ್ನೋ ಮನಸ್ಥಿತಿಯವರೇ ಹೆಚ್ಚು. ವಿಜ್ಞಾನ ತಂತ್ರಜ್ಞಾನಗಳು ಪ್ರಾಯೋಗಿಕವಾಗಿ ಎಷ್ಟೊಂದು ವಿಷಯಗಳನ್ನು ಜನರಿಗೆ ಹತ್ತಿರದಿಂದ ಅರ್ಥ ಮಾಡಿಸಿದರೂ.. ಬದುಕಿನ ಶಿಸ್ತು, ಪ್ರೀತಿ, ಸ್ನೇಹ, ಸಂಬಂಧಗಳನ್ನು ಮನುಷ್ಯನಿಗೆ ಯಾರೂ ಸಂಪಾದಿಸಿಕೊಡುವುದಿಲ್ಲ. ಉನ್ನತ ಸ್ಥಾನವನ್ನೇರಲು ಯಾರೂ ಸಹಕರಿಸುವುದಿಲ್ಲ. ನಮಗೆ ನಾವೇ ಧೈರ್ಯ ತುಂಬಿಕೊಳ್ಳಬೇಕು, ನಮಗೆ ನಾವೇ ಆತ್ಮಸ್ಥೆರ್ಯ ಹುಡುಕಿಕೊಳ್ಳಬೇಕು, ನಮಗೆ ನಾವೇ ಸಮಾಧಾನ ಹೇಳಿಕೊಳ್ಳಬೇಕು. ಸರಿ ಯಾವುದು? ತಪ್ಪು ಯಾವುದು? ಸಮಾಜದಲ್ಲಿ ನಾನು ಹೇಗಿರಬೇಕು? ನನಗೊಂದು ಅಸ್ತಿತ್ವ ಇದೆಯಾ? ನನ್ನ ಬದುಕಿಗೆ ಅರ್ಥ ಇದೆಯಾ? ಇವೆಲ್ಲಾ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ? ನಾವೇ! ಹೇಗೆ? ಗೊತ್ತಿಲ್ಲ! ಅರ್ಥಪೂರ್ಣ ಬದುಕಿಗೆ ವ್ಯಕ್ತಿತ್ವ ವಿಕಸನದ ಪಾಠಗಳು ಅತ್ಯಗತ್ಯ. ಅವುಗಳನ್ನು ಎಲ್ಲಿಂದ ಬೇಕಾದರೂ ಕಲಿಯಬಹುದು. 'ಜಾಲಿರೈಡ್' ಎಂಬಂತಹ ಪುಸ್ತಕಗಳಿಂದಲೂ ಹಿರಿಯರ ಅನುಭವಗಳನ್ನು ಓದಿ ಬದುಕಿನಲ್ಲಿ ಅಳವಡಿಸಿಕೊಳ್ಳಬಹುದು. - ಅನಂತ ಕುಣಿಗಲ್

₹170   ₹145

ಟೈಟಾನಿಕ್ | Titanic

ಕೆಲವರು ತಪ್ಪಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಮಾಡದೇ ತಮ್ಮ ತಮ್ಮ ಕ್ಯಾಬಿನ್‌ಗಳಲ್ಲಿ ಮತ್ತು ಅಲ್ಲಲ್ಲಿ ನಿಂತುಕೊಂಡು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇನ್ನೂ ಕೆಲವು ಪ್ರಯಾಣಿಕರು ಟ್ರಂಕುಗಳು ಮತ್ತು ಉಳಿದ ವಸ್ತುಗಳನ್ನು ಹಿಡಿದುಕೊಂಡು ಡೆಕ್ ಗಳಲ್ಲಿ ನಿಂತುಕೊಂಡು ಯಾರಾದರು ಬಂದು ತಮ್ಮನ್ನ ಕರೆದುಕೊಂಡು ಹೋಗುವರೆಂದು ಕಾಯುತ್ತಿದ್ದರು. ಮನಶಾಸ್ತ್ರಜ್ಞ ವೈನ್ ಕ್ರೇಗ್ ವೇಡ್ ಇದನ್ನು ಸಾಮಾಜಿಕ ಮೇಲಾಧಿಕಾರಿಗಳ ಪೀಳಿಗೆಗಳಿಂದ ಉತ್ಪತ್ತಿಯಾಗುವ Stoic Passitivity ಎಂದು ಹೇಳುತ್ತಾರೆ. ಇವರಲ್ಲಿ ಹೆಚ್ಚಿನವರು ಬದುಕುಳಿಯಲು ಯಾವುದೇ ಪ್ರಯತ್ನವನ್ನು ಮಾಡಲಿಲ್ಲ. ನೂರಾರು ಜನರು ಸಭಾಂಗಣಗಳಲ್ಲಿ ಬೋಧಕರೊಂದಿಗೆ ನಿಂತುಕೊಂಡು ಪ್ರಾರ್ಥಿಸುತ್ತಿದ್ದರು, ದೇವರು ಮತ್ತು ಮೇರಿ ಅವರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಿದ್ದರು. ಕೆಲವರು ಅಲ್ಲಿಯೇ ಮಲಗಿಕೊಂಡು ಚೀರಾಡುತ್ತಿದ್ದರು, ಅವರು ತಮ್ಮ ಸ್ವಂತ ಇಚ್ಛಾಶಕ್ತಿಯನ್ನು ಕಳೆದುಕೊಂಡಿದ್ದರು ಮತ್ತು ದೇವರೇ ಎಲ್ಲಾ ಕೆಲಸಗಳನ್ನು ಮಾಡಬೇಕೆಂದು ನಿರೀಕ್ಷಿಸುತ್ತಿದ್ದರು. ಟೈಟಾನಿಕ್ ದುರಂತ ಸಾಗರ ಇತಿಹಾಸದಲ್ಲಿ ಮೈ ನವಿರೇಳಿಸುವ ಮತ್ತು ಕೇಳಲಾರದ ವಿದ್ರಾವಕ ಸತ್ಯಕತೆಯಾಗಿದೆ. ಸಹಸ್ರಮಾನಗಳ ಇತಿಹಾಸದಲ್ಲಿ ಇಂತಹ ನರಕಸದೃಶ ದುರಂತ ಹಿಂದೆ ಎಂದೂ ನಡೆದಿರಲಿಲ್ಲ. ಈ ದುರಂತದ ನಂತರ ಸಾಗರ ಕಾನೂನುಗಳನ್ನು ಬದಲಿಸಬೇಕಾಯಿತು ಮತ್ತು ಅನೇಕ ಕಟ್ಟೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಯಿತು. ಇದರಿಂದ ಇಡೀ ಜಗತ್ತು ಸಾಗರಲೋಕದಲ್ಲಿ ಒಂದು ಹೊಸ ಪಾಠವನ್ನೇ ಕಲಿತುಕೊಂಡಿತು. ನಂತರದ ಕಾಲದಲ್ಲಿ ಯಾವುದೇ ದೊಡ್ಡ ದುರಂತಗಳು ನಡೆಯಲಿಲ್ಲ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಗೊಂದಲಗಳಿಂದ ಕೂಡಿದ್ದು ಸುಮಾರು 1,490 ರಿಂದ 1635ರ ಎನ್ನಲಾಗಿದೆ. ಇನ್ನು ಸಮುದ್ರದಿಂದ ಸಂಗ್ರಹಿಸಿದ ಮೃತದೇಹಗಳ ಸಂಖ್ಯೆ ಕೇವಲ 333. ಒಟ್ಟಿನಲ್ಲಿ ಈ ಟೈಟಾನಿಕ್ ಹಡಗಿನ ಕತೆಯ ವ್ಯಥೆಯನ್ನು ಓದಿಯೇ ತಿಳಿಯಬೇಕು. ಡಾ. ಎಂ. ವೆಂಕಟಸ್ವಾಮಿ

₹150   ₹128

ಟ್ರಾಯ್ | Troy

ಗ್ರೀಕ್ ಇತಿಹಾಸದಲ್ಲೇ ಒಮ್ಮೆ ಕಾಲ್ಪನಿಕ… ಒಮ್ಮೆ ಪೌರಾಣಿಕ… ಮತ್ತೊಮ್ಮೆ ಜನಪದ ಕಥೆ ಎನ್ನುವ ವಿವಾದದೊಂದಿಗೇ ಅತ್ಯಂತ ಹೆಸರುವಾಸಿಯಾದ… ಅತ್ಯಂತ ಭೀಕರ ಯುದ್ಧವೊಂದಕ್ಕೆ ನಾಂದಿಯಾದ ಒಂದು ಅಮರ ಪ್ರೇಮಕಥೆ ಈ ” ಟ್ರಾಯ್” .

₹200   ₹170

ತ್ಯಾಗಕ್ಕಿಲ್ಲ ನೂಕುನುಗ್ಗಲು | Tyagakkilla Nookunuggalu

ತ್ಯಾಗಕ್ಕಿಲ್ಲ ನೂಕುನುಗ್ಗಲು ಡಾ. ಗವಿಸ್ವಾಮಿ ಅತ್ಯಂತ ಕಡಿಮೆ ಶಬ್ದಗಳಲ್ಲಿ ಗಟ್ಟಿ ವಿಷಯವುಳ್ಳ ಕಥೆಗಳನ್ನು ಕಟ್ಟಿ ಕೊಟ್ಟಿದ್ದಾರೆ ಹೊತ್ತಗೆಯಲ್ಲಿನ ಅನೇಕ ಪುಟ್ಟ ಕಥೆಗಳನ್ನು ಕಾದಂಬರಿಗಳಾಗಿಸಬಹುದು ಎಂದರೆ ಈ ಕಥೆಗಳ ಶಕ್ತಿಯನ್ನು ಊಹಿಸಬಹುದು. ಮಾನವೀಯತೆ ಈ ಕಥೆಗಳಲ್ಲಿನ ಮುಖ್ಯ ಹೂರಣ.

₹150   ₹128

ದಡ ಸೇರದ ದೋಣಿಗಳು | Dada Serida Donigalu

ಕಥೆ ಅಂದರೆ ಕಟ್ಟು ಕಥೆಯಲ್ಲ, ಒಂದು ಅಳತೆಗೆ ಕಟ್ಟಿದ ಕಥೆ, ಸಹಜವಾಗಿ ಹೆಣೆದಾಗ ಅದು ಕಣ್ಣಿಗೆ ಕಟ್ಟುವಂಥಾ ಕಥೆಯಾಗುತ್ತದೆ. ಕಥೆಗಳ ಸ್ವರೂಪವೇ ಹಾಗಿರಬೇಕು. ಓದುತ್ತಾ ಇದ್ದ ಹಾಗೆ ಕಥೆಯ ಪಾತ್ರಗಳು ಕಣ್ಣು ಮುಂದೆ ಬಂದು ನಿಲ್ಲಬೇಕು. ಪಾತ್ರಗಳು ಆಡುವ ಮಾತುಗಳು ಯಾವುದೂ ನಾಟಕೀಯವಾಗಿರಬಾರದು. ಇಂಥಾ ಸಂದರ್ಭಗಳಲ್ಲಿ ನಾವು ಮಾತಾಡಿದರೂ ಹಾಗೇ ಮಾತಾಡುತ್ತೀವಿ ಎನ್ನುವಂತಿರಬೇಕು. ಇನ್ನು ಕಥೆಯಲ್ಲಿ ಬರುವ ಘಟನೆಗಳೂ ನೈಜತೆಗೆ ದೂರವಾಗಿರಬಾರದು. ಹೌದು ಇದು ಎಲ್ಲರ ಬದುಕಲ್ಲೂ ನಡೆಯುವಂಥದು, ಎಲ್ಲ ಪಾತ್ರಗಳೂ ಹೀಗೇ ನಡೆದುಕೊಳ್ಳುವಂಥವು ಎನಿಸಬೇಕು. ಆಗ ಮಾತ್ರ ಕಥೆ ಬರೆದವನಿಗೂ ಕಥೆ ಓದುವವನಿಗೂ ಒಂದು ಸಹೃದಯ ಸಂಪರ್ಕ ಬರುತ್ತದೆ. ಅಲ್ಲಿಗೆ ಕಥೆಯೂ ಗೆಲ್ಲುತ್ತದೆ, ಕಥೆಗಾರನೂ ಗೆಲ್ಲುತ್ತಾನೆ. ಪ್ರಸ್ತುತ ನಿಮ್ಮ ಕೈಯಲ್ಲಿರುವ ದಡ ಸೇರದ ದೋಣಿಗಳು ಕಥೆಯಲ್ಲಿ ಇರುವ ಎಲ್ಲಾ ಇಪ್ಪತ್ತೈದು ಕಥೆಗಳ ಸ್ವರೂಪವೂ ಹೀಗೇ ಇದೆ. ಈ ಎಲ್ಲಾ ಕಥೆಗಳನ್ನು ಓದುವಾಗ ಲೇಖಕರ ಸುಮಾರು 50 ವರ್ಷಕ್ಕೂ ಹೆಚ್ಚಿನ ಸಾಹಿತ್ಯ ವ್ಯವಸಾಯದ ಅನುಭವದ ಸಾರ ಓದುಗರಿಗೆ ಅರಿವಾಗುತ್ತದೆ. ಪಾತ್ರಗಳು ಯಾವುದೂ ಸೃಷ್ಟಿಯಾಗಿಲ್ಲ, ಬದಲಿಗೆ ಅವುಗಳೇ ಬಂದು ಬೆಸೆದುಕೊಂಡಿವೆ. ಸೃಷ್ಟಿಕರ್ತ ಬ್ರಹ್ಮ ಒಬ್ಬನೇ ಆದರೂ ಅವನು ಸೃಷ್ಟಿಸಿರುವ ಪಾತ್ರಗಳೂ, ಅವುಗಳ ಸ್ವಭಾವಗಳೂ, ಮಾತುಗಳೂ, ನಡವಳಿಕೆಗಳೂ ಹೇಗೆ ಬೇರೆಬೇರೆ ಯಾಗಿರುವುವೋ ಹಾಗೆ ಕಥೆಗಾರ ಒಬ್ಬನೇ ಆದರೂ ಅವನು ತನ್ನ ಕಥೆಯಲ್ಲಿ ಸೃಷ್ಟಿಸಿರುವ ಪಾತ್ರಗಳು ಅವನ ಮೂಗಿನ ನೇರಕ್ಕೆ ನಡೆದುಕೊಂಡರೂ, ಮಾತಾಡಿದರೂ ಎಲ್ಲವೂ ಸಹಜವಾಗಿರುತ್ತವೆ. ಯಾವುದೂ ನಾಟಕೀಯ ಎನಿಸುವುದಿಲ್ಲ, ಬಲವಂತ ಎನಿಸುವುದಿಲ್ಲ. ಒಟ್ಟಿನಲ್ಲಿ ಕಥೆ ಅಂದರೆ ಅದು ಬರೀ ಕಥೆಯಲ್ಲ, ಅದು ನಮ್ಮ ಬದುಕಿನ ಅನೇಕ ಘಟನೆಗಳಿಗೆ ಹಿಡಿದ ಕನ್ನಡಿ ಎನ್ನುವಂತೆ ಈ ಸಂಗ್ರಹದ ಕಥೆಗಳೆಲ್ಲಾ ನಿಮ್ಮನ್ನು ಸೆರೆಹಿಡಿದು ಓದಿಸಿ ಕೊಳ್ಳುವುದರಲ್ಲಿ ಅನುಮಾನವಿಲ್ಲ. ನಿಮಗೆ ಈ ಎಲ್ಲಾ ಕಥೆಗಳ ಓದಿನ ಸುಖ ದೊರೆಯಲಿ. -ಬೇಲೂರು ರಾಮಮೂರ್ತಿ

₹275   ₹234

ದೂರ ದೇಶದ ದೇವರು | Doora Deshada Devaru

'ದೂರ ದೇಶದ ದೇವರು' ಕಥಾಸಂಕಲನದ ಪಾತ್ರಗಳಲ್ಲಿ ನೈಜತೆಯಿದ್ದು ಅವು ಬಹು ಆಯಾಮವನ್ನು ಹೊಂದಿವೆ. ಕತೆ ಸಾಗುತ್ತಿದ್ದಂತೆ ಅಲ್ಲೊಂದು ಬೆಳವಣಿಗೆ, ಒಂದು ಬದಲಾವಣೆ ಕಂಡುಬರುತ್ತದೆ. ಅಲ್ಲಿನ ಸಂಬಂಧ-ಸಂಘರ್ಷಗಳು ನೈಜವಾಗಿ ನಡೆಯುವಂತೆ ಕತೆಯನ್ನು ಮುಂದಕ್ಕೆ ಕೊಂಡೊಯ್ಯಲಾಗಿದೆ. ಪ್ರತಿ ಕತೆಯಲ್ಲೂ ಇರುವ ಸಂಘರ್ಷದಲ್ಲಿ ಓದುಗನೂ ಪಾಲುಗೊಳ್ಳುವಂತಾಗುವುದು ಇಲ್ಲಿನ ವಿಶೇಷ. ಕುಣಿಗಲರು ಕತೆ ಹೇಳುವ ರೀತಿಯೂ ಸ್ವಾರಸ್ಯಕರವಾಗಿದ್ದು, ಕತೆಗಳು ಆಸಕ್ತಿಯಿಂದ ಓದಿಸಿಕೊಂಡು ಹೋಗುತ್ತವೆ. ಕತೆಯ ಭಾಷೆ, ನಿರೂಪಣಾ ಶೈಲಿ, ಪದಗಳ ಆಯ್ಕೆಯಲ್ಲಿರುವ ಶಿಸ್ತು ಮತ್ತು ವಿಷಯವನ್ನು ಕೆಲವೇ ಶಬ್ದಗಳಲ್ಲಿ ಹೇಳುವ ಅಚ್ಚುಕಟ್ಟುತನ ಈ ಎಲ್ಲ ಅಂಶಗಳು ಅನಾಯಾಸವಾಗಿ, ಸಹಜವಾಗಿ ಬಂದು, ಅಲ್ಲೊಂದು ಸಮತೋಲನವಿದೆ. ಓದಿ ಮುಗಿದ ನಂತರವೂ ಓದುಗರೊಂದಿಗೆ ಉಳಿಯುವ ಗುಣವಿದೆ. ಮಾನವ ಸ್ವಭಾವದ ಬಗ್ಗೆ ಸೂಕ್ಷ್ಮವಾದ ಒಳನೋಟವನ್ನು ನೀಡುವ ಈ ಸಂಕಲನದ ಕತೆಗಳು ವೈಯುಕ್ತಿಕವಾಗಿದ್ದಂತೆ ಅಲ್ಲೊಂದು ಸಾರ್ವತ್ರಿಕತೆಯೂ ಇದೆ. ಮುಖ್ಯವಾಗಿ, ಕತೆಯ ಓಘವು ಎಲ್ಲವನ್ನೂ ಕಾಗುಣಿತಗೊಳಿಸದೆ ಬದುಕಿನ ವ್ಯಾಖ್ಯಾನಕ್ಕೆ ಅವಕಾಶವನ್ನು ನೀಡುತ್ತವೆ. ಹೊಸ ಆಲೋಚನೆಗಳು ವೈಯಕ್ತಿಕ ಮಟ್ಟದಲ್ಲಿ ಆಳವಾಗಿ ಪ್ರತಿಧ್ವನಿಸುವಂತಿದ್ದು, ಕೆಲವು ಕತೆಗಳು ಓದುಗನ ದೃಷ್ಟಿಕೋನಕ್ಕೆ ಸವಾಲೊಡ್ಡುವಂತಿವೆ. ಮಿತ್ರಾ ವೆಂಕಟ್ರಾಜ | ಹಿರಿಯ ಕಥೆಗಾರ್ತಿ | ಮುಂಬಯಿ

₹160   ₹128

ದ್ವೈತ | Dwaita

ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ. ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹೆಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ. ಪ್ರಾಮೀಸ್, ನಾವು ರಾಜ್ಯದ ಕಟ್ಟಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ. ನಮ್ಮದು ಉದ್ಯಮವಲ್ಲ. ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ. ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್ ಕಾಮ್ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.

₹140   ₹119

ನಗು ಎಂದಿದೆ ಮಂಜಿನ ಬಿಂದು | Nagu Endide Manjina Bindu

ತೀರಾ ಸಂಪ್ರದಾಯದ ಚೌಕಟ್ಟಿನಲ್ಲಿ ಬೆಳೆದು ಅನಿವಾರ್ಯವಾಗಿ ಶಾಸ್ತ್ರಿಗಳ ಮನೆ ಸೇರುವ ಸೌಭಾಗ್ಯಳಿಗೆ ವಾದ್ಯ, ಸಂಗೀತಗಳಲ್ಲಿ ಆಸಕ್ತಿ. ಶಾಸ್ತ್ರಿಯವರ ಬಳಿ ಸಂಗೀತ ಅಭ್ಯಾಸ ಮಾಡಿ ಪಕ್ಕದ ಮನೆಯವರ ಬಳಿ ವೀಣೆ ನುಡಿಸುವುದನ್ನು ಕಲಿತರೂ ಅವಳ ಪ್ರತಿಭೆಗೆ ಅವಕಾಶವಿರುವುದಿಲ್ಲ. ಶಾಸ್ತ್ರಿಗಳೇ ತಮ್ಮ ಬೆಂಗಳೂರಿನ ಗೆಳೆಯ ಅವಧಾನಿಯ ಬಳಿಗೆ ಕಳುಹಿಸಿ ಅವಳ ಪ್ರತಿಭೆಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳುತ್ತಾರೆ. ಅವಧಾನಿಗಳ ಮನೆ ಕೂಡ ಸಂಗೀತಾರಾಧನೆಯ ದೇಗುಲ. ಅವರ ಮಗ ಮುರಳಿಗೆ ಇದು ಒಮ್ಮತವಿಲ್ಲದ್ದು. ತನಗೆ ಅದೃಷ್ಟ ದೊರಕಿತೆಂದು ಸೌಭಾಗ್ಯ ಹರ್ಷಿಸುತ್ತಿರುವಾಗಲೇ ಜಿ ಮನೆಯಿಂದ ಹೊರಹೋಗಬೇಕಾದ ಸನ್ನಿವೇಶ ಏರ್ಪಡುತ್ತದೆ. ಅವಳು ನೊಂದುಕೊಂಡರು ಜೀವನೋಪಾಯಕ್ಕಾಗಿ ತನ್ನ ಪ್ರತಿಭೆಯನ್ನು ಬಳಸಿಕೊಳ್ಳುವುದು ಸಮಂಜಸವೆನಿಸಿ, ಮುಗ್ಗಳಾದ ಆಕೆ ಪತ್ರಿಕೆಯ ಜಾಹೀರಾತು ನೋಡಿ ಅಲ್ಲಿಗೆ ಹೋಗುತ್ತಾಳೆ. ಅವಳ ಪ್ರತಿಭೆಗೆ ಸದಾವಕಾಶವಿದ್ದರೂ ಅದು ಸರಿಯಾದ ಸ್ಥಳವಲ್ಲವೆನ್ನುವುದು ತಿಳಿಯುತ್ತದೆ. ಮುಂದೆ ಅವಳ ಬದುಕಿನಲ್ಲಿ ಸಂಕರ್ಷ ನೆನ್ನುವ ಆಧುನಿಕ ಮನೋಭಾವದ ಯುವಕನ ಪ್ರವೇಶವಾಗುತ್ತದೆ. ಅಲ್ಲಿಯವರೆಗೂ ಎಲ್ಲವೂ ಒಳ್ಳೆಯ ರೀತಿಯಲ್ಲಿಯೇ ಸಾಗುವ ಬದುಕು ಇದ್ದಕ್ಕಿದ್ದಂತೆ ಸಂಕಷ್ಟಕ್ಕಿದಾಗುತ್ತದೆ. ಸಂಕರ್ಷ್, ಆಕರ್ಷ್. ಮುರಳಿ ಅವಳ ಬದುಕಿನಲ್ಲಿ ಮೂಡಿದ ಮಂಜಿನ ಬಿಂದುಗಳಾಗುತ್ತಾರೆಯೇ? ಅವಳ ಕನಸುಗಳು ಸಾಕಾರಗೊಳ್ಳುತ್ತವೆಯೇ? ಇವಕ್ಕೆಲ್ಲ ಉತ್ತರ... ನಗು ಎಂದಿದೆ... ಕಾದಂಬರಿಯಲ್ಲಿದೆ.

₹210   ₹179

ನದಿಯೊಂದು ಕಡಲ ಹುಡುಕುತ್ತಾ | Nadiyondu Kadala Hudukutta

ಫೈಜ್ ಅವರು ಕತೆ ಬರೆಯುವುದಿಲ್ಲ; ಅದನ್ನು ಸುಮ್ಮನೆ ಹ-ರಿಯ ಬಿಡುತ್ತಾರೆ. ನದಿ ತನ್ನ ಚಾಡನ್ನು ತಾನು ಹಿಡಿದು ಹೊರಡುವಂತೆ ಕಥೆ ತನ್ನ ದಾರಿಯನ್ನು ಹಿಡಿದುಕೊಂಡು ಸುಮ್ಮನೆ ಹೊರಡುತ್ತದೆ. ಕಥೆಗಾರ ಫೈಡ್ ಹೊರಗಿನಿಂದ ಅದನ್ನು ನೋಡುತ್ತಾ ನಿಲ್ಲುತ್ತಾರೆ. ಹರಿದ ಆ ನದಿಯಲ್ಲಿ ಮಣ್ಣಿನ ಸೊಗಡಿದೆ. ಬಡವರ ನಾಲ್ಕು ಹನಿ ಕಣ್ಣೀರಿದೆ. ನೋವಿದೆ. ದಡವು ನದಿಯನ್ನು ಸಮಾಧಾನಿಸುವಂತೆ ಕಥೆಗಾರ భృహో జీవించిగ మిడియుత్తార, నూ+విగ మిడియన ಕಥೆಯನ್ನು ಯಾಕಾದರೂ ಬರೆಯಬೇಕು? ಎಂಬುದು ಅವರ ಧೋರಣೆ. ಅವರೆಂದೂ ಬದುಕು ಮತ್ತು ಕಥೆ ಈ ಎರಡನ್ನೂ ಬೇರೆ ಬೇರೆಯಾಗಿ ನೋಡಿಲ್ಲ. ಅದು ನನಗಿಷ್ಟ ಇಲ್ಲಿನ ಕಥೆಗಳು ಮಧ್ಯಾಹ್ನ ಬಿಸಿಲಿನಂತೆ ಶುರುವಾಗುತ್ತವೆ. ಮುಗಿಯುವ ಹೊತ್ತಿಗೆ ನಿಮ್ಮ ಎದೆಯಲ್ಲಿ ಮೋಡ ಕಟ್ಟುತ್ತದೆ. ಕಥೆ ಮುಗಿಸಿ ಎದ್ದು ಹೊರಟ ನಿಮ್ಮೊಳಗೊಂದು ಮಳೆ ಸುರಿಯುತ್ತವೆ. ಕಥೆ ಓದಿದವ ಹದವಾಗುತ್ತಾನೆ. ಹದವಾದ ಎದೆಯಲ್ಲಿ ಒಂದು ಮಾನವೀಯ ಸಸಿ ಗರಿಬಿಚ್ಚಲಿ ಎಂಬ ಕಾಳಜಿ ಈ ಕಥೆಗಾರನದು. ಇವರ ಕಥೆಗಳು ತಣ್ಣನೆಯ ಇಬ್ಬನಿಯ ಬಗ್ಗೆ ವ್ಯರ್ಥವಾಗಿ ಚರ್ಚಿಸುತ್ತಾ ಕೂರುವುದಿಲ್ಲ, ಮಧ್ಯಾಹ್ನದ ಸುಡು ಬಿಸಿಲಿನ ನೋವಿಗೆ ಒಂದು ಹಿಡಿ ನೆರಳಿನಂಥಹ ಮದ್ದಿಗಾಗಿ ತಡಕಾಡುತ್ತವೆ. ಕಥೆಗಳಲ್ಲಿ ಅಗ್ನಿ ಪ್ರಾಮಾಣಿಕತೆ ಕಾಣಿಸುತ್ತದೆ. ಕಣ್ಣಿಗೊಡೆದು ಸುಮ್ಮನೆ ಮೋಡಿ ಮಾಡುವ ತಂತ್ರಗಾರಿಕೆ ಅವರದಲ್ಲ. ಇಲ್ಲಿ ಅಧಿಕ ಪ್ರಸಂಗವಿಲ್ಲ. ಮೊದಲ ಬಾರಿ ನಗರಕ್ಕೆ ಬರುವ ಹಳ್ಳಿಯ ಹೈದನ ಮುಗ್ಧತೆಯಿದೆ. ಇವು ಅಸಲಿ ಜವಾರಿ ಕಥೆಗಳು, ನೆಲದ ಕಥೆಗಳು. ಇಲ್ಲಿನ ಕಥೆಗಳು ಮೋಸಮಾಡುವುದಿಲ್ಲ. -ಸದಾಶಿವ ಸೊರಟೂರು ಕವಿ, ಹೊನ್ನಾಳಿ

₹180   ₹153

ನಂಬಿಕೆಯೆಂಬ ಗಾಳಿಕೊಡೆ | Nambikeyemba Galikode

ಎರಡು ಗಂಟೆ ಕೆಲಸ ಮಾಡುವ ವೇಳೆಗೆ ಅವನ ಮನಸ್ಸಿಗೆ ಜೋರಾಗಿ ಕಿರುಚ ಬೇಕೆನ್ನಿಸಿತು. ಉಸಿರಾಡಲು ಕಷ್ಟವಾಗಿ ಹೊರಗೆದ್ದುಬಂದ

₹180   ₹153

ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ | Narakada Kennaaligeyantha Ninna Bennahuri

ಕವಿತೆಗೆ ಓದುಗರೇ ಇಲ್ಲವೆನ್ನುವವರ ಮುಂದೆ ಇಲ್ಲಿನ ಕವಿತೆಗಳನ್ನು ನಿಲ್ಲಿಸಬೇಕು. ಯಾಕೆಂದರೆ ಅಬ್ದುಲ್ ರಶೀದ್ ಅವರ ಕವಿತೆಗಳನ್ನು ಓದುವುದೇ ಒಂದು ಪರಮಸುಖ. ಅಷ್ಟು ತೀಕ್ಷ್ಮವಾದ ವೇಗ ಇಲ್ಲಿನ ಕವಿತೆಗಳಿಗಿವೆ. ಇಲ್ಲಿನ ಕವಿತೆಗಳು ಓದುಗನೊಳಗೆ ಹುದುಗಿರುವ ಕವಿಯನ್ನು ಬಡಿದೆಬ್ಬಿಸುವುದಂತು ನಿಜ!

₹130   ₹98