• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಹಿಮ | Hima

nil

₹550   ₹490

Buy Now
ಹಿಮಾಲಯದ ನರಭಕ್ಷಕಗಳು | Himalayada Narabhakshakagalu

...ಬೇಟೆಯನ್ನು ಒಂದು ಕಾಯಕ ಪ್ರಜ್ಞೆಯಲ್ಲಿ ಬಾಳಿದ ಕಾರ್ಬೆಟ್ ನ ಅರಣ್ಯ ಪ್ರೀತಿ ಇರುವೆಂಭತ್ತು ಕೋಟಿ ಜೀವರಾಶಿಗಳನ್ನೂ ಅವುಗಳ ಬದುಕುವ ಹಕ್ಕನ್ನೂ ಮಾನ್ಯ ಮಾಡುವ ಗುಣಗೌರವದಿಂದ ಕೂಡಿದ್ದು.... ಪ್ರತಿಯೊಂದು ನರಭಕ್ಷಕ ಹುಲಿಯನ್ನು ಬೇಟೆಯಾಡಿದಾಗಲೂ ಆದ ಅನುಭವ ವಿವರಗಳನ್ನು ಕಟ್ಟಿಕೊಡುವಾಗ ಅವರು ವಿವರಿಸುವ ಕಾಡಿನ ಬಗೆ ವಿನ್ಯಾಸ ಅವರ ನೆನಪಿನ ತೀಕ್ಷ್ಣತೆಗೆ ಗ್ರಹಿಕೆಯ ಸೂಕ್ಷ್ಮತೆಗೆ ಕನ್ನಡಿ ಹಿಡಿದಂತಿದೆ. ಮೃತ್ಯು ಎದುರಿಗೇ ನಿಂತಾಗಲೂ ಧೃತಿಗೆಡದ ಅವರ ಆತ್ಮವಿಶ್ವಾಸದ ನಿಲುಮೆ ಅನನ್ಯವಾದುದು. ಇದೆಲ್ಲವನ್ನೂ ಅವರ ಬರಹ ತನ್ನ ಎದೆಯಲ್ಲಿ ತುಂಬಿಕೊಂಡಿದೆ. ಯಾವ ಜೀವ ವಿಜ್ಞಾನವೂ ತಿಳಿಸಲಾರದ ಎಷ್ಟೋ ಸೂಕ್ಷ್ಮಾತಿ ಸೂಕ್ಷ್ಮ ವಿಷಯಜ್ಞಾನವನ್ನು ಅನುಭವ ಮಾತ್ರದಿಂದ ಪಡೆದವರಾದ ಕಾರ್ಬೆಟ್ ಒಂದು ಅದ್ಭುತ, ಬೇಟೆಯನ್ನು ನಿಸರ್ಗಧರ್ಮಕ್ಕೆ ಎರವಾಗದ ನಡೆಯಲ್ಲಿ ಜೀವ ಸಂರಕ್ಷಕ ವಿಧಿಯಂತೆ ಪರಿಪಾಲಿಸಿದ ಮಹಾನುಭಾವ ಕಾರ್ಬೆಟ್. ...ಇಂಥ ಬೇಟೆಯ ಸಂತನ ಅನುಭವ ಕಥನವನ್ನು ಓದಿದ್ದೇ ನನ್ನ ಅಕ್ಷರಜ್ಞಾನದ ಅದೃಷ್ಟಭಾಗ್ಯವೆಂದು ನನ್ನ ತಿಳಿವು ಹೇಳುತ್ತಿದೆ. ಹಿಮಾಲಯದ ನರಭಕ್ಷಕಗಳು ...ಗೆಳೆಯ ವಿವೇಕಾನಂದನಿಗೆ ಆತ್ಮೀಯ ಕೃತಜ್ಞತೆಗಳು, ಕಾರಣ ಇಷ್ಟು ವಿಸ್ತಾರವಾದ ಈ ಬರಹವನ್ನು ಧ್ಯಾನಸ್ಥಿತಿಯ ಬದ್ಧತೆಯಲ್ಲಿ ಒಳಕ್ಕೆ ತಗೆದುಕೊಂಡು ಅದನ್ನು ಕನ್ನಡೀಕರಿಸಿದ್ದಕ್ಕೆ. ಇದನ್ನು ಕೇವಲ ಅನುವಾದ ಎಂದು ಹೇಳಿದರೆ ಅಪಚಾರವಾಗುತ್ತದೆ. ಕನ್ನಡ ಭಾಷೆಯ ಜಾಯಮಾನಕ್ಕೆ ಕಿಂಚಿತ್ತೂ ಊನವಾಗದ ಪ್ರಜ್ಞೆಯಲ್ಲಿ ಕಾರ್ಬೆಟ್‌ನ ಅನುಭವವನ್ನು ಕನ್ನಡಿಗರಿಗೆ ಕಟ್ಟಿಕೊಟ್ಟಿರುವ ಈ ಕಾರ್ಯ ಗುರುತರವಾದ ಹೊಣೆಗಾರಿಕೆಯಿಂದ ಮಾಡಿದ ಫಲವೇ ಸರಿ. ಈ ಜೀವಲೋಕದ ಬಗೆಗೆ ಕಾರ್ಬೆಟ್ ಪ್ರಜ್ಞೆಯನ್ನು ಬೆಳೆಸಿಕೊಂಡ ಮನಸ್ಸು ಮಾತ್ರ ಇಂಥ ಸಾಹಸಕ್ಕೆ ಶ್ರದ್ದೆ ಗೌರವಗಳಿಂದ ತೊಡಗುತ್ತದೆ.

₹675   ₹574

Buy Now
ಹೀಗೊಂದು ಏರೋಸ್ಪೇಸ್ ಪುರಾಣ | Heegondu Aerospace Puraana

ಆರಂಭದಿಂದಲೂ ನಿಮ್ಮ ಚೈತನ್ಯಪೂರ್ಣ ಬರವಣಿಗೆ ಮನ ಸೆಳೆಯಿತು. ಪಟ್ಟಿ ಪಾಡು, ಪರದಾಟಗಳ ನಡುವೆಯೂ ತೂರಿ ಬರುತ್ತಿದ್ದ ನಗೆಚಟಾಕಿ, ಅನ್ಯ ಜನಗಳ ಸ್ನೇಹಮಿಲನ, ವೀಲ್ ಚೇರಿನಲ್ಲಿ ಏಕಾಂಗಿಯಾಗಿ ಪಯಣಿಸಿದ ಪಯಣಿಕರ ಸಾಹಸಗಾಥೆ, ಭಾಷೆ ಬರದ ಹೆಣ್ಣೆಂದು ತನ್ನ ಫೈಟಿಗೆ ಹೋಗುತ್ತಿದ್ದವಳು ಓಡಿ ಬಂದು ನಿಮ್ಮನ್ನು ಅಪ್ಪಿಕೊಂಡು ಹೋದದ್ದು ಒಂದು ರೀತಿಯ ಮಾನವ ವ್ಯಕ್ತಿತ್ವಗಳ ಕಿರು ನೋಟ, ನಿಮ್ಮ ಲವಲವಿಕೆಯ " ಮಾತುಗಳಲ್ಲಿ ರೂಪ ತಾಳಿ. ಇದೊಂದು ಚೆಂದದ ಜೀವಂತ ಕಥಾ ಚಿತ್ರ ಶಿಲ್ಪ. -ಲೀಲಾವತಿ ಎಚ್.ಆರ್

₹170   ₹136

Buy Now
ಹುಲಿಯ ಬದುಕು | HULIYA BADUKU

ಈ ಕೃತಿಯನ್ನು ಸೊಗಸಾಗಿ ಕನ್ನಡಕ್ಕೆ ಅನುವಾದಿಸಿರುವ ಡಾ| ಎಚ್.ಆರ್. ಕೃಷ್ಣಮೂರ್ತಿಯವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಗಳಿಸಿದವರು. ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಜ್ಞಾನಾಧಿಕಾರಿಯಾಗಿ ಆಕಾಶವಾಣಿ ಪ್ರವೇಶಿಸಿದ ಇವರು, ಈಗ ಆಕಾಶವಾಣಿಯ ದಕ್ಷಿಣ ವಲಯದ ಉನ್ನತಾಧಿಕಾರಿ. ಪ್ರಕೃತಿ, ಪರಿಸರ, ವನ್ಯಜೀವಿಗಳಿಗೆ ಸಂಬಂಧಿಸಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ವಿಮರ್ಶೆ: ಜಗತ್ತಿನಲ್ಲಿ ಕಣ್ಮರೆಯಾಗುತ್ತಿರುವ ಜೀವಿಗಳ ಪಟ್ಟಿಯಲ್ಲಿ ಮಾರ್ಜಾಲ ಕುಟುಂಬಕ್ಕೆ ಸೇರಿದ ಹುಲಿಗಳೂ ಸೇರಿವೆ. ಹುಲಿಗಳ ಜೀವನದ ಬಗ್ಗೆ ಹಾಗೂ ಅವು ನಶಿಸುತ್ತಿರುವದಕ್ಕೆ ಕಾರಣಗಳನ್ನು ಕಾರಂತರು ಈ ಪುಸ್ತಕದಲ್ಲಿ ನೀಡಿದ್ದಾರೆ. ಮನುಷ್ಯನ ಸಹಜೀವಿಗಳಲ್ಲಿ ಒಂದಾದ ಹುಲಿಯ ಕುರಿತಂತೆ ಆಸಕ್ತ ಇರುವ ಎಲ್ಲರನ್ನೂ ಸೆಳೆಯುವ ಪುಸ್ತಕ ಪ್ರಜಾವಾಣಿ ೧೧ ಮಾರ್ಚ್ ೨೦೦೭. ಹುಲಿಗಳನ್ನು ಏಕೆ ಉಳಿಸಬೇಕು? ಎನ್ನುವ ಲೇಖನದಲ್ಲಿ ಬರೆಯುತ್ತಾ " ನಮ್ಮ ದಾಳಿಗೀಡಾಗಿರುವ ನೈಸರ್ಗಿಕ ಭೂ ಪ್ರದೇಶಗಳು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಿವೆಯೆಂಬುದನ್ನು ಸೂಚಿಸುವ ಎಚ್ಚರಿಕೆಯ ದೀಪವೇ ಹುಲಿ. ಮಲ್ಲ ಕರ್ನಾಟಕ ೨೩-೦೩-೨೦೦೭.

₹195   ₹174

Buy Now
ಹುಲಿರಾಯನ ಆಕಾಶವಾಣಿ|Hulirayana Akashavani

ವೈಜ್ಞಾನಿಕ ಸಾಧನಗಳನ್ನು ಬಳಸಿ ಹುಲಿಯಂತಹ ಅದ್ಭುತಜೀವಿಯ ಉಳಿವಿಗಾಗಿ ಶ್ರಮಿಸಿದವರಲ್ಲಿ ಕೆ.ಉಲ್ಲಾಸ ಕಾರಂತರಂಥವರು ಭಾರತದಲ್ಲೇ ಏಕೆ, ಇಡೀ ಜಗತ್ತಿನಲ್ಲೇ ಮತ್ತೊಬ್ಬರಿಲ್ಲ. ಹುಲಿಗಳ ಬದುಕಿನ ಬಗೆಗೆ ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ತತ್ಪರತೆಯಿಂದ ಅಧ್ಯಯನ ಮಾಡಿದ ಉಲ್ಲಾಸ ಕಾರಂತರು ಭಾರತದ ಅತಿಕುಶಲ ಕ್ಷೇತ್ರ ಜೀವಶಾಸ್ತ್ರಜ್ಞರಾಗಿಯೂ ಹುಲಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿ ಯಶ ಕಂಡ ಸಂರಕ್ಷಣಾವಾದಿಯಾಗಿಯೂ ವಿಶ್ವದ ಗಮನ ಸೆಳೆದಿದ್ದಾರೆ. ಅವರ ವೈಜ್ಞಾನಿಕ ಕಾರ್ಯಕುಶಲತೆ, ಸಂರಕ್ಷಣಾವಾದಿಯಾಗಿ ಕಾರಂತರ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹುಲಿ ಮತ್ತು ಬಲಿಪ್ರಾಣಿಗಳ ಗಣತಿಗಾಗಿ ವಿಶ್ವಸನೀಯ ತಂತ್ರಗಳನ್ನು ಅಭಿವೃದ್ಧಿಪಡಿಸಿರುವ ಕಾರಂತರು, ಇವೆರಡರ ಸಂಖ್ಯೆಗಳ ನಡುವೆ ಇರುವ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ವಿಮರ್ಶೆ: ಹುಲಿ - ಚಿರತೆಗಳಂಥ ಮಾರ್ಜಾಲಗಳಿಗೆ ರೇಡಿಯೋ ಕಾಲರ್ ತೊಡಿಸಿ ಅವುಗಳ ಚಲನ ವಲನ, ಅವುಗಳ ಸಂಖ್ಯೆಯಲ್ಲಾಗುವ ಏರಿಳಿತ ಇವುಗಳ ಮೇಲೆ ಪಾಳತಿ ಇಡುವುದೇ ಉಲ್ಲಾಸ ಕಾರಂತರ ಗುರಿ.

₹360   ₹320

Buy Now
ಹೂ ಬಿಸಿಲಿನ ನೆರಳು | Hoo Bisilina neralu

ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...

₹130   ₹116

Buy Now