#
nil
NA
ಉತ್ತರಾಪಥೇಶ್ವರ ಎಂಬ ಬಿರುದಾಂಕಿತ, ಕಾನ್ಯಕುಬ್ಬದ ಸಾಮ್ರಾಟ, ಅಪಾರ ಸೈನ್ಯವನ್ನು ಹೊಂದಿದ ಹರ್ಷವರ್ಧನನಂತಹ ಮಹಾಪ್ರತಾಪಿಯನ್ನು ರಣತಂತ್ರದ ಮೂಲಕವೇ ಬಾದಾಮಿ ಚಾಲುಕ್ಯ ಪುಲಿಕೇಶಿ ಸೋಲಿಸಿದ್ದಲ್ಲದೇ, ಸೌಜನ್ಯ ಮತ್ತು ಸ್ನೇಹ ವಿಶ್ವಾಸಗಳಿಂದ ಅವನ ಹೃದಯವನ್ನು ಗೆದ್ದು ಅವನಿಂದಲೇ ಪರಮೇಶ್ವರ ಪುಲಿಕೇಶಿ ಎಂದು ಹೊಗಳಿಸಿಕೊಂಡ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕುರಿತ ಐತಿಹಾಸಿಕ ಕಾದಂಬರಿ.
ಇಲ್ಲಿರುವ ಕತೆಗಳು ಕೂಡ ಸ್ತ್ರೀ ಸಂವೇದನೆಯ ಸುತ್ತ ಸುತ್ತುವ ಕತೆಗಳಾಗಿದ್ದು, ಸಾಮಾಜಿಕ ಹಾಗು ಕೌಟುಂಬಿಕ ನೆಲೆಯಲ್ಲಿ ಹೆಣ್ಣಿನ ತುಮುಲಗಳು, ಹುಡುಕಾಟ, ಸ್ಥಿತಪ್ರಜ್ಞೆ, ಜವಾಬ್ದಾರಿಗಳು, ಎದುರಿಸಬೇಕಾದ ಅತ್ಯಂತ ಸೂಕ್ಷ್ಮ ಸಂಗತಿಗಳನ್ನು ಪದರು ಪದರುಗಳಾಗಿ ಬಿಡಿಸಿ ಹೇಳಲಾಗಿದೆ.
ಬಾಬು ರೆಡ್ಡಿ
ಮಕ್ಕಳಿಗೆ ಇಷ್ಟವಾಗುವಂತಹ ಕುತೂಹಲದಾಯಕವಾದ ನೀತಿ ಕಥೆಗಳ ಸಂಗ್ರಹವೇ ಈ ಚಿಣ್ಣರ ಚಿತ್ತಾರ. ಪುಟ್ಟ ಮಕ್ಕಳಿಗೆ ಕಥೆಗಳೆಂದರೆ ಇಷ್ಟ. ಈ ಕೃತಿಯು ಅಂತಹ ಪುಟ್ಟ ಮಕ್ಕಳಿಗೆಂದೇ ರಚಿಸಿರುವ ಪುಟ್ಟ ಪುಟ್ಟ ಕಥೆಗಳ ಸಂಗ್ರಹ. ಈ ಕಥೆಗಳು ಚಿಕ್ಕ ಮಕ್ಕಳಿಗೆ ಖುಷಿಪಡಿಸುವುದರೊಂದಿಗೆ ಅದರಿಂದ ತಿಳಿಯಬೇಕಾದ ನೀತಿಯನ್ನೂ ಸಾರುತ್ತದೆ.
ಸಿನಿಮಾ ಎನ್ನುವುದು ಕಲೆ, ಉದ್ಯಮ, ಮನರಂಜನೆ.. ಇವೆಲ್ಲಕ್ಕಿಂತ ಮೀರಿದ ಒಂದು ತುಡಿತ ಎನ್ನಬಹುದು. ಕಥೆ ಹೇಳುವ, ಕೇಳುವ ತೋರಿಸುವ ಆ ಹುರುಪು ಉತ್ಸಾಹಕ್ಕೆ ಬೆಲೆ ಕಟ್ಟಲು ಸಾಧ್ಯವೇ..? ಹಾಗೆ ನೋಡಿದರೆ ನನಗೆ ನನ್ನ ಸಂಸ್ಕೃತಿ ಕಲಿಸಿದರಲ್ಲಿ ಸಿನಿಮಾದ ಪಾಲು ಇದೆ. ಒಂದು ಬೇರೆಯದೇ ಆದ ಪ್ರಪಂಚವನ್ನು ಸೃಷ್ಟಿಸುವ ತಾಕತ್ತು ಸಶಕ್ತವಾಗಿರುವ ಕ್ಷೇತ್ರವಿದು. ನನ್ನೆಲ್ಲ ವಿದ್ಯಾಭ್ಯಾಸ ಮುಗಿದ ಮೇಲೆ ನನ್ನ ಮುಂದಿದ್ದ ಪ್ರಶ್ನೆ? ಬದುಕುವುದಕ್ಕಾಗಿ ಕೆಲಸ ಮಾಡುವುದಾ..? ಅಥವಾ ಕನಸನ್ನು ಈಡೇರಿಸಿಕೊಳ್ಳುವುದಕ್ಕಾಗಿ ಬದುಕುವುದಾ..?
Showing 1201 to 1230 of 3807 results