ತೆರೆದ ಮನಸ್ಸಿನ ಪುಟಗಳು 25 ಕಥೆಗಳುಳ್ಳ ಕಥಾ ಸಂಕಲನ ಇದರಲ್ಲಿನ ಕಥೆಗಳಲ್ಲಿ ಕೆಲವು ಕಾಲ್ಪನಿಕವಾದರೆ, ಮತ್ತೆ ಕೆಲವು ನೈಜ ಘಟನೆಗಳನ್ನು ಆಧರಿಸಿ ಬರೆದಂತವು. ಹೆಚ್ಚಿನ ಕಥೆಗಳು ಮಹಿಳಾ ಪ್ರಧಾನ ಕಥೆಗಳು. ವರದಕ್ಷಿಣೆ, ಗಂಡು ಮಗುವಿನ ಮೋಹ, ನಶಿಸಿ ಹೋಗುತ್ತಿರುವ ಸಂಬಂಧಗಳ ಮೌಲ್ಯ, ಹಣದ ವ್ಯಾಮೋಹ ಮೊದಲಾದ ಸಾಮಾಜಿಕ ಸಮಸ್ಯೆಗಳ ಕುರಿತಾಗಿರುವ ಕಥೆಗಳಲ್ಲಿ ನೀತಿ ಪಾಠವಿದೆ. ಅಮ್ಮ. ಬಲಿದಾನ, ಮನೆಯ ಅದೃಶ್ಯ ಕಂಬಗಳು ನಮ್ಮಲ್ಲೇ ಎಲ್ಲೋ ನಡೆದಿರಬಹುದಾದ ಕಥೆಗಳು. ಸುಂದರಗೊಂದಲ, ಮ್ಯಾಜಿಕ್ ಲ್ಯಾಂಪ್, ಅದಲು ಬದಲು ಕಥೆಗಳು ಗಂಭೀರ ಕಥೆಗಳ ನಡುವೆ ತಿಳಿ ಹಾಸ್ಯ ಹೊಂದಿದೆ. ಜೊತೆಗೆ ಹೆಚ್ಚಿನ ಕಥೆಗಳು ಯುವ ಜನತೆಗೆ ಪಾಠವಾಗಬಲ್ಲ ಕಥೆಗಳು.
nil
#
ತ್ಯಾಗಕ್ಕಿಲ್ಲ ನೂಕುನುಗ್ಗಲು ಡಾ. ಗವಿಸ್ವಾಮಿ ಅತ್ಯಂತ ಕಡಿಮೆ ಶಬ್ದಗಳಲ್ಲಿ ಗಟ್ಟಿ ವಿಷಯವುಳ್ಳ ಕಥೆಗಳನ್ನು ಕಟ್ಟಿ ಕೊಟ್ಟಿದ್ದಾರೆ ಹೊತ್ತಗೆಯಲ್ಲಿನ ಅನೇಕ ಪುಟ್ಟ ಕಥೆಗಳನ್ನು ಕಾದಂಬರಿಗಳಾಗಿಸಬಹುದು ಎಂದರೆ ಈ ಕಥೆಗಳ ಶಕ್ತಿಯನ್ನು ಊಹಿಸಬಹುದು. ಮಾನವೀಯತೆ ಈ ಕಥೆಗಳಲ್ಲಿನ ಮುಖ್ಯ ಹೂರಣ.
1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್ನ ಡಿಐಜಿ Read More...
“ಮುಕ್ತಿಯ ಹಾದಿಯಲ್ಲಿ ಸಾಗುವಾಗ ಗಂಡು ಸ್ವಭಾವ ಮತ್ತು ಹೆಣ್ಣು ಸ್ವಭಾವ ಎನ್ನುವುದಕ್ಕೆ ಏನಾದರೂ ಪ್ರಸ್ತುತತೆ ಇದೆಯೇ," ಅನ್ನುವುದು ಥೇರೀ ಸೋಮಾಳ ಪ್ರಶ್ನೆ. ಇದು ಬೌದ್ಧಧರ್ಮದಲ್ಲಿ ಮಹಿಳೆಯನ್ನು ಕುರಿತ ಓದಿಗೆ ಹಲವು ಕಿಟಕಿಗಳನ್ನು ಒಟ್ಟಿಗೆ ತೆರೆಯುತ್ತದೆ. 2500 ವರ್ಷಗಳ ಹಿಂದಿನ ಸಮಾಜದಲ್ಲಿದ್ದ ವಿಭಿನ್ನ ಧರ್ಮಗಳಲ್ಲಿ ಮಹಿಳೆಯರು ಇರಲೇ ಇಲ್ಲ ಎನ್ನಬಹುದು. ಹಾಗಿದ್ದಾಗ ಅವರಿಗೆ ಸ್ವತಂತ್ರವಾಗಿ ಮುಕ್ತಿಸಾಧನೆ ಸಾಧ್ಯ ಎಂಬ ಕಲ್ಪನೆಯಂತೂ ಕನಸು ಬಿಡಿ. ಅವರೇನಿದ್ದರೂ ಮುಕ್ತಿಸಾಧನೆಗೆ ಅಡ್ಡಿ ಅನ್ನೋ ಅಂಬೋಣವಿತ್ತು ಅಷ್ಟೆ. ಹಾಗಂತ ಮಹಿಳೆಯರು ಮೋಕ್ಷಸಾಧನೆಗೆ ಅಡ್ಡಿ ಅನ್ನೋ ಅಂತಹ ಮಾತುಗಳು ಬೌದ್ಧ ಧರ್ಮದಲ್ಲಿ ಇರಲೇ ಇಲ್ಲ ಅಂತಲೂ ಅಂದುಕೊಳ್ಳಬಾರದು. ಅಷ್ಟಾದರೂ ಹೆಣ್ಣಿಗೆ ಸಂಬಂಧಿಸಿದಂತೆ ಬೌದ್ಧ ಧರ್ಮ ಬೇರೇನೆ. ಏಕೆಂದರೆ, ಮಹಿಳೆಯರಿಗೆ ಮೋಕ್ಷಸಿದ್ಧಿ ಸಾಧ್ಯ ಎಂದು ಬುದ್ಧ ಘಂಟಾಘೋಷವಾಗಿ ಹೇಳಿದ. ಚರ್ಚೆ, ಜಿಜ್ಞಾಸೆ, ಮುಕ್ತ ಸಂವಾದಗಳಿಗೆ ಬೇಕಾದ ಆವರಣ ಸೃಷ್ಟಿಯಾಗಿತ್ತು. ಹೆಣ್ಣುಮಕ್ಕಳು ಸ್ವತಂತ್ರವಾಗಿ, ದಿಟ್ಟವಾಗಿ ತಮಗೇನು ಬೇಕು ಅಂತ ಹೇಳೋದನ್ನು ಅದು ಸಾಧ್ಯವಾಗಿಸಿತ್ತು. ಹೆಣ್ಣುಮಕ್ಕಳು ನಿಯಮಗಳನ್ನು ಧೈರ್ಯವಾಗಿ ಪ್ರಶ್ನಿಸಿದರು. ಇಂದು ಕೂಡ ನಾವು ಚರ್ಚೆಮಾಡುವುದಕ್ಕೆ ಸಂಕೋಚ ಮಾಡಿಕೊಳ್ಳುವ ಮುಟ್ಟು, ಬಸಿರು, ಲೈಂಗಿಕ ಬಯಕೆಗಳು ಮುಂತಾದ ವಿಷಯಗಳನ್ನು ಅಂದು ಉಳಿದ ಭಿಕ್ಕುಗಳು ಮತ್ತು ಬುದ್ಧನ ಜೊತೆಗೆ ಚರ್ಚಿಸುವುದಕ್ಕೆ ಅವರಿಗೆ ಸಾಧ್ಯವಾಗಿತ್ತು. ಇದನ್ನು ಸ್ವೀಕರಿಸುವಂತಹ ಮನಃಸ್ಥಿತಿಯನ್ನು ಪುರುಷರಲ್ಲಿ ಮತ್ತು ಸಮಾಜದಲ್ಲಿ ಹುಟ್ಟುಹಾಕುವ ಅವಶ್ಯಕತೆ ಇಂದಿಗೂ ಇದೆ. ತಮ್ಮ ಕಾಲದೊಂದಿಗೆ ಆ ಮಹಿಳೆಯರು ಅನುಸಂಧಾನ ಮಾಡಿದ ಅಪೂರ್ವ ಕ್ರಮ ಇಂದಿಗೂ ಪ್ರಸ್ತುತ.
ಕಥೆ ಅಂದರೆ ಕಟ್ಟು ಕಥೆಯಲ್ಲ, ಒಂದು ಅಳತೆಗೆ ಕಟ್ಟಿದ ಕಥೆ, ಸಹಜವಾಗಿ ಹೆಣೆದಾಗ ಅದು ಕಣ್ಣಿಗೆ ಕಟ್ಟುವಂಥಾ ಕಥೆಯಾಗುತ್ತದೆ. ಕಥೆಗಳ ಸ್ವರೂಪವೇ ಹಾಗಿರಬೇಕು. ಓದುತ್ತಾ ಇದ್ದ ಹಾಗೆ ಕಥೆಯ ಪಾತ್ರಗಳು ಕಣ್ಣು ಮುಂದೆ ಬಂದು ನಿಲ್ಲಬೇಕು. ಪಾತ್ರಗಳು ಆಡುವ ಮಾತುಗಳು ಯಾವುದೂ ನಾಟಕೀಯವಾಗಿರಬಾರದು. ಇಂಥಾ ಸಂದರ್ಭಗಳಲ್ಲಿ ನಾವು ಮಾತಾಡಿದರೂ ಹಾಗೇ ಮಾತಾಡುತ್ತೀವಿ ಎನ್ನುವಂತಿರಬೇಕು. ಇನ್ನು ಕಥೆಯಲ್ಲಿ ಬರುವ ಘಟನೆಗಳೂ ನೈಜತೆಗೆ ದೂರವಾಗಿರಬಾರದು. ಹೌದು ಇದು ಎಲ್ಲರ ಬದುಕಲ್ಲೂ ನಡೆಯುವಂಥದು, ಎಲ್ಲ ಪಾತ್ರಗಳೂ ಹೀಗೇ ನಡೆದುಕೊಳ್ಳುವಂಥವು ಎನಿಸಬೇಕು. ಆಗ ಮಾತ್ರ ಕಥೆ ಬರೆದವನಿಗೂ ಕಥೆ ಓದುವವನಿಗೂ ಒಂದು ಸಹೃದಯ ಸಂಪರ್ಕ ಬರುತ್ತದೆ. ಅಲ್ಲಿಗೆ ಕಥೆಯೂ ಗೆಲ್ಲುತ್ತದೆ, ಕಥೆಗಾರನೂ ಗೆಲ್ಲುತ್ತಾನೆ. ಪ್ರಸ್ತುತ ನಿಮ್ಮ ಕೈಯಲ್ಲಿರುವ ದಡ ಸೇರದ ದೋಣಿಗಳು ಕಥೆಯಲ್ಲಿ ಇರುವ ಎಲ್ಲಾ ಇಪ್ಪತ್ತೈದು ಕಥೆಗಳ ಸ್ವರೂಪವೂ ಹೀಗೇ ಇದೆ. ಈ ಎಲ್ಲಾ ಕಥೆಗಳನ್ನು ಓದುವಾಗ ಲೇಖಕರ ಸುಮಾರು 50 ವರ್ಷಕ್ಕೂ ಹೆಚ್ಚಿನ ಸಾಹಿತ್ಯ ವ್ಯವಸಾಯದ ಅನುಭವದ ಸಾರ ಓದುಗರಿಗೆ ಅರಿವಾಗುತ್ತದೆ. ಪಾತ್ರಗಳು ಯಾವುದೂ ಸೃಷ್ಟಿಯಾಗಿಲ್ಲ, ಬದಲಿಗೆ ಅವುಗಳೇ ಬಂದು ಬೆಸೆದುಕೊಂಡಿವೆ. ಸೃಷ್ಟಿಕರ್ತ ಬ್ರಹ್ಮ ಒಬ್ಬನೇ ಆದರೂ ಅವನು ಸೃಷ್ಟಿಸಿರುವ ಪಾತ್ರಗಳೂ, ಅವುಗಳ ಸ್ವಭಾವಗಳೂ, ಮಾತುಗಳೂ, ನಡವಳಿಕೆಗಳೂ ಹೇಗೆ ಬೇರೆಬೇರೆ ಯಾಗಿರುವುವೋ ಹಾಗೆ ಕಥೆಗಾರ ಒಬ್ಬನೇ ಆದರೂ ಅವನು ತನ್ನ ಕಥೆಯಲ್ಲಿ ಸೃಷ್ಟಿಸಿರುವ ಪಾತ್ರಗಳು ಅವನ ಮೂಗಿನ ನೇರಕ್ಕೆ ನಡೆದುಕೊಂಡರೂ, ಮಾತಾಡಿದರೂ ಎಲ್ಲವೂ ಸಹಜವಾಗಿರುತ್ತವೆ. ಯಾವುದೂ ನಾಟಕೀಯ ಎನಿಸುವುದಿಲ್ಲ, ಬಲವಂತ ಎನಿಸುವುದಿಲ್ಲ. ಒಟ್ಟಿನಲ್ಲಿ ಕಥೆ ಅಂದರೆ ಅದು ಬರೀ ಕಥೆಯಲ್ಲ, ಅದು ನಮ್ಮ ಬದುಕಿನ ಅನೇಕ ಘಟನೆಗಳಿಗೆ ಹಿಡಿದ ಕನ್ನಡಿ ಎನ್ನುವಂತೆ ಈ ಸಂಗ್ರಹದ ಕಥೆಗಳೆಲ್ಲಾ ನಿಮ್ಮನ್ನು ಸೆರೆಹಿಡಿದು ಓದಿಸಿ ಕೊಳ್ಳುವುದರಲ್ಲಿ ಅನುಮಾನವಿಲ್ಲ. ನಿಮಗೆ ಈ ಎಲ್ಲಾ ಕಥೆಗಳ ಓದಿನ ಸುಖ ದೊರೆಯಲಿ. -ಬೇಲೂರು ರಾಮಮೂರ್ತಿ
Showing 1261 to 1290 of 3313 results