ಐತಿಹಾಸಿಕ ಕಥನವನ್ನು ಜನಪದೀಯ ನೆಲೆಯಲ್ಲಿ ವಿಕಸನಗೊಳಿಸುತ್ತ ಕಥನಕಾಲದ ಜೊತೆಗೆ ಆಯಾ ದೇಶಕಾಲದ ಚಿತ್ರಣವನ್ನು ತೆರೆದಿಡುವ ಕಾದಂಬರಿ ಈ ‘ನಿಯುಕ್ತಿಪುರಾಣ’, ಕತೆಯ ಮಟ್ಟಿಗೆ ಅಗಾಧ ಅಳತೆಯ ಕ್ಯಾನ್ವಾಸ್ ಹೊಂದಿರುವ ಇದು ಸುಲಭಕ್ಕೆ ಗ್ರಹಿಸಿ ಹಿಡಿದಿಡಲು ಆಗದಷ್ಟು ದೊಡ್ಡ ಕಥನ. ಲಾವಣಿ, ಜನಪದ ಶಬ್ದ ಭಂಡಾರ, ಕಥನ ಕುತೂಹಲಕ್ಕಾಗಿ ಏರಿಳಿತದ ಅನುಸರಣೆಯ ತಂತ್ರಗಾರಿಕೆ. ಪಾತ್ರಗಳು ಕಟ್ಟಿಕೊಡುವ ಗಟ್ಟಿತನ, ವಿಸ್ತಾರವಾದರೂ ಕೈ ತಪ್ಪದ ಸಂವಹನ ಮತ್ತು ಸಂಪರ್ಕಗಳು, ಸುತ್ತು ಬಳಸಿದರೂ ಮರೆಯದೆ ಜತೆಗೊಯ್ಯುವ ಸಂದರ್ಭದ ಹಲವು ಆವರ್ತಗಳಲ್ಲೂ ಹದತಪ್ಪದ ನಿರೂಪಣೆ ಪುರಾಣದ ವಿಶೇಷತೆಯಾದರೆ, ಹೊಸ ಓದುಗನಿಗೆ ಮತ್ತು ಜನಪದೀಯ ರುಚಿ ಗ್ರಹಿಸಿದವರಿಗೆ, ಗ್ರಂಥಸ್ಥ ಭಾಷೆಯನ್ನಷ್ಟೇ ಓದುವವರಿಗೆ ‘ನಿಯುಕ್ತಿಪುರಾಣ’ ಕೊಂಚ ಒಗರು ಕೂಡ. ಆದರೆ ಪಟ್ಟು ಬಿಡದೆ ಓದಿ ಬಿದ್ದರೆ ಪಳಗಿ ಬಿಡುವ ಬರಹದ ಶೈಲಿಗೆ ಗೊತ್ತಿಲ್ಲದೆ ಆಪ್ತವಾಗಿಸುವ ಹಿಡಿತ ಇಲ್ಲಿದೆ.
nil
ನಿರುದ್ಯೋಗ
#
ಆವರಣಗಳಿಂದ ಕಳಚಿಕೊಂಡ ಆತ್ಮದ ಹೊನಲು ಈ ಕವಿತೆಗಳಲ್ಲಿವೆ.. ವಿವರಿಸಲು ಹೋದರೆ ಮಾತು ಸೋಲುತ್ತದೆ. ಈ ಕವಿತೆಗಳನ್ನು ಓದಿದಾಗ, ಒಂದು ವಿಚಿತ್ರವಾದ ನಿರುಮ್ಮಳ ಶಾಂತ ಸ್ಥಿತಿಯ ಅನುಭೂತಿ ಉಂಟಾಗುತ್ತದೆ.
ಪ್ರೀತಿನಿ ಧನಂಜಯ ಅವರ “ನಿಷಿತೆ”. ಈ ಕಾದಂಬರಿಯು ಮನೋವೈಜ್ಞಾನಿಕ ಥ್ರಿಲ್ಲರ್ ಆಗಿದ್ದು, ಪ್ರೀತಿನಿ ಅವರು ತಮ್ಮ ಮೊದಲ ಕೃತಿಯಲ್ಲೇ ಇಂಥದ್ದೊಂದು ಪ್ರಯೋಗಕ್ಕೆ ಅಣಿಯಾಗಿದ್ದು ಮೆಚ್ಚಬೇಕಾದ ಸಂಗತಿ. ದೆವ್ವ, ಭೂತ, ವಾಸ್ತವ, ಕಲ್ಪನೆ ಮತ್ತು ವೈಜ್ಞಾನಿಕ ವಿಷಯಗಳ ಸುತ್ತಲೇ ಸುತ್ತುವ ಈ ಕಾದಂಬರಿಯ ಮೂಲಕ ನಿಜಕ್ಕೂ ದೆವ್ವ ಭೂತಗಳಿಗೆ ಅಸ್ತಿತ್ವ ಇದೆಯೋ? ಇಲ್ಲವೋ? ಎನ್ನುವ ವೈಚಾರಿಕತೆಯ ಬೆಳಕು ಚೆಲ್ಲಲು ಲೇಖಕಿ ಪ್ರಯತ್ನಿಸಿದ್ದಾರೆ. ಎಷ್ಟೊಂದು ಸಿನೆಮಾಗಳನ್ನು ನೋಡಿದರೂ ದೆವ್ವ ಭೂತಗಳ ಬಗೆಗಿನ ಕುತೂಹಲ ತಣಿಯದವರಿಗೆ ಈ ಕೃತಿ ರಸಾನುಭವ ನೀಡಬಲ್ಲುದು ಮತ್ತು ಒಂದೊಳ್ಳೆ ಎಂಟರ್ಟ್ರೈನರ್ ಆಗಬಲ್ಲುದು.
ಮಂಗಳೂರು ನಗರ ಹಲವು ಬದುಕುಗಳ ವಿವಿಧ್ಯಮಯ ನಗರ. ವಿವಿಧ ಭಾಷೆ, ಸಂಸ್ಕೃತಿ, ಧರ್ಮ, ಹಾಗೂ ಪಾಕ ವೈವಿಧ್ಯತೆಗಳನ್ನು ಹಿತವಾಗಿ ತನ್ನ ಜನರಿಗೆ ದೊರಕಿಸುವ ಉದಾರನಗರ ಎನಿಸಿಕೊಂಡಿದೆ.
ನರಸಿಂಹಮೂರ್ತಿ ಎಂ ಎಸ್
Showing 1771 to 1800 of 3736 results