ಇದು, ಹಿಂದಿಯ ಧೀಮಂತ ಲೇಖಕ ಶ್ರೀ ಉದಯ ಪ್ರಕಾಶ್ರ 'ವಾರೆನ್ ಹೇಸ್ಟಿಂಗ್ಸ್ ಕಾ ಸಾಂಡ್" ಎಂಬ ಕಿರು ಕಾದಂಬರಿಯ ಭಾವಾನುವಾದ. ಈ ಸಮಾಜೋ- ಆರ್ಥಿಕ ರಾಜಕೀಯ ಕಟಕಿಯಲ್ಲಿ ವಾರೆನ್ ಹೇಸ್ಟಿಂಗ್ಸ್ ಮತ್ತು ಅವನ ಹೋರಿ ರೂಪಕಗಳಾಗಿ ಬಳಸಲ್ಪಟ್ಟಿವೆ. ಉದಯ ಪ್ರಕಾಶರು ಒಂದು ವಿಲಕ್ಷಣ ಭ್ರಮೆ (Fantasy) ಯನ್ನು ಈ ಕಿರು ಕಾದಂಬರಿಯಲ್ಲಿ ಸೃಷ್ಟಿಸಿದ್ದಾರೆ. ಅದ್ಭುತಗಳ ನಾಡಾದ ಭಾರತವೆಂಬ ಕೂಟ ಪ್ರಶ್ನೆಯೊಂದಿಗೆ ವಾರೆನ್ ಹೇಸ್ಟಿಂಗ್ಸ್ನ ಒಡನಾಟ ಹಾಸ್ಯಾಸ್ಪದವೂ ಅಸಮಂಜಸವೂ ಆಗಿದೆ. ತನ್ನ ಸುತ್ತಲಿನ ಎಲ್ಲದರೊಂದಿಗೆ ಅವನ ನಡವಳಿಕೆ ಸಂವೇದನಾರಹಿತವಾಗಿದೆ; ಇದರಲ್ಲಿ ಆಳ ತಿಳುವಳಿಕೆ ಯಾಗಲೀ, ಒಳನಾಡಿ ಅರಿವಾಗಲೀ ಇಲ್ಲ, ಹಾಗಾಗಿ ಸತ್ವವೂ ಇಲ್ಲ. 'ವಾರೆನ್ ಹೇಸ್ಟಿಂಗ್ಸ್ನ ಹೋರಿ' ಇಂದು ನಮ್ಮ ಸುತ್ತ ನಡೆಯುತ್ತಿರುವ ಜಾಗತಿಕ ವಿದ್ಯಮಾನಗಳತ್ತ ನಮ್ಮನ್ನ ಕೊಂಡೊಯ್ಯುತ್ತದೆ. ಇಂದು ಭೋಗಲೋಲುಪತೆ ಮತ್ತು ಅಧಿಕಾರದಾಹ ವಿಕೃತಿಯ ರೂಪತಳೆದಿವೆ. ನಿಲ್ಲಪ್ತತೆ- ಸಂವೇದನಾರಾಹಿತ್ಯಗಳ ನಡುವೆಯೂ ಕೆಲವು ಜೀವಿಗಳು. ಕೆಲವು ಚಳುವಳಿಗಳು ಹೋರಿಯ ಕೋಡು ಹಿಡಿದು ಮಣಿಸುವ, ಜಗತ್ತಿನ ಗಡ್ಡಹಿಡಿದು ಜಗ್ಗುವ ಧೈರ್ಯ ಹೊಂದಿವೆ. ವಿನಾಶದ ಅಂಚಿನಲ್ಲಿರುವ ತಳಿಯೊಂದಕ್ಕೆ ಕೊಟ್ಟ ಪ್ರಶಸ್ತಿಯಂತಿದೆ ಈ ಕಾದಂಬರಿ, ಡಾ. ಪ್ರಕಾಶ್ ಗರುಡರ ಭಾವಾನುವಾದ ಮೂಲದೊಂದಿಗೆ ಅನುಸಂಧಾನ ಮಾಡುತ್ತಲೇ ತಿಳಿಗನ್ನಡದಲ್ಲಿ ಚೊಕ್ಕವಾಗಿ ಹರಿದು ಬಂದಿದೆ. ಪ್ರೊ. ಎಚ್.ಆರ್. ಅಮರನಾಥ
nil
#
ವಿಮರ್ಶಾ ವಿವೇಕ ಇಲ್ಲದ ಬರಹಗಾರ ಅತ್ಯುತ್ತಮ ಸಾಹಿತ್ಯ ಸೃಚಿಸಲಾರ. ಕನ್ನಡದ ಯಾವುದೇ ಅತ್ಯುತ್ತಮ ಕವಿ ಅಥವಾ ಕಥೆಗಾರನ ಉದಾಹರಣೆ ತೆಗೆದುಕೊಂಡರೂ, ಅದರೊಳಗೊಬ್ಬ ಸಹೃದಯಿ ವಿಮರ್ಶಕ ಇಣುಕುತ್ತಿರುತ್ತಾನೆ. ಅತ್ಯುತ್ತಮ ಲೇಖಕ ಒಳ್ಳೆಯ ವಿಮರ್ಶಕನೂ ಮೀಮಾಂಸಕನೂ ಆಗಿರುವ ವಿರಳ ಉದಾಹರಣೆಗಳ ಸಾಲಿಗೆ ಸೇರುವಂತಿದೆ 'ವಾಸ್ತವ ಪ್ರತಿವಾಸ್ತವ' ಕೃತಿ ಕಥೆ, ಕವಿತೆ, ಪ್ರಬಂಧಗಳಿಂದ ಕನ್ನಡ ಸಾಹಿತ್ಯದ ದಿಗಂತಗಳನ್ನು ವಿಸ್ತರಿಸುತ್ತಲೇ ಇರುವ ಎಸ್. ದಿವಾಕರ್ ಅವರ ಈ ಕೃತಿ, ಓದಿನ ಹೊಳಯಗಳನ್ನು ಸಹೃದಯರೊಂದಿಗೆ ಹಂಚಿಕೊಳ್ಳುವ ಸೃಜನಶೀಲ ಬರಹಗಾರನೊಬ್ಬನ ಮಹತ್ವಾಕಾಂಕ್ಷೆಯ ಅಭಿವ್ಯಕ್ತಿಯಂತಿದೆ. ಒಂದು ಒಳ್ಳೆಯ ಸಾಹಿತ್ಯ ಕೃತಿ ಅಥವಾ ಕಲಾಕೃತಿಯನ್ನು ಹೇಗೆ ನೋಡಬೇಕು ಎನ್ನುವ ಅರಿವನ್ನು ಸಹೃದಯರಲ್ಲಿ ಉದ್ದೀಪಿಸುವ ಬರಹಗಳಿವು, ದಿವಾಕರ್ ಅವರು ತಮ್ಮ ಬರಹಗಳಿಗೆ ಸಂಬಂಧಿಸಿದಂತೆ ಸಾಹಿತ್ಯ, ವಿಮರ್ಶೆ ಮತ್ತು ಸಂಸ್ಕೃತಿ ಎನ್ನುವ ವಿಶೇಷಣಗಳನ್ನು ಬಳಸಿದ್ದಾರಾದರೂ, 'ವಿಮರ್ಶೆ' ಅಥವಾ ಸಂಸ್ಕೃತಿ ಚಿಂತನೆ' ಎನ್ನುವಂಥ ಹಣೆಪಟ್ಟಿಗಳ ಚೌಕಟ್ಟಿಗೆ ನಿಲುಕದಿರುವುದು ದಿವಾಕರ್ ಬರಹಗಳ ಅನನ್ಯತೆ, ವಿಮರ್ಶೆಯ ಪಾರಿಭಾಷಿಕ ಚೌಕಟ್ಟು ಹಾಗೂ ಚಿಂತನೆಯ ಸೋಗಿನ ಗಾಂಭೀರ್ಯದಿಂದ ಮುಕ್ತವಾದ ಈ ಬರಹಗಳು ಸಾಹಿತ್ಯದ ಮೂಲಕ ಜೀವನಸೌಂದರ್ಯ ಕಾಣಬಯಸುವವರಿಗೆ ರಸದ ಒರತೆಗಳಂತಿದೆ; ಕನ್ನಡ ಹಾಗೂ ವಿಶ್ವಸಾಹಿತ್ಯದ ಅತ್ಯುತ್ತಮ ಕೃತಿ ಹಾಗೂ ಮನಸ್ಸುಗಳನ್ನು ಪರಿಚಯಿಸುತ್ತಿವೆ. ದಿವಾಕರ್ ಬರವಣಿಗೆಯ ವಿಶಿಷ್ಟ ಲಕ್ಷಣವಾದ ಹಾಗೂ ಅವರಿಗಷ್ಟೇ ಸಾಧ್ಯವಾದ ಪ್ರಯೋಗಶೀಲತೆ ಈ ಸಂಕಲನದ ಬರಹಗಳಲ್ಲೂ ಇದೆ. ಓದುಗರನ್ನು 'ಪುಸ್ತಕದ ಓಣಿ'ಗಳಲ್ಲಿ ಕೈ ಹಿಡಿದು ನಡೆಸುವಂತಿರುವ ಈ ಬರಹಗಳು. ಸಾಹಿತ್ಯಪ್ರವೇಶದ ಕಿಂಡಿಗಳನ್ನೂ ಕಂಡಿಗಳನ್ನೂ ಸಹೃದಯರಿಗೆ ಕರುಣಿಸುವಂತಿವೆ. ವಿಮರ್ಶೆ ಹಾಗೂ ಚಿಂತನೆ ವಿರಳವಾಗಿರುವ ದಿನಗಳಲ್ಲಿ ಎರಡಕ್ಕೂ ಘನತೆ ತಂದುಕೊಡುವ ಪ್ರಯತ್ನದ ರೂಪದಲ್ಲಿ ದಿವಾಕರ್ ಅವರ 'ವಾಸ್ತದ ಪ್ರತಿವಾಸ್ತವ' ಕೃತಿಗೆ ವಿಶೇಷ ಮಹತ್ವವಿದೆ. ರಘುನಾಥ ಚ.ಹ.
ಜಿ.ಎಸ್. ಆಮೂರ
ಚಂದ್ರಶೇಖರ ಪಾಟೀಲ
ಕು ಮಂಜುನಾಥ್
ಎ ಬಾಲರಾಜು
ಡಾ ಗೌತಮ್
Chiguru Publications
Showing 2611 to 2640 of 3309 results