• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ರಜತನಂದನ

nil

₹160   ₹142

Buy Now
ರಹಸ್ಯ ಕೂಟ | Rahasya Koota

ನಗರದಲ್ಲಿ ನಡೆಯುವ ಅನೇಕ ರೀತಿಯ ಮೋಸಗಳು, ದರೋಡೆ, ಸುಲಿಗೆ, ಕೊಲೆ, ಭಯೋತ್ಪಾದನೆ. ಇವನ್ನು ತಡೆಯಲು, ಜನಸಾಮಾನ್ಯರಿಗೆ ರಕ್ಷಣೆಕೊಡಲು, ಅವರಿಗೆ ಸತ್ಯ ತಿಳಿಸಲು ಅನೇಕ ಪ್ರಯತ್ನಗಳನ್ನು ಮಾಡುವಗುಟ್ಟಿನ ಗುಂಪು – ರಹಸ್ಯಕೂಟ. ಜನಸಾಮಾನ್ಯರು ಎದುರಿಸುವ ದೈನಂದಿನ ಅನೇಕ ಸಮಸ್ಯೆಗಳಿಗೆ ತಮ್ಮದೇಯಾದ ರೀತಿಯಲ್ಲಿ ಪರಿಹಾರ ನೀಡಲುಯತ್ನಿಸುವ ಕಾದಂಬರಿ

₹170   ₹151

Buy Now
ರಾಜಪಥ | rajapatha

ಸೋಲನ್ನು ಸೋಲಿಸಿ ಗೆಲ್ಲುವವರಿಗಾಗಿ... ಕನ್ನಡದ ಖ್ಯಾತ ಅಂಕಣಕಾರರು ಹಾಗು ಖ್ಯಾತ ವಾಗ್ಮಿಗಳು ಆಗಿರುವ ರಾಜೇಂದ್ರ ಭಟ್ ಕೆ ಅವರು ಬರೆದಿರುವ ಸ್ಫೂರ್ತಿದಾಯಕ ಅಂಕಣ ಬರಹಗಳಲ್ಲಿ ಆಯ್ದ ಕೆಲವು ಲೇಖನಗಳು ಈ ಪುಸ್ತಕದಲ್ಲಿವೆ. ಅವರ ಲೇಖನಗಳಲ್ಲಿ ಹೆಚ್ಚು ಸ್ಫೂರ್ತಿ ಮತ್ತು ಪ್ರೇರಣೆಗಳು ಇರುತ್ತವೆ ಎಂದು ಓದುಗರು ಈಗಾಗಲೇ ತುಂಬು ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. ಐದು ವರ್ಷಗಳಿಂದ ಒಂದು ದಿನವೂ ಬಿಡದೆ ಇಂತಹ ಅಂಕಣಗಳನ್ನು ಬರೆಯುವುದು ಸವಾಲಿನ ಕೆಲಸ. ಏಕತಾನತೆ ಬಾರದ ಹಾಗೆ ನೋಡಿಕೊಳ್ಳುವುದು. ಪ್ರತೀ ನಿತ್ಯವೂ ಹೊಸ ವೈವಿಧ್ಯಗಳಿಗೆ ತೆರೆದುಕೊಳ್ಳುವುದು ಸುಲಭವಲ್ಲ. ಅವರಿಗೆ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಗಣಿತ, ಸಂಗೀತ, ಕಲೆ, ಕ್ರಿಕೆಟ್, ಕ್ರೀಡೆ, ಸಿನೆಮಾ, ಆಧ್ಯಾತ್ಮ, ಸಂಶೋಧನೆ, ವಿಜ್ಞಾನ, ತಂತ್ರಜ್ಞಾನ ಎಲ್ಲ ವಿಭಾಗಗಳಲ್ಲಿಯೂ ಆಸಕ್ತಿ ಮತ್ತು ಅಧ್ಯಯನಗಳು ಇರುವ ಕಾರಣ ಈ ಸರಣಿ ಬರವಣಿಗೆಯು ಅವರಿಗೆ ಸಾಧ್ಯವಾಗಿದೆ. ಅವರು ಲೇಖನದಲ್ಲಿ ಇರುವ ಭಾವನಾತ್ಮಕ ಮತ್ತು ಸೃಜನಾತ್ಮಕ ಸಾಲುಗಳು ನಿಮ್ಮನ್ನು ಪುಸ್ತಕ ಕೆಳಗಿಡಲು ಬಿಡದೆ ಸರಾಗವಾಗಿ ಓದಿಸಿಕೊಂಡು ಹೋಗುವುದು. ಬಹು ಬೇಡಿಕೆಯ ಭಾಷಣಕಾರರು ಮತ್ತು ವಿಕಸನ ತರಬೇತುದಾರರೂ ಆಗಿರುವ ರಾಜೇಂದ್ರ ಭಟ್ಟರ ದಶಕಗಳ ಓದು ಮತ್ತು ಅನುಭವ ಇಲ್ಲಿ ಹೆಪ್ಪುಗಟ್ಟಿ ಗೆಲುವಿನ 'ರಾಜಪಥ'ವನ್ನೇ ನಿರ್ಮಿಸಿದೆ. ಲೆಜೆಂಡ್ ವ್ಯಕ್ತಿಗಳ ಬದುಕಿನಲ್ಲಿ ನಡೆದ ಸ್ಫೂರ್ತಿದಾಯಕವಾದ ಅಂಶಗಳು, ಅವರ ಬದುಕಲ್ಲಿ ಮೂಡಿದ್ದ ಮಹತ್ವದ ತಿರುವುಗಳು, ಗೆಲುವಿಗೆ ಕಾರಣವಾದ ಅಂಶಗಳು, ಬದುಕಿನಲ್ಲಿ ಸೋಲುಗಳನ್ನು ಅವರು ಗೆದ್ದ ರೀತಿ, ಅವರಿಗೆ ದೊರೆತ ಉಡ್ಡಯನ ವೇದಿಕೆಗಳು, ಸಾಧಕರ ಬದ್ದತೆ... ಇವೆಲ್ಲವೂ ನಮಗೆ ಲೇಖಕರ ಸುಂದರ ಬರವಣಿಗೆಯ ಮೂಲಕ ಕಣ್ಣಿಗೆ ಕಟ್ಟುತ್ತವೆ. ಆಡಂಬರ ಉಪಮೆಗಳ ಗೊಡವೆಯಿಲ್ಲದೆ ಸುಲಭವಾಗಿ ಓದಿಸಿಕೊಂಡು ಹೋಗುವ ಶಕ್ತಿಯು ಈ ಲೇಖನಗಳಿಗಿವೆ. ರಾಜಪಥವು ರಾಜೇಂದ್ರ ಭಟ್ಟರ ಟ್ರೆಂಡ್ ಸೆಟ್ಟಿಂಗ್ ಅಂಕಣ ಲೇಖನಗಳಿಂದ ಸಿಂಗಾರವಾಗಿದೆ. ಎಡೆಬಿಡದೆ ಪ್ರತಿನಿತ್ಯವೂ ಅಂಕಣ ಬರಹಗಳ, ಸ್ಫೂರ್ತಿ ಮಾತುಗಳ ಮೂಲಕ ಗೆಲುವಿನ ರಹದಾರಿಯನ್ನೇ ನಿರ್ಮಿಸಿಕೊಡುವ ಶ್ರೀಯುತರ ಸಾಹಿತ್ಯ ಸೇವೆ ಹೀಗೆ ನಿರಂತರವಾಗಿ ಸಾಗಲಿ....

₹180   ₹144

Buy Now
ರಾಜಮಾತೆ ಕೆಂಪನಂಜಮ್ಮಣ್ಣಿ : ಕಾದಂಬರಿ | Rajamate Kempananjammanni

28.9.2024 ರಂದು ಪುಸ್ತಕ ಬಿಡುಗಡೆ ಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ರಾಣಿಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದುವಕ್ಕೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ. *-ಡಾ| ಕೆ.ಎನ್. ಗಣೇಶಯ್ಯ

₹495   ₹441

Buy Now