28.9.2024 ರಂದು ಪುಸ್ತಕ ಬಿಡುಗಡೆ ಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ರಾಣಿಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದುವಕ್ಕೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ. *-ಡಾ| ಕೆ.ಎನ್. ಗಣೇಶಯ್ಯ
nil
#
ಭಾರತದ ಮಾತ್ರವಲ್ಲ ಜಗತ್ತಿನ ಎರಡು ಶ್ರೇಷ್ಠ ಮಹಾಕಾವ್ಯಗಳು ಎಂದರೆ ಅವು ʻರಾಮಾಯಣʼ ಮತ್ತು ʻಮಹಾಭಾರತʼ. ಈ ಎರಡೂ ಕಾವ್ಯಗಳನ್ನು ಮುಖಾಮುಖಿಯಾಗಿಸಿ ಅವುಗಳಲ್ಲಿನ ಸಮಾನ ಅಂಶಗಳನ್ನು ಕುರಿತು ಬರೆದ ಏಕೈಕ ಕೃತಿ ಇದು. ಆಸೆಯ ಕೇಡನ್ನು ಶೋಧಿಸುವ ʻರಾಮಾಯಣʼ ಮತ್ತು ಸೇಡಿನ ಅಥವಾ ದ್ವೇಷದ ಕೇಡನ್ನು ತೆರೆದು ಇಡುವ ʻಮಹಾಭಾರತʼ ಕೃತಿಗಳನ್ನು ದೇವದತ್ತ ಪಟ್ಟನಾಯಕರು ಅರ್ಥೈಸಿದ ರೀತಿ ಗಹನವಾಗಿದೆ, ಅನ್ಯಾದೃಶವಾಗಿದೆ. ಈ ಮಹತ್ವದ ಕೃತಿಯನ್ನು ಪದ್ಮರಾಜ ದಂಡಾವತಿಯವರು ಅಷ್ಟೇ ತನ್ಮಯತೆಯಿಂದ ಕನ್ನಡಕ್ಕೆ ತಂದಿದ್ದಾರೆ.
NA
ವಸ್ತ್ರವಿನ್ಯಾಸ, ರುಚಿಕಟ್ಟಾದ ಅಡುಗೆಯೂ ಸೇರಿದಂತೆ ದಶಾವತಾರಗಳಲ್ಲಿ ಮುಖ್ಯವಾಗಿ ಅಭಿನೇತ್ರಿಯಾಗಿರುವ ಅಕ್ಷತಾ, ಏನೇ ಮಾಡಿದರೂ ಅಲ್ಲಿ ತಮ್ಮ ಅಭಿವ್ಯಕ್ತಿಯನ್ನು ಸಂಪೂರ್ಣವಾಗಿ ದಾಖಲಿಸುತ್ತಾರೆ. ಇವರ ಬರಹಗಳು ಕೂಡ ಇದರದ್ದೇ ಒಂದು ವಿಸ್ತರಣೆ. ಹಿಂದೆ ಲೀಕ್ ಔಟ್ ಕತೆಗಳನ್ನು ಪ್ರಕಟಿಸಿ, ಅವನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಜನ - ನಾಟಕವನ್ನಾಗಿಸಿ ಯಶಸ್ವಿಯಾಗಿದ್ದರು ಅಕ್ಷತಾ. ಏನೇ ಮಾಡಿದರೂ ಜನರನ್ನು ಒಳಗೊಳಿಸಿಕೊಂಡೇ ಮಾಡುವ ಇವರ ಅಡುಗೆ ಮಾತು ಪ್ರಯೋಗವೂ ಅಷ್ಟೇ ವಿಭಿನ್ನ. ಇವರ 'ರುಚಿಗೆ ತಕ್ಕಷ್ಟು' ಕತೆಗಳು ಮುಂದೆ ಇಂಥದೇನೋ ಟ್ವಿಸ್ಟ್ ಕೊಡುವ ಸುಳಿವಿನೊಂದಿಗೇ ಹೆಣೆದುಕೊಂಡಂತೆ ತೋರುತ್ತವೆ.
Showing 2731 to 2760 of 3621 results