• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ವಸಂತ ಗಾನ

nil

₹140   ₹125

Buy Now
ವಸಾಹತುಶಾಹಿ ಮೈಸೂರು ಸಂಸ್ಥಾನದ ಆರ್ಥಿಕ ಚರಿತ್ರೆ 1799 - 1947 | Vasaahatushaahi Mysore Samsthaanada Aarthika Charitre

ವಸಾಹತುಪೂರ್ವ ಮತ್ತು ವಸಾಹತುಕಾಲೀನ ಭಾರತದ ಸಂದರ್ಭದಲ್ಲಿ ಆರ್ಥಿಕತೆಯ ಜೀವನಾಡಿಯಾಗಿದ್ದುದು ಕೃಷಿ ಮತ್ತು ಅದಕ್ಕೆ ಪೂರಕವಾಗಿದ್ದ ಕೈಗಾರಿಕೆಗಳ ವ್ಯವಸ್ಥೆಯೇ ಆಗಿದ್ದರೂ ಕರ್ನಾಟಕಕ್ಕೆ ಸಂಬಂಧಿಸಿ ಆ ಕುರಿತ ಅಧ್ಯಯನಗಳು ನಡೆದದ್ದು ಕಡಿಮೆಯೇ. ಈ ದೃಷ್ಟಿಯಿಂದ ಗೆಳೆಯ ಸಿದ್ದಲಿಂಗಸ್ವಾಮಿಯವರ ''ವಸಾಹತುಶಾಹಿ ಮೈಸೂರು ಸಂಸ್ಥಾನದ ಆರ್ಥಿಕ ಚರಿತ್ರೆ'' ಎಂಬ ಈ ಕೃತಿ ಸ್ವಾಗತಾರ್ಹವಾದುದು. 19ನೆಯ ಶತಮಾನಾರಂಭದಿಂದ ಹಿಡಿದು 20ನೇ ಶತಮಾನದ ಪೂರ್ವಾರ್ಧದ ವರೆಗಿನ ಅವಧಿಯ ಕರ್ನಾಟಕದ ಕೃಷಿ, ಕೃಷಿ ವ್ಯವಸ್ಥೆ, ಭೂ ಹಿಡುವಳಿ, ಭೂಕಂದಾಯ ವ್ಯವಸ್ಥೆಗಳು, ಔದ್ಯಮೀಕರಣ ಹಾಗೂ ನಗರೀಕರಣಗಳ ಪ್ರಕ್ರಿಯೆಯಲ್ಲಿ ಉಂಟಾದ ಕೃಷಿಯ ವಾಣಿಜೀಕರಣದಿಂದ ಉಂಟಾದ ಸ್ಥಿತ್ಯಂತರಗಳೇ ಮೊದಲಾದ ವಿಷಯಗಳನ್ನು ಸಿದ್ದಲಿಂಗಸ್ವಾಮಿಯವರು ವಿಮರ್ಶಾತ್ಮಕವಾಗಿ ಪರಿಶೀಲಿಸಿದ್ದಾರೆ.

₹280   ₹249

Buy Now
ವಸುಂಧರ

nil

₹90   ₹80

Buy Now
ವಾಬಿ ಸಾಬಿ | Wabi Sabi Kannada

ವಾಬಿ ಸಾಬಿ – ಅಪರಿಪೂರ್ಣತೆಯಲ್ಲಿನ ವಿವೇಕ ನೀವು ಅದೆಷ್ಟು ಅತ್ಯುತ್ತಮ ಅಪರಿಪೂರ್ಣ ವ್ಯಕ್ತಿಯಾಗಬಲ್ಲಿರೋ, ಆಗಿರಿ! ಸರಳ ಹಾಗೂ ಸುಲಭಗ್ರಾಹ್ಯವಾದ ಶೈಲಿಯಲ್ಲಿ, ನಮ್ಮ ಅಪರಿಪೂರ್ಣತೆ ಮತ್ತು ಅಶಾಶ್ವತತೆಯನ್ನು ಅಪ್ಪಿಕೊಳ್ಳುವುದರಿಂದ ಅದು ನಮ್ಮನ್ನು ನಾವು ಉತ್ತಮಗೊಳಿಸಿಕೊಳ್ಳಲು ಹೇಗೆ ಮುಕ್ತವಾಗಿರಿಸುತ್ತದೆ, ಹಾಗೂ ‘ಉತ್ತಮಗೊಳ್ಳುವುದು’ ಎಂಬ ಪದದ ಅರ್ಥವನ್ನು ಅದು ಹೇಗೆ ಒಂದು ರೀತಿ ಮೌಲ್ಯೀಕರಿಸುತ್ತದೆ, ಹಾಗೆ ನೋಡಿದರೆ ನಿಜಕ್ಕೂ ಅದೇ ಲೆಕ್ಕಕ್ಕೇ ಬರುವಂತಹದ್ದು, ಮತ್ತು ಅದನ್ನೇ ನಾವು ನಿಜಕ್ಕೂ ಬಯಸಿರುವುದು ಎಂಬುದನ್ನು ‘ವಾಬಿ ಸಾಬಿ’ ತೋರಿಸುತ್ತದೆ. ನೀವು ಮತ್ತು ನಿಮ್ಮ ಅಪರಿಪೂರ್ಣ ಜೀವನ ಇವೆರಡೂ ಕೂಡ, ನೀವು ಅವನ್ನು ಹೇಗೆಂದು ತಿಳಿದುಕೊಂಡಿದ್ದಿರೋ ಅವಕ್ಕಿಂತ ಬಹಳ ಬಹಳ ಉತ್ತಮವಾಗಿವೆ ಎಂದು ಆವಿಷ್ಕಾರ ಮಾಡಲು ಈ ಪುಸ್ತಕ ನಿಮಗೆ ಸಹಾಯ ಮಾಡಬಲ್ಲದ್ದು, ಹಾಗೂ ನಿಮ್ಮ ಪಾಲಿಗೆ ಬಂದುದ್ದನ್ನು ಸ್ವೀಕರಿಸಿ, ಬಾರದ್ದನ್ನು ಬಿಡುವುದಿದೆಯಲ್ಲ, ಅದು ನಿಮ್ಮನ್ನು ಅತ್ಯುತ್ತಮ ಮತ್ತು ಸಂತೋಷದಾಯಕವಾಗಿರುವ ನಿಮ್ಮತ್ತಲೇ ಕರೆದೊಯ್ಯಬಲ್ಲುದು.

₹180   ₹162

Buy Now
ವಾರೆನ್ ಬಫೆಟ್: ಹೂಡಿಕೆ ಮಾಂತ್ರಿಕನ ತಂತ್ರಗಳು | WARREN BUFFETT: Hoodike Maantrikana Tantragalu

ವಾರೆನ್ ಬಫೆಟ್ ವಿಶ್ವದ ಅತ್ಯಂತ ಶ್ರೀಮಂತ ಹೂಡಿಕೆದಾರರಲ್ಲಿ ಒಬ್ಬರು. ಲಕ್ಷಾಂತರ ಸ್ವತಂತ್ರ ಹೂಡಿಕೆದಾರರು ಅವರ ಪ್ರತಿಯೊಂದು ನಡೆಯನ್ನೂ ಅನುಸರಿಸುತ್ತಾರೆ. ಆದರೆ ಬಫೆಟ್ ಅವರೇ ಏಕೆ? ಹೂಡಿಕೆ ಮತ್ತು ಆರ್ಥಿಕ ಯಶಸ್ಸಿನ ಬಫೆಟ್‌ನ ಹಾದಿಯನ್ನು ಅನುಸರಿಸಲು ಹೂಡಿಕೆದಾರರು ಏನು ಮಾಡಬಹುದು? ಬಫೆಟ್ ಅವರು ಹೇಗೆ ಹೂಡಿಕೆ ಮಾಡುತ್ತಾರೆ? ಅವರ ಯಶಸ್ಸಿನ ತಂತ್ರಗಳೇನು? ವಾರೆನ್ ಬಫೆಟ್ ಅವರ ವಿಧಾನವು ಮೌಲ್ಯ ಹೂಡಿಕೆಯ ಮೇಲೆ ಕೇಂದ್ರೀಕರಿಸುತ್ತದೆ – ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಷೇರುಗಳನ್ನು ಖರೀದಿಸುವುದು ಮತ್ತು ಅವುಗಳನ್ನು ದೀರ್ಘಕಾಲೀನವಾಗಿ ಹಿಡಿದಿಟ್ಟುಕೊಳ್ಳುವುದು. ಅವರು ಊಹಾಪೋಹಗಳಿಗಿಂತ ಸರಳತೆ, ತಾಳ್ಮೆ ಮತ್ತು ತಾರ್ಕಿಕ ಚಿಂತನೆಗೆ ಒತ್ತು ನೀಡುತ್ತಾರೆ. ಈ ಪುಸ್ತಕದಲ್ಲಿ ಅವರ ಹೂಡಿಕೆಯ ಮೂಲಭೂತ ಅಂಶಗಳನ್ನು ಸೇರಿಸಿ ನೀಡಲಾಗಿದೆ. ಹೊಸದಾಗಿ ಮಾರುಕಟ್ಟೆಯನ್ನು ಪ್ರವೇಶಿಸುತ್ತಿರುವವರಿಂದ ಹಿಡಿದು, ಅನುಭವಿ ಹೂಡಿಕೆದಾರರು ಈ ಪುಸ್ತಕದಲ್ಲಿನ ಅಂಶಗಳನ್ನು ಅಳವಡಿಸಿಕೊಂಡು ಲಾಭ ಗಳಿಸಬಹುದು. ಶುಭ ಲಾಭವಾಗಲಿ! - ಚಂದ್ರಶೇಖರ ಮದಭಾವಿ

₹200   ₹178

Buy Now
ವಾರೆನ್ ಹೇಸ್ಟಿಂಗ್ಸ್‌ನ ಹೋರಿ | Warren hasting's Hori

ಇದು, ಹಿಂದಿಯ ಧೀಮಂತ ಲೇಖಕ ಶ್ರೀ ಉದಯ ಪ್ರಕಾಶ್‌ರ 'ವಾರೆನ್ ಹೇಸ್ಟಿಂಗ್ಸ್ ಕಾ ಸಾಂಡ್" ಎಂಬ ಕಿರು ಕಾದಂಬರಿಯ ಭಾವಾನುವಾದ. ಈ ಸಮಾಜೋ- ಆರ್ಥಿಕ ರಾಜಕೀಯ ಕಟಕಿಯಲ್ಲಿ ವಾರೆನ್ ಹೇಸ್ಟಿಂಗ್ಸ್ ಮತ್ತು ಅವನ ಹೋರಿ ರೂಪಕಗಳಾಗಿ ಬಳಸಲ್ಪಟ್ಟಿವೆ. ಉದಯ ಪ್ರಕಾಶರು ಒಂದು ವಿಲಕ್ಷಣ ಭ್ರಮೆ (Fantasy) ಯನ್ನು ಈ ಕಿರು ಕಾದಂಬರಿಯಲ್ಲಿ ಸೃಷ್ಟಿಸಿದ್ದಾರೆ. ಅದ್ಭುತಗಳ ನಾಡಾದ ಭಾರತವೆಂಬ ಕೂಟ ಪ್ರಶ್ನೆಯೊಂದಿಗೆ ವಾರೆನ್ ಹೇಸ್ಟಿಂಗ್ಸ್‌ನ ಒಡನಾಟ ಹಾಸ್ಯಾಸ್ಪದವೂ ಅಸಮಂಜಸವೂ ಆಗಿದೆ. ತನ್ನ ಸುತ್ತಲಿನ ಎಲ್ಲದರೊಂದಿಗೆ ಅವನ ನಡವಳಿಕೆ ಸಂವೇದನಾರಹಿತವಾಗಿದೆ; ಇದರಲ್ಲಿ ಆಳ ತಿಳುವಳಿಕೆ ಯಾಗಲೀ, ಒಳನಾಡಿ ಅರಿವಾಗಲೀ ಇಲ್ಲ, ಹಾಗಾಗಿ ಸತ್ವವೂ ಇಲ್ಲ. 'ವಾರೆನ್ ಹೇಸ್ಟಿಂಗ್ಸ್‌ನ ಹೋರಿ' ಇಂದು ನಮ್ಮ ಸುತ್ತ ನಡೆಯುತ್ತಿರುವ ಜಾಗತಿಕ ವಿದ್ಯಮಾನಗಳತ್ತ ನಮ್ಮನ್ನ ಕೊಂಡೊಯ್ಯುತ್ತದೆ. ಇಂದು ಭೋಗಲೋಲುಪತೆ ಮತ್ತು ಅಧಿಕಾರದಾಹ ವಿಕೃತಿಯ ರೂಪತಳೆದಿವೆ. ನಿಲ್ಲಪ್ತತೆ- ಸಂವೇದನಾರಾಹಿತ್ಯಗಳ ನಡುವೆಯೂ ಕೆಲವು ಜೀವಿಗಳು. ಕೆಲವು ಚಳುವಳಿಗಳು ಹೋರಿಯ ಕೋಡು ಹಿಡಿದು ಮಣಿಸುವ, ಜಗತ್ತಿನ ಗಡ್ಡಹಿಡಿದು ಜಗ್ಗುವ ಧೈರ್ಯ ಹೊಂದಿವೆ. ವಿನಾಶದ ಅಂಚಿನಲ್ಲಿರುವ ತಳಿಯೊಂದಕ್ಕೆ ಕೊಟ್ಟ ಪ್ರಶಸ್ತಿಯಂತಿದೆ ಈ ಕಾದಂಬರಿ, ಡಾ. ಪ್ರಕಾಶ್ ಗರುಡರ ಭಾವಾನುವಾದ ಮೂಲದೊಂದಿಗೆ ಅನುಸಂಧಾನ ಮಾಡುತ್ತಲೇ ತಿಳಿಗನ್ನಡದಲ್ಲಿ ಚೊಕ್ಕವಾಗಿ ಹರಿದು ಬಂದಿದೆ. ಪ್ರೊ. ಎಚ್.ಆರ್. ಅಮರನಾಥ

₹130   ₹116

Buy Now
ವಾಸ್ತವ ಪ್ರತಿವಾಸ್ತವ | Vastava Prativastava

ವಿಮರ್ಶಾ ವಿವೇಕ ಇಲ್ಲದ ಬರಹಗಾರ ಅತ್ಯುತ್ತಮ ಸಾಹಿತ್ಯ ಸೃಚಿಸಲಾರ. ಕನ್ನಡದ ಯಾವುದೇ ಅತ್ಯುತ್ತಮ ಕವಿ ಅಥವಾ ಕಥೆಗಾರನ ಉದಾಹರಣೆ ತೆಗೆದುಕೊಂಡರೂ, ಅದರೊಳಗೊಬ್ಬ ಸಹೃದಯಿ ವಿಮರ್ಶಕ ಇಣುಕುತ್ತಿರುತ್ತಾನೆ. ಅತ್ಯುತ್ತಮ ಲೇಖಕ ಒಳ್ಳೆಯ ವಿಮರ್ಶಕನೂ ಮೀಮಾಂಸಕನೂ ಆಗಿರುವ ವಿರಳ ಉದಾಹರಣೆಗಳ ಸಾಲಿಗೆ ಸೇರುವಂತಿದೆ 'ವಾಸ್ತವ ಪ್ರತಿವಾಸ್ತವ' ಕೃತಿ ಕಥೆ, ಕವಿತೆ, ಪ್ರಬಂಧಗಳಿಂದ ಕನ್ನಡ ಸಾಹಿತ್ಯದ ದಿಗಂತಗಳನ್ನು ವಿಸ್ತರಿಸುತ್ತಲೇ ಇರುವ ಎಸ್. ದಿವಾಕರ್ ಅವರ ಈ ಕೃತಿ, ಓದಿನ ಹೊಳಯಗಳನ್ನು ಸಹೃದಯರೊಂದಿಗೆ ಹಂಚಿಕೊಳ್ಳುವ ಸೃಜನಶೀಲ ಬರಹಗಾರನೊಬ್ಬನ ಮಹತ್ವಾಕಾಂಕ್ಷೆಯ ಅಭಿವ್ಯಕ್ತಿಯಂತಿದೆ. ಒಂದು ಒಳ್ಳೆಯ ಸಾಹಿತ್ಯ ಕೃತಿ ಅಥವಾ ಕಲಾಕೃತಿಯನ್ನು ಹೇಗೆ ನೋಡಬೇಕು ಎನ್ನುವ ಅರಿವನ್ನು ಸಹೃದಯರಲ್ಲಿ ಉದ್ದೀಪಿಸುವ ಬರಹಗಳಿವು, ದಿವಾಕರ್ ಅವರು ತಮ್ಮ ಬರಹಗಳಿಗೆ ಸಂಬಂಧಿಸಿದಂತೆ ಸಾಹಿತ್ಯ, ವಿಮರ್ಶೆ ಮತ್ತು ಸಂಸ್ಕೃತಿ ಎನ್ನುವ ವಿಶೇಷಣಗಳನ್ನು ಬಳಸಿದ್ದಾರಾದರೂ, 'ವಿಮರ್ಶೆ' ಅಥವಾ ಸಂಸ್ಕೃತಿ ಚಿಂತನೆ' ಎನ್ನುವಂಥ ಹಣೆಪಟ್ಟಿಗಳ ಚೌಕಟ್ಟಿಗೆ ನಿಲುಕದಿರುವುದು ದಿವಾಕರ್ ಬರಹಗಳ ಅನನ್ಯತೆ, ವಿಮರ್ಶೆಯ ಪಾರಿಭಾಷಿಕ ಚೌಕಟ್ಟು ಹಾಗೂ ಚಿಂತನೆಯ ಸೋಗಿನ ಗಾಂಭೀರ್ಯದಿಂದ ಮುಕ್ತವಾದ ಈ ಬರಹಗಳು ಸಾಹಿತ್ಯದ ಮೂಲಕ ಜೀವನಸೌಂದರ್ಯ ಕಾಣಬಯಸುವವರಿಗೆ ರಸದ ಒರತೆಗಳಂತಿದೆ; ಕನ್ನಡ ಹಾಗೂ ವಿಶ್ವಸಾಹಿತ್ಯದ ಅತ್ಯುತ್ತಮ ಕೃತಿ ಹಾಗೂ ಮನಸ್ಸುಗಳನ್ನು ಪರಿಚಯಿಸುತ್ತಿವೆ. ದಿವಾಕರ್ ಬರವಣಿಗೆಯ ವಿಶಿಷ್ಟ ಲಕ್ಷಣವಾದ ಹಾಗೂ ಅವರಿಗಷ್ಟೇ ಸಾಧ್ಯವಾದ ಪ್ರಯೋಗಶೀಲತೆ ಈ ಸಂಕಲನದ ಬರಹಗಳಲ್ಲೂ ಇದೆ. ಓದುಗರನ್ನು 'ಪುಸ್ತಕದ ಓಣಿ'ಗಳಲ್ಲಿ ಕೈ ಹಿಡಿದು ನಡೆಸುವಂತಿರುವ ಈ ಬರಹಗಳು. ಸಾಹಿತ್ಯಪ್ರವೇಶದ ಕಿಂಡಿಗಳನ್ನೂ ಕಂಡಿಗಳನ್ನೂ ಸಹೃದಯರಿಗೆ ಕರುಣಿಸುವಂತಿವೆ. ವಿಮರ್ಶೆ ಹಾಗೂ ಚಿಂತನೆ ವಿರಳವಾಗಿರುವ ದಿನಗಳಲ್ಲಿ ಎರಡಕ್ಕೂ ಘನತೆ ತಂದುಕೊಡುವ ಪ್ರಯತ್ನದ ರೂಪದಲ್ಲಿ ದಿವಾಕರ್ ಅವರ 'ವಾಸ್ತದ ಪ್ರತಿವಾಸ್ತವ' ಕೃತಿಗೆ ವಿಶೇಷ ಮಹತ್ವವಿದೆ. ರಘುನಾಥ ಚ.ಹ.

₹375   ₹319

Buy Now