• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಹಕ್ಕಿ ಅಟೆಂಡೆನ್ಸ್ ಇಬುಕ್ | Hakki Attendence Ebook

ಬರ್ಡ್ ವಾಚಿಂಗ್ ಅನ್ನೋದು ತುಂಬಾ ತಾಳ್ಮೆ ಬೇಡುವ ಕೆಲಸ. ಅಂಥಹ ತಾಳ್ಮೆಯನ್ನು ಇಡೀ ಪುಸ್ತಕದುದ್ದಕ್ಕೂ ಸೆರೆಹಿಡಿದಿರುವ ಹಕ್ಕಿಗಳ

₹595   ₹298

Buy Now
ಹಕ್ಕಿ ಮತ್ತು ಹುಡುಗಿ | Hakki Mattu Hudugi

ವೀರಲೋಕ ಮತ್ತು ಪ್ರಜಾವಾಣಿ ಸಹೋಯೋಗದ ಈ ʼಕಾವ್ಯಸಂಕ್ರಾಂತಿ ಸ್ಪರ್ಧೆʼಗೆ ಬಂದಿದ್ದ ಸಾವಿರಾರು ಕವಿತೆಗಳಲ್ಲಿ ಈ ಆಯ್ದ 50 ಕವಿತೆಗಳು ನಮ್ಮ ಮುಂದೆ ಇದ್ದವು. ಈ ಸಂಕಲನದ ಪ್ರತಿ ಕವಿತೆಯೂ ಓದಿದಾಗ ವಿಶೇಷ ಅನಿಸಿದೆ. ಅಂತಿಮವಾಗಿ ಆರು ಕವಿತೆಗಳನ್ನು ಆಯ್ಕೆ ಮಾಡುವುದು ನಿಜವಾಗಿಯೂ ಸವಾಲಿನದ್ದಾಗಿತ್ತು. ಯಾವುದೇ ಕವಿಯನ್ನು ತೂಕ ಮಾಡಲು ಸಾಧ್ಯವಿಲ್ಲ. -ಎಚ್‌.ಎಸ್‌.ವೆಂಕಟೇಶಮೂರ್ತಿ, ತೀರ್ಪುಗಾರರು

₹150   ₹113

Buy Now
ಹನ್ನೊಂದೂ ಮತ್ತೊಂದು ಕತೆಗಳು | Hannondu Mattondu kategalu

ತನಗೆ ತಾನು ಬಹುತೇಕ ಅನುಕೂಲ ಕಲ್ಪಿಸಿಕೊಳ್ಳಲಿಕ್ಕಾಗಿ ಲೋಕವು ತನ್ನದೇ ಕೆಲಪಾಲನ್ನು ಪ್ರತಿಕೂಲಕ್ಕೆಂದು ಮೀಸಲಿಡುತ್ತದೆ. ಇಲ್ಲಿರುವ ಕೆಲವೇ ಕೆಲಮಂದಿಯೂ ಹೀಗೇ.. ಬಹುತೇಕರಿಗೆ ಸ್ವರ್ಗ ದಕ್ಕಿಸಲೆಂದು ನರಕದಂತಹ ಕೋಟಲೆಯನ್ನೂ ಒಪ್ಪಿ ಅಪ್ಪಿಕೊಳ್ಳುತ್ತಾರೆ. -ಫೈರುಪೀಸ್ ಫೀಸ್ ಕತೆಯ ಮುಮ್ಮಾತು

₹395   ₹336

Buy Now
ಹಮ್ಮಾ ಹೂ ಇಬುಕ್ | HAMMA HOO Ebook

ತಾರಕ್ಕನನ್ನು ಮನೆಯ ಹೊರಕಟ್ಟೆಯಿಂದ ಹಿಡಿದು ಹಿತ್ತಲವರೆಗೂ ಹುಡುಕಿದ. ಎದೆಬಡಿತ ಹೆಚ್ಚಾಗುತ್ತಿದ್ದಂತೆ ಕಟ್ಟಕಡೆಯದಾಗಿ ದೇವರಮನೆಯ ಬಾಗಿಲು ದೂಡಿದ. ನಂದಾದೀಪದ ಬೆಳಕಲ್ಲಿ ತಾರಕ್ಕನ ಮುಖ ಕಂಡಿತು. ಸಮಾಧಾನಕ್ಕಿಂತ ಹೆಚ್ಚಾಗಿ ಅಚ್ಚರಿ ಆಯಿತು. ನಿಟ್ಟುಸಿರು ಬಿಟ್ಟ. ಮೊಣಕಾಲುಗಳ ಮೇಲೆ ಗದ್ದವನ್ನಿಟ್ಟುಕೊಂಡು ದೀಪವನ್ನೇ ದಿಟ್ಟಿಸುತ್ತಿದ್ದ ಆಕೆಯ ಕಣ್ಣುಗಳು, ಉನ್ನತ್ತ ಗಂಧರ್ವನೊಬ್ಬನ ಕೈಯಿಂದ ಜಾರಿಬಿದ್ದ ಕಪ್ಪು ದ್ರಾಕ್ಷಿಗಳನ್ನು ಹಿಡಿದಿಟ್ಟುಕೊಂಡು ಮತ್ತೆ ಅವನ ಬರುವಿಕೆಗಾಗಿ ಕಾಯುತ್ತಿವೆಯೇನೋ ಎಂಬಂತಿದ್ದವು. ಆ ನಿಶ್ಚಲ ಕಣ್ಣುಗಳನ್ನೇ ನೋಡುತ್ತ ಗೋಡೆಗಾತು ಕುಳಿತ. ಸ್ವಲ್ಪ ಹೊತ್ತಿನ ನಂತರ ತಾನೂ ಅದೇ ದೀಪ ನೋಡಹತ್ತಿದ. ತಾರಕ್ಕನ ಪ್ರಭೆಯೆದುರು ಅಲ್ಲಿದ್ದ ದೇವ-ದೇವತೆಯರು ತಮ್ಮ ಪ್ರಭಾವಳಿಗಳನ್ನು ಕಳೆದುಕೊಂಡು ಕೇವಲ ಪಟದಲ್ಲಿ ಲೋಹದಲ್ಲಿ ಮೂಡಿಸಿಕೊಂಡ ನಿರ್ಜೀವ ಆಕೃತಿಗಳಂತೆ ಕಂಡರು.

₹185   ₹93

Buy Now
ಹರಿವ ಕನ್ನಡಿ | Hariva Kannadi

ಖ್ಯಾತ ಕವಿಗಳಾದ ಜಯಂತ ಕಾಯ್ಕಿಣಿಯವರು ಹೇಳಿರುವಂತೆ ಬಿಟ್ಟುಬಿಡದೆ ಓದಿಸಿಕೊಳ್ಳುವ ಕಾಡುವ ಗುಣ ಇಲ್ಲಿನ ಕವಿತೆಗಳಿಗೆ ಇವೆ.

₹120   ₹90

Buy Now
ಹಂಸಾಕ್ಷರ | Hamsakshara

“ನೀನಾ ಭಗವಂತ” ಎನ್ನುತ್ತಾ ಕನ್ನಡ ಸಿನಿ ಸಾಹಿತ್ಯಕ್ಕೆ ಹಂಸಲೇಖ ಕಾಲಿಟ್ಟು ಐವತ್ತು ವರ್ಷಗಳಾಗಿ ಹೋದವು, ಈ ವರ್ಷ ಹಂಸಾಭಿಮಾನಿಗಳಿಗೆ ಡಬಲ್ ಖುಷಿ, ಒಂದು ಕಡೆ ಹಂಸಲೇಖ ಕನ್ನಡ ಸಿನಿ ಸಾಹಿತ್ಯಕ್ಕೆ ಪಾದಾರ್ಪಣೆ ಮಾಡಿ ಐದು ದಶಕಗಳಾದರೆ, ಮತ್ತೊಂದು ಕನ್ನಡ ಸಂಸ್ಕೃತಿಯ ಹಬ್ಬ ದಸರಾಗೆ ಚಾಲನೆ ನೀಡಿದ್ದು ಹಂಸಲೇಖಾರೇ. ಈ ಡಬಲ್ ಖುಷಿಯನ್ನ ತ್ರಿಬಲ್ ಖುಷಿಯಾಗಿಸಲು ಈ ಪುಸ್ತಕ ಸಣ್ಣ ನೆಪವಷ್ಟೇ.

₹160   ₹136

Buy Now
ಹಾಲಲ್ಲಿ ಕೆನೆಯಾಗಿ... | Haalalli Keneyaagi ...

ಜೀವನೋತ್ಸಾಹ ಮತ್ತು ವಿಷಾದ ಹಾಸುಹೊಕ್ಕಾಗಿರುವ ಸಂಗತಿಗಳನ್ನು ಬಿ.ಯು. ಗೀತಾ ಸೊಗಸಾಗಿ ಹಿಡಿದಿಡಬಲ್ಲ ಕಾದಂಬರಿಕಾರರು ಗೀತಾ ಸಂಭಾಷಣೆಯಲ್ಲೇ ಕತೆ ಕಟ್ಟುತ್ತಾ ಹೋಗುತ್ತಾರೆ. ಜೀವನಾನುಭವ, ಕಲ್ಪನೆ ಮತ್ತು ಬಾಲ್ಯದ ನೆನಪುಗಳೊಂದಿಗೆ ಬರೆಯುವ ಗೀತಾ ಸೃಷ್ಟಿಸುವ ಪಾತ್ರಗಳು ಕೂಡ ಬದುಕಿಗೆ ಅಂಟಿಕೊಂಡಂತೆ ಇರುತ್ತವೆ. ಹಾಲಲ್ಲಿ ಕೆನೆಯಾಗಿ ಕಾದಂಬರಿಯ ಶೀರ್ಷಿಕೆಯಲ್ಲೇ ಗೀತಾ ಅವರಿಗೆ ವಿಶಿಷ್ಟವಾದ ಸಂವೇದನೆ ಮತ್ತು ಕೌಟುಂಬಿಕ ಒಳನೋಟ ಕಾಣಿಸುತ್ತದೆ ಹಾಲಿನ ಕೆನೆಯಾಗಬೇಕಾದರೆ ಹಾಲು ಕುದಿಯಬೇಕು ನಂತರ ತಣಿಯಬೇಕು. ಹೆಣ್ಣಿನ ಬದುಕು ಕೂಡ ಇಂಥದ್ದೇ ಚಕ್ರದಲ್ಲಿ ಸಿಲುಕಿ ಅನುಭವಿಸುವ ಉದ್ದೇಗದ ಅಳಲು, ನಿರಾತಂಕದ ಹುಯಿಲು ಈ ಕತೆಯನ್ನು ಸುಪ್ತವಾಗಿ ಪೊರೆಯುತ್ತದೆ. ಕತೆ, ಕಾದಂಬರಿ, ಸಂಭಾಷಣೆ ಬರೆಯುತ್ತಾ ಬದುಕಿನ ರುಚಿ ಹೆಚ್ಚಿಸುವ ಸಂಗತಿಗಳ ಬಗ್ಗೆ ವಿಶೇಷ ಪ್ರೀತಿಯುಳ್ಳ ಗೀತಾ ಅವರ ಅನೇಕ ಕಾದಂಬರಿಗಳನ್ನು ನಾನು ಸ್ವಯಿಚ್ಛೆಯಿಂದ ಓದಿದ್ದೇವೆ. ಅವರು ಬರೆದ ಧಾರಾವಾಹಿಗಳನ್ನು ನೋಡಿದ್ದೇನೆ. ಅವರು ಅಭಿನಯ ಚತುರರೂ ಹೌದು. ಅವರ ಬಳಗ ಕೂಡ ದೊಡ್ಡದು. ಅವರ ಜೀವನಪ್ರೀತಿ, ಹುರುಪು ಮತ್ತು ಇಂಗಿತಜ್ಞತೆ ಅವರೊಳಗಿರುವ ಕಾದಂಬರಿಕಾರ್ತಿಯ ನೆರವಿಗೆ ಬಂದಿದೆ. ಹೀಗಾಗಿಯೇ ಸರಳವಾಗಿ ಸಾಗುವ ಕಾದಂಬರಿಗಳಲ್ಲೂ ಜೀವಕ್ಕೆ ಹತ್ತಿರವೆನಿಸುವ ಸನ್ನಿವೇಶ, ಮಾತು, ಅಂತರಾರ್ಥಗಳು ಮಿಂಚುವಂತೆ ಗೀತಾ ಬರೆಯುತ್ತಾರೆ. ಈ ಕಾದಂಬರಿಯಲ್ಲಿ ಅವರ ಬಾಲ್ಯ, ತಾರುಣ್ಯ ಮತ್ತು ನಡುವಯಸ್ಸಿನ ವಿವೇಕ ಬೆರೆತಿದೆ. ಹೀಗಾಗಿ ಇದು ಕೆನೆಗಟ್ಟಿದೆ. ಜೋಗಿ

₹240   ₹192

Buy Now
ಹಾವಿನ ಮನೆ | Havina Mane

ಹಣ ಯಾರಿಗೆ ತಾನೆ ಕಹಿ? ಅವನಿಗೊಂದು ದೊಡ್ಡ ಕನಸಿತ್ತು. ಸಮಾಜದಲ್ಲಿ ತಾನೂ ಒಬ್ಬ ಗಣ್ಯ ವ್ಯಕ್ತಿ ಅನಿಸಿಕೊಳ್ಳಬೇಕು, ಕೈ ತುಂಬಾ ಹಣ ಗಳಿಸಬೇಕೆನ್ನುವುದು.

₹250   ₹215

Buy Now
ಹಾವಿನ ಮನೆ ಇಬುಕ್ | Havina Mane Ebook

ಹಣ ಯಾರಿಗೆ ತಾನೆ ಕಹಿ? ಅವನಿಗೊಂದು ದೊಡ್ಡ ಕನಸಿತ್ತು. ಸಮಾಜದಲ್ಲಿ ತಾನೂ ಒಬ್ಬ ಗಣ್ಯ ವ್ಯಕ್ತಿ ಅನಿಸಿಕೊಳ್ಳಬೇಕು, ಕೈ ತುಂಬಾ ಹಣ ಗಳಿಸಬೇಕೆನ್ನುವುದು.

₹250   ₹125

Buy Now
ಹಿಟ್ಲರ್ ಲವ್ ಪಾಲಿಟಿಕ್ಸ್ | Hitler Love Politics

ಈ ಜಗತ್ತಿನಲ್ಲಿ ಕ್ರೂರ ಪ್ರಾಣಿಗಳಿವೆ. ನರ ಭಕ್ಷಕ ಜೀವಿಗಳಿವೆ. ಆದರೆ ಪ್ರಕೃತಿಯ ದೃಷ್ಟಿಯಲ್ಲಿ ನೋಡಿದರೆ ಮನುಷ್ಯನಿಗಿಂತ ಕೆಟ್ಟ ಪ್ರಾಣಿ ಇನ್ನೊಂದಿಲ್ಲ ಎನ್ನುತ್ತಾರೆ. ಅಂತಹ ಕ್ರೂರ ಮನುಷ್ಯರ ಪೈಕಿ ಹಿಟ್ಲರ್ ನಂಬರ್ ಒನ್ ಸ್ಥಾನದಲ್ಲಿ ನಿಲ್ಲುತ್ತಾನೆ. ಆತ ಒಬ್ಬ ಸರ್ವಾಧಿಕಾರಿಯಾಗಿ, ರಾಜಕಾರಣಿಯಾಗಿ, ದೇಶಭಕ್ತನಾಗಿ ಮೆಚ್ಚುಗೆ ಗಳಿಸುತ್ತಾನೆ. ಆದರೆ ಆತ ಮಾಡಿದ ನರ ಮೇಧ ಇದೆಯಲ್ಲ ಕಣ್ಣಂಚಿನಲ್ಲಿ ನೀರಲ್ಲ ರಕ್ತವನ್ನು ತೊಟ್ಟಿಕ್ಕಿಸುತ್ತದೆ.

₹170   ₹145

Buy Now
ಹಿಟ್ಲರ್ ಲವ್ ಪಾಲಿಟಿಕ್ಸ್ ಇಬುಕ್ | Hitler Love Politics Ebook

ಈ ಜಗತ್ತಿನಲ್ಲಿ ಕ್ರೂರ ಪ್ರಾಣಿಗಳಿವೆ. ನರ ಭಕ್ಷಕ ಜೀವಿಗಳಿವೆ. ಆದರೆ ಪ್ರಕೃತಿಯ ದೃಷ್ಟಿಯಲ್ಲಿ ನೋಡಿದರೆ ಮನುಷ್ಯನಿಗಿಂತ ಕೆಟ್ಟ ಪ್ರಾಣಿ ಇನ್ನೊಂದಿಲ್ಲ ಎನ್ನುತ್ತಾರೆ. ಅಂತಹ ಕ್ರೂರ ಮನುಷ್ಯರ ಪೈಕಿ ಹಿಟ್ಲರ್ ನಂಬರ್ ಒನ್ ಸ್ಥಾನದಲ್ಲಿ ನಿಲ್ಲುತ್ತಾನೆ. ಆತ ಒಬ್ಬ ಸರ್ವಾಧಿಕಾರಿಯಾಗಿ, ರಾಜಕಾರಣಿಯಾಗಿ, ದೇಶಭಕ್ತನಾಗಿ ಮೆಚ್ಚುಗೆ ಗಳಿಸುತ್ತಾನೆ. ಆದರೆ ಆತ ಮಾಡಿದ ನರ ಮೇಧ ಇದೆಯಲ್ಲ ಕಣ್ಣಂಚಿನಲ್ಲಿ ನೀರಲ್ಲ ರಕ್ತವನ್ನು ತೊಟ್ಟಿಕ್ಕಿಸುತ್ತದೆ.

₹170   ₹85

Buy Now
ಹಿಂದಿನ ನಿಲ್ದಾಣ | Hindina Nildana

ಕರಾವಳಿಯ ಪುಟ್ಟ ಊಲಗೆ ಮಾತ್ರ ಲಗತ್ತಾಗುವ ಈ ಚಿಟಿಜ ನೋಟಗಳು, ಜೀವಗಳು ಈಗ ಅಲ್ಲಯೂ ಅಪರೂಪವಾಗುತ್ತಿರುವ ಈ ಕಾಲದಲ್ಲಿ ಈ ನೆನಪಿನ ಹೆಣಿಗೆಗಳು ಮುಂದೊಮ್ಮೆ ಹೊಸಕಾಲದ ಹೊಸಪೀಱಗೆಯ ಕುತೂಹಲದ ಹಾಗೆ ಬೆಚ್ಚನೆಯ ಹೊಏಕಯಾಗಿ ಒದಗಬಹುದು, ಕಥೆಗಾತಿಯಾಗಬೇಕೆನ್ನುವ ಹಂಬಲದ ಶುಭಶ್ರೀಯ ಅನುಭವದ ಬುತ್ತಿಯಲ್ಲಿ ಸಾಕಷ್ಟು ಕಥಾಭೀಜಗಳವೆ

₹120   ₹96

Buy Now
ಹಿಂದಿನ ನಿಲ್ದಾಣ ಇಬುಕ್ | Hindina Nildana Ebook

ಕರಾವಳಿಯ ಪುಟ್ಟ ಊಲಗೆ ಮಾತ್ರ ಲಗತ್ತಾಗುವ ಈ ಚಿಟಿಜ ನೋಟಗಳು, ಜೀವಗಳು ಈಗ ಅಲ್ಲಯೂ ಅಪರೂಪವಾಗುತ್ತಿರುವ ಈ ಕಾಲದಲ್ಲಿ ಈ ನೆನಪಿನ ಹೆಣಿಗೆಗಳು ಮುಂದೊಮ್ಮೆ ಹೊಸಕಾಲದ ಹೊಸಪೀಱಗೆಯ ಕುತೂಹಲದ ಹಾಗೆ ಬೆಚ್ಚನೆಯ ಹೊಏಕಯಾಗಿ ಒದಗಬಹುದು, ಕಥೆಗಾತಿಯಾಗಬೇಕೆನ್ನುವ ಹಂಬಲದ ಶುಭಶ್ರೀಯ ಅನುಭವದ ಬುತ್ತಿಯಲ್ಲಿ ಸಾಕಷ್ಟು ಕಥಾಭೀಜಗಳವೆ,

₹120   ₹60

Buy Now
ಹಿಮಾಲಯದ ನರಭಕ್ಷಕಗಳು | Himalayada Narabhakshakagalu

...ಬೇಟೆಯನ್ನು ಒಂದು ಕಾಯಕ ಪ್ರಜ್ಞೆಯಲ್ಲಿ ಬಾಳಿದ ಕಾರ್ಬೆಟ್ ನ ಅರಣ್ಯ ಪ್ರೀತಿ ಇರುವೆಂಭತ್ತು ಕೋಟಿ ಜೀವರಾಶಿಗಳನ್ನೂ ಅವುಗಳ ಬದುಕುವ ಹಕ್ಕನ್ನೂ ಮಾನ್ಯ ಮಾಡುವ ಗುಣಗೌರವದಿಂದ ಕೂಡಿದ್ದು.... ಪ್ರತಿಯೊಂದು ನರಭಕ್ಷಕ ಹುಲಿಯನ್ನು ಬೇಟೆಯಾಡಿದಾಗಲೂ ಆದ ಅನುಭವ ವಿವರಗಳನ್ನು ಕಟ್ಟಿಕೊಡುವಾಗ ಅವರು ವಿವರಿಸುವ ಕಾಡಿನ ಬಗೆ ವಿನ್ಯಾಸ ಅವರ ನೆನಪಿನ ತೀಕ್ಷ್ಣತೆಗೆ ಗ್ರಹಿಕೆಯ ಸೂಕ್ಷ್ಮತೆಗೆ ಕನ್ನಡಿ ಹಿಡಿದಂತಿದೆ. ಮೃತ್ಯು ಎದುರಿಗೇ ನಿಂತಾಗಲೂ ಧೃತಿಗೆಡದ ಅವರ ಆತ್ಮವಿಶ್ವಾಸದ ನಿಲುಮೆ ಅನನ್ಯವಾದುದು. ಇದೆಲ್ಲವನ್ನೂ ಅವರ ಬರಹ ತನ್ನ ಎದೆಯಲ್ಲಿ ತುಂಬಿಕೊಂಡಿದೆ. ಯಾವ ಜೀವ ವಿಜ್ಞಾನವೂ ತಿಳಿಸಲಾರದ ಎಷ್ಟೋ ಸೂಕ್ಷ್ಮಾತಿ ಸೂಕ್ಷ್ಮ ವಿಷಯಜ್ಞಾನವನ್ನು ಅನುಭವ ಮಾತ್ರದಿಂದ ಪಡೆದವರಾದ ಕಾರ್ಬೆಟ್ ಒಂದು ಅದ್ಭುತ, ಬೇಟೆಯನ್ನು ನಿಸರ್ಗಧರ್ಮಕ್ಕೆ ಎರವಾಗದ ನಡೆಯಲ್ಲಿ ಜೀವ ಸಂರಕ್ಷಕ ವಿಧಿಯಂತೆ ಪರಿಪಾಲಿಸಿದ ಮಹಾನುಭಾವ ಕಾರ್ಬೆಟ್. ...ಇಂಥ ಬೇಟೆಯ ಸಂತನ ಅನುಭವ ಕಥನವನ್ನು ಓದಿದ್ದೇ ನನ್ನ ಅಕ್ಷರಜ್ಞಾನದ ಅದೃಷ್ಟಭಾಗ್ಯವೆಂದು ನನ್ನ ತಿಳಿವು ಹೇಳುತ್ತಿದೆ. ಹಿಮಾಲಯದ ನರಭಕ್ಷಕಗಳು ...ಗೆಳೆಯ ವಿವೇಕಾನಂದನಿಗೆ ಆತ್ಮೀಯ ಕೃತಜ್ಞತೆಗಳು, ಕಾರಣ ಇಷ್ಟು ವಿಸ್ತಾರವಾದ ಈ ಬರಹವನ್ನು ಧ್ಯಾನಸ್ಥಿತಿಯ ಬದ್ಧತೆಯಲ್ಲಿ ಒಳಕ್ಕೆ ತಗೆದುಕೊಂಡು ಅದನ್ನು ಕನ್ನಡೀಕರಿಸಿದ್ದಕ್ಕೆ. ಇದನ್ನು ಕೇವಲ ಅನುವಾದ ಎಂದು ಹೇಳಿದರೆ ಅಪಚಾರವಾಗುತ್ತದೆ. ಕನ್ನಡ ಭಾಷೆಯ ಜಾಯಮಾನಕ್ಕೆ ಕಿಂಚಿತ್ತೂ ಊನವಾಗದ ಪ್ರಜ್ಞೆಯಲ್ಲಿ ಕಾರ್ಬೆಟ್‌ನ ಅನುಭವವನ್ನು ಕನ್ನಡಿಗರಿಗೆ ಕಟ್ಟಿಕೊಟ್ಟಿರುವ ಈ ಕಾರ್ಯ ಗುರುತರವಾದ ಹೊಣೆಗಾರಿಕೆಯಿಂದ ಮಾಡಿದ ಫಲವೇ ಸರಿ. ಈ ಜೀವಲೋಕದ ಬಗೆಗೆ ಕಾರ್ಬೆಟ್ ಪ್ರಜ್ಞೆಯನ್ನು ಬೆಳೆಸಿಕೊಂಡ ಮನಸ್ಸು ಮಾತ್ರ ಇಂಥ ಸಾಹಸಕ್ಕೆ ಶ್ರದ್ದೆ ಗೌರವಗಳಿಂದ ತೊಡಗುತ್ತದೆ.

₹675   ₹574

Buy Now
ಹೀಗೊಂದು ಏರೋಸ್ಪೇಸ್ ಪುರಾಣ | Heegondu Aerospace Puraana

ಆರಂಭದಿಂದಲೂ ನಿಮ್ಮ ಚೈತನ್ಯಪೂರ್ಣ ಬರವಣಿಗೆ ಮನ ಸೆಳೆಯಿತು. ಪಟ್ಟಿ ಪಾಡು, ಪರದಾಟಗಳ ನಡುವೆಯೂ ತೂರಿ ಬರುತ್ತಿದ್ದ ನಗೆಚಟಾಕಿ, ಅನ್ಯ ಜನಗಳ ಸ್ನೇಹಮಿಲನ, ವೀಲ್ ಚೇರಿನಲ್ಲಿ ಏಕಾಂಗಿಯಾಗಿ ಪಯಣಿಸಿದ ಪಯಣಿಕರ ಸಾಹಸಗಾಥೆ, ಭಾಷೆ ಬರದ ಹೆಣ್ಣೆಂದು ತನ್ನ ಫೈಟಿಗೆ ಹೋಗುತ್ತಿದ್ದವಳು ಓಡಿ ಬಂದು ನಿಮ್ಮನ್ನು ಅಪ್ಪಿಕೊಂಡು ಹೋದದ್ದು ಒಂದು ರೀತಿಯ ಮಾನವ ವ್ಯಕ್ತಿತ್ವಗಳ ಕಿರು ನೋಟ, ನಿಮ್ಮ ಲವಲವಿಕೆಯ " ಮಾತುಗಳಲ್ಲಿ ರೂಪ ತಾಳಿ. ಇದೊಂದು ಚೆಂದದ ಜೀವಂತ ಕಥಾ ಚಿತ್ರ ಶಿಲ್ಪ. -ಲೀಲಾವತಿ ಎಚ್.ಆರ್

₹170   ₹136

Buy Now
ಹೂವಿನ ಕೊಲ್ಲಿ | Hoovina Kolli

ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ. ಜಯಂತ್ ಕಾಯ್ಕಿಣಿ. ಕಾಯ್ಕಿಣಿ ಸರ್ ಇಂತಹ ಮಾತುಗಳನ್ನು ಹೇಳುತ್ತಾರೆಂದರೆ ‘ಅಬ್ದುಲ್ ರಶೀದ್’ ಅವರ ಸಾಹಿತ್ಯದ ಶಕ್ತಿ ನಿಮಗೆ ಅರಿವಾದೀತು. ಅವರು ಕಥೆ ಹೇಳುವ ರೀತಿ, ಅವರ ಕಥೆಗಳಲ್ಲಿನ ವಸ್ತು ವೈವಿದ್ಯತೆ, ಒಳನೋಟಗಳು ತುಂಬಾ ಅನನ್ಯವಾಗಿರುತ್ತವೆ. ಆದ್ದರಿಂದಲೇ ಅವರ ಕಥೆಗಳು ಒಂದಕ್ಕಿಂತ ಒಂದು ವಿಶೇಷವಾಗಿರುತ್ತವೆ ಮತ್ತು ಅವರನ್ನು ಓದುವ, ಅವರ ಕಥೆಗಳಿಗಾಗಿ ಕಾಯುವ ಒಂದು ದೊಡ್ಡವರ್ಗವೇ ಇದೆ. ಅಂತಹ ಅಬ್ದುಲ್ ರಶೀದ್ ಅವರ ಹೂವಿನ ಕೊಲ್ಲಿ ಪರಿಷ್ಕೃತ ಕಾದಂಬರಿಯನ್ನು ಇದೀಗ ವೀರಲೋಕ ಹೊರತರುತ್ತಿದೆ. ಕೊಡಗಿನ ಕಾಫಿ ತೋಟದ ಒಳಗಿನ ಬದುಕನ್ನು ಹೇಳುವ ಕಾದಂಬರಿ ಇದು. ಅಂತರ್ಜಾಲಕ್ಕಾಗಿ ಬರೆದಂತಹ ಈ ಕಾದಂಬರಿಯನ್ನು ಆಗ ಲೇಖಕರಾದ ಅಬ್ದುಲ್ ರಶೀದ್ ಅವರು ಬ್ಲಾಗಂಬರಿ ಎಂದೂ ಕರೆದಿದ್ದರು. ಈ ಕಾದಂಬರಿ ಈಗ ಪರಿಷ್ಕೃತಗೊಂಡು ಬಿಡುಗಡೆಗೊಳ್ಳುತ್ತಿದೆ.

₹270   ₹230

Buy Now
ಹೃದಯದ ಮಾತು | Hrudayada Mathu

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ.

₹160   ₹136

Buy Now
ಹೃದಯದ ಮಾತು ಇಬುಕ್ | Hrudayada Maatu Ebook

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ. ಅಂದರೆ ಒಂದು ಮುಟಿಗೆಯಷ್ಟಿರುವ ಅದು ಕೇವಲ ರಕ್ತ-ಮಾಂಸದ ಮುದ್ದೆ ಅಲ್ಲ. ನಾವು ಎದುರಿಸುವ ಎಲ್ಲ ಆಘಾತಗಳ ‘ಶಾಕ್ ಅಬ್ಬರ್ವರ್’ ಅದು. ಹೃದಯವೆಂದರೆ ಮನಸ್ಸು ಕೂಡ ಹೌದು. ನಮ್ಮ ಇಡೀ ದೇಹದ ‘ಜೀವ’ ಭದ್ರವಾಗಿರುವುದು ಈ ಕವಾಟದಲ್ಲಿ. ಮನಸ್ಸು ಮತ್ತು ಹೃದಯ ಒಂದೇ ದೇಹದ ಎರಡು ಮುಖಗಳು. ಮನಸ್ಸು ಕುದ್ದು ಹೋದರೆ ಹೃದಯವೆಂದೂ ಹಿರಿಹಿರಿ ಹಿಗ್ಗುವುದಿಲ್ಲ. ನಮ್ಮ ಭಾವಕ್ಕೆ ಧಕ್ಕೆಯಾದರೆ ಅದರ ನೇರ ಪರಿಣಾಮ ಬೀರುವುದು ಹೃದಯದ ಮೇಲೆ, ಒಬ್ಬ ಕವಿ ಹೃದಯಕ್ಕೆ ರಮ್ಯತೆಯ ಪ್ರಭಾವಳಿಯನ್ನು ತೊಡಿಸುತ್ತಾನೆ. ಅದು ಸದಾ ನೆಮ್ಮದಿಯ ಗೂಡಾಗಿರಲಿ ಎಂದು ಅದನ್ನು ಪ್ರೀತಿಯಿಂದ ಅದ್ದಿ ತೆಗೆಯುತ್ತಾನೆ. ಆದರೆ ಒಬ್ಬ ವೈದ್ಯ ಅದರ ಕವಾಟದಲ್ಲಿ ಸರಿಯಾಗಿ ರಕ್ತದ ಚಲನೆ ನಡೆಯುತ್ತಿದೆಯೇ ಎಂದು ನೋಡುತ್ತಾನೆ. ಅದಕ್ಕೆ ಯಾವುದೇ ರೀತಿಯಲ್ಲಿ ಆಘಾತವಾಗದಂತೆ ವಹಿಸಬೇಕಾದ ಎಚ್ಚರಿಕೆಗಳನ್ನು ಸೂಚಿಸುತ್ತಾನೆ. ಹಾಗೆ ನೋಡಿದರೆ ಇಬ್ಬರದ್ದೂ ಚಿಕಿತ್ಸಕ ದೃಷ್ಟಿಕೋನವೇ ಆಗಿದೆ.

₹160   ₹80

Buy Now