ಎನ್.ಪಿ. ಶಂಕರನಾರಾಯಣರಾವ್
ಈ ಕಿರುನಾಟಕಗಳ ವಿಶೇಷತೆ ಏನು ಗೊತ್ತಾ ? ಇದು 3ಡಿ. ಕೇವಲ ಓದಿಯೂ ಖುಷಿ ಪಡಬಹುದು. ರೇಡಿಯೋ ನಾಟಕವಾಗಿಸಿಯೂ ಖುಷಿ ಪಡಬಹುದು ಮತ್ತು ರಂಗದ ಮೇಲೆ ಆಡಿಯೂ ಖುಷಿ ಪಡಬಹುದು. ಕೆಲವೇ ಕೆಲವು ಪಾತ್ರಗಳಿರುವುದರಿಂದ ಆಡುವವರಿಗೂ ಸುಲಭ. ಅದರಲ್ಲೂ ಶಾಲೆ, ಕಾಲೇಜುಗಳಲ್ಲಿ ಆಡುವುದಕ್ಕೆ, ರಾಜ್ಯೋತ್ಸವಾದಿ ಸಮಾರಂಭಗಳಲ್ಲಿ ಪ್ರದರ್ಶಿಸುವುದಕ್ಕೆ ಹೇಳಿ ಮಾಡಿಸಿದ ಹಾಗಿದೆ. ಅಲ್ಲಲ್ಲ, ಹೇಳಿ ಬರೆಸಿದ ಹಾಗಿದೆ. ಡುಂಡಿರಾಜರ ಶೈಲಿಯ ಪರಿಚಯವಿದ್ದವರು ನಾಟಕಗಳಲ್ಲಿ ಅವರ ಪಂಡ್ಗಳನ್ನು ಗುರುತಿಸಬಹುದಾದರೂ, ಇದರಲ್ಲಿ ಒಂದು ಸರ್ಪ್ರೈಸ್ ಎಲಿಮೆಂಟ್ ಕೂಡಾ ಇದೆ. ಏನು ಗೊತ್ತಾ? ಇವರು ದ ಕ ಆದರೂ ಕೆಲವು ಪ್ರಹಸನಗಳಲ್ಲಿ ಉಕ ಆಗಿದ್ದಾರೆ. ಅಂದರೆ ಉತ್ತರ ಕರ್ನಾಟಕದ ಭಾಷೆ ಬಳಸಿರೋದರಿಂದ ಈ ನಾಟಕಗಳು ಅಲ್ಲಿಯೂ ಜನಪ್ರಿಯವಾಗುವುದರಲ್ಲಿ ಸ್ವಲ್ಪವೂ ಸಂಶಯವಿಲ್ಲ. ಇಡೀ ಕರ್ನಾಟಕಕ್ಕೆ ಸಲ್ಲುವ ನಾಟಕಗಳಿವು. "ಡಿವೈಡ್ ৬০মে ರೂಲ್" ಅಂತಾರಲ್ಲ? ಅದರಲ್ಲಿ ಡುಂಡಿರಾಜ್ ಸಿದ್ಧಹಸ್ತರು. "ಡಿವೈಡ್ ಅಂಡ್ ರೂಲ್" ಅಂದರೆ ಒಡೆದಾಳುವ ನೀತಿ. ಇವರದ್ದು "ಪದಗಳನ್ನು" ಒಡೆದು ಆಡುವ ರೀತಿ. ಅಲ್ಲದೆ ಹೊಸ ಹೊಸ ಪದಗಳನ್ನೂ ಕನ್ನಡ ಭಾಷೆಗೆ ಕಾಣಿಕೆಯಿತ್ತಿದ್ದಾರೆ. ಉದಾಹರಣೆಗೆ ಸಿನಿಮಹಾತ್ಮ, ಶೇಗ್ ಬಹದ್ದೂರ್, ಭಯವದನ, ಬರಿಯಪ್ಪ, ಮೋಸಪತ್ರಿಕೆ ಇತ್ಯಾದಿ.
ಎಚ್ ಡುಂಡಿರಾಜ್
#
nil
ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...
ಹೂ ಹೂವಿನೊಳಗೊಂದು ಕೈಲಾಸವರಳಿ ಡಾ. ಚಂದ್ರಶೇಖರ ಕಂಬಾರರ ಸಾಹಿತ್ಯ ಕುರಿತ ವಿಚಾರ ಸಂಕಿರಣದ ಪ್ರಬಂಧಗಳು ಸಂಪಾದಕರು ಡಾ. ವೀರೇಶ ಬಡಿಗೇರ
Showing 271 to 283 of 283 results