nil
#
Nil
ಯಾವುದೇ ಇತಿಹಾಸ ರಚಿಸುವಾಗ ಸಾಮಾನ್ಯವಾಗಿ ಪುರುಷ ಪ್ರಧಾನವಾದ ಇತಿಹಾಸಕ್ಕೇ ಒತ್ತು ನೀಡುತ್ತೇವೆ ರಾಜರು ಹಾಗೂ ಅವರ ಮಾಂಡಳಿಕರು ಹಾಕಿಸಿರುವ ಶಾಸನಗಳು, ಬರೆಸಿರುವ ಬರಹಗಳಲ್ಲಿ ಶ್ರೀ ಅಡಳಿತಗಾರರ ಬಗ್ಗೆ ಮಾಹಿತಿ ದೊರೆಯದಿರುವುದು. ಆಕರ ಸಾಮಗ್ರಿಯ ಕೊರತೆಯಾಗಿದೆ. ಡಾ. ಸಂದ್ಯಾ ಅವರು ಅಂತಹ ಕಾಲದ ಸ್ತ್ರೀಯರು ಹೇಗೆ ಬಾಳಿ-ಬದುಕಿದರೆಂಬ ಬಗ್ಗೆ ಪ್ರಾಚೀನ ಕರ್ನಾಟಕದ ಮಹಿಳಾಲೋಕ ಕೃತಿಯಲ್ಲಿ ತೋರಿಸಲು ಶ್ರಮಿಸಿದ್ದಾರೆ. ಇದರಲ್ಲಿಯೂ ಚೆನ್ನಾಗಿ ಆಡಳಿತ ನಡೆಸಿದ, ರಾಜಕೀಯದಲ್ಲಿದ್ದ ಶ್ರೀಯರ ಉಲ್ಲೇಖವೇ ಹೆಚ್ಚಾಗಿದೆ. ಮಕ್ಕಳಿಲ್ಲದೆ ರಾಜ ಸತ್ತಾಗ ರಾಜ್ಯದ ಜವಾಬ್ದಾಲ ಹೊತ್ತ ಮಹಿಳೆಯರು ಅಸ್ತಿತ್ವವನ್ನು ಉಳಿಸಲು ಪಟ್ಟ ಕಷ್ಟ-ನಷ್ಟಗಳನ್ನು, ಕರ್ನಾಟಕದಲ್ಲಿ ರಾಣಿಯರ ದತ್ತಕಗಳು ಅಧ್ಯಾಯದಲ್ಲಿ ವಿವರಿಸಿದ್ದಾರೆ. ಹಾಗೆಯೇ ಪೆಣ್ಣುಯ್ಯಲ್, ಸಂಗೀತ-ನೃತ್ಯಕಲೆಗಳಿಗೆ ಪ್ರಾಚೀನ ಅರಸಿಯರ ಕೊಡುಗೆ, ಮಹಿಳೆಯರ ಸಾಹಸ, ಧಾರ್ಮಿಕ ಕಾರ್ಯಗಳಲ್ಲಿ ಮಹಿಳೆಯರ ಪಾತ್ರ ಮೊದಲಾದ ಅಧ್ಯಾಯಗಳಲ್ಲಿ ಮಹಿಳೆಯರು ತಮ್ಮನ್ನು ಹೇಗೆ ತೊಡಗಿಸಿಕೊಂಡಿದ್ದರೆಂಬ ಬಗ್ಗೆ ವಿವರಿಸಿದ್ದಾರೆ. ಹೆಚ್ಚಿಗೆ ಶಾಸನಗಳನ್ನಾಧರಿಸಿ ಬರೆದಿರುವ ಈ ಲೇಖನಗಳ ಗುಚ್ಛ ಒಂದು ಅಧಿಕೃತ ಕೃತಿಯಾಗಿದೆ. ಇಲ್ಲಿ ಊಹಾ ಪೋಹಗಳಾಗಲೀ, ಕಲ್ಪಿತ ವಿಷಯಗಳಿಗಾಗಲೀ ಸ್ಥಳವಿಲ್ಲ. ಹೀಗಾಗಿ ಪ್ರಾಚೀನ ಕರ್ನಾಟಕದ ಮಹಿಳೆಯರ ಬಗ್ಗೆ ತಿಳಿದುಕೊಳ್ಳಲು ಇದೊಂದು ಅಧಿಕೃತ ಮಾಹಿತಿಯುಳ್ಳ ಗ್ರಂಥ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ, ಇಂತಹ ಅಧಿಕೃತ ಮಾಹಿತಿಯುಳ್ಳ ಗ್ರಂಥ ರಚಿಸಿದ ಶ್ರೀಮತಿ ಸಂಧ್ಯಾ ಅವರು ಅಭಿನಂದನಾರ್ಹರು. -ದೇವರಕೊಂಡಾರೆಡ್ಡಿ
ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
ರವಿ ಜೆ ಭಜಂತ್ರಿ
Showing 3031 to 3060 of 5492 results