ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ.
nil
Nil
ವಿ . ಎಂ . ಬಾಚಲಾಪುರ , ಸಿ ಸಿರಿಲ್ ಸುಧಾಕರ್
ಎಸ್ ಕೆ ಶಿವಕುಮಾರ್
ಗಣೇಶ್ ಕಾಸರಗೋಡು ಕನ್ನಡ ಪತ್ರಿಕೋದ್ಯಮದಲ್ಲಿ ಚಿರ ಪರಿಚಿತ ಹೆಸರು ಗಣೇಶ್ ಕಾಸರಗೋಡು. ಕಾಸರಗೋಡಿನಲ್ಲಿ ಹುಟ್ಟಿದ ಗಣೇಶ್ ವಿದ್ಯಾಭ್ಯಾಸವನ್ನು ಅಲ್ಲಿಯೇ ಕಂಪ್ಲೀಟ್ ಮಾಡಿ ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಂತರ ಗಣೇಶ್ ಕಾಸರಗೋಡು ಅವರನ್ನು ಕೈಬೀಸಿ ಕರೆದಿದ್ದು ಪತ್ರಿಕೋದ್ಯಮ. ಮೊದಲು ಚಿತ್ರದೀಪದಲ್ಲಿ ಕೆಲಸ ಮಾಡಿದ ಗಣೇಶ್ ಕಾಸರಗೋಡು ನಂತರ ಚಿತ್ರತಾರಾ ಹಾಗೂ ಅರಗಿಣಿಯಲ್ಲಿ ಸೇವೆಸಲ್ಲಿಸಿದರು. ಬಳಿಕ ಸಂಯುಕ್ತ ಕರ್ನಾಟಕ, ಕರ್ಮವೀರ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಸಿನಿಮಾ Read More...
ಗಣೇಶಯ್ಯ ಜಿ ವಿ
ಹಾನರ್ ಕತೆಗಳೆಂದರೆ ನಮಗೆಲ್ಲರಿಗೂ ಕೇಳಲು, ಓದಲು ಭಯ. ಆದರೂ ಕೇಳಲು ಓದಲು ಕಾತರ. ಯಾಕೆಂದರೆ ಅವು ಕೊಡುವ ರೋಮಾಂಚನದ ಎದುರು ಅವು ಹುಟ್ಟಿಸುವ ಭಯ ಗೌಣ. ಗುರುರಾಜರು ಇಲ್ಲಿ ಪುಟ್ಟ ಪುಟ್ಟ ಕತೆಗಳ ಮೂಲಕ ಭಯ ಹುಟ್ಟಿಸುತ್ತಾರೆ. ಇವನ್ನು ಓದಿ ಮಧ್ಯರಾತ್ರಿ ಎಚ್ಚರವಾದರೆ ನೀರು ಕುಡಿಯ ಹೋಗಲೂ, ಒಬ್ಬನೇ ರಾತ್ರಿ ನಡೆದು ಹೋಗಲೂ ಭಯಪಡುವ ಪರಿಸ್ಥಿತಿಯಾಗಿದೆ. ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿ ಜನಮನ್ನಣೆ ಗಳಿಸಿದ ಈ ಕಥೆಗಳು ಇದೀಗ ಸಂಕಲನವಾಗಿದೆ. ಪ್ರಶಾಂತ್ ಭಟ್
ಶ್ರೀಪಾದ ಪೂಜಾರ್
ಭಾರತದ ಅರಸುಗಳಲ್ಲಿ ಶ್ರೀಕೃಷ್ಣದೇವರಾಯನಿಗೆ ವಿಶಿಷ್ಟವಾದ ಸ್ಥಾನವಿದೆ. ಸಮರ್ಥ ಆಡಳಿತಗಾರ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ; ತಾನು ವೈಷ್ಣವ ಧರ್ಮವನ್ನು ಅನುಸರಿಸಿದರೂ ಇತರ ಧರ್ಮಗಳ ಬಗ್ಗೆ ಒಬ್ಬ ರಾಜ ನಡೆದುಕೊಳ್ಳುವ ರೀತಿಯಲ್ಲಿ ನಡೆದುಕೊಂಡ ಸಂಯಮಿ. ತನ್ನನ್ನು ಕನ್ನಡ ರಾಯನೆಂದು ಕರೆಸಿಕೊಂಡ ಭಾಷಾಪ್ರೇಮಿ. ಯವನ ರಾಜ್ಯ ಸ್ಥಾಪಕನೆಂಬ ಬಿರುದನ್ನು ಪಡೆದ ರಣಧೀರ. ಬಹುಶಃ ಈತನ ಬಗ್ಗೆ ಪ್ರಚಲಿತದಲ್ಲಿರುವಷ್ಟು ದಂತಕಥೆಗಳು ಬೇರಾವ ರಾಜನ ಬಗ್ಗೆಯೂ ಇಲ್ಲ. ಹೀಗೆ ಇಂದಿಗೂ ಜನಮಾನಸದಲ್ಲಿ ನೆಲಸಿರುವ ವರ್ಣರಂಜಿತ ಐತಿಹಾಸಿಕ ವ್ಯಕ್ತಿ ಶ್ರೀಕೃಷ್ಣದೇವರಾಯ. ಈ ಕಾದಂಬರಿಯಲ್ಲಿ ಮಿತ್ರ ಶ್ರೀ ಸು.ರುದ್ರಮೂರ್ತಿಶಾಸ್ತ್ರಿ ಶ್ರೀಕೃಷ್ಣದೇವರಾಯನ ಚರಿತ್ರೆಯನ್ನು ನಿರೂಪಿಸುವುದಕ್ಕಿಂತಲೂ ಆತನ ಚಾರಿತ್ರ್ಯವನ್ನು ನಿರೂಪಿಸುವುದರತ್ತ ಹೆಚ್ಚು ಗಮನಹರಿಸಿದ್ದಾರೆ. ಶ್ರೀಕೃಷ್ಣದೇವರಾಯ ಈ ಕಾದಂಬರಿಯ ಪ್ರಧಾನ ಪಾತ್ರ. ಆದರೆ ಎಲ್ಲ ಪಾತ್ರಗಳ ಒಳಹೊರ ಚಾರಿತ್ರ್ಯಗಳನ್ನು ಗಮನಿಸಿ ಎಲ್ಲ ಪಾತ್ರಗಳನ್ನೂ ನಮ್ಮ ಮುಂದಿರಿಸಿದ್ದಾರೆ. ಬಹುಶಃ ಈ ಕಾರಣದಿಂದ ಶ್ರೀಕೃಷ್ಣದೇವರಾಯನ ಬದುಕಿನ ಸುತ್ತ ಹೆಣೆದುಕೊಂಡಿರುವ ಹಲವಾರು ಅಸಂಗತಗಳು ತಮ್ಮಷ್ಟಕ್ಕೆ ತಾವೇ ಕಳಚಿಕೊಂಡಿವೆ. ಆ ಕಾಲದ ಆಂತರಂಗಿಕ ಗೂಢಚರ್ಯೆ, ಅಧಿಕಾರ ದಾಹದ ಪಿತೂರಿಗಳು, ಉಪಾಯಗಳಿಗೆ ಪ್ರತ್ಯುಪಾಯಗಳು ಮುಂತಾದ ಕುತೂಹಲ ಮೂಡಿಸುವ ಪ್ರಸಂಗಗಳೂ ಹಿತವಾಗಿ ಮೂಡಿಬಂದಿವೆ. ಇವೆಲ್ಲವೂ ಆ ಪಾತ್ರಗಳ ವ್ಯಕ್ತಿತ್ವವನ್ನು ಆವಿಷ್ಕರಿಸುವಲ್ಲಿ ಸಹಕಾರಿಯಾಗಿವೆ.
Showing 4381 to 4410 of 5198 results